Homeಕರ್ನಾಟಕಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

- Advertisement -
- Advertisement -

ಲಾಕ್‌ಡೌನ್‌ನಿಂದ ಜನರೆಲ್ಲರೂ ಮನೆಯಲ್ಲಿದ್ದಾರೆ. ಮನೆ ಬಿಟ್ಟು ಹೊರಗೆ ಬಾರದೆಂದು ಸರ್ಕಾರ ಸೂಚಿಸಿದೆ. ಆದರೆ ಮನೆಯಲ್ಲಿದ್ದವರನ್ನು ಹೊರಹಾಕಿ, ಬಡವನ ಮನೆಯನ್ನು ನೆಲಸಮಗೊಳಿಸಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಬೇಡ್ಮಣಿ ಗ್ರಾಮ ಪಂಚಾಯ್ತಿಯ ಭಾನ್ಕುಳಿ ಗ್ರಾಮದಲ್ಲಿ ಜರುಗಿದೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆ ಎಂಬುವವರು ಕೂಲಿ ಕಾರ್ಮಿಕರಾಗಿದ್ದು 25 ವರ್ಷಗಳಿಂದ ಭಾನ್ಕುಳಿ ಗ್ರಾಮದಲ್ಲಿ ವಾಸಿಸಿದ್ದಾರೆ. ಅವರ ಹೆಸರಿನಲ್ಲಿ ರೇಷನ್‌ಕಾರ್ಡ್‌ ಇದೆ. 15 ವರ್ಷಗಳಿಂದ ತೆಂಗಿನ ಸಸಿಗಳನ್ನು ನೆಟ್ಟು ಮರಗಳನ್ನಾಗಿ ಮಾಡಿದ್ದಾರೆ. ಅವರು ಸ್ವಂತ ಮನೆಯನ್ನು ಹೊಂದುವುದಕ್ಕಾಗಿ 2017-2018ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ಅರ್ಜಿ ಹಾಕಿದ್ದಾರೆ. ಅದರನ್ವಯ ಸರ್ಕಾರ ಅವರಿಗೆ ಮನೆ ಕಟ್ಟಿಕೊಡಲು ಷರತ್ತುಬದ್ಧವಾಗಿ ಒಪ್ಪಿದೆ. ಮನೆ ನಿರ್ಮಾಣದ ಅಡಿಪಾಯ ಹಾಕಿ ಹಣ ಸಾಲದಿದ್ದುದ್ದಕ್ಕೆ ಅರ್ಧಕ್ಕೆ ನಿಲ್ಲಿಸಲಾಗಿದೆ. ಅವರು ಪಕ್ಕದಲ್ಲಿ ದನ ಕಟ್ಟುವ ಮನೆಯಲ್ಲಿ ವಾಸಿಸುತ್ತಾ ಬಂದಿದ್ದಾರೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆಯವರ ಪಡಿತರ ಗುರುತಿನ ಚೀಟಿ

ಅಂತಹ ಮನೆಗೆ ಇಂದು ಏಕಾಏಕಿ ನುಗ್ಗಿದ ಅರಣ್ಯ ಅಧಿಕಾರಿಗಳು ಕ್ಷಣ ಮಾತ್ರದಲ್ಲಿ ನೆಲಸಮ ಮಾಡಿದ್ದಾರೆ. ಅದಕ್ಕೆ ಅವರು ಕೊಟ್ಟಿರುವ ಕಾರಣ ಯಥಾಪ್ರಕಾರ ಅರಣ್ಯ ಒತ್ತುವರಿ ಎಂಬುದಾಗಿದೆ. ಆದರೆ ಮನೆಯ ಮಾಲೀಕರಾದ ನಾರಾಯಣ್ ದುರ್ಗಾ ನಾಯ್ಕ್ ರವರು ಕಳೆದ 25 ವರ್ಷಗಳಿಂದ ಇಲ್ಲಿ ವಾಸಿಸಿದ್ದಾರೆ. ತೆಂಗಿನ ಮರಗಳನ್ನು ಬೆಳೆಸಿದ್ದಾರೆ. ಕಳೆದ 8 ವರ್ಷಗಳಿಂದ ಸರ್ಕಾರದ ವತಿಯಿಂದಲೇ ವಿದ್ಯುತ್‌ ಸಂಪರ್ಕ ಪಡೆದಿದ್ದಾರೆ. ಅಷ್ಟು ಮಾತ್ರವಲ್ಲದೇ 2017-18ರ ಅವಧಿಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ, ಕೃಷ್ಣಪ್ಪನವರು ವಸತಿ ಸಚಿವರಾಗಿದ್ದಾಗಿ ಮನೆ ಕಟ್ಟಲು ಇವರಿಗೆ ಷರತ್ತಬದ್ಧ ಒಪ್ಪಿಗೆ ಪತ್ರವನ್ನು ಸಹ ನೀಡಲಾಗಿದೆ. ಇಷ್ಟೆಲ್ಲ ಇದ್ದರೂ ಕಣ್ಣು ಕಾಣದ ಅರಣ್ಯ ಅಧಿಕಾರಿಗಳು ಅಟ್ಟಹಾಸ ಮೆರೆದಿದ್ದಾರೆ.

