Homeಕರ್ನಾಟಕಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

- Advertisement -
- Advertisement -

ಲಾಕ್‌ಡೌನ್‌ನಿಂದ ಜನರೆಲ್ಲರೂ ಮನೆಯಲ್ಲಿದ್ದಾರೆ. ಮನೆ ಬಿಟ್ಟು ಹೊರಗೆ ಬಾರದೆಂದು ಸರ್ಕಾರ ಸೂಚಿಸಿದೆ. ಆದರೆ ಮನೆಯಲ್ಲಿದ್ದವರನ್ನು ಹೊರಹಾಕಿ, ಬಡವನ ಮನೆಯನ್ನು ನೆಲಸಮಗೊಳಿಸಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಬೇಡ್ಮಣಿ ಗ್ರಾಮ ಪಂಚಾಯ್ತಿಯ ಭಾನ್ಕುಳಿ ಗ್ರಾಮದಲ್ಲಿ ಜರುಗಿದೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆ ಎಂಬುವವರು ಕೂಲಿ ಕಾರ್ಮಿಕರಾಗಿದ್ದು 25 ವರ್ಷಗಳಿಂದ ಭಾನ್ಕುಳಿ ಗ್ರಾಮದಲ್ಲಿ ವಾಸಿಸಿದ್ದಾರೆ. ಅವರ ಹೆಸರಿನಲ್ಲಿ ರೇಷನ್‌ಕಾರ್ಡ್‌ ಇದೆ. 15 ವರ್ಷಗಳಿಂದ ತೆಂಗಿನ ಸಸಿಗಳನ್ನು ನೆಟ್ಟು ಮರಗಳನ್ನಾಗಿ ಮಾಡಿದ್ದಾರೆ. ಅವರು ಸ್ವಂತ ಮನೆಯನ್ನು ಹೊಂದುವುದಕ್ಕಾಗಿ 2017-2018ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ಅರ್ಜಿ ಹಾಕಿದ್ದಾರೆ. ಅದರನ್ವಯ ಸರ್ಕಾರ ಅವರಿಗೆ ಮನೆ ಕಟ್ಟಿಕೊಡಲು ಷರತ್ತುಬದ್ಧವಾಗಿ ಒಪ್ಪಿದೆ. ಮನೆ ನಿರ್ಮಾಣದ ಅಡಿಪಾಯ ಹಾಕಿ ಹಣ ಸಾಲದಿದ್ದುದ್ದಕ್ಕೆ ಅರ್ಧಕ್ಕೆ ನಿಲ್ಲಿಸಲಾಗಿದೆ. ಅವರು ಪಕ್ಕದಲ್ಲಿ ದನ ಕಟ್ಟುವ ಮನೆಯಲ್ಲಿ ವಾಸಿಸುತ್ತಾ ಬಂದಿದ್ದಾರೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆಯವರ ಪಡಿತರ ಗುರುತಿನ ಚೀಟಿ

ಅಂತಹ ಮನೆಗೆ ಇಂದು ಏಕಾಏಕಿ ನುಗ್ಗಿದ ಅರಣ್ಯ ಅಧಿಕಾರಿಗಳು ಕ್ಷಣ ಮಾತ್ರದಲ್ಲಿ ನೆಲಸಮ ಮಾಡಿದ್ದಾರೆ. ಅದಕ್ಕೆ ಅವರು ಕೊಟ್ಟಿರುವ ಕಾರಣ ಯಥಾಪ್ರಕಾರ ಅರಣ್ಯ ಒತ್ತುವರಿ ಎಂಬುದಾಗಿದೆ. ಆದರೆ ಮನೆಯ ಮಾಲೀಕರಾದ ನಾರಾಯಣ್ ದುರ್ಗಾ ನಾಯ್ಕ್ ರವರು ಕಳೆದ 25 ವರ್ಷಗಳಿಂದ ಇಲ್ಲಿ ವಾಸಿಸಿದ್ದಾರೆ. ತೆಂಗಿನ ಮರಗಳನ್ನು ಬೆಳೆಸಿದ್ದಾರೆ. ಕಳೆದ 8 ವರ್ಷಗಳಿಂದ ಸರ್ಕಾರದ ವತಿಯಿಂದಲೇ ವಿದ್ಯುತ್‌ ಸಂಪರ್ಕ ಪಡೆದಿದ್ದಾರೆ. ಅಷ್ಟು ಮಾತ್ರವಲ್ಲದೇ 2017-18ರ ಅವಧಿಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ, ಕೃಷ್ಣಪ್ಪನವರು ವಸತಿ ಸಚಿವರಾಗಿದ್ದಾಗಿ ಮನೆ ಕಟ್ಟಲು ಇವರಿಗೆ ಷರತ್ತಬದ್ಧ ಒಪ್ಪಿಗೆ ಪತ್ರವನ್ನು ಸಹ ನೀಡಲಾಗಿದೆ. ಇಷ್ಟೆಲ್ಲ ಇದ್ದರೂ ಕಣ್ಣು ಕಾಣದ ಅರಣ್ಯ ಅಧಿಕಾರಿಗಳು ಅಟ್ಟಹಾಸ ಮೆರೆದಿದ್ದಾರೆ.

