Homeಮುಖಪುಟಕನ್ಯತ್ವ ಪರೀಕ್ಷೆಗೆ ಒತ್ತಾಯಿಸುವುದು ಮಹಿಳೆಯ ಘನತೆಯ ಹಕ್ಕನ್ನು ಉಲ್ಲಂಘಿಸುತ್ತದೆ: ಛತ್ತೀಸ್‌ಗಢ ಹೈಕೋರ್ಟ್

ಕನ್ಯತ್ವ ಪರೀಕ್ಷೆಗೆ ಒತ್ತಾಯಿಸುವುದು ಮಹಿಳೆಯ ಘನತೆಯ ಹಕ್ಕನ್ನು ಉಲ್ಲಂಘಿಸುತ್ತದೆ: ಛತ್ತೀಸ್‌ಗಢ ಹೈಕೋರ್ಟ್

- Advertisement -
- Advertisement -

ಮಹಿಳೆಯೊಬ್ಬಳನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸಲು ಒತ್ತಾಯಿಸಲಾಗುವುದಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. “ಅಂತಹ ಪದ್ಧತಿಯು ಭಾರತೀಯ ಸಂವಿಧಾನದ ವಿಧಿ 21 ರ ಉಲ್ಲಂಘನೆಯಾಗಿದೆ. ವಿಧಿ 21 ಜೀವನದ ಮೂಲಭೂತ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ; ಇದರಲ್ಲಿ ಘನತೆಯ ಹಕ್ಕೂ ಸೇರಿದೆ” ಎಂದು ನ್ಯಾಯಾಲಯ ಒತ್ತಿ ಹೇಳಿದೆ.

“ಕನ್ಯತ್ವ ಪರೀಕ್ಷೆಗೆ ಅನುಮತಿ ನೀಡುವುದು ಮೂಲಭೂತ ಹಕ್ಕುಗಳು, ನೈಸರ್ಗಿಕ ನ್ಯಾಯದ ಪ್ರಮುಖ ತತ್ವಗಳು ಹಾಗೂ ಮಹಿಳೆಯ ಗೌಪ್ಯತೆ ಹಕ್ಕಿಗೆ ವಿರುದ್ಧವಾಗಿದೆ. ವಿಧಿ 21 ಮೂಲಭೂತ ಹಕ್ಕುಗಳ ಹೃದಯ” ಎಂದು ಎಂದು ಹೈಕೋರ್ಟ್ ಹೇಳಿದೆ.

ಛತ್ತೀಸ್‌ಗಢ ಹೈಕೋರ್ಟ್‌ನ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು, ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಕನ್ಯತ್ವ ಪರೀಕ್ಷೆಯನ್ನು ಕೋರಿ ಸಲ್ಲಿಸಿದ ಕ್ರಿಮಿನಲ್ ಅರ್ಜಿಯನ್ನು ವಿಚಾರಣೆ ನಡೆಸುವಾಗ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಆಕೆ ಇನ್ನೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿದರು. ಅವರು ಅಕ್ಟೋಬರ್ 15, 2024 ರಂದು ಕೌಟುಂಬಿಕ ನ್ಯಾಯಾಲಯವು ತನ್ನ ಮಧ್ಯಂತರ ಅರ್ಜಿಯನ್ನು ತಿರಸ್ಕರಿಸಿದ ಆದೇಶವನ್ನು ಪ್ರಶ್ನಿಸಿದರು. ಈ ಮಧ್ಯೆ, ಪತ್ನಿ ತನ್ನ ಪತಿ ದುರ್ಬಲ ಮತ್ತು ಸಹಜೀವನ ಮಾಡಲು ನಿರಾಕರಿಸಿದ್ದಾನೆ ಎಂದು ಆರೋಪಿಸಿದರು.

ಅರ್ಜಿದಾರರು ನಪುಂಸಕತೆಯ ಆರೋಪಗಳು ಆಧಾರರಹಿತವೆಂದು ಸಾಬೀತುಪಡಿಸಲು ಬಯಸಿದರೆ, ಅವರು ಸಂಬಂಧಿತ ವೈದ್ಯಕೀಯ ಪರೀಕ್ಷೆಗೆ ಒಳಗಾಗಬಹುದು ಅಥವಾ ಯಾವುದೇ ಇತರ ಪುರಾವೆಗಳನ್ನು ನೀಡಬಹುದು ಎಂದು ಹೈಕೋರ್ಟ್ ಹೇಳಿದೆ. “ಪತ್ನಿಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸಲು ಮತ್ತು ಅವರ ಸಾಕ್ಷ್ಯದಲ್ಲಿನ ಲೋಪವನ್ನು ಸಾಭಿತಿಗೆ ಅನುಮತಿ ನೀಡಲಾಗುವುದಿಲ್ಲ” ಎಂದರು.

