Homeಮುಖಪುಟಕನ್ಯತ್ವ ಪರೀಕ್ಷೆಗೆ ಒತ್ತಾಯಿಸುವುದು ಮಹಿಳೆಯ ಘನತೆಯ ಹಕ್ಕನ್ನು ಉಲ್ಲಂಘಿಸುತ್ತದೆ: ಛತ್ತೀಸ್‌ಗಢ ಹೈಕೋರ್ಟ್

ಕನ್ಯತ್ವ ಪರೀಕ್ಷೆಗೆ ಒತ್ತಾಯಿಸುವುದು ಮಹಿಳೆಯ ಘನತೆಯ ಹಕ್ಕನ್ನು ಉಲ್ಲಂಘಿಸುತ್ತದೆ: ಛತ್ತೀಸ್‌ಗಢ ಹೈಕೋರ್ಟ್

- Advertisement -
- Advertisement -

ಮಹಿಳೆಯೊಬ್ಬಳನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸಲು ಒತ್ತಾಯಿಸಲಾಗುವುದಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. “ಅಂತಹ ಪದ್ಧತಿಯು ಭಾರತೀಯ ಸಂವಿಧಾನದ ವಿಧಿ 21 ರ ಉಲ್ಲಂಘನೆಯಾಗಿದೆ. ವಿಧಿ 21 ಜೀವನದ ಮೂಲಭೂತ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ; ಇದರಲ್ಲಿ ಘನತೆಯ ಹಕ್ಕೂ ಸೇರಿದೆ” ಎಂದು ನ್ಯಾಯಾಲಯ ಒತ್ತಿ ಹೇಳಿದೆ.

“ಕನ್ಯತ್ವ ಪರೀಕ್ಷೆಗೆ ಅನುಮತಿ ನೀಡುವುದು ಮೂಲಭೂತ ಹಕ್ಕುಗಳು, ನೈಸರ್ಗಿಕ ನ್ಯಾಯದ ಪ್ರಮುಖ ತತ್ವಗಳು ಹಾಗೂ ಮಹಿಳೆಯ ಗೌಪ್ಯತೆ ಹಕ್ಕಿಗೆ ವಿರುದ್ಧವಾಗಿದೆ. ವಿಧಿ 21 ಮೂಲಭೂತ ಹಕ್ಕುಗಳ ಹೃದಯ” ಎಂದು ಎಂದು ಹೈಕೋರ್ಟ್ ಹೇಳಿದೆ.

ಛತ್ತೀಸ್‌ಗಢ ಹೈಕೋರ್ಟ್‌ನ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು, ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಕನ್ಯತ್ವ ಪರೀಕ್ಷೆಯನ್ನು ಕೋರಿ ಸಲ್ಲಿಸಿದ ಕ್ರಿಮಿನಲ್ ಅರ್ಜಿಯನ್ನು ವಿಚಾರಣೆ ನಡೆಸುವಾಗ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಆಕೆ ಇನ್ನೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿದರು. ಅವರು ಅಕ್ಟೋಬರ್ 15, 2024 ರಂದು ಕೌಟುಂಬಿಕ ನ್ಯಾಯಾಲಯವು ತನ್ನ ಮಧ್ಯಂತರ ಅರ್ಜಿಯನ್ನು ತಿರಸ್ಕರಿಸಿದ ಆದೇಶವನ್ನು ಪ್ರಶ್ನಿಸಿದರು. ಈ ಮಧ್ಯೆ, ಪತ್ನಿ ತನ್ನ ಪತಿ ದುರ್ಬಲ ಮತ್ತು ಸಹಜೀವನ ಮಾಡಲು ನಿರಾಕರಿಸಿದ್ದಾನೆ ಎಂದು ಆರೋಪಿಸಿದರು.

ಅರ್ಜಿದಾರರು ನಪುಂಸಕತೆಯ ಆರೋಪಗಳು ಆಧಾರರಹಿತವೆಂದು ಸಾಬೀತುಪಡಿಸಲು ಬಯಸಿದರೆ, ಅವರು ಸಂಬಂಧಿತ ವೈದ್ಯಕೀಯ ಪರೀಕ್ಷೆಗೆ ಒಳಗಾಗಬಹುದು ಅಥವಾ ಯಾವುದೇ ಇತರ ಪುರಾವೆಗಳನ್ನು ನೀಡಬಹುದು ಎಂದು ಹೈಕೋರ್ಟ್ ಹೇಳಿದೆ. “ಪತ್ನಿಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸಲು ಮತ್ತು ಅವರ ಸಾಕ್ಷ್ಯದಲ್ಲಿನ ಲೋಪವನ್ನು ಸಾಭಿತಿಗೆ ಅನುಮತಿ ನೀಡಲಾಗುವುದಿಲ್ಲ” ಎಂದರು.

