Homeಕರ್ನಾಟಕಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

- Advertisement -
- Advertisement -

ಲಾಕ್‌ಡೌನ್‌ನಿಂದ ಜನರೆಲ್ಲರೂ ಮನೆಯಲ್ಲಿದ್ದಾರೆ. ಮನೆ ಬಿಟ್ಟು ಹೊರಗೆ ಬಾರದೆಂದು ಸರ್ಕಾರ ಸೂಚಿಸಿದೆ. ಆದರೆ ಮನೆಯಲ್ಲಿದ್ದವರನ್ನು ಹೊರಹಾಕಿ, ಬಡವನ ಮನೆಯನ್ನು ನೆಲಸಮಗೊಳಿಸಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಬೇಡ್ಮಣಿ ಗ್ರಾಮ ಪಂಚಾಯ್ತಿಯ ಭಾನ್ಕುಳಿ ಗ್ರಾಮದಲ್ಲಿ ಜರುಗಿದೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆ ಎಂಬುವವರು ಕೂಲಿ ಕಾರ್ಮಿಕರಾಗಿದ್ದು 25 ವರ್ಷಗಳಿಂದ ಭಾನ್ಕುಳಿ ಗ್ರಾಮದಲ್ಲಿ ವಾಸಿಸಿದ್ದಾರೆ. ಅವರ ಹೆಸರಿನಲ್ಲಿ ರೇಷನ್‌ಕಾರ್ಡ್‌ ಇದೆ. 15 ವರ್ಷಗಳಿಂದ ತೆಂಗಿನ ಸಸಿಗಳನ್ನು ನೆಟ್ಟು ಮರಗಳನ್ನಾಗಿ ಮಾಡಿದ್ದಾರೆ. ಅವರು ಸ್ವಂತ ಮನೆಯನ್ನು ಹೊಂದುವುದಕ್ಕಾಗಿ 2017-2018ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ಅರ್ಜಿ ಹಾಕಿದ್ದಾರೆ. ಅದರನ್ವಯ ಸರ್ಕಾರ ಅವರಿಗೆ ಮನೆ ಕಟ್ಟಿಕೊಡಲು ಷರತ್ತುಬದ್ಧವಾಗಿ ಒಪ್ಪಿದೆ. ಮನೆ ನಿರ್ಮಾಣದ ಅಡಿಪಾಯ ಹಾಕಿ ಹಣ ಸಾಲದಿದ್ದುದ್ದಕ್ಕೆ ಅರ್ಧಕ್ಕೆ ನಿಲ್ಲಿಸಲಾಗಿದೆ. ಅವರು ಪಕ್ಕದಲ್ಲಿ ದನ ಕಟ್ಟುವ ಮನೆಯಲ್ಲಿ ವಾಸಿಸುತ್ತಾ ಬಂದಿದ್ದಾರೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆಯವರ ಪಡಿತರ ಗುರುತಿನ ಚೀಟಿ

ಅಂತಹ ಮನೆಗೆ ಇಂದು ಏಕಾಏಕಿ ನುಗ್ಗಿದ ಅರಣ್ಯ ಅಧಿಕಾರಿಗಳು ಕ್ಷಣ ಮಾತ್ರದಲ್ಲಿ ನೆಲಸಮ ಮಾಡಿದ್ದಾರೆ. ಅದಕ್ಕೆ ಅವರು ಕೊಟ್ಟಿರುವ ಕಾರಣ ಯಥಾಪ್ರಕಾರ ಅರಣ್ಯ ಒತ್ತುವರಿ ಎಂಬುದಾಗಿದೆ. ಆದರೆ ಮನೆಯ ಮಾಲೀಕರಾದ ನಾರಾಯಣ್ ದುರ್ಗಾ ನಾಯ್ಕ್ ರವರು ಕಳೆದ 25 ವರ್ಷಗಳಿಂದ ಇಲ್ಲಿ ವಾಸಿಸಿದ್ದಾರೆ. ತೆಂಗಿನ ಮರಗಳನ್ನು ಬೆಳೆಸಿದ್ದಾರೆ. ಕಳೆದ 8 ವರ್ಷಗಳಿಂದ ಸರ್ಕಾರದ ವತಿಯಿಂದಲೇ ವಿದ್ಯುತ್‌ ಸಂಪರ್ಕ ಪಡೆದಿದ್ದಾರೆ. ಅಷ್ಟು ಮಾತ್ರವಲ್ಲದೇ 2017-18ರ ಅವಧಿಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ, ಕೃಷ್ಣಪ್ಪನವರು ವಸತಿ ಸಚಿವರಾಗಿದ್ದಾಗಿ ಮನೆ ಕಟ್ಟಲು ಇವರಿಗೆ ಷರತ್ತಬದ್ಧ ಒಪ್ಪಿಗೆ ಪತ್ರವನ್ನು ಸಹ ನೀಡಲಾಗಿದೆ. ಇಷ್ಟೆಲ್ಲ ಇದ್ದರೂ ಕಣ್ಣು ಕಾಣದ ಅರಣ್ಯ ಅಧಿಕಾರಿಗಳು ಅಟ್ಟಹಾಸ ಮೆರೆದಿದ್ದಾರೆ.

