HomeUncategorizedಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಮೊದಲೇ ಸಂಕಷ್ಟದಲ್ಲಿದ್ದ ಈ ಬುಡಕಟ್ಟು ಜನರ ಮೇಲೆ ಅರಣ್ಯ ಇಲಾಖೆಯ ದಾಳಿಯಿಂದ ಅಲ್ಲಿನ ಜನತೆ ದಿಕ್ಕೆಟ್ಟಿದ್ದಾರೆ.

- Advertisement -
- Advertisement -

ಕೊರೊನಾ ಕಾರಣಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಲಾಗಿದೆ. ಈ ಸಂದರ್ಭದಲ್ಲಿ ಪೂರ್ವ ತಯಾರಿ ಇಲ್ಲದ ಕಾರಣಕ್ಕೆ ಬಹಳಷ್ಟು ಜನಕ್ಕೆ ಅನ್ನ, ನೀರು, ವಸತಿ ಇಲ್ಲದೇ ಪರಿತಪಿಸುತ್ತಿದ್ದಾರೆ. ಇಂತಹ ಹೊತ್ತಲ್ಲಿ ರಾಮನಗರ ಜಿಲ್ಲೆಯಲ್ಲಿ ಅರಣ್ಯ ಅಧಿಕಾರಿಗಳ ಅಮಾನವೀಯ ವರ್ತನೆ ಮಿತಿಮೀರಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬನ್ನೇರುಘಟ್ಟ ಅರಣ್ಯ ಪ್ರದೇಶದ ಬುಡಗಯ್ಯನ ದೊಡ್ಡಿ ಪ್ರದೇಶದಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಹಲವಾರು ಕುಟುಂಬಗಳು ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ಭೂಮಿ ಮತ್ತು ವಸತಿಗಾಗಿ ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಿವೆ. ಅಂತಹ ಕುಟುಂಬಗಳು ಲಾಕ್‌ಡೌನ್‌ ಕಾರಣಕ್ಕಾಗಿ ಅಹೋರಾತ್ರಿ ಧರಣಿ ನಿಲ್ಲಿಸಿದ್ದರು. ಇಂತಹ ಸಮಯಕ್ಕಾಗಿ ಕಾದು ಕುಳಿತಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಮುಂಜಾನೆ ದಾಳಿ ಮಾಡಿ ಗುಡಿಸಲುಗಳನ್ನು ಧ್ವಂಸಗೊಳಿಸಿರುವ ದುರ್ಘಟನೆ ಜರುಗಿದೆ.

ವಿಡಿಯೋ ನೋಡಿ.

ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬನ್ನೇರುಘಟ್ಟ ಅರಣ್ಯ ಪ್ರದೇಶದ ಬುಡಗಯ್ಯನ ದೊಡ್ಡಿ ಪ್ರದೇಶದಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಹಲವಾರು ಕುಟುಂಬಗಳು ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ಭೂಮಿ ಮತ್ತು ವಸತಿಗಾಗಿ ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಿವೆ. ಅಂತಹ ಕುಟುಂಬಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೇಳೆ ಅವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಗುಡಿಸಲುಗಳನ್ನು ಧ್ವಂಸಗೊಳಿಸಿರುವ ದುರ್ಘಟನೆ ಜರುಗಿದೆ.

Posted by Naanu Gauri on Wednesday, April 1, 2020

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಮೊದಲೇ ಸಂಕಷ್ಟದಲ್ಲಿದ್ದ ಈ ಬುಡಕಟ್ಟು ಜನರ ಮೇಲೆ ಅರಣ್ಯ ಇಲಾಖೆಯ ದಾಳಿಯಿಂದ ಅಲ್ಲಿನ ಜನತೆ ದಿಕ್ಕೆಟ್ಟಿದ್ದಾರೆ. ಹಲವಾರು ವರ್ಷಗಳಿಂದ ತಮಗೆ ಭೂಮಿ, ವಸತಿ ಬೇಕೆಂದು ಹೋರಾಟ ಮಾಡುತ್ತಿರುವವರನ್ನು ಏಕಾಏಕಿ ಒಕ್ಕಲೆಬ್ಬಿಸಿದರೆ ತಮ್ಮ ಜೀವನಕ್ಕೆ ಗತಿಯೇನು ಎಂದು ವಾದಿಸುತ್ತಿದ್ದಾರೆ.

ಅರಣ್ಯ ಇಲಾಖೆಯ ದಾಳಿಗೆ ಕಾರಣವೇನು?

ಅರಣ್ಯ ಇಲಾಖೆಯು ಪ್ರಧಾನವಾಗಿ ಈ ಜನರು ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು ವಾಸಿಸುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮನೆಕಟ್ಟಲು, ಇತರ ಕೃಷಿ ಸಂಬಂಧಿ ಚಟುವಟಿಕೆಗಳನ್ನು ನಡೆಸಲು ಅವಕಾಶವಿಲ್ಲ. ಅವರು ಅರಣ್ಯ ಹಕ್ಕು ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ ನಾವು ಕಾನೂನು ಕ್ರಮ ಕೈಗೊಂಡಿದ್ದೇವೆ ಎಂದು ಹೇಳುತ್ತಾರೆ.

