HomeUncategorizedಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಮೊದಲೇ ಸಂಕಷ್ಟದಲ್ಲಿದ್ದ ಈ ಬುಡಕಟ್ಟು ಜನರ ಮೇಲೆ ಅರಣ್ಯ ಇಲಾಖೆಯ ದಾಳಿಯಿಂದ ಅಲ್ಲಿನ ಜನತೆ ದಿಕ್ಕೆಟ್ಟಿದ್ದಾರೆ.

- Advertisement -
- Advertisement -

ಕೊರೊನಾ ಕಾರಣಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಲಾಗಿದೆ. ಈ ಸಂದರ್ಭದಲ್ಲಿ ಪೂರ್ವ ತಯಾರಿ ಇಲ್ಲದ ಕಾರಣಕ್ಕೆ ಬಹಳಷ್ಟು ಜನಕ್ಕೆ ಅನ್ನ, ನೀರು, ವಸತಿ ಇಲ್ಲದೇ ಪರಿತಪಿಸುತ್ತಿದ್ದಾರೆ. ಇಂತಹ ಹೊತ್ತಲ್ಲಿ ರಾಮನಗರ ಜಿಲ್ಲೆಯಲ್ಲಿ ಅರಣ್ಯ ಅಧಿಕಾರಿಗಳ ಅಮಾನವೀಯ ವರ್ತನೆ ಮಿತಿಮೀರಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬನ್ನೇರುಘಟ್ಟ ಅರಣ್ಯ ಪ್ರದೇಶದ ಬುಡಗಯ್ಯನ ದೊಡ್ಡಿ ಪ್ರದೇಶದಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಹಲವಾರು ಕುಟುಂಬಗಳು ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ಭೂಮಿ ಮತ್ತು ವಸತಿಗಾಗಿ ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಿವೆ. ಅಂತಹ ಕುಟುಂಬಗಳು ಲಾಕ್‌ಡೌನ್‌ ಕಾರಣಕ್ಕಾಗಿ ಅಹೋರಾತ್ರಿ ಧರಣಿ ನಿಲ್ಲಿಸಿದ್ದರು. ಇಂತಹ ಸಮಯಕ್ಕಾಗಿ ಕಾದು ಕುಳಿತಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಮುಂಜಾನೆ ದಾಳಿ ಮಾಡಿ ಗುಡಿಸಲುಗಳನ್ನು ಧ್ವಂಸಗೊಳಿಸಿರುವ ದುರ್ಘಟನೆ ಜರುಗಿದೆ.

ವಿಡಿಯೋ ನೋಡಿ.

ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬನ್ನೇರುಘಟ್ಟ ಅರಣ್ಯ ಪ್ರದೇಶದ ಬುಡಗಯ್ಯನ ದೊಡ್ಡಿ ಪ್ರದೇಶದಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಹಲವಾರು ಕುಟುಂಬಗಳು ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ಭೂಮಿ ಮತ್ತು ವಸತಿಗಾಗಿ ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಿವೆ. ಅಂತಹ ಕುಟುಂಬಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೇಳೆ ಅವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಗುಡಿಸಲುಗಳನ್ನು ಧ್ವಂಸಗೊಳಿಸಿರುವ ದುರ್ಘಟನೆ ಜರುಗಿದೆ.

Posted by Naanu Gauri on Wednesday, April 1, 2020

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಮೊದಲೇ ಸಂಕಷ್ಟದಲ್ಲಿದ್ದ ಈ ಬುಡಕಟ್ಟು ಜನರ ಮೇಲೆ ಅರಣ್ಯ ಇಲಾಖೆಯ ದಾಳಿಯಿಂದ ಅಲ್ಲಿನ ಜನತೆ ದಿಕ್ಕೆಟ್ಟಿದ್ದಾರೆ. ಹಲವಾರು ವರ್ಷಗಳಿಂದ ತಮಗೆ ಭೂಮಿ, ವಸತಿ ಬೇಕೆಂದು ಹೋರಾಟ ಮಾಡುತ್ತಿರುವವರನ್ನು ಏಕಾಏಕಿ ಒಕ್ಕಲೆಬ್ಬಿಸಿದರೆ ತಮ್ಮ ಜೀವನಕ್ಕೆ ಗತಿಯೇನು ಎಂದು ವಾದಿಸುತ್ತಿದ್ದಾರೆ.

ಅರಣ್ಯ ಇಲಾಖೆಯ ದಾಳಿಗೆ ಕಾರಣವೇನು?

ಅರಣ್ಯ ಇಲಾಖೆಯು ಪ್ರಧಾನವಾಗಿ ಈ ಜನರು ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು ವಾಸಿಸುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮನೆಕಟ್ಟಲು, ಇತರ ಕೃಷಿ ಸಂಬಂಧಿ ಚಟುವಟಿಕೆಗಳನ್ನು ನಡೆಸಲು ಅವಕಾಶವಿಲ್ಲ. ಅವರು ಅರಣ್ಯ ಹಕ್ಕು ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ ನಾವು ಕಾನೂನು ಕ್ರಮ ಕೈಗೊಂಡಿದ್ದೇವೆ ಎಂದು ಹೇಳುತ್ತಾರೆ.

