Homeಮುಖಪುಟವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಪುತ್ರಿಯ ಆನ್‌ಲೈನ್ ಟ್ರೋಲ್ | ರಾಷ್ಟ್ರೀಯ ಮಹಿಳಾ ಆಯೋಗ ಖಂಡನೆ

ವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಪುತ್ರಿಯ ಆನ್‌ಲೈನ್ ಟ್ರೋಲ್ | ರಾಷ್ಟ್ರೀಯ ಮಹಿಳಾ ಆಯೋಗ ಖಂಡನೆ

- Advertisement -
- Advertisement -

ಮೇ 10 ರಂದು ಭಾರತ ಮತ್ತು ಪಾಕಿಸ್ತಾನವು ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಲು ಒಪ್ಪಂದ ಮಾಡಿಕೊಂಡ ನಂತರ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಅವರ ಕುಟುಂಬ ಮತ್ತು ವಿಶೇಷವಾಗಿ ಅವರ ಮಗಳ ಮೇಲೆ ಬಿಜೆಪಿ ಮತ್ತು ಬಲಪಂಥೀಯ ಬೆಂಬಲಿಗರು ನಡೆಸುತ್ತಿರುವ ಆನ್‌ಲೈನ್ ಟ್ರೋಲಿಂಗ್ ಅನ್ನು ರಾಷ್ಟ್ರೀಯ ಮಹಿಳಾ ಆಯೋಗ ತೀವ್ರವಾಗಿ ಖಂಡಿಸಿದೆ. ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

ಆಯೋಗದ ಅಧ್ಯಕ್ಷೆ ವಿಜಯ ರಹತ್ಕರ್ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಮಿಸ್ರಿ ಅವರ ಮಗಳ ವೈಯಕ್ತಿಕ ಸಂಪರ್ಕ ವಿವರಗಳನ್ನು ಹಂಚಿಕೊಳ್ಳುವುದನ್ನು ಖಂಡಿಸಿದ್ದಾರೆ. ಇದು “ತೀವ್ರ ಬೇಜವಾಬ್ದಾರಿ ಕೃತ್ಯ” ಮತ್ತು ಅವರ ಸುರಕ್ಷತೆಗೆ ಅಪಾಯವನ್ನುಂಟುಮಾಡುವ “ಗೌಪ್ಯತೆಯ ಗಂಭೀರ ಉಲ್ಲಂಘನೆ” ಎಂದು ಕರೆದಿದೆ.

ಮಿಸ್ರಿಯಂತಹ ಹಿರಿಯ ನಾಗರಿಕ ಸೇವಕರ ಕುಟುಂಬ ಸದಸ್ಯರ ಮೇಲಿನ ವೈಯಕ್ತಿಕ ದಾಳಿಗಳು ಸ್ವೀಕಾರಾರ್ಹವಲ್ಲ ಮಾತ್ರವಲ್ಲದೆ ನೈತಿಕವಾಗಿಯೂ ಸಮರ್ಥನೀಯವಲ್ಲ ಎಂದು ರಹತ್ಕರ್ ಒತ್ತಿ ಹೇಳಿದ್ದಾರೆ. ಆನ್‌ಲೈನ್ ಮತ್ತು ಆಫ್‌ಲೈನ್ ಸ್ಥಳಗಳಲ್ಲಿ ಸಂಯಮ ಮತ್ತು ಗೌರವಕ್ಕಾಗಿ ಕರೆ ನೀಡಿರುವ ಅವರು, ನಾಗರಿಕರು ಅಂತಹ ನಡವಳಿಕೆಯನ್ನು ಮೀರಿ ನಿಲ್ಲುವಂತೆ ಒತ್ತಾಯಿಸಿದ್ದಾರೆ. “ನಾವು ಘನತೆ ಮತ್ತು ಜವಾಬ್ದಾರಿಯುತ ನಡವಳಿಕೆಯನ್ನು ಆರಿಸಿಕೊಳ್ಳೋಣ” ಎಂದು ರಹತ್ಕರ್ ಹೇಳಿದ್ದಾರೆ.

ಈ ನಡುವೆ ಮಿಸ್ರಿ ಅವರ ಕುಟುಂಬದ ಪರವಾಗಿ ಹಿರಿಯ ರಾಜತಾಂತ್ರಿಕ ನಿರುಪಮಾ ಮೆನನ್ ರಾವ್ ಮತ್ತು ರಾಜಕಾರಣಿಗಳಾದ ಅಸಾದುದ್ದೀನ್ ಓವೈಸಿ ಮತ್ತು ಅಖಿಲೇಶ್ ಯಾದವ್ ಧ್ವನಿಯೆತ್ತಿದ್ದಾರೆ.

“ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಗೆ ಸಂಬಂಧಿಸಿದಂತೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಅವರ ಕುಟುಂಬವನ್ನು ಟ್ರೋಲ್ ಮಾಡುವುದು ಸಂಪೂರ್ಣವಾಗಿ ನಾಚಿಕೆಗೇಡಿನ ಸಂಗತಿ ಎಂದು ನಿರುಪಮಾ ಮೆನನ್ ರಾವ್ ಅವರು ಹೇಳಿದ್ದಾರೆ.

ಒಬ್ಬ ಸಮರ್ಪಿತ ರಾಜತಾಂತ್ರಿಕರಾಗಿರುವ ಮಿಶ್ರಿ ಅವರು ವೃತ್ತಿಪರತೆ ಮತ್ತು ದೃಢಸಂಕಲ್ಪದಿಂದ ಭಾರತಕ್ಕೆ ಸೇವೆ ಸಲ್ಲಿಸಿದ್ದಾರೆ ಮತ್ತು ಅವರನ್ನು ದೂಷಣೆ ಮಾಡುವುದಕ್ಕೆ ಯಾವುದೇ ಕಾರಣವಿಲ್ಲ ಎಂದು ಅವರು ಹೇಳಿದ್ದಾರೆ.

“ಅವರ ಮಗಳ ವೈಯಕ್ತಿಕ ಮಾಹಿತಿಯನ್ನು ಹುಡುಕುವುದು ಮತ್ತು ಅವರ ಪ್ರೀತಿಪಾತ್ರರನ್ನು ನಿಂದಿಸುವುದು ಎಲ್ಲಾ ಸಭ್ಯತೆಯ ಗೆರೆಯನ್ನು ಮೀರುತ್ತದೆ. ಈ ವಿಷಕಾರಿ ದ್ವೇಷದ ನಡುವೆ, ನಮ್ಮ ರಾಜತಾಂತ್ರಿಕ ಮಿಸ್ತಿ ಅವರ ಹಿಂದೆ ಒಗ್ಗಟ್ಟಾಗಿ ನಿಲ್ಲಬೇಕು, ಅವರನ್ನು ಕೆಡವಬಾರದು. #StopTrollingMisri #SupportDiplomats #VikramMisri #IndianDiplomacy #NoToDoxxing,” ಎಂದು ರಾವ್ ಪೋಸ್ಟ್ ಮಾಡಿದ್ದರು. ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಾರತ ಪಾಕಿಸ್ತಾನ ಕದನ ವಿರಾಮ | 32 ವಿಮಾನ ನಿಲ್ದಾಣಗಳು ಪುನರಾರಂಭ

ಭಾರತ ಪಾಕಿಸ್ತಾನ ಕದನ ವಿರಾಮ | 32 ವಿಮಾನ ನಿಲ್ದಾಣಗಳು ಪುನರಾರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...