Homeಕರ್ನಾಟಕಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

- Advertisement -
- Advertisement -

ಲಾಕ್‌ಡೌನ್‌ನಿಂದ ಜನರೆಲ್ಲರೂ ಮನೆಯಲ್ಲಿದ್ದಾರೆ. ಮನೆ ಬಿಟ್ಟು ಹೊರಗೆ ಬಾರದೆಂದು ಸರ್ಕಾರ ಸೂಚಿಸಿದೆ. ಆದರೆ ಮನೆಯಲ್ಲಿದ್ದವರನ್ನು ಹೊರಹಾಕಿ, ಬಡವನ ಮನೆಯನ್ನು ನೆಲಸಮಗೊಳಿಸಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಬೇಡ್ಮಣಿ ಗ್ರಾಮ ಪಂಚಾಯ್ತಿಯ ಭಾನ್ಕುಳಿ ಗ್ರಾಮದಲ್ಲಿ ಜರುಗಿದೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆ ಎಂಬುವವರು ಕೂಲಿ ಕಾರ್ಮಿಕರಾಗಿದ್ದು 25 ವರ್ಷಗಳಿಂದ ಭಾನ್ಕುಳಿ ಗ್ರಾಮದಲ್ಲಿ ವಾಸಿಸಿದ್ದಾರೆ. ಅವರ ಹೆಸರಿನಲ್ಲಿ ರೇಷನ್‌ಕಾರ್ಡ್‌ ಇದೆ. 15 ವರ್ಷಗಳಿಂದ ತೆಂಗಿನ ಸಸಿಗಳನ್ನು ನೆಟ್ಟು ಮರಗಳನ್ನಾಗಿ ಮಾಡಿದ್ದಾರೆ. ಅವರು ಸ್ವಂತ ಮನೆಯನ್ನು ಹೊಂದುವುದಕ್ಕಾಗಿ 2017-2018ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ಅರ್ಜಿ ಹಾಕಿದ್ದಾರೆ. ಅದರನ್ವಯ ಸರ್ಕಾರ ಅವರಿಗೆ ಮನೆ ಕಟ್ಟಿಕೊಡಲು ಷರತ್ತುಬದ್ಧವಾಗಿ ಒಪ್ಪಿದೆ. ಮನೆ ನಿರ್ಮಾಣದ ಅಡಿಪಾಯ ಹಾಕಿ ಹಣ ಸಾಲದಿದ್ದುದ್ದಕ್ಕೆ ಅರ್ಧಕ್ಕೆ ನಿಲ್ಲಿಸಲಾಗಿದೆ. ಅವರು ಪಕ್ಕದಲ್ಲಿ ದನ ಕಟ್ಟುವ ಮನೆಯಲ್ಲಿ ವಾಸಿಸುತ್ತಾ ಬಂದಿದ್ದಾರೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆಯವರ ಪಡಿತರ ಗುರುತಿನ ಚೀಟಿ

ಅಂತಹ ಮನೆಗೆ ಇಂದು ಏಕಾಏಕಿ ನುಗ್ಗಿದ ಅರಣ್ಯ ಅಧಿಕಾರಿಗಳು ಕ್ಷಣ ಮಾತ್ರದಲ್ಲಿ ನೆಲಸಮ ಮಾಡಿದ್ದಾರೆ. ಅದಕ್ಕೆ ಅವರು ಕೊಟ್ಟಿರುವ ಕಾರಣ ಯಥಾಪ್ರಕಾರ ಅರಣ್ಯ ಒತ್ತುವರಿ ಎಂಬುದಾಗಿದೆ. ಆದರೆ ಮನೆಯ ಮಾಲೀಕರಾದ ನಾರಾಯಣ್ ದುರ್ಗಾ ನಾಯ್ಕ್ ರವರು ಕಳೆದ 25 ವರ್ಷಗಳಿಂದ ಇಲ್ಲಿ ವಾಸಿಸಿದ್ದಾರೆ. ತೆಂಗಿನ ಮರಗಳನ್ನು ಬೆಳೆಸಿದ್ದಾರೆ. ಕಳೆದ 8 ವರ್ಷಗಳಿಂದ ಸರ್ಕಾರದ ವತಿಯಿಂದಲೇ ವಿದ್ಯುತ್‌ ಸಂಪರ್ಕ ಪಡೆದಿದ್ದಾರೆ. ಅಷ್ಟು ಮಾತ್ರವಲ್ಲದೇ 2017-18ರ ಅವಧಿಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ, ಕೃಷ್ಣಪ್ಪನವರು ವಸತಿ ಸಚಿವರಾಗಿದ್ದಾಗಿ ಮನೆ ಕಟ್ಟಲು ಇವರಿಗೆ ಷರತ್ತಬದ್ಧ ಒಪ್ಪಿಗೆ ಪತ್ರವನ್ನು ಸಹ ನೀಡಲಾಗಿದೆ. ಇಷ್ಟೆಲ್ಲ ಇದ್ದರೂ ಕಣ್ಣು ಕಾಣದ ಅರಣ್ಯ ಅಧಿಕಾರಿಗಳು ಅಟ್ಟಹಾಸ ಮೆರೆದಿದ್ದಾರೆ.

