Homeಕರ್ನಾಟಕಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

- Advertisement -
- Advertisement -

ಲಾಕ್‌ಡೌನ್‌ನಿಂದ ಜನರೆಲ್ಲರೂ ಮನೆಯಲ್ಲಿದ್ದಾರೆ. ಮನೆ ಬಿಟ್ಟು ಹೊರಗೆ ಬಾರದೆಂದು ಸರ್ಕಾರ ಸೂಚಿಸಿದೆ. ಆದರೆ ಮನೆಯಲ್ಲಿದ್ದವರನ್ನು ಹೊರಹಾಕಿ, ಬಡವನ ಮನೆಯನ್ನು ನೆಲಸಮಗೊಳಿಸಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಬೇಡ್ಮಣಿ ಗ್ರಾಮ ಪಂಚಾಯ್ತಿಯ ಭಾನ್ಕುಳಿ ಗ್ರಾಮದಲ್ಲಿ ಜರುಗಿದೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆ ಎಂಬುವವರು ಕೂಲಿ ಕಾರ್ಮಿಕರಾಗಿದ್ದು 25 ವರ್ಷಗಳಿಂದ ಭಾನ್ಕುಳಿ ಗ್ರಾಮದಲ್ಲಿ ವಾಸಿಸಿದ್ದಾರೆ. ಅವರ ಹೆಸರಿನಲ್ಲಿ ರೇಷನ್‌ಕಾರ್ಡ್‌ ಇದೆ. 15 ವರ್ಷಗಳಿಂದ ತೆಂಗಿನ ಸಸಿಗಳನ್ನು ನೆಟ್ಟು ಮರಗಳನ್ನಾಗಿ ಮಾಡಿದ್ದಾರೆ. ಅವರು ಸ್ವಂತ ಮನೆಯನ್ನು ಹೊಂದುವುದಕ್ಕಾಗಿ 2017-2018ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ಅರ್ಜಿ ಹಾಕಿದ್ದಾರೆ. ಅದರನ್ವಯ ಸರ್ಕಾರ ಅವರಿಗೆ ಮನೆ ಕಟ್ಟಿಕೊಡಲು ಷರತ್ತುಬದ್ಧವಾಗಿ ಒಪ್ಪಿದೆ. ಮನೆ ನಿರ್ಮಾಣದ ಅಡಿಪಾಯ ಹಾಕಿ ಹಣ ಸಾಲದಿದ್ದುದ್ದಕ್ಕೆ ಅರ್ಧಕ್ಕೆ ನಿಲ್ಲಿಸಲಾಗಿದೆ. ಅವರು ಪಕ್ಕದಲ್ಲಿ ದನ ಕಟ್ಟುವ ಮನೆಯಲ್ಲಿ ವಾಸಿಸುತ್ತಾ ಬಂದಿದ್ದಾರೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆಯವರ ಪಡಿತರ ಗುರುತಿನ ಚೀಟಿ

ಅಂತಹ ಮನೆಗೆ ಇಂದು ಏಕಾಏಕಿ ನುಗ್ಗಿದ ಅರಣ್ಯ ಅಧಿಕಾರಿಗಳು ಕ್ಷಣ ಮಾತ್ರದಲ್ಲಿ ನೆಲಸಮ ಮಾಡಿದ್ದಾರೆ. ಅದಕ್ಕೆ ಅವರು ಕೊಟ್ಟಿರುವ ಕಾರಣ ಯಥಾಪ್ರಕಾರ ಅರಣ್ಯ ಒತ್ತುವರಿ ಎಂಬುದಾಗಿದೆ. ಆದರೆ ಮನೆಯ ಮಾಲೀಕರಾದ ನಾರಾಯಣ್ ದುರ್ಗಾ ನಾಯ್ಕ್ ರವರು ಕಳೆದ 25 ವರ್ಷಗಳಿಂದ ಇಲ್ಲಿ ವಾಸಿಸಿದ್ದಾರೆ. ತೆಂಗಿನ ಮರಗಳನ್ನು ಬೆಳೆಸಿದ್ದಾರೆ. ಕಳೆದ 8 ವರ್ಷಗಳಿಂದ ಸರ್ಕಾರದ ವತಿಯಿಂದಲೇ ವಿದ್ಯುತ್‌ ಸಂಪರ್ಕ ಪಡೆದಿದ್ದಾರೆ. ಅಷ್ಟು ಮಾತ್ರವಲ್ಲದೇ 2017-18ರ ಅವಧಿಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ, ಕೃಷ್ಣಪ್ಪನವರು ವಸತಿ ಸಚಿವರಾಗಿದ್ದಾಗಿ ಮನೆ ಕಟ್ಟಲು ಇವರಿಗೆ ಷರತ್ತಬದ್ಧ ಒಪ್ಪಿಗೆ ಪತ್ರವನ್ನು ಸಹ ನೀಡಲಾಗಿದೆ. ಇಷ್ಟೆಲ್ಲ ಇದ್ದರೂ ಕಣ್ಣು ಕಾಣದ ಅರಣ್ಯ ಅಧಿಕಾರಿಗಳು ಅಟ್ಟಹಾಸ ಮೆರೆದಿದ್ದಾರೆ.