ಸರ್ಕಾರದಿಂದ ನೀಡಿರುವ ಅರ್ಹತಾ ಪತ್ರ

ಈ ಕುರಿತು ನಾನುಗೌರಿ.ಕಾಂ ಅಲ್ಲಿನ ಸ್ಥಳೀಯ ನಿವಾಸಿಯಾದ ಗುರುಮೂರ್ತಿ ದೀವ್ರುರವರನ್ನು ಸಂಪರ್ಕಿಸಿತು. ಅವರು “ನಾರಾಯಣ್ ದುರ್ಗಾ ನಾಯ್ಕ್ ರವರು ಬಡವರಾಗಿದ್ದು ಕಳೆದ 25 ವರ್ಷಗಳಿಂದ ಇಲ್ಲಿಯೇ ವಾಸಿಸುತ್ತಿದ್ದಾರೆ. ಅರಣ್ಯಕ್ಕೆ ಇವರಿಂದ ಯಾವ ತೊಂದರೆಯೂ ಆಗಿಲ್ಲ. ಅರಣ್ಯ ಅಧಿಕಾರಿಗಳು ತಪ್ಪು ಮಾಹಿತಿಯಿಂದ ಈ ಅತಾಚುರ್ಯ ಎಸಗಿದ್ದಾರೆ. ಇಲ್ಲಿಯೇ ಪಕ್ಕದಲ್ಲಿ 50 ಎಕರೆಯನ್ನು ಒತ್ತುವರಿ ಮಾಡಿಕೊಂಡು ಗೋಸ್ವರ್ಗ ಎಂಬ ಕಟ್ಟಡ ಕಟ್ಟಲಾಗಿದೆ. ಹತ್ತಾರು ಬಲಾಢ್ಯ ಜನರು ಒತ್ತುವರಿ ಮಾಡಿದ್ದಾರೆ. ಅವರನ್ನು ಮುಟ್ಟುವ ಧೈರ್‍ಯವಿಲ್ಲದ ಅರಣ್ಯ ಅಧಿಕಾರಿಗಳು ಬಡವನ ಮೇಲೆ ದೌರ್ಜನ್ಯ ಮೆರೆದಿದ್ದಾರೆ” ಎನ್ನುತ್ತಾರೆ.

ಘಟನೆ ನಡೆದ ಬಳಿಕ ನಾವು ಡಿಎಫ್‌ಓ (district forest officer) ಬಳಿ ಮಾತನಾಡಿ ದೂರು ಸಲ್ಲಿಸಿದ್ದೇವೆ. ಕೂಡಲೇ ವಾಪಸ್ ಮನೆ ಕಟ್ಟಿಕೊಡುವುದು ನಿಮ್ಮ ಜವಾಬ್ದಾರಿ ಎಂದು ತಾಕೀತು ಮಾಡಿದ್ದೇವೆ. ಸ್ಥಳೀಯ ಶಾಸಕರ ಗಮನಕ್ಕೆ ತಂದರೂ ಅವರು ಕಾಳಜಿವಹಿಸಿಲ್ಲ ಎಂದರು.

ಸ್ಪೀಕರ್‌ ಕಾಗೇರಿಯವರು ಏನು ಮಾಡುತ್ತಿದ್ದಾರೆ?

ಅರಣ್ಯ ಇಲಾಖೆಯ ಈ ಅತಾಚುರ್ಯದಿಂದಾಗಿ ಬಡವನ ಮನೆ ನೆಲಸಮವಾಗಿದೆ. ಈ ಕುರಿತು ಸ್ಥಳೀಯ ಶಾಸಕರಾದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ದೂರು ನೀಡಲಾಗಿದೆ. ಆದರೂ ಅವರು ಮೌನವಹಿಸಿದ್ದಾರೆ. ಮೇಲ್ನೋಟದಲ್ಲಿಯೇ ಇದರಲ್ಲಿ ಆ ಬಡವನ ತಪ್ಪಿಲ್ಲ ಎಂದು ಅನಿಸಿದರೂ, ಹಲವಾರು ಸಾಕ್ಷಿಗಳಿದ್ದರೂ ಸಹ ಅವರು ಕನಿಷ್ಠ ಕಾಳಜಿವಹಿಸಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಶಾಸಕರು ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ. ಕೂಡಲೇ ಆ ಬಡವನಿಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸಬೇಕಿದೆ. ಮತ್ತೆ ಮನೆ ಕಟ್ಟಿಕೊಟ್ಟು, ಅಚಾತುರ್ಯವೆಸಗಿದ ಅರಣ್ಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕಿದೆ.


ಇದನ್ನೂ ಓದಿ: ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...