HomeUncategorizedಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಮೊದಲೇ ಸಂಕಷ್ಟದಲ್ಲಿದ್ದ ಈ ಬುಡಕಟ್ಟು ಜನರ ಮೇಲೆ ಅರಣ್ಯ ಇಲಾಖೆಯ ದಾಳಿಯಿಂದ ಅಲ್ಲಿನ ಜನತೆ ದಿಕ್ಕೆಟ್ಟಿದ್ದಾರೆ.

- Advertisement -
- Advertisement -

ಕೊರೊನಾ ಕಾರಣಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಲಾಗಿದೆ. ಈ ಸಂದರ್ಭದಲ್ಲಿ ಪೂರ್ವ ತಯಾರಿ ಇಲ್ಲದ ಕಾರಣಕ್ಕೆ ಬಹಳಷ್ಟು ಜನಕ್ಕೆ ಅನ್ನ, ನೀರು, ವಸತಿ ಇಲ್ಲದೇ ಪರಿತಪಿಸುತ್ತಿದ್ದಾರೆ. ಇಂತಹ ಹೊತ್ತಲ್ಲಿ ರಾಮನಗರ ಜಿಲ್ಲೆಯಲ್ಲಿ ಅರಣ್ಯ ಅಧಿಕಾರಿಗಳ ಅಮಾನವೀಯ ವರ್ತನೆ ಮಿತಿಮೀರಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬನ್ನೇರುಘಟ್ಟ ಅರಣ್ಯ ಪ್ರದೇಶದ ಬುಡಗಯ್ಯನ ದೊಡ್ಡಿ ಪ್ರದೇಶದಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಹಲವಾರು ಕುಟುಂಬಗಳು ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ಭೂಮಿ ಮತ್ತು ವಸತಿಗಾಗಿ ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಿವೆ. ಅಂತಹ ಕುಟುಂಬಗಳು ಲಾಕ್‌ಡೌನ್‌ ಕಾರಣಕ್ಕಾಗಿ ಅಹೋರಾತ್ರಿ ಧರಣಿ ನಿಲ್ಲಿಸಿದ್ದರು. ಇಂತಹ ಸಮಯಕ್ಕಾಗಿ ಕಾದು ಕುಳಿತಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಮುಂಜಾನೆ ದಾಳಿ ಮಾಡಿ ಗುಡಿಸಲುಗಳನ್ನು ಧ್ವಂಸಗೊಳಿಸಿರುವ ದುರ್ಘಟನೆ ಜರುಗಿದೆ.

ವಿಡಿಯೋ ನೋಡಿ.

ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬನ್ನೇರುಘಟ್ಟ ಅರಣ್ಯ ಪ್ರದೇಶದ ಬುಡಗಯ್ಯನ ದೊಡ್ಡಿ ಪ್ರದೇಶದಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಹಲವಾರು ಕುಟುಂಬಗಳು ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ಭೂಮಿ ಮತ್ತು ವಸತಿಗಾಗಿ ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಿವೆ. ಅಂತಹ ಕುಟುಂಬಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೇಳೆ ಅವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಗುಡಿಸಲುಗಳನ್ನು ಧ್ವಂಸಗೊಳಿಸಿರುವ ದುರ್ಘಟನೆ ಜರುಗಿದೆ.

Posted by Naanu Gauri on Wednesday, April 1, 2020

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಮೊದಲೇ ಸಂಕಷ್ಟದಲ್ಲಿದ್ದ ಈ ಬುಡಕಟ್ಟು ಜನರ ಮೇಲೆ ಅರಣ್ಯ ಇಲಾಖೆಯ ದಾಳಿಯಿಂದ ಅಲ್ಲಿನ ಜನತೆ ದಿಕ್ಕೆಟ್ಟಿದ್ದಾರೆ. ಹಲವಾರು ವರ್ಷಗಳಿಂದ ತಮಗೆ ಭೂಮಿ, ವಸತಿ ಬೇಕೆಂದು ಹೋರಾಟ ಮಾಡುತ್ತಿರುವವರನ್ನು ಏಕಾಏಕಿ ಒಕ್ಕಲೆಬ್ಬಿಸಿದರೆ ತಮ್ಮ ಜೀವನಕ್ಕೆ ಗತಿಯೇನು ಎಂದು ವಾದಿಸುತ್ತಿದ್ದಾರೆ.

ಅರಣ್ಯ ಇಲಾಖೆಯ ದಾಳಿಗೆ ಕಾರಣವೇನು?

ಅರಣ್ಯ ಇಲಾಖೆಯು ಪ್ರಧಾನವಾಗಿ ಈ ಜನರು ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು ವಾಸಿಸುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮನೆಕಟ್ಟಲು, ಇತರ ಕೃಷಿ ಸಂಬಂಧಿ ಚಟುವಟಿಕೆಗಳನ್ನು ನಡೆಸಲು ಅವಕಾಶವಿಲ್ಲ. ಅವರು ಅರಣ್ಯ ಹಕ್ಕು ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ ನಾವು ಕಾನೂನು ಕ್ರಮ ಕೈಗೊಂಡಿದ್ದೇವೆ ಎಂದು ಹೇಳುತ್ತಾರೆ.