ಆದರೆ ಆ ಜನರಿಗೆ ಅರಣ್ಯ ಹಕ್ಕು ಕಾಯ್ದೆಯ ಬೆಂಬಲವಿದೆ..

ಈ ಕುರಿತು ನಾನುಗೌರಿ.ಕಾಂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಹೋರಾಟಗಾರರಾದ ಸಿರಿಮನೆ ನಾಗರಾಜ್‌ರವರನ್ನು ಮಾತನಾಡಿಸಿತು. ಅವರು “ಅರಣ್ಯ ಹಕ್ಕು ಕಾಯ್ದೆಯಲ್ಲಿ ಆದಿವಾಸಿಗಳು ಮತ್ತು ಇತರ ಪಾರಂಪರಿಕ ಅರಣ್ಯ ಹಕ್ಕುದಾರರು ಅಂತ ಇದೆ. ಅಂದರೆ ಯಾವುದಾದರೂ ಸಮುದಾಯ ಅಲ್ಲಿ ಮೂರು ತಲೆಮಾರು ವಾಸಿಸಿದ್ದರೆ ಅವರಿಗೆ ಅಲ್ಲಿ ವಾಸಿಸಲು ಹಕ್ಕು ಸಿಗುತ್ತದೆ. ಇದನ್ನು ಬಳಸಿ ಹಲವಾರು ಜನರಿಗೆ ಭೂಮಿ ಕೊಟ್ಟಿರುವ ನೂರಾರು ಉದಾಹರಣೆಗಳಿವೆ. ಕಾಗೋಡು ತಿಮ್ಮಪ್ಪ ಮತ್ತು ಡಿ.ಕೆ ಶಿವಕುಮಾರ್‌ ಈ ರೀತಿ ಹಲವರಿಗೆ ಭೂಮಿ ಕೊಡಿಸಿದ್ದಾರೆ. ಇದೇ ಮಾದರಿಯಲ್ಲಿ ಈ ಇರುಳಿಗ ಜನರಿಗೆ ಭೂಮಿ ನೀಡಬಹುದಾಗಿದೆ. ಆದರೆ ಅರಣ್ಯ ಇಲಾಖೆಯವರು ಸರಿಯಾಗಿ ಅರಣ್ಯ ಹಕ್ಕು ಕಾಯ್ದೆಯ ನಿಯಮಗಳನ್ನು ಓದಿಕೊಳ್ಳದೇ ಈ ಕೃತ್ಯ ಎಸಗುತ್ತಿರುವುದು ಸರಿಯಲ್ಲ ಎಂದಿದ್ದಾರೆ.

ಮೀಸಲು ಅರಣ್ಯವೇ ಆಗಿದ್ದರೂ ಸಹ ಆದಿವಾಸಿಗಳಾಗಿದ್ದರೆ ಆ ಕಾಡಿನ ಮೇಲೆ ಅವರಿಗೆ ಹಕ್ಕು ಇರುತ್ತದೆ. ಅವರ ಮರಗಳು, ವಾಸವಿದ್ದ ಮನೆಯ ಗೋಡೆ, ಅವರ ದೈವದ ದಾಖಲೆಗಳಿದ್ದರೆ ಸಾಕು. ಅವರಿಗೆ ಅಲ್ಲಿನ ಹಣ್ಣು ಮತ್ತು ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಿ ಮಾರುವ ಹಕ್ಕು ಸಹ ಇದೆ. ಕಾಡಿನ ಮೇಲ್ಮೆಗೆ ಯಾವುದೇ ರೀತಿ ಬದಲಾವಣೆ ಮಾಡದೇ ಅದನ್ನು ಉಪಯೋಗಿಸುವ ಕಾನೂನಾತ್ಮಕ ಹಕ್ಕು ಇದೆ. ಆದರೆ ಅರಣ್ಯ ಅಧಿಕಾರಿಗಳು ಬಡಜನರ ವಿರುದ್ಧದ ನಿಲುವಿನಿಂದಾಗಿ ತೊಂದರೆ ಕೊಡುತ್ತಿದ್ದಾರೆ ಎಂದು ಸಿರಿಮನೆ ನಾಗರಾಜ್‌ ಆರೋಪಿಸಿದ್ದಾರೆ.

ಈಗಿನ ಅರಣ್ಯ ಇಲಾಖೆಯ ಈ ಕ್ರಮದಿಂದಾಗಿ ಅಲ್ಲಿನ ಬಡಜನರು ಬೀದಿಪಾಲಾಗಿದ್ದು ಗೋಳಾಡುತ್ತಿದ್ದಾರೆ. ಮಹಿಳೆಯರು ಮಕ್ಕಳು ಬೀದಿಗೆ ಬಿದ್ದಿದ್ದು ಹೋರಾಟಕ್ಕೆ ಅಣಿಯಾಗಿದ್ದಾರೆ.


ಇದನ್ನೂ ಓದಿ: ಕಾರ್ಯತಂತ್ರ ಮಾತ್ರವಲ್ಲ; ಮಾನವೀಯತೆಯೇ ಇಲ್ಲದ ಮೋದಿ ಸರಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...