ಸರ್ಕಾರದಿಂದ ನೀಡಿರುವ ಅರ್ಹತಾ ಪತ್ರ

ಈ ಕುರಿತು ನಾನುಗೌರಿ.ಕಾಂ ಅಲ್ಲಿನ ಸ್ಥಳೀಯ ನಿವಾಸಿಯಾದ ಗುರುಮೂರ್ತಿ ದೀವ್ರುರವರನ್ನು ಸಂಪರ್ಕಿಸಿತು. ಅವರು “ನಾರಾಯಣ್ ದುರ್ಗಾ ನಾಯ್ಕ್ ರವರು ಬಡವರಾಗಿದ್ದು ಕಳೆದ 25 ವರ್ಷಗಳಿಂದ ಇಲ್ಲಿಯೇ ವಾಸಿಸುತ್ತಿದ್ದಾರೆ. ಅರಣ್ಯಕ್ಕೆ ಇವರಿಂದ ಯಾವ ತೊಂದರೆಯೂ ಆಗಿಲ್ಲ. ಅರಣ್ಯ ಅಧಿಕಾರಿಗಳು ತಪ್ಪು ಮಾಹಿತಿಯಿಂದ ಈ ಅತಾಚುರ್ಯ ಎಸಗಿದ್ದಾರೆ. ಇಲ್ಲಿಯೇ ಪಕ್ಕದಲ್ಲಿ 50 ಎಕರೆಯನ್ನು ಒತ್ತುವರಿ ಮಾಡಿಕೊಂಡು ಗೋಸ್ವರ್ಗ ಎಂಬ ಕಟ್ಟಡ ಕಟ್ಟಲಾಗಿದೆ. ಹತ್ತಾರು ಬಲಾಢ್ಯ ಜನರು ಒತ್ತುವರಿ ಮಾಡಿದ್ದಾರೆ. ಅವರನ್ನು ಮುಟ್ಟುವ ಧೈರ್‍ಯವಿಲ್ಲದ ಅರಣ್ಯ ಅಧಿಕಾರಿಗಳು ಬಡವನ ಮೇಲೆ ದೌರ್ಜನ್ಯ ಮೆರೆದಿದ್ದಾರೆ” ಎನ್ನುತ್ತಾರೆ.

ಘಟನೆ ನಡೆದ ಬಳಿಕ ನಾವು ಡಿಎಫ್‌ಓ (district forest officer) ಬಳಿ ಮಾತನಾಡಿ ದೂರು ಸಲ್ಲಿಸಿದ್ದೇವೆ. ಕೂಡಲೇ ವಾಪಸ್ ಮನೆ ಕಟ್ಟಿಕೊಡುವುದು ನಿಮ್ಮ ಜವಾಬ್ದಾರಿ ಎಂದು ತಾಕೀತು ಮಾಡಿದ್ದೇವೆ. ಸ್ಥಳೀಯ ಶಾಸಕರ ಗಮನಕ್ಕೆ ತಂದರೂ ಅವರು ಕಾಳಜಿವಹಿಸಿಲ್ಲ ಎಂದರು.

ಸ್ಪೀಕರ್‌ ಕಾಗೇರಿಯವರು ಏನು ಮಾಡುತ್ತಿದ್ದಾರೆ?

ಅರಣ್ಯ ಇಲಾಖೆಯ ಈ ಅತಾಚುರ್ಯದಿಂದಾಗಿ ಬಡವನ ಮನೆ ನೆಲಸಮವಾಗಿದೆ. ಈ ಕುರಿತು ಸ್ಥಳೀಯ ಶಾಸಕರಾದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ದೂರು ನೀಡಲಾಗಿದೆ. ಆದರೂ ಅವರು ಮೌನವಹಿಸಿದ್ದಾರೆ. ಮೇಲ್ನೋಟದಲ್ಲಿಯೇ ಇದರಲ್ಲಿ ಆ ಬಡವನ ತಪ್ಪಿಲ್ಲ ಎಂದು ಅನಿಸಿದರೂ, ಹಲವಾರು ಸಾಕ್ಷಿಗಳಿದ್ದರೂ ಸಹ ಅವರು ಕನಿಷ್ಠ ಕಾಳಜಿವಹಿಸಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಶಾಸಕರು ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ. ಕೂಡಲೇ ಆ ಬಡವನಿಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸಬೇಕಿದೆ. ಮತ್ತೆ ಮನೆ ಕಟ್ಟಿಕೊಟ್ಟು, ಅಚಾತುರ್ಯವೆಸಗಿದ ಅರಣ್ಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕಿದೆ.


ಇದನ್ನೂ ಓದಿ: ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...