ಸರ್ಕಾರದಿಂದ ನೀಡಿರುವ ಅರ್ಹತಾ ಪತ್ರ

ಈ ಕುರಿತು ನಾನುಗೌರಿ.ಕಾಂ ಅಲ್ಲಿನ ಸ್ಥಳೀಯ ನಿವಾಸಿಯಾದ ಗುರುಮೂರ್ತಿ ದೀವ್ರುರವರನ್ನು ಸಂಪರ್ಕಿಸಿತು. ಅವರು “ನಾರಾಯಣ್ ದುರ್ಗಾ ನಾಯ್ಕ್ ರವರು ಬಡವರಾಗಿದ್ದು ಕಳೆದ 25 ವರ್ಷಗಳಿಂದ ಇಲ್ಲಿಯೇ ವಾಸಿಸುತ್ತಿದ್ದಾರೆ. ಅರಣ್ಯಕ್ಕೆ ಇವರಿಂದ ಯಾವ ತೊಂದರೆಯೂ ಆಗಿಲ್ಲ. ಅರಣ್ಯ ಅಧಿಕಾರಿಗಳು ತಪ್ಪು ಮಾಹಿತಿಯಿಂದ ಈ ಅತಾಚುರ್ಯ ಎಸಗಿದ್ದಾರೆ. ಇಲ್ಲಿಯೇ ಪಕ್ಕದಲ್ಲಿ 50 ಎಕರೆಯನ್ನು ಒತ್ತುವರಿ ಮಾಡಿಕೊಂಡು ಗೋಸ್ವರ್ಗ ಎಂಬ ಕಟ್ಟಡ ಕಟ್ಟಲಾಗಿದೆ. ಹತ್ತಾರು ಬಲಾಢ್ಯ ಜನರು ಒತ್ತುವರಿ ಮಾಡಿದ್ದಾರೆ. ಅವರನ್ನು ಮುಟ್ಟುವ ಧೈರ್‍ಯವಿಲ್ಲದ ಅರಣ್ಯ ಅಧಿಕಾರಿಗಳು ಬಡವನ ಮೇಲೆ ದೌರ್ಜನ್ಯ ಮೆರೆದಿದ್ದಾರೆ” ಎನ್ನುತ್ತಾರೆ.

ಘಟನೆ ನಡೆದ ಬಳಿಕ ನಾವು ಡಿಎಫ್‌ಓ (district forest officer) ಬಳಿ ಮಾತನಾಡಿ ದೂರು ಸಲ್ಲಿಸಿದ್ದೇವೆ. ಕೂಡಲೇ ವಾಪಸ್ ಮನೆ ಕಟ್ಟಿಕೊಡುವುದು ನಿಮ್ಮ ಜವಾಬ್ದಾರಿ ಎಂದು ತಾಕೀತು ಮಾಡಿದ್ದೇವೆ. ಸ್ಥಳೀಯ ಶಾಸಕರ ಗಮನಕ್ಕೆ ತಂದರೂ ಅವರು ಕಾಳಜಿವಹಿಸಿಲ್ಲ ಎಂದರು.

ಸ್ಪೀಕರ್‌ ಕಾಗೇರಿಯವರು ಏನು ಮಾಡುತ್ತಿದ್ದಾರೆ?

ಅರಣ್ಯ ಇಲಾಖೆಯ ಈ ಅತಾಚುರ್ಯದಿಂದಾಗಿ ಬಡವನ ಮನೆ ನೆಲಸಮವಾಗಿದೆ. ಈ ಕುರಿತು ಸ್ಥಳೀಯ ಶಾಸಕರಾದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ದೂರು ನೀಡಲಾಗಿದೆ. ಆದರೂ ಅವರು ಮೌನವಹಿಸಿದ್ದಾರೆ. ಮೇಲ್ನೋಟದಲ್ಲಿಯೇ ಇದರಲ್ಲಿ ಆ ಬಡವನ ತಪ್ಪಿಲ್ಲ ಎಂದು ಅನಿಸಿದರೂ, ಹಲವಾರು ಸಾಕ್ಷಿಗಳಿದ್ದರೂ ಸಹ ಅವರು ಕನಿಷ್ಠ ಕಾಳಜಿವಹಿಸಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಶಾಸಕರು ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ. ಕೂಡಲೇ ಆ ಬಡವನಿಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸಬೇಕಿದೆ. ಮತ್ತೆ ಮನೆ ಕಟ್ಟಿಕೊಟ್ಟು, ಅಚಾತುರ್ಯವೆಸಗಿದ ಅರಣ್ಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕಿದೆ.


ಇದನ್ನೂ ಓದಿ: ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...