Homeಮುಖಪುಟವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಪುತ್ರಿಯ ಆನ್‌ಲೈನ್ ಟ್ರೋಲ್ | ರಾಷ್ಟ್ರೀಯ ಮಹಿಳಾ ಆಯೋಗ ಖಂಡನೆ

ವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಪುತ್ರಿಯ ಆನ್‌ಲೈನ್ ಟ್ರೋಲ್ | ರಾಷ್ಟ್ರೀಯ ಮಹಿಳಾ ಆಯೋಗ ಖಂಡನೆ

- Advertisement -
- Advertisement -

ಮೇ 10 ರಂದು ಭಾರತ ಮತ್ತು ಪಾಕಿಸ್ತಾನವು ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಲು ಒಪ್ಪಂದ ಮಾಡಿಕೊಂಡ ನಂತರ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಅವರ ಕುಟುಂಬ ಮತ್ತು ವಿಶೇಷವಾಗಿ ಅವರ ಮಗಳ ಮೇಲೆ ಬಿಜೆಪಿ ಮತ್ತು ಬಲಪಂಥೀಯ ಬೆಂಬಲಿಗರು ನಡೆಸುತ್ತಿರುವ ಆನ್‌ಲೈನ್ ಟ್ರೋಲಿಂಗ್ ಅನ್ನು ರಾಷ್ಟ್ರೀಯ ಮಹಿಳಾ ಆಯೋಗ ತೀವ್ರವಾಗಿ ಖಂಡಿಸಿದೆ. ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

ಆಯೋಗದ ಅಧ್ಯಕ್ಷೆ ವಿಜಯ ರಹತ್ಕರ್ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಮಿಸ್ರಿ ಅವರ ಮಗಳ ವೈಯಕ್ತಿಕ ಸಂಪರ್ಕ ವಿವರಗಳನ್ನು ಹಂಚಿಕೊಳ್ಳುವುದನ್ನು ಖಂಡಿಸಿದ್ದಾರೆ. ಇದು “ತೀವ್ರ ಬೇಜವಾಬ್ದಾರಿ ಕೃತ್ಯ” ಮತ್ತು ಅವರ ಸುರಕ್ಷತೆಗೆ ಅಪಾಯವನ್ನುಂಟುಮಾಡುವ “ಗೌಪ್ಯತೆಯ ಗಂಭೀರ ಉಲ್ಲಂಘನೆ” ಎಂದು ಕರೆದಿದೆ.

ಮಿಸ್ರಿಯಂತಹ ಹಿರಿಯ ನಾಗರಿಕ ಸೇವಕರ ಕುಟುಂಬ ಸದಸ್ಯರ ಮೇಲಿನ ವೈಯಕ್ತಿಕ ದಾಳಿಗಳು ಸ್ವೀಕಾರಾರ್ಹವಲ್ಲ ಮಾತ್ರವಲ್ಲದೆ ನೈತಿಕವಾಗಿಯೂ ಸಮರ್ಥನೀಯವಲ್ಲ ಎಂದು ರಹತ್ಕರ್ ಒತ್ತಿ ಹೇಳಿದ್ದಾರೆ. ಆನ್‌ಲೈನ್ ಮತ್ತು ಆಫ್‌ಲೈನ್ ಸ್ಥಳಗಳಲ್ಲಿ ಸಂಯಮ ಮತ್ತು ಗೌರವಕ್ಕಾಗಿ ಕರೆ ನೀಡಿರುವ ಅವರು, ನಾಗರಿಕರು ಅಂತಹ ನಡವಳಿಕೆಯನ್ನು ಮೀರಿ ನಿಲ್ಲುವಂತೆ ಒತ್ತಾಯಿಸಿದ್ದಾರೆ. “ನಾವು ಘನತೆ ಮತ್ತು ಜವಾಬ್ದಾರಿಯುತ ನಡವಳಿಕೆಯನ್ನು ಆರಿಸಿಕೊಳ್ಳೋಣ” ಎಂದು ರಹತ್ಕರ್ ಹೇಳಿದ್ದಾರೆ.

ಈ ನಡುವೆ ಮಿಸ್ರಿ ಅವರ ಕುಟುಂಬದ ಪರವಾಗಿ ಹಿರಿಯ ರಾಜತಾಂತ್ರಿಕ ನಿರುಪಮಾ ಮೆನನ್ ರಾವ್ ಮತ್ತು ರಾಜಕಾರಣಿಗಳಾದ ಅಸಾದುದ್ದೀನ್ ಓವೈಸಿ ಮತ್ತು ಅಖಿಲೇಶ್ ಯಾದವ್ ಧ್ವನಿಯೆತ್ತಿದ್ದಾರೆ.

“ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಗೆ ಸಂಬಂಧಿಸಿದಂತೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಅವರ ಕುಟುಂಬವನ್ನು ಟ್ರೋಲ್ ಮಾಡುವುದು ಸಂಪೂರ್ಣವಾಗಿ ನಾಚಿಕೆಗೇಡಿನ ಸಂಗತಿ ಎಂದು ನಿರುಪಮಾ ಮೆನನ್ ರಾವ್ ಅವರು ಹೇಳಿದ್ದಾರೆ.

ಒಬ್ಬ ಸಮರ್ಪಿತ ರಾಜತಾಂತ್ರಿಕರಾಗಿರುವ ಮಿಶ್ರಿ ಅವರು ವೃತ್ತಿಪರತೆ ಮತ್ತು ದೃಢಸಂಕಲ್ಪದಿಂದ ಭಾರತಕ್ಕೆ ಸೇವೆ ಸಲ್ಲಿಸಿದ್ದಾರೆ ಮತ್ತು ಅವರನ್ನು ದೂಷಣೆ ಮಾಡುವುದಕ್ಕೆ ಯಾವುದೇ ಕಾರಣವಿಲ್ಲ ಎಂದು ಅವರು ಹೇಳಿದ್ದಾರೆ.

“ಅವರ ಮಗಳ ವೈಯಕ್ತಿಕ ಮಾಹಿತಿಯನ್ನು ಹುಡುಕುವುದು ಮತ್ತು ಅವರ ಪ್ರೀತಿಪಾತ್ರರನ್ನು ನಿಂದಿಸುವುದು ಎಲ್ಲಾ ಸಭ್ಯತೆಯ ಗೆರೆಯನ್ನು ಮೀರುತ್ತದೆ. ಈ ವಿಷಕಾರಿ ದ್ವೇಷದ ನಡುವೆ, ನಮ್ಮ ರಾಜತಾಂತ್ರಿಕ ಮಿಸ್ತಿ ಅವರ ಹಿಂದೆ ಒಗ್ಗಟ್ಟಾಗಿ ನಿಲ್ಲಬೇಕು, ಅವರನ್ನು ಕೆಡವಬಾರದು. #StopTrollingMisri #SupportDiplomats #VikramMisri #IndianDiplomacy #NoToDoxxing,” ಎಂದು ರಾವ್ ಪೋಸ್ಟ್ ಮಾಡಿದ್ದರು. ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಾರತ ಪಾಕಿಸ್ತಾನ ಕದನ ವಿರಾಮ | 32 ವಿಮಾನ ನಿಲ್ದಾಣಗಳು ಪುನರಾರಂಭ

ಭಾರತ ಪಾಕಿಸ್ತಾನ ಕದನ ವಿರಾಮ | 32 ವಿಮಾನ ನಿಲ್ದಾಣಗಳು ಪುನರಾರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...