Homeಕರ್ನಾಟಕಆದಿವಾಸಿಗಳಿಗೆ ಅರಣ್ಯ ಇಲಾಖೆ ಅನಗತ್ಯ ಕಿರುಕುಳ ಕೊಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಆದಿವಾಸಿಗಳಿಗೆ ಅರಣ್ಯ ಇಲಾಖೆ ಅನಗತ್ಯ ಕಿರುಕುಳ ಕೊಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಇಷ್ಟು ದಿನ ಉಪ ಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಹಿರಂಗ ಪ್ರಚಾರ ಅಂತ್ಯವಾಗುತ್ತಿದ್ದಂತೆಯೇ ಮಂಗಳವಾರ ಎಚ್‌.ಡಿ. ಕೋಟೆ ತಾಲೂಕಿನ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೆರೆ ಹಾಡಿಗೆ ಭೇಟಿ ನೀಡಿ, “ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ, ತೊಂದರೆ ಕೊಡಬಾರದು” ಎಂದು ಸೂಚಿಸಿದರು.

“ಆದಿವಾಸಿ-ಅರಣ್ಯವಾಸಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಾಗಿ ಸದ್ಯದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವನ್ಯಜೀವಿ ಮಂಡಳಿ ಸಭೆ ಕರೆದು ಅರಣ್ಯಾಧಿಕಾರಿಗಳಿಂದ ಅರಣ್ಯವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು” ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

“ಹಲವು ದಶಕಗಳಿಂದ ಕೆರೆಹಾಡಿ ಸೇರಿದಂತೆ ಒಂಬತ್ತು ಹಾಡಿಗಳಿಗೆ ವಿದ್ಯುತ್ ಸಂಪರ್ಕ ಇಲ್ಲ, ಕುಡಿಯುವ ನೀರಿಗೆ ಸಮಸ್ಯೆ ಇದೆ. ಇದು ಗಂಭಿರವಾದುದ್ದು. ಯಾವ ಅರಣ್ಯ ಕಾಯ್ದೆ ಕೂಡ ಅರಣ್ಯವಾಸಿಗಳಿಗೆ ಕರೆಂಟು, ನೀರು ಕೊಡಬೇಡಿ ಎಂದು ಹೇಳುವುದಿಲ್ಲ. ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ, ತೊಂದರೆ ಕೊಡಬಾರದು.
ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿಯವರು ಎಲ್ಲ ಅಡೆತಡೆಗಳನ್ನು ನಿವಾರಿಸಿ ಒಂದು ತಿಂಗಳಲ್ಲಿ ಕೆರೆಹಾಡಿ ಮತ್ತು ಇತರೆ ಎಂಟು ಹಾಡಿಗಳ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕದ ಸಮಸ್ಯೆ ಬಗೆಹರಿಸಲಿದ್ದಾರೆ” ಎಂದು ಸಿಎಂ ಭರವಸೆ ನೀಡಿದ್ದಾರೆ.

“ಹಕ್ಕುಪತ್ರ ಇದ್ದರೂ ಅರಣ್ಯಾಧಿಕಾರಿಗಳು ಮನೆ ಕಟ್ಟಲು ಬಿಡುತ್ತಿಲ್ಲ, ಎರಡು-ಮೂರು ಎಕರೆ ಜಾಗದಲ್ಲಿ ಹಲವಾರು ದಶಕಗಳಿಂದ ಉಳುಮೆ ಮಾಡುತ್ತಿದ್ದರೂ ಕೇವಲ 2, 3 ಗುಂಟೆಗೆ ಹಕ್ಕು ಪತ್ರ ನೀಡಿದ್ದಾರೆ. ಜಮೀನಿನಲ್ಲಿ ಟ್ರಾಕ್ಟರ್ ಬಳಸಲು ಅವಕಾಶ ನೀಡುತ್ತಿಲ್ಲ ಎನ್ನುವ ದೂರು ಬಂದಿದೆ. ಆದಿವಾಸಿಗಳು ಅಂದರೆ ಅವರು ಅರಣ್ಯದ ಭಾಗವೇ ಆಗಿದ್ದಾರೆ. ಇವರಿಂದ ಅರಣ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಆದ್ದರಿಂದ ಇವರಿಗೆ ಅನಗತ್ಯ ತೊಂದರೆ ಕೊಡಬಾರದು ಎಂಬ ಸ್ಪಷ್ಟ ಸೂಚನೆ ನೀಡಿದ್ದೇನೆ. ವನ್ಯ ಜೀವಿ ಮಂಡಳಿಗೆ ನಾನೇ ಅಧ್ಯಕ್ಷ ಆಗಿದ್ದೀನಿ. ಸದ್ಯದಲ್ಲೇ ಮಂಡಳಿ ಸಭೆ ಕರೆದು ಇಲ್ಲಿನ ಬುಡಕಟ್ಟು ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತೇನೆ” ಎಂದು ಹೇಳಿದ್ದಾರೆ.

ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆಗೆ ಕ್ರಮ

“ತಾವು ಅಲೆಮಾರಿಗಳಲ್ಲ. ಊರ ನಾಯಕರೂ ಅಲ್ಲ. ತಾವೆಲ್ಲರೂ ಕಾಡಲ್ಲೇ ಒಂದೇ ಕಡೆ ನೆಲೆಸಿರುವ ಆದಿವಾಸಿಗಳು. ಆದ್ದರಿಂದ ಅಲೆಮಾರಿ ಅಭಿವೃದ್ಧಿ ನಿಗಮದಲ್ಲಿ ತಮ್ಮನ್ನು ಸೇರಿಸಬೇಡಿ. ನಮಗೆ ಪ್ರತ್ಯೇಕವಾದ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಎನ್ನುವ ಬೇಡಿಕೆ ಇಟ್ಟಿದ್ದಾರೆ. ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆ ಸಂಬಂಧ ಆದಷ್ಟು ಶೀಘ್ರ ಕ್ರಮ ವಹಿಸುತ್ತೇನೆ” ಎಂದಿದ್ದಾರೆ.

“ನಮ್ಮಪ್ಪ ಕೂಡ ಜನಪದ ನೃತ್ಯ ಕಲಿಯೋಕೆ ನನ್ನನ್ನು ಹಾಕ್ಬಿಟ್ಟಿದ್ರು. ನಾನು ಹಠತೊಟ್ಟು ಕಾನೂನು ಪದವಿ ಮಾಡಿದ್ದಕ್ಕೆ ಇಂದು ಮುಖ್ಯಮಂತ್ರಿ ಆಗುವ ಮಟ್ಟಕ್ಕೆ ಬೆಳೆದೆ. ಈ ಆದಿವಾಸಿ ಸಮುದಾಯದ ಮಕ್ಕಳು ಕೂಡ ಅರ್ಧಕ್ಕೇ ಶಾಲೆ ನಿಲ್ಲಿಸದೆ ಶಿಕ್ಷಣ ಪಡೆಯಬೇಕು. ಆಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ.
ಮೊದಲು ನಾಲ್ಕನೇ ತರಗತಿವರೆಗೂ ಮಾತ್ರ ಆಶ್ರಮ ಶಾಲೆಗಳನ್ನು ನಾನು ಎಂಟನೇ ತರಗತಿವರೆಗೂ ವಿಸ್ತರಿಸಿದ್ದೆ. ಇದನ್ನು ಪಿಯುಸಿ ವರೆಗೂ ವಿಸ್ತರಿಸಿ ಎನ್ನುವುದು ಆದಿವಾಸಿಗಳು ಬೇಡಿಕೆಯಾಗಿದೆ, ಈ ಬಗ್ಗೆ ಸಭೆ ಕರೆದು ಪರಿಶೀಲನೆ ನಡೆಸುತ್ತೇನೆ” ಎಂದರು.

ಒಳ ಮೀಸಲಾತಿ ಕುರಿತು ಕಾನೂನು ತಜ್ಞರ ಜೊತೆ ಚರ್ಚೆ

“ಪರಿಶಿಷ್ಟ ಜಾತಿಯವರ ಒಳ ಮೀಸಲಾತಿಗೆ ಮುಂದಾಗಿರುವ ರೀತಿಯಲ್ಲೇ , ಪರಿಶಿಷ್ಠ ವರ್ಗದವರ ಒಳ ಮೀಸಲಾತಿಗೆ ಕ್ರಮ ವಹಿಸಬೇಕು ಎನ್ನುವ ಬೇಡಿಕೆ ಇದೆ. ಆದರೆ ಸುಪ್ರೀಂ ಕೋರ್ಟ್‌ ಒಳಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರ ಆಧಾರದಲ್ಲಿ ಮುಂದುವರೆದಿದ್ದೇವೆ. ಎಸ್ ಟಿ ಒಳ ಮೀಸಲಾತಿ ಬಗ್ಗೆ ಏನೂ ತೀರ್ಪು ಬಂದಿಲ್ಲ. ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲಾಗುವುದು” ಎಂದು ಹೇಳಿದರು.

ಇದನ್ನೂ ಓದಿ; ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...