ಜನವರಿ 9 ರಂದು ಹೊರಡಿಸಲಾದ ಆದೇಶವನ್ನು ಇತ್ತೀಚೆಗೆ ಲಭ್ಯಗೊಳಿಸಲಾಯಿತು.

ಪತ್ನಿಯ ಕನ್ಯತ್ವ ಪರೀಕ್ಷೆಗೆ ಅರ್ಜಿದಾರರ ಬೇಡಿಕೆಯು ಸಂವಿಧಾನಬಾಹಿರವಾಗಿದೆ. ಏಕೆಂದರೆ, ಇದು ಮಹಿಳೆಯ ಘನತೆಯ ಹಕ್ಕನ್ನು ರಕ್ಷಿಸುವ ಸಂವಿಧಾನದ 21 ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಹೈಕೋರ್ಟ್ ಗಮನಿಸಿದೆ.

“ಭಾರತೀಯ ಸಂವಿಧಾನದ 21 ನೇ ವಿಧಿಯು ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ಮಾತ್ರವಲ್ಲದೆ ಮಹಿಳೆಯರಿಗೆ ನಿರ್ಣಾಯಕವಾದ ಘನತೆಯಿಂದ ಬದುಕುವ ಹಕ್ಕನ್ನು ಸಹ ಖಾತರಿಪಡಿಸುತ್ತದೆ.

“ಯಾವುದೇ ಮಹಿಳೆಯನ್ನು ತನ್ನ ಕನ್ಯತ್ವ ಪರೀಕ್ಷೆಯನ್ನು ನಡೆಸುವಂತೆ ಒತ್ತಾಯಿಸಲಾಗುವುದಿಲ್ಲ. ಇದು ಆರ್ಟಿಕಲ್ 21 ರ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಆರ್ಟಿಕಲ್ 21 ‘ಮೂಲಭೂತ ಹಕ್ಕುಗಳ ಹೃದಯ’ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು” ಎಂದು ಹೈಕೋರ್ಟ್ ಹೇಳಿದೆ.

“ಕನ್ಯತ್ವ ಪರೀಕ್ಷೆಯು ಮಹಿಳೆಯರನ್ನು ಸಭ್ಯತೆ ಮತ್ತು ಸರಿಯಾದ ಘನತೆಯಿಂದ ನಡೆಸಿಕೊಳ್ಳುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ” ಎಂದು ನ್ಯಾಯಮೂರ್ತಿ ವರ್ಮಾ ಮತ್ತಷ್ಟು ಹೇಳಿದರು.

ಆರ್ಟಿಕಲ್ 21 ರ ಅಡಿಯಲ್ಲಿ ಪ್ರತಿಪಾದಿಸಲಾದ ವೈಯಕ್ತಿಕ ಸ್ವಾತಂತ್ರ್ಯದ ಹಕ್ಕನ್ನು ಅವಹೇಳನಕಾರಿಯಲ್ಲ, ಯಾವುದೇ ರೀತಿಯಲ್ಲಿ ಉಲ್ಲಂಘಿಸಲಾಗುವುದಿಲ್ಲ. ಅರ್ಜಿದಾರರು ಪತ್ನಿಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸಲು ಮತ್ತು ಈ ನಿಟ್ಟಿನಲ್ಲಿ ಅವರ ಸಾಕ್ಷ್ಯದಲ್ಲಿನ ಲೋಪವನ್ನು ತುಂಬಲು ಅನುಮತಿಸಲಾಗುವುದಿಲ್ಲ.