ಸರ್ಕಾರದಿಂದ ನೀಡಿರುವ ಅರ್ಹತಾ ಪತ್ರ

ಈ ಕುರಿತು ನಾನುಗೌರಿ.ಕಾಂ ಅಲ್ಲಿನ ಸ್ಥಳೀಯ ನಿವಾಸಿಯಾದ ಗುರುಮೂರ್ತಿ ದೀವ್ರುರವರನ್ನು ಸಂಪರ್ಕಿಸಿತು. ಅವರು “ನಾರಾಯಣ್ ದುರ್ಗಾ ನಾಯ್ಕ್ ರವರು ಬಡವರಾಗಿದ್ದು ಕಳೆದ 25 ವರ್ಷಗಳಿಂದ ಇಲ್ಲಿಯೇ ವಾಸಿಸುತ್ತಿದ್ದಾರೆ. ಅರಣ್ಯಕ್ಕೆ ಇವರಿಂದ ಯಾವ ತೊಂದರೆಯೂ ಆಗಿಲ್ಲ. ಅರಣ್ಯ ಅಧಿಕಾರಿಗಳು ತಪ್ಪು ಮಾಹಿತಿಯಿಂದ ಈ ಅತಾಚುರ್ಯ ಎಸಗಿದ್ದಾರೆ. ಇಲ್ಲಿಯೇ ಪಕ್ಕದಲ್ಲಿ 50 ಎಕರೆಯನ್ನು ಒತ್ತುವರಿ ಮಾಡಿಕೊಂಡು ಗೋಸ್ವರ್ಗ ಎಂಬ ಕಟ್ಟಡ ಕಟ್ಟಲಾಗಿದೆ. ಹತ್ತಾರು ಬಲಾಢ್ಯ ಜನರು ಒತ್ತುವರಿ ಮಾಡಿದ್ದಾರೆ. ಅವರನ್ನು ಮುಟ್ಟುವ ಧೈರ್‍ಯವಿಲ್ಲದ ಅರಣ್ಯ ಅಧಿಕಾರಿಗಳು ಬಡವನ ಮೇಲೆ ದೌರ್ಜನ್ಯ ಮೆರೆದಿದ್ದಾರೆ” ಎನ್ನುತ್ತಾರೆ.

ಘಟನೆ ನಡೆದ ಬಳಿಕ ನಾವು ಡಿಎಫ್‌ಓ (district forest officer) ಬಳಿ ಮಾತನಾಡಿ ದೂರು ಸಲ್ಲಿಸಿದ್ದೇವೆ. ಕೂಡಲೇ ವಾಪಸ್ ಮನೆ ಕಟ್ಟಿಕೊಡುವುದು ನಿಮ್ಮ ಜವಾಬ್ದಾರಿ ಎಂದು ತಾಕೀತು ಮಾಡಿದ್ದೇವೆ. ಸ್ಥಳೀಯ ಶಾಸಕರ ಗಮನಕ್ಕೆ ತಂದರೂ ಅವರು ಕಾಳಜಿವಹಿಸಿಲ್ಲ ಎಂದರು.

ಸ್ಪೀಕರ್‌ ಕಾಗೇರಿಯವರು ಏನು ಮಾಡುತ್ತಿದ್ದಾರೆ?

ಅರಣ್ಯ ಇಲಾಖೆಯ ಈ ಅತಾಚುರ್ಯದಿಂದಾಗಿ ಬಡವನ ಮನೆ ನೆಲಸಮವಾಗಿದೆ. ಈ ಕುರಿತು ಸ್ಥಳೀಯ ಶಾಸಕರಾದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ದೂರು ನೀಡಲಾಗಿದೆ. ಆದರೂ ಅವರು ಮೌನವಹಿಸಿದ್ದಾರೆ. ಮೇಲ್ನೋಟದಲ್ಲಿಯೇ ಇದರಲ್ಲಿ ಆ ಬಡವನ ತಪ್ಪಿಲ್ಲ ಎಂದು ಅನಿಸಿದರೂ, ಹಲವಾರು ಸಾಕ್ಷಿಗಳಿದ್ದರೂ ಸಹ ಅವರು ಕನಿಷ್ಠ ಕಾಳಜಿವಹಿಸಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಶಾಸಕರು ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ. ಕೂಡಲೇ ಆ ಬಡವನಿಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸಬೇಕಿದೆ. ಮತ್ತೆ ಮನೆ ಕಟ್ಟಿಕೊಟ್ಟು, ಅಚಾತುರ್ಯವೆಸಗಿದ ಅರಣ್ಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕಿದೆ.


ಇದನ್ನೂ ಓದಿ: ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...