HomeUncategorizedಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಮೊದಲೇ ಸಂಕಷ್ಟದಲ್ಲಿದ್ದ ಈ ಬುಡಕಟ್ಟು ಜನರ ಮೇಲೆ ಅರಣ್ಯ ಇಲಾಖೆಯ ದಾಳಿಯಿಂದ ಅಲ್ಲಿನ ಜನತೆ ದಿಕ್ಕೆಟ್ಟಿದ್ದಾರೆ.

- Advertisement -
- Advertisement -

ಕೊರೊನಾ ಕಾರಣಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಲಾಗಿದೆ. ಈ ಸಂದರ್ಭದಲ್ಲಿ ಪೂರ್ವ ತಯಾರಿ ಇಲ್ಲದ ಕಾರಣಕ್ಕೆ ಬಹಳಷ್ಟು ಜನಕ್ಕೆ ಅನ್ನ, ನೀರು, ವಸತಿ ಇಲ್ಲದೇ ಪರಿತಪಿಸುತ್ತಿದ್ದಾರೆ. ಇಂತಹ ಹೊತ್ತಲ್ಲಿ ರಾಮನಗರ ಜಿಲ್ಲೆಯಲ್ಲಿ ಅರಣ್ಯ ಅಧಿಕಾರಿಗಳ ಅಮಾನವೀಯ ವರ್ತನೆ ಮಿತಿಮೀರಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬನ್ನೇರುಘಟ್ಟ ಅರಣ್ಯ ಪ್ರದೇಶದ ಬುಡಗಯ್ಯನ ದೊಡ್ಡಿ ಪ್ರದೇಶದಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಹಲವಾರು ಕುಟುಂಬಗಳು ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ಭೂಮಿ ಮತ್ತು ವಸತಿಗಾಗಿ ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಿವೆ. ಅಂತಹ ಕುಟುಂಬಗಳು ಲಾಕ್‌ಡೌನ್‌ ಕಾರಣಕ್ಕಾಗಿ ಅಹೋರಾತ್ರಿ ಧರಣಿ ನಿಲ್ಲಿಸಿದ್ದರು. ಇಂತಹ ಸಮಯಕ್ಕಾಗಿ ಕಾದು ಕುಳಿತಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಮುಂಜಾನೆ ದಾಳಿ ಮಾಡಿ ಗುಡಿಸಲುಗಳನ್ನು ಧ್ವಂಸಗೊಳಿಸಿರುವ ದುರ್ಘಟನೆ ಜರುಗಿದೆ.

ವಿಡಿಯೋ ನೋಡಿ.

ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬನ್ನೇರುಘಟ್ಟ ಅರಣ್ಯ ಪ್ರದೇಶದ ಬುಡಗಯ್ಯನ ದೊಡ್ಡಿ ಪ್ರದೇಶದಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಹಲವಾರು ಕುಟುಂಬಗಳು ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ಭೂಮಿ ಮತ್ತು ವಸತಿಗಾಗಿ ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಿವೆ. ಅಂತಹ ಕುಟುಂಬಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೇಳೆ ಅವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಗುಡಿಸಲುಗಳನ್ನು ಧ್ವಂಸಗೊಳಿಸಿರುವ ದುರ್ಘಟನೆ ಜರುಗಿದೆ.

Posted by Naanu Gauri on Wednesday, April 1, 2020

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಮೊದಲೇ ಸಂಕಷ್ಟದಲ್ಲಿದ್ದ ಈ ಬುಡಕಟ್ಟು ಜನರ ಮೇಲೆ ಅರಣ್ಯ ಇಲಾಖೆಯ ದಾಳಿಯಿಂದ ಅಲ್ಲಿನ ಜನತೆ ದಿಕ್ಕೆಟ್ಟಿದ್ದಾರೆ. ಹಲವಾರು ವರ್ಷಗಳಿಂದ ತಮಗೆ ಭೂಮಿ, ವಸತಿ ಬೇಕೆಂದು ಹೋರಾಟ ಮಾಡುತ್ತಿರುವವರನ್ನು ಏಕಾಏಕಿ ಒಕ್ಕಲೆಬ್ಬಿಸಿದರೆ ತಮ್ಮ ಜೀವನಕ್ಕೆ ಗತಿಯೇನು ಎಂದು ವಾದಿಸುತ್ತಿದ್ದಾರೆ.

ಅರಣ್ಯ ಇಲಾಖೆಯ ದಾಳಿಗೆ ಕಾರಣವೇನು?

ಅರಣ್ಯ ಇಲಾಖೆಯು ಪ್ರಧಾನವಾಗಿ ಈ ಜನರು ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು ವಾಸಿಸುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮನೆಕಟ್ಟಲು, ಇತರ ಕೃಷಿ ಸಂಬಂಧಿ ಚಟುವಟಿಕೆಗಳನ್ನು ನಡೆಸಲು ಅವಕಾಶವಿಲ್ಲ. ಅವರು ಅರಣ್ಯ ಹಕ್ಕು ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ ನಾವು ಕಾನೂನು ಕ್ರಮ ಕೈಗೊಂಡಿದ್ದೇವೆ ಎಂದು ಹೇಳುತ್ತಾರೆ.

