Homeಮುಖಪುಟವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಪುತ್ರಿಯ ಆನ್‌ಲೈನ್ ಟ್ರೋಲ್ | ರಾಷ್ಟ್ರೀಯ ಮಹಿಳಾ ಆಯೋಗ ಖಂಡನೆ

ವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಪುತ್ರಿಯ ಆನ್‌ಲೈನ್ ಟ್ರೋಲ್ | ರಾಷ್ಟ್ರೀಯ ಮಹಿಳಾ ಆಯೋಗ ಖಂಡನೆ

- Advertisement -
- Advertisement -

ಮೇ 10 ರಂದು ಭಾರತ ಮತ್ತು ಪಾಕಿಸ್ತಾನವು ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಲು ಒಪ್ಪಂದ ಮಾಡಿಕೊಂಡ ನಂತರ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಅವರ ಕುಟುಂಬ ಮತ್ತು ವಿಶೇಷವಾಗಿ ಅವರ ಮಗಳ ಮೇಲೆ ಬಿಜೆಪಿ ಮತ್ತು ಬಲಪಂಥೀಯ ಬೆಂಬಲಿಗರು ನಡೆಸುತ್ತಿರುವ ಆನ್‌ಲೈನ್ ಟ್ರೋಲಿಂಗ್ ಅನ್ನು ರಾಷ್ಟ್ರೀಯ ಮಹಿಳಾ ಆಯೋಗ ತೀವ್ರವಾಗಿ ಖಂಡಿಸಿದೆ. ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

ಆಯೋಗದ ಅಧ್ಯಕ್ಷೆ ವಿಜಯ ರಹತ್ಕರ್ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಮಿಸ್ರಿ ಅವರ ಮಗಳ ವೈಯಕ್ತಿಕ ಸಂಪರ್ಕ ವಿವರಗಳನ್ನು ಹಂಚಿಕೊಳ್ಳುವುದನ್ನು ಖಂಡಿಸಿದ್ದಾರೆ. ಇದು “ತೀವ್ರ ಬೇಜವಾಬ್ದಾರಿ ಕೃತ್ಯ” ಮತ್ತು ಅವರ ಸುರಕ್ಷತೆಗೆ ಅಪಾಯವನ್ನುಂಟುಮಾಡುವ “ಗೌಪ್ಯತೆಯ ಗಂಭೀರ ಉಲ್ಲಂಘನೆ” ಎಂದು ಕರೆದಿದೆ.

ಮಿಸ್ರಿಯಂತಹ ಹಿರಿಯ ನಾಗರಿಕ ಸೇವಕರ ಕುಟುಂಬ ಸದಸ್ಯರ ಮೇಲಿನ ವೈಯಕ್ತಿಕ ದಾಳಿಗಳು ಸ್ವೀಕಾರಾರ್ಹವಲ್ಲ ಮಾತ್ರವಲ್ಲದೆ ನೈತಿಕವಾಗಿಯೂ ಸಮರ್ಥನೀಯವಲ್ಲ ಎಂದು ರಹತ್ಕರ್ ಒತ್ತಿ ಹೇಳಿದ್ದಾರೆ. ಆನ್‌ಲೈನ್ ಮತ್ತು ಆಫ್‌ಲೈನ್ ಸ್ಥಳಗಳಲ್ಲಿ ಸಂಯಮ ಮತ್ತು ಗೌರವಕ್ಕಾಗಿ ಕರೆ ನೀಡಿರುವ ಅವರು, ನಾಗರಿಕರು ಅಂತಹ ನಡವಳಿಕೆಯನ್ನು ಮೀರಿ ನಿಲ್ಲುವಂತೆ ಒತ್ತಾಯಿಸಿದ್ದಾರೆ. “ನಾವು ಘನತೆ ಮತ್ತು ಜವಾಬ್ದಾರಿಯುತ ನಡವಳಿಕೆಯನ್ನು ಆರಿಸಿಕೊಳ್ಳೋಣ” ಎಂದು ರಹತ್ಕರ್ ಹೇಳಿದ್ದಾರೆ.

ಈ ನಡುವೆ ಮಿಸ್ರಿ ಅವರ ಕುಟುಂಬದ ಪರವಾಗಿ ಹಿರಿಯ ರಾಜತಾಂತ್ರಿಕ ನಿರುಪಮಾ ಮೆನನ್ ರಾವ್ ಮತ್ತು ರಾಜಕಾರಣಿಗಳಾದ ಅಸಾದುದ್ದೀನ್ ಓವೈಸಿ ಮತ್ತು ಅಖಿಲೇಶ್ ಯಾದವ್ ಧ್ವನಿಯೆತ್ತಿದ್ದಾರೆ.

“ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಗೆ ಸಂಬಂಧಿಸಿದಂತೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಅವರ ಕುಟುಂಬವನ್ನು ಟ್ರೋಲ್ ಮಾಡುವುದು ಸಂಪೂರ್ಣವಾಗಿ ನಾಚಿಕೆಗೇಡಿನ ಸಂಗತಿ ಎಂದು ನಿರುಪಮಾ ಮೆನನ್ ರಾವ್ ಅವರು ಹೇಳಿದ್ದಾರೆ.

ಒಬ್ಬ ಸಮರ್ಪಿತ ರಾಜತಾಂತ್ರಿಕರಾಗಿರುವ ಮಿಶ್ರಿ ಅವರು ವೃತ್ತಿಪರತೆ ಮತ್ತು ದೃಢಸಂಕಲ್ಪದಿಂದ ಭಾರತಕ್ಕೆ ಸೇವೆ ಸಲ್ಲಿಸಿದ್ದಾರೆ ಮತ್ತು ಅವರನ್ನು ದೂಷಣೆ ಮಾಡುವುದಕ್ಕೆ ಯಾವುದೇ ಕಾರಣವಿಲ್ಲ ಎಂದು ಅವರು ಹೇಳಿದ್ದಾರೆ.

“ಅವರ ಮಗಳ ವೈಯಕ್ತಿಕ ಮಾಹಿತಿಯನ್ನು ಹುಡುಕುವುದು ಮತ್ತು ಅವರ ಪ್ರೀತಿಪಾತ್ರರನ್ನು ನಿಂದಿಸುವುದು ಎಲ್ಲಾ ಸಭ್ಯತೆಯ ಗೆರೆಯನ್ನು ಮೀರುತ್ತದೆ. ಈ ವಿಷಕಾರಿ ದ್ವೇಷದ ನಡುವೆ, ನಮ್ಮ ರಾಜತಾಂತ್ರಿಕ ಮಿಸ್ತಿ ಅವರ ಹಿಂದೆ ಒಗ್ಗಟ್ಟಾಗಿ ನಿಲ್ಲಬೇಕು, ಅವರನ್ನು ಕೆಡವಬಾರದು. #StopTrollingMisri #SupportDiplomats #VikramMisri #IndianDiplomacy #NoToDoxxing,” ಎಂದು ರಾವ್ ಪೋಸ್ಟ್ ಮಾಡಿದ್ದರು. ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಾರತ ಪಾಕಿಸ್ತಾನ ಕದನ ವಿರಾಮ | 32 ವಿಮಾನ ನಿಲ್ದಾಣಗಳು ಪುನರಾರಂಭ

ಭಾರತ ಪಾಕಿಸ್ತಾನ ಕದನ ವಿರಾಮ | 32 ವಿಮಾನ ನಿಲ್ದಾಣಗಳು ಪುನರಾರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...