Homeಕರ್ನಾಟಕಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ ವಿರುದ್ಧದ ಅರಣ್ಯ ಒತ್ತುವರಿ ಆರೋಪ : ಜ.15ರೊಳಗೆ ಸರ್ವೆ ಮುಗಿಸಲು...

ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ ವಿರುದ್ಧದ ಅರಣ್ಯ ಒತ್ತುವರಿ ಆರೋಪ : ಜ.15ರೊಳಗೆ ಸರ್ವೆ ಮುಗಿಸಲು ಹೈಕೋರ್ಟ್ ತಾಕೀತು

- Advertisement -
- Advertisement -

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಜಿನಗಲಕುಂಟೆ ಹೊಸ ಹುಡ್ಯ ವ್ಯಾಪ್ತಿಯಲ್ಲಿನ ಅರಣ್ಯ ಪ್ರದೇಶದ ಸರ್ವೆ ನಂಬರ್‌ 1 ಮತ್ತು 2ರಲ್ಲಿ 61.39 ಎಕರೆ ಒತ್ತುವರಿ ಆಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿಗದಿತ ಜಂಟಿ ಸರ್ವೆ ಕಾರ್ಯವನ್ನು ಜನವರಿ 15ರೊಳಗೆ ನಡೆಸಲೇಬೇಕು ಎಂದು ರಾಜ್ಯ ಅರಣ್ಯ ಇಲಾಖೆಗೆ ಹೈಕೋರ್ಟ್ ತಾಕೀತು ಮಾಡಿದೆ.

ಶ್ರೀನಿವಾಸಪುರ ತಾಲೂಕಿನ ಕುಂದಿಟಿವಾರಪಲ್ಲಿ ನಿವಾಸಿಯೂ ಆದ ವಕೀಲ ಕೆ.ವಿ ಶಿವಾರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ರಜಾಕಾಲೀನ ಏಕಸದಸ್ಯ ಪೀಠ ಈ ಆದೇಶ ನೀಡಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಪದಾಂಕಿತ ಹಿರಿಯ ವಕೀಲ ವೈ.ಆರ್‌.ಸದಾಶಿವ ರೆಡ್ಡಿ ಅವರ ವಾದ ಮಾನ್ಯ ಮಾಡಿದ ನ್ಯಾಯಪೀಠ, ಹೈಕೋರ್ಟ್‌ ಈ ಮೊದಲು ನೀಡಿರುವ ಆದೇಶದ ಅನುಸಾರ; ಜಿಲ್ಲಾಧಿಕಾರಿ, ಭೂ ದಾಖಲೆಗಳ ಉಪ ನಿರ್ದೇಶಕ (ಡಿಡಿಎಲ್‌ಆರ್‌) ಮತ್ತು ಅರಣ್ಯ ಒತ್ತುವರಿ ಆರೋಪ ಎದುರಿಸುತ್ತಿರುವ ಮಾಜಿ ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್ ಕುಮಾರ್ ಆಗಲೀ ಅಥವಾ ಅವರ ಅಧಿಕೃತ ಪ್ರತಿನಿಧಿಯಾಗಲೀ ಜಂಟಿ ಸರ್ವೆ ಕಾರ್ಯದಲ್ಲಿ ಭಾಗವಹಿಸಬೇಕು. ಈ ಸಂಬಂಧ ರಮೇಶ್ ಕುಮಾರ್ ಅವರಿಗೆ ಜಿಲ್ಲಾಧಿಕಾರಿ ನೋಟಿಸ್ ಕೊಡಬೇಕು ಎಂದು ಸೂಚಿಸಿದೆ.

ಒಂದು ವೇಳೆ ರಮೇಶ್‌ ಕುಮಾರ್ ಆಗಲೀ ಅಥವಾ ಅವರ ಅಧಿಕೃತ ಪ್ರತಿನಿಧಿಯಾಗಲೀ ಸರ್ವೆ ಕಾರ್ಯದಲ್ಲಿ ಭಾಗವಹಿಸದೇ ಹೋದಲ್ಲಿ ಸರ್ವೆ ಕಾರ್ಯವನ್ನು ಮುಂದುವರಿಸಬೇಕು. ಅಂತೆಯೇ, ಸರ್ವೆ ನಡೆಸಿದ ನಂತರ ನೀಡಲಾಗುವ ವರದಿಯನ್ನು ಆಕ್ಷೇಪಿಸಲಾಗಲೀ ಅಥವಾ ಸ್ಥಿರಾಸ್ತಿ ಬಾಧ್ಯತೆಯ ಕ್ಲೇಮು ಮಾಡಲು ರಮೇಶ್‌ ಕುಮಾರ್ ಅವರಿಗೆ ಯಾವುದೇ ಅಧಿಕಾರ ಇರುವುದಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಒತ್ತುವರಿ ಕುರಿತಂತೆ 14 ವರ್ಷದ ಹಿಂದೆಯೇ ಸರ್ವೇ ಕಾರ್ಯ ಕೈಗೊಳ್ಳಲು ಆದೇಶಿಸಲಾಗಿದ್ದರೂ, ಅದನ್ನು ಇನ್ನೂ ಕಾರ್ಯಗತಗೊಳಿಸದೇ ಇರುವುದು ಆಘಾತಕಾರಿ ವಿಚಾರ ಎಂದು ಕಳವಳ ವ್ಯಕ್ತಪಡಿಸಿರುವ ನ್ಯಾಯ ಪೀಠ, ಸರ್ವೇ ಕಾರ್ಯದ ವರದಿಯನ್ನು ಜನವರಿ 30 ಅಥವಾ ಅದಕ್ಕಿಂತ ಮುಂಚಿತವಾಗಿ ಪೂರ್ಣಗೊಳಿಸಿ ಸಲ್ಲಿಸಬೇಕು ಎಂದು ಅರಣ್ಯ ಉಪಸಂರಕ್ಷಣಾಧಿಕಾರಿಗೆ (ಡಿಸಿಎಫ್‌) ನಿರ್ದೇಶಿಸಿದೆ.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಬೆಂಗಳೂರು ವಕೀಲರ ಸಂಘದಲ್ಲಿ ಶೇ.33 ಮಹಿಳಾ ಮೀಸಲಾತಿ ಕೋರಿ ಅರ್ಜಿ : ಎಎಬಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...