ಆದರೆ ಆ ಜನರಿಗೆ ಅರಣ್ಯ ಹಕ್ಕು ಕಾಯ್ದೆಯ ಬೆಂಬಲವಿದೆ..

ಈ ಕುರಿತು ನಾನುಗೌರಿ.ಕಾಂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಹೋರಾಟಗಾರರಾದ ಸಿರಿಮನೆ ನಾಗರಾಜ್‌ರವರನ್ನು ಮಾತನಾಡಿಸಿತು. ಅವರು “ಅರಣ್ಯ ಹಕ್ಕು ಕಾಯ್ದೆಯಲ್ಲಿ ಆದಿವಾಸಿಗಳು ಮತ್ತು ಇತರ ಪಾರಂಪರಿಕ ಅರಣ್ಯ ಹಕ್ಕುದಾರರು ಅಂತ ಇದೆ. ಅಂದರೆ ಯಾವುದಾದರೂ ಸಮುದಾಯ ಅಲ್ಲಿ ಮೂರು ತಲೆಮಾರು ವಾಸಿಸಿದ್ದರೆ ಅವರಿಗೆ ಅಲ್ಲಿ ವಾಸಿಸಲು ಹಕ್ಕು ಸಿಗುತ್ತದೆ. ಇದನ್ನು ಬಳಸಿ ಹಲವಾರು ಜನರಿಗೆ ಭೂಮಿ ಕೊಟ್ಟಿರುವ ನೂರಾರು ಉದಾಹರಣೆಗಳಿವೆ. ಕಾಗೋಡು ತಿಮ್ಮಪ್ಪ ಮತ್ತು ಡಿ.ಕೆ ಶಿವಕುಮಾರ್‌ ಈ ರೀತಿ ಹಲವರಿಗೆ ಭೂಮಿ ಕೊಡಿಸಿದ್ದಾರೆ. ಇದೇ ಮಾದರಿಯಲ್ಲಿ ಈ ಇರುಳಿಗ ಜನರಿಗೆ ಭೂಮಿ ನೀಡಬಹುದಾಗಿದೆ. ಆದರೆ ಅರಣ್ಯ ಇಲಾಖೆಯವರು ಸರಿಯಾಗಿ ಅರಣ್ಯ ಹಕ್ಕು ಕಾಯ್ದೆಯ ನಿಯಮಗಳನ್ನು ಓದಿಕೊಳ್ಳದೇ ಈ ಕೃತ್ಯ ಎಸಗುತ್ತಿರುವುದು ಸರಿಯಲ್ಲ ಎಂದಿದ್ದಾರೆ.

ಮೀಸಲು ಅರಣ್ಯವೇ ಆಗಿದ್ದರೂ ಸಹ ಆದಿವಾಸಿಗಳಾಗಿದ್ದರೆ ಆ ಕಾಡಿನ ಮೇಲೆ ಅವರಿಗೆ ಹಕ್ಕು ಇರುತ್ತದೆ. ಅವರ ಮರಗಳು, ವಾಸವಿದ್ದ ಮನೆಯ ಗೋಡೆ, ಅವರ ದೈವದ ದಾಖಲೆಗಳಿದ್ದರೆ ಸಾಕು. ಅವರಿಗೆ ಅಲ್ಲಿನ ಹಣ್ಣು ಮತ್ತು ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಿ ಮಾರುವ ಹಕ್ಕು ಸಹ ಇದೆ. ಕಾಡಿನ ಮೇಲ್ಮೆಗೆ ಯಾವುದೇ ರೀತಿ ಬದಲಾವಣೆ ಮಾಡದೇ ಅದನ್ನು ಉಪಯೋಗಿಸುವ ಕಾನೂನಾತ್ಮಕ ಹಕ್ಕು ಇದೆ. ಆದರೆ ಅರಣ್ಯ ಅಧಿಕಾರಿಗಳು ಬಡಜನರ ವಿರುದ್ಧದ ನಿಲುವಿನಿಂದಾಗಿ ತೊಂದರೆ ಕೊಡುತ್ತಿದ್ದಾರೆ ಎಂದು ಸಿರಿಮನೆ ನಾಗರಾಜ್‌ ಆರೋಪಿಸಿದ್ದಾರೆ.

ಈಗಿನ ಅರಣ್ಯ ಇಲಾಖೆಯ ಈ ಕ್ರಮದಿಂದಾಗಿ ಅಲ್ಲಿನ ಬಡಜನರು ಬೀದಿಪಾಲಾಗಿದ್ದು ಗೋಳಾಡುತ್ತಿದ್ದಾರೆ. ಮಹಿಳೆಯರು ಮಕ್ಕಳು ಬೀದಿಗೆ ಬಿದ್ದಿದ್ದು ಹೋರಾಟಕ್ಕೆ ಅಣಿಯಾಗಿದ್ದಾರೆ.


ಇದನ್ನೂ ಓದಿ: ಕಾರ್ಯತಂತ್ರ ಮಾತ್ರವಲ್ಲ; ಮಾನವೀಯತೆಯೇ ಇಲ್ಲದ ಮೋದಿ ಸರಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...