ಜನವರಿ 9 ರಂದು ಹೊರಡಿಸಲಾದ ಆದೇಶವನ್ನು ಇತ್ತೀಚೆಗೆ ಲಭ್ಯಗೊಳಿಸಲಾಯಿತು.

ಪತ್ನಿಯ ಕನ್ಯತ್ವ ಪರೀಕ್ಷೆಗೆ ಅರ್ಜಿದಾರರ ಬೇಡಿಕೆಯು ಸಂವಿಧಾನಬಾಹಿರವಾಗಿದೆ. ಏಕೆಂದರೆ, ಇದು ಮಹಿಳೆಯ ಘನತೆಯ ಹಕ್ಕನ್ನು ರಕ್ಷಿಸುವ ಸಂವಿಧಾನದ 21 ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಹೈಕೋರ್ಟ್ ಗಮನಿಸಿದೆ.

“ಭಾರತೀಯ ಸಂವಿಧಾನದ 21 ನೇ ವಿಧಿಯು ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ಮಾತ್ರವಲ್ಲದೆ ಮಹಿಳೆಯರಿಗೆ ನಿರ್ಣಾಯಕವಾದ ಘನತೆಯಿಂದ ಬದುಕುವ ಹಕ್ಕನ್ನು ಸಹ ಖಾತರಿಪಡಿಸುತ್ತದೆ.

“ಯಾವುದೇ ಮಹಿಳೆಯನ್ನು ತನ್ನ ಕನ್ಯತ್ವ ಪರೀಕ್ಷೆಯನ್ನು ನಡೆಸುವಂತೆ ಒತ್ತಾಯಿಸಲಾಗುವುದಿಲ್ಲ. ಇದು ಆರ್ಟಿಕಲ್ 21 ರ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಆರ್ಟಿಕಲ್ 21 ‘ಮೂಲಭೂತ ಹಕ್ಕುಗಳ ಹೃದಯ’ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು” ಎಂದು ಹೈಕೋರ್ಟ್ ಹೇಳಿದೆ.

“ಕನ್ಯತ್ವ ಪರೀಕ್ಷೆಯು ಮಹಿಳೆಯರನ್ನು ಸಭ್ಯತೆ ಮತ್ತು ಸರಿಯಾದ ಘನತೆಯಿಂದ ನಡೆಸಿಕೊಳ್ಳುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ” ಎಂದು ನ್ಯಾಯಮೂರ್ತಿ ವರ್ಮಾ ಮತ್ತಷ್ಟು ಹೇಳಿದರು.

ಆರ್ಟಿಕಲ್ 21 ರ ಅಡಿಯಲ್ಲಿ ಪ್ರತಿಪಾದಿಸಲಾದ ವೈಯಕ್ತಿಕ ಸ್ವಾತಂತ್ರ್ಯದ ಹಕ್ಕನ್ನು ಅವಹೇಳನಕಾರಿಯಲ್ಲ, ಯಾವುದೇ ರೀತಿಯಲ್ಲಿ ಉಲ್ಲಂಘಿಸಲಾಗುವುದಿಲ್ಲ. ಅರ್ಜಿದಾರರು ಪತ್ನಿಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸಲು ಮತ್ತು ಈ ನಿಟ್ಟಿನಲ್ಲಿ ಅವರ ಸಾಕ್ಷ್ಯದಲ್ಲಿನ ಲೋಪವನ್ನು ತುಂಬಲು ಅನುಮತಿಸಲಾಗುವುದಿಲ್ಲ.

