Homeಮುಖಪುಟಭಾರತದಲ್ಲಿ ಉತ್ಪಾದನೆ ನಿಲ್ಲಿಸಲಿರುವ ‘ಫೋರ್ಡ್‌​ ಮೋಟಾರ್ಸ್‌’: 4 ಸಾವಿರ ಉದ್ಯೋಗಿಗಳ ಸ್ಥಿತಿ ಅತಂತ್ರ

ಭಾರತದಲ್ಲಿ ಉತ್ಪಾದನೆ ನಿಲ್ಲಿಸಲಿರುವ ‘ಫೋರ್ಡ್‌​ ಮೋಟಾರ್ಸ್‌’: 4 ಸಾವಿರ ಉದ್ಯೋಗಿಗಳ ಸ್ಥಿತಿ ಅತಂತ್ರ

- Advertisement -
- Advertisement -

ಅಮೆರಿಕಾ ಮೂಲದ ಖ್ಯಾತ ವಾಹನ ತಯಾರಿಕಾ ಕಂಪೆನಿ ಫೋರ್ಡ್‌​​ ಮೋಟಾರ್ಸ್‌ ಭಾರತದಲ್ಲಿ ತನ್ನ ಉತ್ಪಾದಕ ಘಟಕಗಳನ್ನು ಮುಚ್ಚುವುದಾಗಿ ಘೋಷಿಸಿದೆ. ಜನರಲ್ ಮೋಟಾರ್ಸ್ ಮತ್ತು ಹಾರ್ಲೆ ಡೇವಿಡ್ಸನ್ ನಂತರ ಭಾರತದಲ್ಲಿ ಉತ್ಪಾದನಾ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುತ್ತಿರುವ ಅಮೆರಿಕಾದ ಮೂರನೇ ವಾಹನ ತಯಾರಕ ಕಂಪೆನಿಯಾಗಿದೆ ಫೋರ್ಡ್‌​ ಮೋಟಾರ್ಸ್!.

ಫೋರ್ಡ್‌​ ಮೋಟಾರ್ಸ್‌ಗೆ ಗುಜರಾತ್(ಸನಂದ್) ಹಾಗೂ ತಮಿಳುನಾಡಿ(ಚೆನ್ನೈ)ನಲ್ಲಿ ಎರಡು ಉತ್ಪಾದಕ ಘಟಕಗಳಿವೆ. ಈ ಎರಡೂ ಘಟಕಗಳು ಬಂದ್ ಆಗಲಿವೆ ಎಂದು ಕಂಪೆನಿ ಹೇಳಿದೆ. ಭಾರತದಲ್ಲಿ ಕಂಪನಿಯು 2 ಬಿಲಿಯನ್ ಡಾಲರ್​ನಷ್ಟು ನಷ್ಟವನ್ನು ಅನುಭವಿಸಿದೆ, ಹೀಗಾಗಿ ಭಾರತದಿಂದ ನಾವು ಹೊರ ಹೋಗುತ್ತಿದ್ದೇವೆ ಎಂದು ಫೋರ್ಡ್‌​ ಹೇಳಿದೆ. ಕಂಪೆನಿಯು ಈ ಹಿಂದೆ ಭಾರತದ ಎರಡು ಘಟಕಗಳಲ್ಲಿ ಸುಮಾರು 2.5 ಬಿಲಿಯನ್ ಡಾಲರ್ ಹೂಡಿಕೆ ಮಾಡಿತ್ತು.

ಇದನ್ನೂ ಓದಿ: ಉದ್ಯೋಗ ನಷ್ಟದ ಪರಿಣಾಮ ಚಿನ್ನದ ಮೇಲಿನ ಸಾಲದಲ್ಲಿ ಶೇ. 77ರಷ್ಟು ಹೆಚ್ಚಳ

ಈ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಗುಜರಾತ್‌ನ ಘಟಕದ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿದರೆ, 2022 ರ ಎರಡನೆ ತ್ರೈಮಾಸಿಕದಲ್ಲಿ ತಮಿಳುನಾಡಿನ ಘಟಕದಲ್ಲೂ ತನ್ನ ಕಾರ್ಯಾಚರಣೆಯನ್ನು ಫೋರ್ಡ್‌​ ನಿಲ್ಲಿಸಲಿದೆ ಎಂದು ಕಂಪೆನಿ ಹೇಳಿದೆ.

ಭಾರತದ ಮಾರುಕಟ್ಟೆಯಲ್ಲಿ ನಷ್ಟ ಉಂಟಾಗಿದ್ದರಿಂದ ಅಮೆರಿಕಾದ ಕಂಪೆನಿಗಳಾದ ಜನರಲ್ ಮೋಟಾರ್ಸ್ ಮತ್ತು ಹಾರ್ಲೆ ಡೇವಿಡ್ಸನ್ ಕಂಪೆನಿಗಳು ಈ ಹಿಂದೆಯೆ ಭಾರತವನ್ನು ತೊರೆದಿದ್ದವು. ಇದೀಗ ಫೋರ್ಡ್‌​ ಕೂಡಾ ತನ್ನ ಉತ್ಪಾದನೆಯನ್ನು ನಿಲ್ಲಿಸಲು ಮುಂದಾಗಿದೆ.

ವಿಶ್ವದ ಐದನೇ ಅತಿದೊಡ್ಡ ಕಾರು ತಯಾರಕ ಕಂಪೆನಿಯಾಗಿರುವ ಫೋರ್ಡ್‌​, ಭಾರತವನ್ನು ಪ್ರವೇಶಿಸಿದ ಮೊದಲ ಪ್ರಮುಖ ಜಾಗತಿಕ ಆಟೋ ಬ್ರಾಂಡ್‌ಗಳಲ್ಲಿ ಒಂದಾಗಿದೆ. ಇದು 1 ಬಿಲಿಯನ್‌ ಡಾಲರ್‌ನ ಆರಂಭಿಕ ಹೂಡಿಕೆಯೊಂದಿಗೆ 1996 ರಲ್ಲಿ ಆರಂಭಗೊಂಡಿತ್ತು. ತನ್ನ ಉದ್ಯಮ ಉತ್ತುಂಗದಲ್ಲಿ ಇದ್ದಾಗ ಕಂಪೆನಿಯು ಭಾರತದಲ್ಲಿ 14,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿತ್ತು. ಪ್ರಸ್ತುತ ಕಂಪೆನಿಯು ಭಾರತದ ಮಾರುಕಟ್ಟೆಯಿಂದ ಹೊರಹೋಗುತ್ತಿರುವುದರಿಂದ ಸುಮಾರು 4,000 ಉದ್ಯೋಗಗಳು ನಷ್ಟವಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...