Homeಕರ್ನಾಟಕಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

- Advertisement -
- Advertisement -

ಲಾಕ್‌ಡೌನ್‌ನಿಂದ ಜನರೆಲ್ಲರೂ ಮನೆಯಲ್ಲಿದ್ದಾರೆ. ಮನೆ ಬಿಟ್ಟು ಹೊರಗೆ ಬಾರದೆಂದು ಸರ್ಕಾರ ಸೂಚಿಸಿದೆ. ಆದರೆ ಮನೆಯಲ್ಲಿದ್ದವರನ್ನು ಹೊರಹಾಕಿ, ಬಡವನ ಮನೆಯನ್ನು ನೆಲಸಮಗೊಳಿಸಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಬೇಡ್ಮಣಿ ಗ್ರಾಮ ಪಂಚಾಯ್ತಿಯ ಭಾನ್ಕುಳಿ ಗ್ರಾಮದಲ್ಲಿ ಜರುಗಿದೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆ ಎಂಬುವವರು ಕೂಲಿ ಕಾರ್ಮಿಕರಾಗಿದ್ದು 25 ವರ್ಷಗಳಿಂದ ಭಾನ್ಕುಳಿ ಗ್ರಾಮದಲ್ಲಿ ವಾಸಿಸಿದ್ದಾರೆ. ಅವರ ಹೆಸರಿನಲ್ಲಿ ರೇಷನ್‌ಕಾರ್ಡ್‌ ಇದೆ. 15 ವರ್ಷಗಳಿಂದ ತೆಂಗಿನ ಸಸಿಗಳನ್ನು ನೆಟ್ಟು ಮರಗಳನ್ನಾಗಿ ಮಾಡಿದ್ದಾರೆ. ಅವರು ಸ್ವಂತ ಮನೆಯನ್ನು ಹೊಂದುವುದಕ್ಕಾಗಿ 2017-2018ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ಅರ್ಜಿ ಹಾಕಿದ್ದಾರೆ. ಅದರನ್ವಯ ಸರ್ಕಾರ ಅವರಿಗೆ ಮನೆ ಕಟ್ಟಿಕೊಡಲು ಷರತ್ತುಬದ್ಧವಾಗಿ ಒಪ್ಪಿದೆ. ಮನೆ ನಿರ್ಮಾಣದ ಅಡಿಪಾಯ ಹಾಕಿ ಹಣ ಸಾಲದಿದ್ದುದ್ದಕ್ಕೆ ಅರ್ಧಕ್ಕೆ ನಿಲ್ಲಿಸಲಾಗಿದೆ. ಅವರು ಪಕ್ಕದಲ್ಲಿ ದನ ಕಟ್ಟುವ ಮನೆಯಲ್ಲಿ ವಾಸಿಸುತ್ತಾ ಬಂದಿದ್ದಾರೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆಯವರ ಪಡಿತರ ಗುರುತಿನ ಚೀಟಿ

ಅಂತಹ ಮನೆಗೆ ಇಂದು ಏಕಾಏಕಿ ನುಗ್ಗಿದ ಅರಣ್ಯ ಅಧಿಕಾರಿಗಳು ಕ್ಷಣ ಮಾತ್ರದಲ್ಲಿ ನೆಲಸಮ ಮಾಡಿದ್ದಾರೆ. ಅದಕ್ಕೆ ಅವರು ಕೊಟ್ಟಿರುವ ಕಾರಣ ಯಥಾಪ್ರಕಾರ ಅರಣ್ಯ ಒತ್ತುವರಿ ಎಂಬುದಾಗಿದೆ. ಆದರೆ ಮನೆಯ ಮಾಲೀಕರಾದ ನಾರಾಯಣ್ ದುರ್ಗಾ ನಾಯ್ಕ್ ರವರು ಕಳೆದ 25 ವರ್ಷಗಳಿಂದ ಇಲ್ಲಿ ವಾಸಿಸಿದ್ದಾರೆ. ತೆಂಗಿನ ಮರಗಳನ್ನು ಬೆಳೆಸಿದ್ದಾರೆ. ಕಳೆದ 8 ವರ್ಷಗಳಿಂದ ಸರ್ಕಾರದ ವತಿಯಿಂದಲೇ ವಿದ್ಯುತ್‌ ಸಂಪರ್ಕ ಪಡೆದಿದ್ದಾರೆ. ಅಷ್ಟು ಮಾತ್ರವಲ್ಲದೇ 2017-18ರ ಅವಧಿಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ, ಕೃಷ್ಣಪ್ಪನವರು ವಸತಿ ಸಚಿವರಾಗಿದ್ದಾಗಿ ಮನೆ ಕಟ್ಟಲು ಇವರಿಗೆ ಷರತ್ತಬದ್ಧ ಒಪ್ಪಿಗೆ ಪತ್ರವನ್ನು ಸಹ ನೀಡಲಾಗಿದೆ. ಇಷ್ಟೆಲ್ಲ ಇದ್ದರೂ ಕಣ್ಣು ಕಾಣದ ಅರಣ್ಯ ಅಧಿಕಾರಿಗಳು ಅಟ್ಟಹಾಸ ಮೆರೆದಿದ್ದಾರೆ.

