Homeಅಂಕಣಗಳುಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. - ಮೋದಿಯ ಹೊಸ ಮಂತ್ರ

ಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. – ಮೋದಿಯ ಹೊಸ ಮಂತ್ರ

- Advertisement -
- Advertisement -

ಮೋದಿ ತನ್ನ ಸಾಧನೆ ಇಟ್ಟುಕೊಂಡು ಮತದಾರರ ಬಳಿ ಹೋಗುತ್ತಿಲ್ಲ. ಬದಲಿಗೆ ಗಡಿಯಲ್ಲಿನ ಭಯೋತ್ಪಾದನೆ ಮತ್ತು ದೇಶದೊಳಗಿನ ಮುಸ್ಲಿಮರ ‘ಗುಮ್ಮ’ ತೋರಿಸುತ್ತಿದ್ದಾರೆ. ಅವರ ಪ್ರಕಾರ ಇದು ನಿಜವಾದ ಯುದ್ಧವಂತೆ……

                                                -ಶೇಖರ್ ಗುಪ್ತಾ

ಅಧಿಕಾರದಲ್ಲಿರುವ ವ್ಯಕ್ತಿ ಮರು ಆಯ್ಕೆಗಾಗಿ ಮತದಾರರನ್ನು ಸಹಜವಾಗಿ ಕೇಳಬೇಕಾದ ಮುಖ್ಯ ಪ್ರಶ್ನೆ: ‘ನನಗೆ ವೋಟ್ ಮಾಡಿ ಗೆಲ್ಲಿಸಿದ ಸಂದರ್ಭಕ್ಕಿಂತ ಈಗ ನೀವು ಇನ್ನೂ ಹೆಚ್ಚಿನ ಸೌಖ್ಯದಲ್ಲಿದ್ದೀರಿ ತಾನೇ?’… ಆದರೆ ಮೋದಿಯ ವರಸೆ ಹೀಗಿದೆ: “ನನ್ನನ್ನು ಗೆಲ್ಲಿಸಿದ ನಂತರ ನಿಮಗೆ ಹೆಚ್ಚಿನ ಸುರಕ್ಷತಾ ಭಾವ ಬಂದಿದೆಯಲ್ಲವೇ?’…

ಇದಕ್ಕೆ ಉತ್ತರ ‘ಹೌದು’ ಎಂದಾದರೆ ಮತ್ತೆ ನೀವು ಅಸುರಕ್ಷತೆಯ ಬಗ್ಗೆ ದೂಸರಾ ಮಾತೇ ಎತ್ತುವ ಹಾಗಿಲ್ಲ. ಉತ್ತರ ‘ಇಲ್ಲ’ ಎಂದಾದರೆ, ಮತ್ತೇಕೆ ನಿಮ್ಮನ್ನು ಮರು ಆಯ್ಕೆ ಮಾಡಬೇಕು ಎಂಬ ಪ್ರಶ್ನೆ ಏಳುತ್ತದೆ. ಆದರೆ ಮೋದಿ ಜಗತ್ತಿನಲ್ಲಿ ಮೂರನೆಯ ಸಾಧ್ಯತೆಯನ್ನೂ ಸೃಷ್ಟಿಸಬಹುದು. ‘ಹಿಂದಿಗಿಂತ, ಮುಖ್ಯವಾಗಿ, 2008ರ ಮುಂಬೈ ದಾಳಿಯ ಸಂದರ್ಭಕ್ಕಿಂತ ಈಗ ನೀವು ಹೆಚ್ಚು ಅಸುರಕ್ಷಿತರೇ?’ ಎಂಬ ಪ್ರಶ್ನೆಯನ್ನು ಹಾಕಲಾಗುತ್ತದೆ. ಒಬ್ಬ ಸಾಂಪ್ರದಾಯಿಕ ಅಥವಾ ಸಹಜ ವೃತ್ತಿ ರಾಜಕಾರಣಿ ತನ್ನ ಸಾಧನೆ ಇಟ್ಟುಕೊಂಡು ಮತದಾರರ ಬಳಿ ಹೋಗುತ್ತಾನೆ. ಆದರೆ ‘ಜಾಣ’ನಾದವನು ತನ್ನ ವಿರೋಧಿಗಳ ವಿಷಯ ಇಟ್ಟುಕೊಂಡು ವೋಟು ಬೇಡುತ್ತಾನೆ. ಈ ವಿಷಯದಲ್ಲಿ ಮೋದಿ ‘ಜಾಣ’ನಲ್ಲದೇ ಇನ್ನೇನು?