ಎರಡೂ ಪಕ್ಷಗಳು ಪರಸ್ಪರ ಮಾಡಿರುವ ಆರೋಪಗಳು ಸಾಕ್ಷ್ಯಾಧಾರಗಳ ವಿಷಯವಾಗಿದ್ದು, ಸಾಕ್ಷ್ಯಾಧಾರಗಳ ನಂತರವೇ ತೀರ್ಮಾನಕ್ಕೆ ಬರಬಹುದು ಎಂದು ಪೀಠವು ಮತ್ತಷ್ಟು ಗಮನಿಸಿತು. “ಆಕ್ಷೇಪಿಸಲಾದ ಆದೇಶವು ಕಾನೂನುಬಾಹಿರ ಅಥವಾ ವಿಕೃತವಲ್ಲ. ವಿಚಾರಣಾ ನ್ಯಾಯಾಲಯದಿಂದ ಯಾವುದೇ ನ್ಯಾಯಾಂಗ ದೋಷವಿಲ್ಲ ಎಂದು ಹೈಕೋರ್ಟ್ ಪರಿಗಣಿಸಿದೆ” ಎಂದು ಅದು ಹೇಳಿದೆ.

ಏನಿದು ಪ್ರಕರಣ?

ದಂಪತಿಗಳು ಏಪ್ರಿಲ್ 30, 2023 ರಂದು ವಿವಾಹವಾದರು. ಕೊರ್ಬಾ ಜಿಲ್ಲೆಯ ಪತಿಯ ಕುಟುಂಬದ ಮನೆಯಲ್ಲಿ ವಾಸಿಸುತ್ತಿದ್ದರು. ಅರ್ಜಿದಾರರ ವಕೀಲರ ಪ್ರಕಾರ, ಪತ್ನಿ ತನ್ನ ಕುಟುಂಬಕ್ಕೆ ತನ್ನ ಪತಿ ದುರ್ಬಲ ಎಂದು ತಿಳಿಸಿದಳು. ಅವನೊಂದಿಗೆ ವೈವಾಹಿಕ ಸಂಬಂಧವನ್ನು ಮುಂದುವರಿಸಲು ನಿರಾಕರಿಸಿದಳು.

ನಂತರ, ಜುಲೈ 2, 2024 ರಂದು, ಅವರು ರಾಯಗಢ ಜಿಲ್ಲೆಯ ಕುಟುಂಬ ನ್ಯಾಯಾಲಯದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್‌) ನ ಸೆಕ್ಷನ್ 144 ರ ಅಡಿಯಲ್ಲಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದರು, ತನ್ನ ಪತಿಯಿಂದ ಮಾಸಿಕ 20,000 ರೂ.ಗಳ ಜೀವನಾಂಶ ಭತ್ಯೆಯನ್ನು ಕೋರಿದರು.

ಜೀವನಾಂಶ ಕ್ಲೇಮ್ ಮಧ್ಯಂತರ ಅರ್ಜಿಗೆ ಪ್ರತಿಕ್ರಿಯೆಯಾಗಿ, ಅರ್ಜಿದಾರರು ತಮ್ಮ ಪತ್ನಿ ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಕನ್ಯತ್ವ ಪರೀಕ್ಷೆಯನ್ನು ಕೋರಿದರು. ಮದುವೆ ಎಂದಿಗೂ ಪೂರ್ಣಗೊಳ್ಳಲಿಲ್ಲ ಎಂದು ಅವರು ಪ್ರತಿಪಾದಿಸಿದರು.

ಅಕ್ಟೋಬರ್ 15, 2024 ರಂದು, ರಾಯ್‌ಗಢದ ಕೌಟುಂಬಿಕ ನ್ಯಾಯಾಲಯವು ಪತಿಯ ವಿನಂತಿಯನ್ನು ತಿರಸ್ಕರಿಸಿತು, ನಂತರ ಅವರು ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಅರ್ಜಿಯನ್ನು ಸಲ್ಲಿಸಿದರು. ಪ್ರಸ್ತುತ ಪ್ರಕರಣವು ಕೌಟುಂಬಿಕ ನ್ಯಾಯಾಲಯದಲ್ಲಿ ಸಾಕ್ಷ್ಯ ವಿಚಾರಣಾ ಹಂತದಲ್ಲಿದೆ.

ಅಂಬೇಡ್ಕರ್ ಜಯಂತಿ ಆಚರಣೆಗೆ ‘ಅನುಮತಿ ನಿರಾಕರಣೆ’: ಆಜಾದ್ ಪಕ್ಷದಿಂದ ಪ್ರತಿಭಟನೆ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...