ಆದರೆ ಆ ಜನರಿಗೆ ಅರಣ್ಯ ಹಕ್ಕು ಕಾಯ್ದೆಯ ಬೆಂಬಲವಿದೆ..

ಈ ಕುರಿತು ನಾನುಗೌರಿ.ಕಾಂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಹೋರಾಟಗಾರರಾದ ಸಿರಿಮನೆ ನಾಗರಾಜ್‌ರವರನ್ನು ಮಾತನಾಡಿಸಿತು. ಅವರು “ಅರಣ್ಯ ಹಕ್ಕು ಕಾಯ್ದೆಯಲ್ಲಿ ಆದಿವಾಸಿಗಳು ಮತ್ತು ಇತರ ಪಾರಂಪರಿಕ ಅರಣ್ಯ ಹಕ್ಕುದಾರರು ಅಂತ ಇದೆ. ಅಂದರೆ ಯಾವುದಾದರೂ ಸಮುದಾಯ ಅಲ್ಲಿ ಮೂರು ತಲೆಮಾರು ವಾಸಿಸಿದ್ದರೆ ಅವರಿಗೆ ಅಲ್ಲಿ ವಾಸಿಸಲು ಹಕ್ಕು ಸಿಗುತ್ತದೆ. ಇದನ್ನು ಬಳಸಿ ಹಲವಾರು ಜನರಿಗೆ ಭೂಮಿ ಕೊಟ್ಟಿರುವ ನೂರಾರು ಉದಾಹರಣೆಗಳಿವೆ. ಕಾಗೋಡು ತಿಮ್ಮಪ್ಪ ಮತ್ತು ಡಿ.ಕೆ ಶಿವಕುಮಾರ್‌ ಈ ರೀತಿ ಹಲವರಿಗೆ ಭೂಮಿ ಕೊಡಿಸಿದ್ದಾರೆ. ಇದೇ ಮಾದರಿಯಲ್ಲಿ ಈ ಇರುಳಿಗ ಜನರಿಗೆ ಭೂಮಿ ನೀಡಬಹುದಾಗಿದೆ. ಆದರೆ ಅರಣ್ಯ ಇಲಾಖೆಯವರು ಸರಿಯಾಗಿ ಅರಣ್ಯ ಹಕ್ಕು ಕಾಯ್ದೆಯ ನಿಯಮಗಳನ್ನು ಓದಿಕೊಳ್ಳದೇ ಈ ಕೃತ್ಯ ಎಸಗುತ್ತಿರುವುದು ಸರಿಯಲ್ಲ ಎಂದಿದ್ದಾರೆ.

ಮೀಸಲು ಅರಣ್ಯವೇ ಆಗಿದ್ದರೂ ಸಹ ಆದಿವಾಸಿಗಳಾಗಿದ್ದರೆ ಆ ಕಾಡಿನ ಮೇಲೆ ಅವರಿಗೆ ಹಕ್ಕು ಇರುತ್ತದೆ. ಅವರ ಮರಗಳು, ವಾಸವಿದ್ದ ಮನೆಯ ಗೋಡೆ, ಅವರ ದೈವದ ದಾಖಲೆಗಳಿದ್ದರೆ ಸಾಕು. ಅವರಿಗೆ ಅಲ್ಲಿನ ಹಣ್ಣು ಮತ್ತು ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಿ ಮಾರುವ ಹಕ್ಕು ಸಹ ಇದೆ. ಕಾಡಿನ ಮೇಲ್ಮೆಗೆ ಯಾವುದೇ ರೀತಿ ಬದಲಾವಣೆ ಮಾಡದೇ ಅದನ್ನು ಉಪಯೋಗಿಸುವ ಕಾನೂನಾತ್ಮಕ ಹಕ್ಕು ಇದೆ. ಆದರೆ ಅರಣ್ಯ ಅಧಿಕಾರಿಗಳು ಬಡಜನರ ವಿರುದ್ಧದ ನಿಲುವಿನಿಂದಾಗಿ ತೊಂದರೆ ಕೊಡುತ್ತಿದ್ದಾರೆ ಎಂದು ಸಿರಿಮನೆ ನಾಗರಾಜ್‌ ಆರೋಪಿಸಿದ್ದಾರೆ.

ಈಗಿನ ಅರಣ್ಯ ಇಲಾಖೆಯ ಈ ಕ್ರಮದಿಂದಾಗಿ ಅಲ್ಲಿನ ಬಡಜನರು ಬೀದಿಪಾಲಾಗಿದ್ದು ಗೋಳಾಡುತ್ತಿದ್ದಾರೆ. ಮಹಿಳೆಯರು ಮಕ್ಕಳು ಬೀದಿಗೆ ಬಿದ್ದಿದ್ದು ಹೋರಾಟಕ್ಕೆ ಅಣಿಯಾಗಿದ್ದಾರೆ.


ಇದನ್ನೂ ಓದಿ: ಕಾರ್ಯತಂತ್ರ ಮಾತ್ರವಲ್ಲ; ಮಾನವೀಯತೆಯೇ ಇಲ್ಲದ ಮೋದಿ ಸರಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...