ನೀವು ವಿವರ ತೆಗೆದು ವಾದಿಸಬಹುದು, ಆದರೆ ಈ ಐದು ವರ್ಷಗಳಲ್ಲಿ ಕಾಶ್ಮೀರ ಹೊರತುಪಡಿಸಿ ದೇಶದ ಇತರ ಭಾಗಗಳಲ್ಲಿ ದೊಡ್ಡ ಭಯೋತ್ಪಾದನಾ ಕೃತ್ಯ ನಡೆದಿಲ್ಲ ಎಂಬುದನ್ನು ಈ ಸರ್ಕಾರ ಮುಂದೆ ಮಾಡುತ್ತದೆ. ಅಂತರಾಷ್ಟ್ರೀಯ ಗಡಿಯಿಂದ ಹಲವು ಮೈಲುಗಳ ದೂರದ ಗುರುದಾಸಪುರ ಮತ್ತು ಪಠಾನಕೋಟ್‍ನಲ್ಲಿ ಎರಡು ವಿಫಲ ದಾಳಿ ನಡೆದದ್ದು ಬಿಟ್ಟರೆ ಬೇರೆಲ್ಲೂ ಅಂತಹ ದಾಳಿ ನಡೆದಿಲ್ಲ. ಯುಪಿಎ ಅವಧಿಯ ದಿನಗಳು ತುಂಬ ಸುರಕ್ಷಿತವಾಗಿದ್ದವು ಎಂಬುದೂ ಸತ್ಯವಲ್ಲ. ಕಾಶ್ಮೀರ ಆಗಲೂ ಸಾಪೇಕ್ಷವಾಗಿ ಶಾಂತವಾಗಿರಲಿಲ್ಲ. ಕಾಂಗ್ರೆಸ್ ಕೂಡ ಇದನ್ನು ಮರೆತಿತ್ತು.

ಮೋದಿ ರಾಷ್ಟ್ರೀಯ ಭದ್ರತೆ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ತನ್ನ ಸಾಧನೆ ಇಟ್ಟುಕೊಂಡು ತಮ್ಮ ಪ್ರಚಾರವನ್ನು ಕಟ್ಟುತ್ತಿಲ್ಲ. ಆದರೆ ಅವರು ಇನ್ನಷ್ಟು ಅಭದ್ರತೆಗಳನ್ನು ಸೃಷ್ಟಿ ಮಾಡುತ್ತಿದ್ದಾರೆ. ಜೈಷ್, ಲಷ್ಕರ್, ಐಎಸ್‍ಐಗಳೆಂಬ ಗುಮ್ಮಗಳನ್ನು ಅವರು ಮುಂದು ಮಾಡಿ ಮತ ಪಡೆಯಲು ಹೊರಟಿದ್ದಾರೆ.

2014ರ ಚುನಾವಣೆಯನ್ನು ಮೋದಿ ಭರವಸೆಗಳ ಆಧಾರದಲ್ಲಿ ಗೆದ್ದರು. 5 ವರ್ಷಗಳ ನಂತರ ಅವರು ಪಾಕಿಸ್ತಾನದ ಕಪ್ಪು ಭಯೋತ್ಪಾದನೆಯ ಭೀತಿಯ ಆಧಾರದಲ್ಲಿ ಮತ್ತೊಂದು ಅವಧಿಗೆ ತಮ್ಮನ್ನು ಆಯ್ಕೆ ಮಾಡಲು ಕೇಳುತ್ತಿದ್ದಾರೆ. ಅದಕ್ಕೇ ಆತ ಮತ್ತೆ ಮತ್ತೆ ಹೇಳುತ್ತಿರುವುದು: ಕೇವಲ ಭಯೋತ್ಪಾದಕರು ಮತ್ತು ಪಾಕಿಸ್ತಾನಿಯರು ತಮ್ಮನ್ನು ಸೋಲಿಸಲು ಬಯಸಿದ್ದಾರೆಂದು! ಅದೇ ಉಸಿರಿನಲ್ಲಿ ಅವರು, ಸೇನಾ ಕಾರ್ಯಾಚರಣೆಗಳ ಯಶಸ್ಸಿನ ಬಗ್ಗೆ ಕೇಳಿದ ವಿದೋಧ ಪಕ್ಷಗಳನ್ನು ಮೂದಲಿಸುತ್ತ, ಸೇನೆಯ ಮನೋಸ್ಥೈರ್ಯವನ್ನು ಕುಂದಿಸುತ್ತಿದ್ದಾರೆ ಎಂದೂ ಅಪಾದಿಸುತ್ತಾರೆ.

