Homeಕರ್ನಾಟಕಇಂದಿನಿಂದ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು : ಕಾರ್ಯಪಡೆ ರಚಿಸಿದ ಸರ್ಕಾರ

ಇಂದಿನಿಂದ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು : ಕಾರ್ಯಪಡೆ ರಚಿಸಿದ ಸರ್ಕಾರ

- Advertisement -
- Advertisement -

ವಯನಾಡ್ ಸೇರಿದಂತೆ ವಿವಿದೆಡೆ ಸಂಭವಿಸಿದ ಭೂಕುಸಿತ ದುರಂತಗಳಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಅರಣ್ಯ ಒತ್ತುವರಿ ತೆರವು ಮತ್ತು ಅನಧಿಕೃತ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.

ಇಂದಿನಿಂದ (ಆ.5) ರಾಜ್ಯದ ಪಶ್ಚಿಮಘಟ್ಟ ಪ್ರದೇಶಗಳ ಅರಣ್ಯ ಒತ್ತುವರಿ, ಅಕ್ರಮ ತೋಟಗಳು, ಅನಧಿಕೃತ ರೆಸಾರ್ಟ್‌ಗಳು ಮತ್ತು ಇತರ ನಿರ್ಮಾಣಗಳ ತೆರವು ಕಾರ್ಯ ಆರಂಭಿಸಲಿದೆ. ಇದಕ್ಕಾಗಿ ಕಾರ್ಯಪಡೆ ರಚಿಸಿದೆ.

ಪಶ್ಚಿಮಘಟ್ಟ ಪ್ರದೇಶಗಳ ಅರಣ್ಯ ಒತ್ತುವರಿ ಮತ್ತು ಅನಧಿಕೃತ ನಿರ್ಮಾಣಗಳ ತೆರವಿಗೆ 2023ರಲ್ಲೇ ಅರಣ್ಯ ಇಲಾಖೆ ಟಿಪ್ಪಣಿ ಹೊರಡಿಸಿತ್ತು. ಆದರೆ, ಕಾರ್ಯಪಡೆ ರಚನೆಯಾಗಿರಲಿಲ್ಲ.

ಈ ವರ್ಷದ ಜುಲೈ ತಿಂಗಳಲ್ಲಿ ಶಿರಾಡಿ, ಚಾರ್ಮಾಡಿ ಘಾಟ್‌ಗಳು, ಶಿರೂರು, ಸಕಲೇಶಪುರ ಸೇರಿದಂತೆ ವಿವಿದೆಡೆ ಭೂಕುಸಿತ ಸಂಭವಿಸಿದೆ. ವಯನಾಡ್‌ನಲ್ಲಿ ಭೀಕರ ದುರಂತವೇ ನಡೆದಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ಒತ್ತುವರಿ ತೆರವಿಗೆ ಮುಂದಾಗಿದೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿದೆ.

2015ರ ನಂತರ ನಡೆದ ಒತ್ತುವರಿ ತೆರವುಗಳ ಪೈಕಿ, ಒತ್ತುವರಿ ಸಾಭೀತಾದ ಪ್ರಕರಣಗಳನ್ನು ತಕ್ಷಣ ತೆರವುಗೊಳಿಸಬೇಕು, ನ್ಯಾಯಾಲಯದಲ್ಲಿರುವ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಅಡ್ವೋಕೇಟ್ ಜನರಲ್ ಜೊತೆ ಚರ್ಚಿಸಬೇಕು ಮತ್ತು ಪ್ರಕರಣಗಳ ತ್ವರಿತ ವಿಲೇವಾರಿಗೆ ವಾರದಲ್ಲಿ ಎರಡು ದಿನ ಮೀಸಲಿಡಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇಡೀ ವಯನಾಡ್ ಪರಿಸರ ಸೂಕ್ಷ್ಮ ಪ್ರದೇಶ

ವಯನಾಡ್ ದುಂತರದ ಬಳಿಕ ಸಂಪೂರ್ಣ ಪಶ್ಚಿಮಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿದ ಮಾಧವ ಗಾಡ್ಗೀಳ್ ಸಮಿತಿಯ ವರದಿಯ ಅನುಷ್ಠಾನಕ್ಕೆ ಆಗ್ರಹಗಳು ಕೇಳಿ ಬರುತ್ತಿವೆ. ಈ ನಡುವೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಅಧ್ಯಯನ ವರದಿಯು ಇಡೀ ವಯನಾಡ್ ಜಿಲ್ಲೆಯನ್ನೇ ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿರುವುದಾಗಿ ವರದಿಯಾಗಿದೆ.

ವಯನಾಡ್‌ ದುರಂತದ ಬಳಿಕ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟಗಳ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತೊಮ್ಮೆ ಕರಡು ಅಧಿಸೂಚನೆ ಹೊರಡಿಸಿದೆ.

ಇದನ್ನೂ ಓದಿ : ವಯನಾಡು ದುರಂತ: ಭೂಕುಸಿತದಲ್ಲಿ ಸಿಲುಕಿರುವ ಪ್ರಾಣಿಗಳ ರಕ್ಷಣೆಗೆ ನಿಯಂತ್ರಣ ಕೊಠಡಿ ಸ್ಥಾಪಿಸಿದ ಕೇರಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...