ಸರ್ಕಾರದಿಂದ ನೀಡಿರುವ ಅರ್ಹತಾ ಪತ್ರ

ಈ ಕುರಿತು ನಾನುಗೌರಿ.ಕಾಂ ಅಲ್ಲಿನ ಸ್ಥಳೀಯ ನಿವಾಸಿಯಾದ ಗುರುಮೂರ್ತಿ ದೀವ್ರುರವರನ್ನು ಸಂಪರ್ಕಿಸಿತು. ಅವರು “ನಾರಾಯಣ್ ದುರ್ಗಾ ನಾಯ್ಕ್ ರವರು ಬಡವರಾಗಿದ್ದು ಕಳೆದ 25 ವರ್ಷಗಳಿಂದ ಇಲ್ಲಿಯೇ ವಾಸಿಸುತ್ತಿದ್ದಾರೆ. ಅರಣ್ಯಕ್ಕೆ ಇವರಿಂದ ಯಾವ ತೊಂದರೆಯೂ ಆಗಿಲ್ಲ. ಅರಣ್ಯ ಅಧಿಕಾರಿಗಳು ತಪ್ಪು ಮಾಹಿತಿಯಿಂದ ಈ ಅತಾಚುರ್ಯ ಎಸಗಿದ್ದಾರೆ. ಇಲ್ಲಿಯೇ ಪಕ್ಕದಲ್ಲಿ 50 ಎಕರೆಯನ್ನು ಒತ್ತುವರಿ ಮಾಡಿಕೊಂಡು ಗೋಸ್ವರ್ಗ ಎಂಬ ಕಟ್ಟಡ ಕಟ್ಟಲಾಗಿದೆ. ಹತ್ತಾರು ಬಲಾಢ್ಯ ಜನರು ಒತ್ತುವರಿ ಮಾಡಿದ್ದಾರೆ. ಅವರನ್ನು ಮುಟ್ಟುವ ಧೈರ್‍ಯವಿಲ್ಲದ ಅರಣ್ಯ ಅಧಿಕಾರಿಗಳು ಬಡವನ ಮೇಲೆ ದೌರ್ಜನ್ಯ ಮೆರೆದಿದ್ದಾರೆ” ಎನ್ನುತ್ತಾರೆ.

ಘಟನೆ ನಡೆದ ಬಳಿಕ ನಾವು ಡಿಎಫ್‌ಓ (district forest officer) ಬಳಿ ಮಾತನಾಡಿ ದೂರು ಸಲ್ಲಿಸಿದ್ದೇವೆ. ಕೂಡಲೇ ವಾಪಸ್ ಮನೆ ಕಟ್ಟಿಕೊಡುವುದು ನಿಮ್ಮ ಜವಾಬ್ದಾರಿ ಎಂದು ತಾಕೀತು ಮಾಡಿದ್ದೇವೆ. ಸ್ಥಳೀಯ ಶಾಸಕರ ಗಮನಕ್ಕೆ ತಂದರೂ ಅವರು ಕಾಳಜಿವಹಿಸಿಲ್ಲ ಎಂದರು.

ಸ್ಪೀಕರ್‌ ಕಾಗೇರಿಯವರು ಏನು ಮಾಡುತ್ತಿದ್ದಾರೆ?

ಅರಣ್ಯ ಇಲಾಖೆಯ ಈ ಅತಾಚುರ್ಯದಿಂದಾಗಿ ಬಡವನ ಮನೆ ನೆಲಸಮವಾಗಿದೆ. ಈ ಕುರಿತು ಸ್ಥಳೀಯ ಶಾಸಕರಾದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ದೂರು ನೀಡಲಾಗಿದೆ. ಆದರೂ ಅವರು ಮೌನವಹಿಸಿದ್ದಾರೆ. ಮೇಲ್ನೋಟದಲ್ಲಿಯೇ ಇದರಲ್ಲಿ ಆ ಬಡವನ ತಪ್ಪಿಲ್ಲ ಎಂದು ಅನಿಸಿದರೂ, ಹಲವಾರು ಸಾಕ್ಷಿಗಳಿದ್ದರೂ ಸಹ ಅವರು ಕನಿಷ್ಠ ಕಾಳಜಿವಹಿಸಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಶಾಸಕರು ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ. ಕೂಡಲೇ ಆ ಬಡವನಿಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸಬೇಕಿದೆ. ಮತ್ತೆ ಮನೆ ಕಟ್ಟಿಕೊಟ್ಟು, ಅಚಾತುರ್ಯವೆಸಗಿದ ಅರಣ್ಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕಿದೆ.


ಇದನ್ನೂ ಓದಿ: ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...