ಆದರೆ ಆ ಜನರಿಗೆ ಅರಣ್ಯ ಹಕ್ಕು ಕಾಯ್ದೆಯ ಬೆಂಬಲವಿದೆ..

ಈ ಕುರಿತು ನಾನುಗೌರಿ.ಕಾಂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಹೋರಾಟಗಾರರಾದ ಸಿರಿಮನೆ ನಾಗರಾಜ್‌ರವರನ್ನು ಮಾತನಾಡಿಸಿತು. ಅವರು “ಅರಣ್ಯ ಹಕ್ಕು ಕಾಯ್ದೆಯಲ್ಲಿ ಆದಿವಾಸಿಗಳು ಮತ್ತು ಇತರ ಪಾರಂಪರಿಕ ಅರಣ್ಯ ಹಕ್ಕುದಾರರು ಅಂತ ಇದೆ. ಅಂದರೆ ಯಾವುದಾದರೂ ಸಮುದಾಯ ಅಲ್ಲಿ ಮೂರು ತಲೆಮಾರು ವಾಸಿಸಿದ್ದರೆ ಅವರಿಗೆ ಅಲ್ಲಿ ವಾಸಿಸಲು ಹಕ್ಕು ಸಿಗುತ್ತದೆ. ಇದನ್ನು ಬಳಸಿ ಹಲವಾರು ಜನರಿಗೆ ಭೂಮಿ ಕೊಟ್ಟಿರುವ ನೂರಾರು ಉದಾಹರಣೆಗಳಿವೆ. ಕಾಗೋಡು ತಿಮ್ಮಪ್ಪ ಮತ್ತು ಡಿ.ಕೆ ಶಿವಕುಮಾರ್‌ ಈ ರೀತಿ ಹಲವರಿಗೆ ಭೂಮಿ ಕೊಡಿಸಿದ್ದಾರೆ. ಇದೇ ಮಾದರಿಯಲ್ಲಿ ಈ ಇರುಳಿಗ ಜನರಿಗೆ ಭೂಮಿ ನೀಡಬಹುದಾಗಿದೆ. ಆದರೆ ಅರಣ್ಯ ಇಲಾಖೆಯವರು ಸರಿಯಾಗಿ ಅರಣ್ಯ ಹಕ್ಕು ಕಾಯ್ದೆಯ ನಿಯಮಗಳನ್ನು ಓದಿಕೊಳ್ಳದೇ ಈ ಕೃತ್ಯ ಎಸಗುತ್ತಿರುವುದು ಸರಿಯಲ್ಲ ಎಂದಿದ್ದಾರೆ.

ಮೀಸಲು ಅರಣ್ಯವೇ ಆಗಿದ್ದರೂ ಸಹ ಆದಿವಾಸಿಗಳಾಗಿದ್ದರೆ ಆ ಕಾಡಿನ ಮೇಲೆ ಅವರಿಗೆ ಹಕ್ಕು ಇರುತ್ತದೆ. ಅವರ ಮರಗಳು, ವಾಸವಿದ್ದ ಮನೆಯ ಗೋಡೆ, ಅವರ ದೈವದ ದಾಖಲೆಗಳಿದ್ದರೆ ಸಾಕು. ಅವರಿಗೆ ಅಲ್ಲಿನ ಹಣ್ಣು ಮತ್ತು ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಿ ಮಾರುವ ಹಕ್ಕು ಸಹ ಇದೆ. ಕಾಡಿನ ಮೇಲ್ಮೆಗೆ ಯಾವುದೇ ರೀತಿ ಬದಲಾವಣೆ ಮಾಡದೇ ಅದನ್ನು ಉಪಯೋಗಿಸುವ ಕಾನೂನಾತ್ಮಕ ಹಕ್ಕು ಇದೆ. ಆದರೆ ಅರಣ್ಯ ಅಧಿಕಾರಿಗಳು ಬಡಜನರ ವಿರುದ್ಧದ ನಿಲುವಿನಿಂದಾಗಿ ತೊಂದರೆ ಕೊಡುತ್ತಿದ್ದಾರೆ ಎಂದು ಸಿರಿಮನೆ ನಾಗರಾಜ್‌ ಆರೋಪಿಸಿದ್ದಾರೆ.

ಈಗಿನ ಅರಣ್ಯ ಇಲಾಖೆಯ ಈ ಕ್ರಮದಿಂದಾಗಿ ಅಲ್ಲಿನ ಬಡಜನರು ಬೀದಿಪಾಲಾಗಿದ್ದು ಗೋಳಾಡುತ್ತಿದ್ದಾರೆ. ಮಹಿಳೆಯರು ಮಕ್ಕಳು ಬೀದಿಗೆ ಬಿದ್ದಿದ್ದು ಹೋರಾಟಕ್ಕೆ ಅಣಿಯಾಗಿದ್ದಾರೆ.


ಇದನ್ನೂ ಓದಿ: ಕಾರ್ಯತಂತ್ರ ಮಾತ್ರವಲ್ಲ; ಮಾನವೀಯತೆಯೇ ಇಲ್ಲದ ಮೋದಿ ಸರಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...