HomeUncategorizedಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಮೊದಲೇ ಸಂಕಷ್ಟದಲ್ಲಿದ್ದ ಈ ಬುಡಕಟ್ಟು ಜನರ ಮೇಲೆ ಅರಣ್ಯ ಇಲಾಖೆಯ ದಾಳಿಯಿಂದ ಅಲ್ಲಿನ ಜನತೆ ದಿಕ್ಕೆಟ್ಟಿದ್ದಾರೆ.

- Advertisement -
- Advertisement -

ಕೊರೊನಾ ಕಾರಣಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಲಾಗಿದೆ. ಈ ಸಂದರ್ಭದಲ್ಲಿ ಪೂರ್ವ ತಯಾರಿ ಇಲ್ಲದ ಕಾರಣಕ್ಕೆ ಬಹಳಷ್ಟು ಜನಕ್ಕೆ ಅನ್ನ, ನೀರು, ವಸತಿ ಇಲ್ಲದೇ ಪರಿತಪಿಸುತ್ತಿದ್ದಾರೆ. ಇಂತಹ ಹೊತ್ತಲ್ಲಿ ರಾಮನಗರ ಜಿಲ್ಲೆಯಲ್ಲಿ ಅರಣ್ಯ ಅಧಿಕಾರಿಗಳ ಅಮಾನವೀಯ ವರ್ತನೆ ಮಿತಿಮೀರಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬನ್ನೇರುಘಟ್ಟ ಅರಣ್ಯ ಪ್ರದೇಶದ ಬುಡಗಯ್ಯನ ದೊಡ್ಡಿ ಪ್ರದೇಶದಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಹಲವಾರು ಕುಟುಂಬಗಳು ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ಭೂಮಿ ಮತ್ತು ವಸತಿಗಾಗಿ ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಿವೆ. ಅಂತಹ ಕುಟುಂಬಗಳು ಲಾಕ್‌ಡೌನ್‌ ಕಾರಣಕ್ಕಾಗಿ ಅಹೋರಾತ್ರಿ ಧರಣಿ ನಿಲ್ಲಿಸಿದ್ದರು. ಇಂತಹ ಸಮಯಕ್ಕಾಗಿ ಕಾದು ಕುಳಿತಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಮುಂಜಾನೆ ದಾಳಿ ಮಾಡಿ ಗುಡಿಸಲುಗಳನ್ನು ಧ್ವಂಸಗೊಳಿಸಿರುವ ದುರ್ಘಟನೆ ಜರುಗಿದೆ.

ವಿಡಿಯೋ ನೋಡಿ.

ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬನ್ನೇರುಘಟ್ಟ ಅರಣ್ಯ ಪ್ರದೇಶದ ಬುಡಗಯ್ಯನ ದೊಡ್ಡಿ ಪ್ರದೇಶದಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಹಲವಾರು ಕುಟುಂಬಗಳು ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ಭೂಮಿ ಮತ್ತು ವಸತಿಗಾಗಿ ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಿವೆ. ಅಂತಹ ಕುಟುಂಬಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೇಳೆ ಅವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಗುಡಿಸಲುಗಳನ್ನು ಧ್ವಂಸಗೊಳಿಸಿರುವ ದುರ್ಘಟನೆ ಜರುಗಿದೆ.

Posted by Naanu Gauri on Wednesday, April 1, 2020

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಮೊದಲೇ ಸಂಕಷ್ಟದಲ್ಲಿದ್ದ ಈ ಬುಡಕಟ್ಟು ಜನರ ಮೇಲೆ ಅರಣ್ಯ ಇಲಾಖೆಯ ದಾಳಿಯಿಂದ ಅಲ್ಲಿನ ಜನತೆ ದಿಕ್ಕೆಟ್ಟಿದ್ದಾರೆ. ಹಲವಾರು ವರ್ಷಗಳಿಂದ ತಮಗೆ ಭೂಮಿ, ವಸತಿ ಬೇಕೆಂದು ಹೋರಾಟ ಮಾಡುತ್ತಿರುವವರನ್ನು ಏಕಾಏಕಿ ಒಕ್ಕಲೆಬ್ಬಿಸಿದರೆ ತಮ್ಮ ಜೀವನಕ್ಕೆ ಗತಿಯೇನು ಎಂದು ವಾದಿಸುತ್ತಿದ್ದಾರೆ.

ಅರಣ್ಯ ಇಲಾಖೆಯ ದಾಳಿಗೆ ಕಾರಣವೇನು?

ಅರಣ್ಯ ಇಲಾಖೆಯು ಪ್ರಧಾನವಾಗಿ ಈ ಜನರು ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು ವಾಸಿಸುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮನೆಕಟ್ಟಲು, ಇತರ ಕೃಷಿ ಸಂಬಂಧಿ ಚಟುವಟಿಕೆಗಳನ್ನು ನಡೆಸಲು ಅವಕಾಶವಿಲ್ಲ. ಅವರು ಅರಣ್ಯ ಹಕ್ಕು ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ ನಾವು ಕಾನೂನು ಕ್ರಮ ಕೈಗೊಂಡಿದ್ದೇವೆ ಎಂದು ಹೇಳುತ್ತಾರೆ.