ಎರಡೂ ಪಕ್ಷಗಳು ಪರಸ್ಪರ ಮಾಡಿರುವ ಆರೋಪಗಳು ಸಾಕ್ಷ್ಯಾಧಾರಗಳ ವಿಷಯವಾಗಿದ್ದು, ಸಾಕ್ಷ್ಯಾಧಾರಗಳ ನಂತರವೇ ತೀರ್ಮಾನಕ್ಕೆ ಬರಬಹುದು ಎಂದು ಪೀಠವು ಮತ್ತಷ್ಟು ಗಮನಿಸಿತು. “ಆಕ್ಷೇಪಿಸಲಾದ ಆದೇಶವು ಕಾನೂನುಬಾಹಿರ ಅಥವಾ ವಿಕೃತವಲ್ಲ. ವಿಚಾರಣಾ ನ್ಯಾಯಾಲಯದಿಂದ ಯಾವುದೇ ನ್ಯಾಯಾಂಗ ದೋಷವಿಲ್ಲ ಎಂದು ಹೈಕೋರ್ಟ್ ಪರಿಗಣಿಸಿದೆ” ಎಂದು ಅದು ಹೇಳಿದೆ.

ಏನಿದು ಪ್ರಕರಣ?

ದಂಪತಿಗಳು ಏಪ್ರಿಲ್ 30, 2023 ರಂದು ವಿವಾಹವಾದರು. ಕೊರ್ಬಾ ಜಿಲ್ಲೆಯ ಪತಿಯ ಕುಟುಂಬದ ಮನೆಯಲ್ಲಿ ವಾಸಿಸುತ್ತಿದ್ದರು. ಅರ್ಜಿದಾರರ ವಕೀಲರ ಪ್ರಕಾರ, ಪತ್ನಿ ತನ್ನ ಕುಟುಂಬಕ್ಕೆ ತನ್ನ ಪತಿ ದುರ್ಬಲ ಎಂದು ತಿಳಿಸಿದಳು. ಅವನೊಂದಿಗೆ ವೈವಾಹಿಕ ಸಂಬಂಧವನ್ನು ಮುಂದುವರಿಸಲು ನಿರಾಕರಿಸಿದಳು.

ನಂತರ, ಜುಲೈ 2, 2024 ರಂದು, ಅವರು ರಾಯಗಢ ಜಿಲ್ಲೆಯ ಕುಟುಂಬ ನ್ಯಾಯಾಲಯದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್‌) ನ ಸೆಕ್ಷನ್ 144 ರ ಅಡಿಯಲ್ಲಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದರು, ತನ್ನ ಪತಿಯಿಂದ ಮಾಸಿಕ 20,000 ರೂ.ಗಳ ಜೀವನಾಂಶ ಭತ್ಯೆಯನ್ನು ಕೋರಿದರು.

ಜೀವನಾಂಶ ಕ್ಲೇಮ್ ಮಧ್ಯಂತರ ಅರ್ಜಿಗೆ ಪ್ರತಿಕ್ರಿಯೆಯಾಗಿ, ಅರ್ಜಿದಾರರು ತಮ್ಮ ಪತ್ನಿ ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಕನ್ಯತ್ವ ಪರೀಕ್ಷೆಯನ್ನು ಕೋರಿದರು. ಮದುವೆ ಎಂದಿಗೂ ಪೂರ್ಣಗೊಳ್ಳಲಿಲ್ಲ ಎಂದು ಅವರು ಪ್ರತಿಪಾದಿಸಿದರು.

ಅಕ್ಟೋಬರ್ 15, 2024 ರಂದು, ರಾಯ್‌ಗಢದ ಕೌಟುಂಬಿಕ ನ್ಯಾಯಾಲಯವು ಪತಿಯ ವಿನಂತಿಯನ್ನು ತಿರಸ್ಕರಿಸಿತು, ನಂತರ ಅವರು ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಅರ್ಜಿಯನ್ನು ಸಲ್ಲಿಸಿದರು. ಪ್ರಸ್ತುತ ಪ್ರಕರಣವು ಕೌಟುಂಬಿಕ ನ್ಯಾಯಾಲಯದಲ್ಲಿ ಸಾಕ್ಷ್ಯ ವಿಚಾರಣಾ ಹಂತದಲ್ಲಿದೆ.

ಅಂಬೇಡ್ಕರ್ ಜಯಂತಿ ಆಚರಣೆಗೆ ‘ಅನುಮತಿ ನಿರಾಕರಣೆ’: ಆಜಾದ್ ಪಕ್ಷದಿಂದ ಪ್ರತಿಭಟನೆ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...