Homeಕರ್ನಾಟಕಇಂದಿನಿಂದ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು : ಕಾರ್ಯಪಡೆ ರಚಿಸಿದ ಸರ್ಕಾರ

ಇಂದಿನಿಂದ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು : ಕಾರ್ಯಪಡೆ ರಚಿಸಿದ ಸರ್ಕಾರ

- Advertisement -
- Advertisement -

ವಯನಾಡ್ ಸೇರಿದಂತೆ ವಿವಿದೆಡೆ ಸಂಭವಿಸಿದ ಭೂಕುಸಿತ ದುರಂತಗಳಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಅರಣ್ಯ ಒತ್ತುವರಿ ತೆರವು ಮತ್ತು ಅನಧಿಕೃತ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.

ಇಂದಿನಿಂದ (ಆ.5) ರಾಜ್ಯದ ಪಶ್ಚಿಮಘಟ್ಟ ಪ್ರದೇಶಗಳ ಅರಣ್ಯ ಒತ್ತುವರಿ, ಅಕ್ರಮ ತೋಟಗಳು, ಅನಧಿಕೃತ ರೆಸಾರ್ಟ್‌ಗಳು ಮತ್ತು ಇತರ ನಿರ್ಮಾಣಗಳ ತೆರವು ಕಾರ್ಯ ಆರಂಭಿಸಲಿದೆ. ಇದಕ್ಕಾಗಿ ಕಾರ್ಯಪಡೆ ರಚಿಸಿದೆ.

ಪಶ್ಚಿಮಘಟ್ಟ ಪ್ರದೇಶಗಳ ಅರಣ್ಯ ಒತ್ತುವರಿ ಮತ್ತು ಅನಧಿಕೃತ ನಿರ್ಮಾಣಗಳ ತೆರವಿಗೆ 2023ರಲ್ಲೇ ಅರಣ್ಯ ಇಲಾಖೆ ಟಿಪ್ಪಣಿ ಹೊರಡಿಸಿತ್ತು. ಆದರೆ, ಕಾರ್ಯಪಡೆ ರಚನೆಯಾಗಿರಲಿಲ್ಲ.

ಈ ವರ್ಷದ ಜುಲೈ ತಿಂಗಳಲ್ಲಿ ಶಿರಾಡಿ, ಚಾರ್ಮಾಡಿ ಘಾಟ್‌ಗಳು, ಶಿರೂರು, ಸಕಲೇಶಪುರ ಸೇರಿದಂತೆ ವಿವಿದೆಡೆ ಭೂಕುಸಿತ ಸಂಭವಿಸಿದೆ. ವಯನಾಡ್‌ನಲ್ಲಿ ಭೀಕರ ದುರಂತವೇ ನಡೆದಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ಒತ್ತುವರಿ ತೆರವಿಗೆ ಮುಂದಾಗಿದೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿದೆ.

2015ರ ನಂತರ ನಡೆದ ಒತ್ತುವರಿ ತೆರವುಗಳ ಪೈಕಿ, ಒತ್ತುವರಿ ಸಾಭೀತಾದ ಪ್ರಕರಣಗಳನ್ನು ತಕ್ಷಣ ತೆರವುಗೊಳಿಸಬೇಕು, ನ್ಯಾಯಾಲಯದಲ್ಲಿರುವ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಅಡ್ವೋಕೇಟ್ ಜನರಲ್ ಜೊತೆ ಚರ್ಚಿಸಬೇಕು ಮತ್ತು ಪ್ರಕರಣಗಳ ತ್ವರಿತ ವಿಲೇವಾರಿಗೆ ವಾರದಲ್ಲಿ ಎರಡು ದಿನ ಮೀಸಲಿಡಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇಡೀ ವಯನಾಡ್ ಪರಿಸರ ಸೂಕ್ಷ್ಮ ಪ್ರದೇಶ

ವಯನಾಡ್ ದುಂತರದ ಬಳಿಕ ಸಂಪೂರ್ಣ ಪಶ್ಚಿಮಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿದ ಮಾಧವ ಗಾಡ್ಗೀಳ್ ಸಮಿತಿಯ ವರದಿಯ ಅನುಷ್ಠಾನಕ್ಕೆ ಆಗ್ರಹಗಳು ಕೇಳಿ ಬರುತ್ತಿವೆ. ಈ ನಡುವೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಅಧ್ಯಯನ ವರದಿಯು ಇಡೀ ವಯನಾಡ್ ಜಿಲ್ಲೆಯನ್ನೇ ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿರುವುದಾಗಿ ವರದಿಯಾಗಿದೆ.

ವಯನಾಡ್‌ ದುರಂತದ ಬಳಿಕ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟಗಳ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತೊಮ್ಮೆ ಕರಡು ಅಧಿಸೂಚನೆ ಹೊರಡಿಸಿದೆ.

ಇದನ್ನೂ ಓದಿ : ವಯನಾಡು ದುರಂತ: ಭೂಕುಸಿತದಲ್ಲಿ ಸಿಲುಕಿರುವ ಪ್ರಾಣಿಗಳ ರಕ್ಷಣೆಗೆ ನಿಯಂತ್ರಣ ಕೊಠಡಿ ಸ್ಥಾಪಿಸಿದ ಕೇರಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...