ಆದರೆ ಆ ಜನರಿಗೆ ಅರಣ್ಯ ಹಕ್ಕು ಕಾಯ್ದೆಯ ಬೆಂಬಲವಿದೆ..

ಈ ಕುರಿತು ನಾನುಗೌರಿ.ಕಾಂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಹೋರಾಟಗಾರರಾದ ಸಿರಿಮನೆ ನಾಗರಾಜ್‌ರವರನ್ನು ಮಾತನಾಡಿಸಿತು. ಅವರು “ಅರಣ್ಯ ಹಕ್ಕು ಕಾಯ್ದೆಯಲ್ಲಿ ಆದಿವಾಸಿಗಳು ಮತ್ತು ಇತರ ಪಾರಂಪರಿಕ ಅರಣ್ಯ ಹಕ್ಕುದಾರರು ಅಂತ ಇದೆ. ಅಂದರೆ ಯಾವುದಾದರೂ ಸಮುದಾಯ ಅಲ್ಲಿ ಮೂರು ತಲೆಮಾರು ವಾಸಿಸಿದ್ದರೆ ಅವರಿಗೆ ಅಲ್ಲಿ ವಾಸಿಸಲು ಹಕ್ಕು ಸಿಗುತ್ತದೆ. ಇದನ್ನು ಬಳಸಿ ಹಲವಾರು ಜನರಿಗೆ ಭೂಮಿ ಕೊಟ್ಟಿರುವ ನೂರಾರು ಉದಾಹರಣೆಗಳಿವೆ. ಕಾಗೋಡು ತಿಮ್ಮಪ್ಪ ಮತ್ತು ಡಿ.ಕೆ ಶಿವಕುಮಾರ್‌ ಈ ರೀತಿ ಹಲವರಿಗೆ ಭೂಮಿ ಕೊಡಿಸಿದ್ದಾರೆ. ಇದೇ ಮಾದರಿಯಲ್ಲಿ ಈ ಇರುಳಿಗ ಜನರಿಗೆ ಭೂಮಿ ನೀಡಬಹುದಾಗಿದೆ. ಆದರೆ ಅರಣ್ಯ ಇಲಾಖೆಯವರು ಸರಿಯಾಗಿ ಅರಣ್ಯ ಹಕ್ಕು ಕಾಯ್ದೆಯ ನಿಯಮಗಳನ್ನು ಓದಿಕೊಳ್ಳದೇ ಈ ಕೃತ್ಯ ಎಸಗುತ್ತಿರುವುದು ಸರಿಯಲ್ಲ ಎಂದಿದ್ದಾರೆ.

ಮೀಸಲು ಅರಣ್ಯವೇ ಆಗಿದ್ದರೂ ಸಹ ಆದಿವಾಸಿಗಳಾಗಿದ್ದರೆ ಆ ಕಾಡಿನ ಮೇಲೆ ಅವರಿಗೆ ಹಕ್ಕು ಇರುತ್ತದೆ. ಅವರ ಮರಗಳು, ವಾಸವಿದ್ದ ಮನೆಯ ಗೋಡೆ, ಅವರ ದೈವದ ದಾಖಲೆಗಳಿದ್ದರೆ ಸಾಕು. ಅವರಿಗೆ ಅಲ್ಲಿನ ಹಣ್ಣು ಮತ್ತು ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಿ ಮಾರುವ ಹಕ್ಕು ಸಹ ಇದೆ. ಕಾಡಿನ ಮೇಲ್ಮೆಗೆ ಯಾವುದೇ ರೀತಿ ಬದಲಾವಣೆ ಮಾಡದೇ ಅದನ್ನು ಉಪಯೋಗಿಸುವ ಕಾನೂನಾತ್ಮಕ ಹಕ್ಕು ಇದೆ. ಆದರೆ ಅರಣ್ಯ ಅಧಿಕಾರಿಗಳು ಬಡಜನರ ವಿರುದ್ಧದ ನಿಲುವಿನಿಂದಾಗಿ ತೊಂದರೆ ಕೊಡುತ್ತಿದ್ದಾರೆ ಎಂದು ಸಿರಿಮನೆ ನಾಗರಾಜ್‌ ಆರೋಪಿಸಿದ್ದಾರೆ.

ಈಗಿನ ಅರಣ್ಯ ಇಲಾಖೆಯ ಈ ಕ್ರಮದಿಂದಾಗಿ ಅಲ್ಲಿನ ಬಡಜನರು ಬೀದಿಪಾಲಾಗಿದ್ದು ಗೋಳಾಡುತ್ತಿದ್ದಾರೆ. ಮಹಿಳೆಯರು ಮಕ್ಕಳು ಬೀದಿಗೆ ಬಿದ್ದಿದ್ದು ಹೋರಾಟಕ್ಕೆ ಅಣಿಯಾಗಿದ್ದಾರೆ.


ಇದನ್ನೂ ಓದಿ: ಕಾರ್ಯತಂತ್ರ ಮಾತ್ರವಲ್ಲ; ಮಾನವೀಯತೆಯೇ ಇಲ್ಲದ ಮೋದಿ ಸರಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...