ಸರ್ಕಾರದಿಂದ ನೀಡಿರುವ ಅರ್ಹತಾ ಪತ್ರ

ಈ ಕುರಿತು ನಾನುಗೌರಿ.ಕಾಂ ಅಲ್ಲಿನ ಸ್ಥಳೀಯ ನಿವಾಸಿಯಾದ ಗುರುಮೂರ್ತಿ ದೀವ್ರುರವರನ್ನು ಸಂಪರ್ಕಿಸಿತು. ಅವರು “ನಾರಾಯಣ್ ದುರ್ಗಾ ನಾಯ್ಕ್ ರವರು ಬಡವರಾಗಿದ್ದು ಕಳೆದ 25 ವರ್ಷಗಳಿಂದ ಇಲ್ಲಿಯೇ ವಾಸಿಸುತ್ತಿದ್ದಾರೆ. ಅರಣ್ಯಕ್ಕೆ ಇವರಿಂದ ಯಾವ ತೊಂದರೆಯೂ ಆಗಿಲ್ಲ. ಅರಣ್ಯ ಅಧಿಕಾರಿಗಳು ತಪ್ಪು ಮಾಹಿತಿಯಿಂದ ಈ ಅತಾಚುರ್ಯ ಎಸಗಿದ್ದಾರೆ. ಇಲ್ಲಿಯೇ ಪಕ್ಕದಲ್ಲಿ 50 ಎಕರೆಯನ್ನು ಒತ್ತುವರಿ ಮಾಡಿಕೊಂಡು ಗೋಸ್ವರ್ಗ ಎಂಬ ಕಟ್ಟಡ ಕಟ್ಟಲಾಗಿದೆ. ಹತ್ತಾರು ಬಲಾಢ್ಯ ಜನರು ಒತ್ತುವರಿ ಮಾಡಿದ್ದಾರೆ. ಅವರನ್ನು ಮುಟ್ಟುವ ಧೈರ್‍ಯವಿಲ್ಲದ ಅರಣ್ಯ ಅಧಿಕಾರಿಗಳು ಬಡವನ ಮೇಲೆ ದೌರ್ಜನ್ಯ ಮೆರೆದಿದ್ದಾರೆ” ಎನ್ನುತ್ತಾರೆ.

ಘಟನೆ ನಡೆದ ಬಳಿಕ ನಾವು ಡಿಎಫ್‌ಓ (district forest officer) ಬಳಿ ಮಾತನಾಡಿ ದೂರು ಸಲ್ಲಿಸಿದ್ದೇವೆ. ಕೂಡಲೇ ವಾಪಸ್ ಮನೆ ಕಟ್ಟಿಕೊಡುವುದು ನಿಮ್ಮ ಜವಾಬ್ದಾರಿ ಎಂದು ತಾಕೀತು ಮಾಡಿದ್ದೇವೆ. ಸ್ಥಳೀಯ ಶಾಸಕರ ಗಮನಕ್ಕೆ ತಂದರೂ ಅವರು ಕಾಳಜಿವಹಿಸಿಲ್ಲ ಎಂದರು.

ಸ್ಪೀಕರ್‌ ಕಾಗೇರಿಯವರು ಏನು ಮಾಡುತ್ತಿದ್ದಾರೆ?

ಅರಣ್ಯ ಇಲಾಖೆಯ ಈ ಅತಾಚುರ್ಯದಿಂದಾಗಿ ಬಡವನ ಮನೆ ನೆಲಸಮವಾಗಿದೆ. ಈ ಕುರಿತು ಸ್ಥಳೀಯ ಶಾಸಕರಾದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ದೂರು ನೀಡಲಾಗಿದೆ. ಆದರೂ ಅವರು ಮೌನವಹಿಸಿದ್ದಾರೆ. ಮೇಲ್ನೋಟದಲ್ಲಿಯೇ ಇದರಲ್ಲಿ ಆ ಬಡವನ ತಪ್ಪಿಲ್ಲ ಎಂದು ಅನಿಸಿದರೂ, ಹಲವಾರು ಸಾಕ್ಷಿಗಳಿದ್ದರೂ ಸಹ ಅವರು ಕನಿಷ್ಠ ಕಾಳಜಿವಹಿಸಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಶಾಸಕರು ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ. ಕೂಡಲೇ ಆ ಬಡವನಿಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸಬೇಕಿದೆ. ಮತ್ತೆ ಮನೆ ಕಟ್ಟಿಕೊಟ್ಟು, ಅಚಾತುರ್ಯವೆಸಗಿದ ಅರಣ್ಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕಿದೆ.


ಇದನ್ನೂ ಓದಿ: ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...