Homeಕರ್ನಾಟಕಆದಿವಾಸಿಗಳಿಗೆ ಅರಣ್ಯ ಇಲಾಖೆ ಅನಗತ್ಯ ಕಿರುಕುಳ ಕೊಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಆದಿವಾಸಿಗಳಿಗೆ ಅರಣ್ಯ ಇಲಾಖೆ ಅನಗತ್ಯ ಕಿರುಕುಳ ಕೊಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಇಷ್ಟು ದಿನ ಉಪ ಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಹಿರಂಗ ಪ್ರಚಾರ ಅಂತ್ಯವಾಗುತ್ತಿದ್ದಂತೆಯೇ ಮಂಗಳವಾರ ಎಚ್‌.ಡಿ. ಕೋಟೆ ತಾಲೂಕಿನ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೆರೆ ಹಾಡಿಗೆ ಭೇಟಿ ನೀಡಿ, “ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ, ತೊಂದರೆ ಕೊಡಬಾರದು” ಎಂದು ಸೂಚಿಸಿದರು.

“ಆದಿವಾಸಿ-ಅರಣ್ಯವಾಸಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಾಗಿ ಸದ್ಯದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವನ್ಯಜೀವಿ ಮಂಡಳಿ ಸಭೆ ಕರೆದು ಅರಣ್ಯಾಧಿಕಾರಿಗಳಿಂದ ಅರಣ್ಯವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು” ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

“ಹಲವು ದಶಕಗಳಿಂದ ಕೆರೆಹಾಡಿ ಸೇರಿದಂತೆ ಒಂಬತ್ತು ಹಾಡಿಗಳಿಗೆ ವಿದ್ಯುತ್ ಸಂಪರ್ಕ ಇಲ್ಲ, ಕುಡಿಯುವ ನೀರಿಗೆ ಸಮಸ್ಯೆ ಇದೆ. ಇದು ಗಂಭಿರವಾದುದ್ದು. ಯಾವ ಅರಣ್ಯ ಕಾಯ್ದೆ ಕೂಡ ಅರಣ್ಯವಾಸಿಗಳಿಗೆ ಕರೆಂಟು, ನೀರು ಕೊಡಬೇಡಿ ಎಂದು ಹೇಳುವುದಿಲ್ಲ. ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ, ತೊಂದರೆ ಕೊಡಬಾರದು.
ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿಯವರು ಎಲ್ಲ ಅಡೆತಡೆಗಳನ್ನು ನಿವಾರಿಸಿ ಒಂದು ತಿಂಗಳಲ್ಲಿ ಕೆರೆಹಾಡಿ ಮತ್ತು ಇತರೆ ಎಂಟು ಹಾಡಿಗಳ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕದ ಸಮಸ್ಯೆ ಬಗೆಹರಿಸಲಿದ್ದಾರೆ” ಎಂದು ಸಿಎಂ ಭರವಸೆ ನೀಡಿದ್ದಾರೆ.

“ಹಕ್ಕುಪತ್ರ ಇದ್ದರೂ ಅರಣ್ಯಾಧಿಕಾರಿಗಳು ಮನೆ ಕಟ್ಟಲು ಬಿಡುತ್ತಿಲ್ಲ, ಎರಡು-ಮೂರು ಎಕರೆ ಜಾಗದಲ್ಲಿ ಹಲವಾರು ದಶಕಗಳಿಂದ ಉಳುಮೆ ಮಾಡುತ್ತಿದ್ದರೂ ಕೇವಲ 2, 3 ಗುಂಟೆಗೆ ಹಕ್ಕು ಪತ್ರ ನೀಡಿದ್ದಾರೆ. ಜಮೀನಿನಲ್ಲಿ ಟ್ರಾಕ್ಟರ್ ಬಳಸಲು ಅವಕಾಶ ನೀಡುತ್ತಿಲ್ಲ ಎನ್ನುವ ದೂರು ಬಂದಿದೆ. ಆದಿವಾಸಿಗಳು ಅಂದರೆ ಅವರು ಅರಣ್ಯದ ಭಾಗವೇ ಆಗಿದ್ದಾರೆ. ಇವರಿಂದ ಅರಣ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಆದ್ದರಿಂದ ಇವರಿಗೆ ಅನಗತ್ಯ ತೊಂದರೆ ಕೊಡಬಾರದು ಎಂಬ ಸ್ಪಷ್ಟ ಸೂಚನೆ ನೀಡಿದ್ದೇನೆ. ವನ್ಯ ಜೀವಿ ಮಂಡಳಿಗೆ ನಾನೇ ಅಧ್ಯಕ್ಷ ಆಗಿದ್ದೀನಿ. ಸದ್ಯದಲ್ಲೇ ಮಂಡಳಿ ಸಭೆ ಕರೆದು ಇಲ್ಲಿನ ಬುಡಕಟ್ಟು ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತೇನೆ” ಎಂದು ಹೇಳಿದ್ದಾರೆ.

ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆಗೆ ಕ್ರಮ

“ತಾವು ಅಲೆಮಾರಿಗಳಲ್ಲ. ಊರ ನಾಯಕರೂ ಅಲ್ಲ. ತಾವೆಲ್ಲರೂ ಕಾಡಲ್ಲೇ ಒಂದೇ ಕಡೆ ನೆಲೆಸಿರುವ ಆದಿವಾಸಿಗಳು. ಆದ್ದರಿಂದ ಅಲೆಮಾರಿ ಅಭಿವೃದ್ಧಿ ನಿಗಮದಲ್ಲಿ ತಮ್ಮನ್ನು ಸೇರಿಸಬೇಡಿ. ನಮಗೆ ಪ್ರತ್ಯೇಕವಾದ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಎನ್ನುವ ಬೇಡಿಕೆ ಇಟ್ಟಿದ್ದಾರೆ. ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆ ಸಂಬಂಧ ಆದಷ್ಟು ಶೀಘ್ರ ಕ್ರಮ ವಹಿಸುತ್ತೇನೆ” ಎಂದಿದ್ದಾರೆ.

“ನಮ್ಮಪ್ಪ ಕೂಡ ಜನಪದ ನೃತ್ಯ ಕಲಿಯೋಕೆ ನನ್ನನ್ನು ಹಾಕ್ಬಿಟ್ಟಿದ್ರು. ನಾನು ಹಠತೊಟ್ಟು ಕಾನೂನು ಪದವಿ ಮಾಡಿದ್ದಕ್ಕೆ ಇಂದು ಮುಖ್ಯಮಂತ್ರಿ ಆಗುವ ಮಟ್ಟಕ್ಕೆ ಬೆಳೆದೆ. ಈ ಆದಿವಾಸಿ ಸಮುದಾಯದ ಮಕ್ಕಳು ಕೂಡ ಅರ್ಧಕ್ಕೇ ಶಾಲೆ ನಿಲ್ಲಿಸದೆ ಶಿಕ್ಷಣ ಪಡೆಯಬೇಕು. ಆಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ.
ಮೊದಲು ನಾಲ್ಕನೇ ತರಗತಿವರೆಗೂ ಮಾತ್ರ ಆಶ್ರಮ ಶಾಲೆಗಳನ್ನು ನಾನು ಎಂಟನೇ ತರಗತಿವರೆಗೂ ವಿಸ್ತರಿಸಿದ್ದೆ. ಇದನ್ನು ಪಿಯುಸಿ ವರೆಗೂ ವಿಸ್ತರಿಸಿ ಎನ್ನುವುದು ಆದಿವಾಸಿಗಳು ಬೇಡಿಕೆಯಾಗಿದೆ, ಈ ಬಗ್ಗೆ ಸಭೆ ಕರೆದು ಪರಿಶೀಲನೆ ನಡೆಸುತ್ತೇನೆ” ಎಂದರು.

ಒಳ ಮೀಸಲಾತಿ ಕುರಿತು ಕಾನೂನು ತಜ್ಞರ ಜೊತೆ ಚರ್ಚೆ

“ಪರಿಶಿಷ್ಟ ಜಾತಿಯವರ ಒಳ ಮೀಸಲಾತಿಗೆ ಮುಂದಾಗಿರುವ ರೀತಿಯಲ್ಲೇ , ಪರಿಶಿಷ್ಠ ವರ್ಗದವರ ಒಳ ಮೀಸಲಾತಿಗೆ ಕ್ರಮ ವಹಿಸಬೇಕು ಎನ್ನುವ ಬೇಡಿಕೆ ಇದೆ. ಆದರೆ ಸುಪ್ರೀಂ ಕೋರ್ಟ್‌ ಒಳಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರ ಆಧಾರದಲ್ಲಿ ಮುಂದುವರೆದಿದ್ದೇವೆ. ಎಸ್ ಟಿ ಒಳ ಮೀಸಲಾತಿ ಬಗ್ಗೆ ಏನೂ ತೀರ್ಪು ಬಂದಿಲ್ಲ. ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲಾಗುವುದು” ಎಂದು ಹೇಳಿದರು.

ಇದನ್ನೂ ಓದಿ; ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...