Homeಕರ್ನಾಟಕಆದಿವಾಸಿಗಳಿಗೆ ಅರಣ್ಯ ಇಲಾಖೆ ಅನಗತ್ಯ ಕಿರುಕುಳ ಕೊಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಆದಿವಾಸಿಗಳಿಗೆ ಅರಣ್ಯ ಇಲಾಖೆ ಅನಗತ್ಯ ಕಿರುಕುಳ ಕೊಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಇಷ್ಟು ದಿನ ಉಪ ಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಹಿರಂಗ ಪ್ರಚಾರ ಅಂತ್ಯವಾಗುತ್ತಿದ್ದಂತೆಯೇ ಮಂಗಳವಾರ ಎಚ್‌.ಡಿ. ಕೋಟೆ ತಾಲೂಕಿನ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೆರೆ ಹಾಡಿಗೆ ಭೇಟಿ ನೀಡಿ, “ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ, ತೊಂದರೆ ಕೊಡಬಾರದು” ಎಂದು ಸೂಚಿಸಿದರು.

“ಆದಿವಾಸಿ-ಅರಣ್ಯವಾಸಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಾಗಿ ಸದ್ಯದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವನ್ಯಜೀವಿ ಮಂಡಳಿ ಸಭೆ ಕರೆದು ಅರಣ್ಯಾಧಿಕಾರಿಗಳಿಂದ ಅರಣ್ಯವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು” ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

“ಹಲವು ದಶಕಗಳಿಂದ ಕೆರೆಹಾಡಿ ಸೇರಿದಂತೆ ಒಂಬತ್ತು ಹಾಡಿಗಳಿಗೆ ವಿದ್ಯುತ್ ಸಂಪರ್ಕ ಇಲ್ಲ, ಕುಡಿಯುವ ನೀರಿಗೆ ಸಮಸ್ಯೆ ಇದೆ. ಇದು ಗಂಭಿರವಾದುದ್ದು. ಯಾವ ಅರಣ್ಯ ಕಾಯ್ದೆ ಕೂಡ ಅರಣ್ಯವಾಸಿಗಳಿಗೆ ಕರೆಂಟು, ನೀರು ಕೊಡಬೇಡಿ ಎಂದು ಹೇಳುವುದಿಲ್ಲ. ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ, ತೊಂದರೆ ಕೊಡಬಾರದು.
ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿಯವರು ಎಲ್ಲ ಅಡೆತಡೆಗಳನ್ನು ನಿವಾರಿಸಿ ಒಂದು ತಿಂಗಳಲ್ಲಿ ಕೆರೆಹಾಡಿ ಮತ್ತು ಇತರೆ ಎಂಟು ಹಾಡಿಗಳ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕದ ಸಮಸ್ಯೆ ಬಗೆಹರಿಸಲಿದ್ದಾರೆ” ಎಂದು ಸಿಎಂ ಭರವಸೆ ನೀಡಿದ್ದಾರೆ.

“ಹಕ್ಕುಪತ್ರ ಇದ್ದರೂ ಅರಣ್ಯಾಧಿಕಾರಿಗಳು ಮನೆ ಕಟ್ಟಲು ಬಿಡುತ್ತಿಲ್ಲ, ಎರಡು-ಮೂರು ಎಕರೆ ಜಾಗದಲ್ಲಿ ಹಲವಾರು ದಶಕಗಳಿಂದ ಉಳುಮೆ ಮಾಡುತ್ತಿದ್ದರೂ ಕೇವಲ 2, 3 ಗುಂಟೆಗೆ ಹಕ್ಕು ಪತ್ರ ನೀಡಿದ್ದಾರೆ. ಜಮೀನಿನಲ್ಲಿ ಟ್ರಾಕ್ಟರ್ ಬಳಸಲು ಅವಕಾಶ ನೀಡುತ್ತಿಲ್ಲ ಎನ್ನುವ ದೂರು ಬಂದಿದೆ. ಆದಿವಾಸಿಗಳು ಅಂದರೆ ಅವರು ಅರಣ್ಯದ ಭಾಗವೇ ಆಗಿದ್ದಾರೆ. ಇವರಿಂದ ಅರಣ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಆದ್ದರಿಂದ ಇವರಿಗೆ ಅನಗತ್ಯ ತೊಂದರೆ ಕೊಡಬಾರದು ಎಂಬ ಸ್ಪಷ್ಟ ಸೂಚನೆ ನೀಡಿದ್ದೇನೆ. ವನ್ಯ ಜೀವಿ ಮಂಡಳಿಗೆ ನಾನೇ ಅಧ್ಯಕ್ಷ ಆಗಿದ್ದೀನಿ. ಸದ್ಯದಲ್ಲೇ ಮಂಡಳಿ ಸಭೆ ಕರೆದು ಇಲ್ಲಿನ ಬುಡಕಟ್ಟು ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತೇನೆ” ಎಂದು ಹೇಳಿದ್ದಾರೆ.

ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆಗೆ ಕ್ರಮ

“ತಾವು ಅಲೆಮಾರಿಗಳಲ್ಲ. ಊರ ನಾಯಕರೂ ಅಲ್ಲ. ತಾವೆಲ್ಲರೂ ಕಾಡಲ್ಲೇ ಒಂದೇ ಕಡೆ ನೆಲೆಸಿರುವ ಆದಿವಾಸಿಗಳು. ಆದ್ದರಿಂದ ಅಲೆಮಾರಿ ಅಭಿವೃದ್ಧಿ ನಿಗಮದಲ್ಲಿ ತಮ್ಮನ್ನು ಸೇರಿಸಬೇಡಿ. ನಮಗೆ ಪ್ರತ್ಯೇಕವಾದ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಎನ್ನುವ ಬೇಡಿಕೆ ಇಟ್ಟಿದ್ದಾರೆ. ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆ ಸಂಬಂಧ ಆದಷ್ಟು ಶೀಘ್ರ ಕ್ರಮ ವಹಿಸುತ್ತೇನೆ” ಎಂದಿದ್ದಾರೆ.

“ನಮ್ಮಪ್ಪ ಕೂಡ ಜನಪದ ನೃತ್ಯ ಕಲಿಯೋಕೆ ನನ್ನನ್ನು ಹಾಕ್ಬಿಟ್ಟಿದ್ರು. ನಾನು ಹಠತೊಟ್ಟು ಕಾನೂನು ಪದವಿ ಮಾಡಿದ್ದಕ್ಕೆ ಇಂದು ಮುಖ್ಯಮಂತ್ರಿ ಆಗುವ ಮಟ್ಟಕ್ಕೆ ಬೆಳೆದೆ. ಈ ಆದಿವಾಸಿ ಸಮುದಾಯದ ಮಕ್ಕಳು ಕೂಡ ಅರ್ಧಕ್ಕೇ ಶಾಲೆ ನಿಲ್ಲಿಸದೆ ಶಿಕ್ಷಣ ಪಡೆಯಬೇಕು. ಆಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ.
ಮೊದಲು ನಾಲ್ಕನೇ ತರಗತಿವರೆಗೂ ಮಾತ್ರ ಆಶ್ರಮ ಶಾಲೆಗಳನ್ನು ನಾನು ಎಂಟನೇ ತರಗತಿವರೆಗೂ ವಿಸ್ತರಿಸಿದ್ದೆ. ಇದನ್ನು ಪಿಯುಸಿ ವರೆಗೂ ವಿಸ್ತರಿಸಿ ಎನ್ನುವುದು ಆದಿವಾಸಿಗಳು ಬೇಡಿಕೆಯಾಗಿದೆ, ಈ ಬಗ್ಗೆ ಸಭೆ ಕರೆದು ಪರಿಶೀಲನೆ ನಡೆಸುತ್ತೇನೆ” ಎಂದರು.

ಒಳ ಮೀಸಲಾತಿ ಕುರಿತು ಕಾನೂನು ತಜ್ಞರ ಜೊತೆ ಚರ್ಚೆ

“ಪರಿಶಿಷ್ಟ ಜಾತಿಯವರ ಒಳ ಮೀಸಲಾತಿಗೆ ಮುಂದಾಗಿರುವ ರೀತಿಯಲ್ಲೇ , ಪರಿಶಿಷ್ಠ ವರ್ಗದವರ ಒಳ ಮೀಸಲಾತಿಗೆ ಕ್ರಮ ವಹಿಸಬೇಕು ಎನ್ನುವ ಬೇಡಿಕೆ ಇದೆ. ಆದರೆ ಸುಪ್ರೀಂ ಕೋರ್ಟ್‌ ಒಳಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರ ಆಧಾರದಲ್ಲಿ ಮುಂದುವರೆದಿದ್ದೇವೆ. ಎಸ್ ಟಿ ಒಳ ಮೀಸಲಾತಿ ಬಗ್ಗೆ ಏನೂ ತೀರ್ಪು ಬಂದಿಲ್ಲ. ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲಾಗುವುದು” ಎಂದು ಹೇಳಿದರು.

ಇದನ್ನೂ ಓದಿ; ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...