2014ರ ಆಶಾವಾದ ಮತ್ತು 2019ರ ಭೀತಿ- ಈ ಶಿಫ್ಟ್‍ ಗೆ ಕಾರಣವೇನು?

ಮೋದಿ-ಶಾ ಜೋಡಿ ಯಾವುದನ್ನು ನಾವು ‘ಪುಟ್ಟಾಪೂರಾ ಪಾಲಿಟಿಕ್ಸ್’ ( ಕಂಪ್ಲೀಟ್ ಪಾಲಿಟಿಕ್ಸ್) ಎನ್ನುತ್ತವೆಯೋ ಅದರಲ್ಲಿ ನಂಬಿಕೆ ಇಟ್ಟಿದೆ. ಅಂದರೆ ಇದು ರಾಜಕಾರಣವೇ ಮನರಂಜನೆ, ಹುಚ್ಚು ಮತ್ತು 24 ಗಂಟೆಗಳ ಗೀಳು… ಹೀಗಾದಾಗ ರಾಜಕೀಯದ ಹೊರತಾಗಿ ಇಲ್ಲಿ ಬೇರೆ ಯಾವುದಕ್ಕೂ ಜಾಗವೇ ಇಲ್ಲ. ನಿಮ್ಮ ಸಾಧನೆಗಳ ಆಧಾರದಲ್ಲಿ ಹೋದರೆ ಅದು ಅಪಾಯಕಾರಿ. ಏಕೆಂದರೆ, ನೀವು ಮಾಡುವ ಕ್ಲೇಮುಗಳನ್ನು ಜನ ತಮ್ಮ ರಿಯಾಲಿಟಿಯೊಂದಿಗೆ ಇಟ್ಟು ಚೆಕ್ ಮಾಡುತ್ತಾರೆ. ನೀವು ಉದ್ಯೋಗ ಕುರಿತ ಎಲ್ಲ ದತ್ತಾಂಶಗಳನ್ನು ಮುಚ್ಚಿಡಬಹುದು, ಜಿಡಿಪಿ ಲೆಕ್ಕವನ್ನು ಫಿಕ್ಸ್ ಮಾಡಬಹುದು. ಆದರೆ, ನಿಮಗೆ ಹೇಗೆ ಅನಿಸುತ್ತಿದೆ, ಸೌಖ್ಯವೇ ಅಂತ ಕೇಳಿದ ಕೂಡಲೇ ಜನರು ರಿಯಾಲಿಟಿ ಚೆಕ್‍ಗೆ ಇಳಿಯುತ್ತಾರೆ. ನಿಮ್ಮ ಉಜ್ವಲಾ, ಮುದ್ರಾ, ರೈತರಿಗೆ ನೇರ ಹಣ, ಶೌಚಾಲಯ ಯೋಜನೆಗಳ ಫಲಾನುಭವಿಗಳಿರಬಹುದು. ಆದರೆ ಇದೆಲ್ಲದರಿಂದ ಹೊರಗುಳಿದ ಒಂದು ದೊಡ್ಡ ಜನಸಮೂಹವೇ ಇರುತ್ತದೆ. ಇದು ಎಷ್ಟು ಅಪಾಯಕಾರಿ ಎಂದು ತಿಳಿಯಲು, 2004ರ ಶೈನಿಂಗ್ ಇಂಡಿಯಾ ಬಗ್ಗೆ ಅದ್ವಾನಿಗೆ ಕೇಳಿ ನೋಡಿ.

ಮೋದಿಯ ಈಗಿನ ಭಾಷಣಗಳಂತೆ ಮುಂದೆಯೂ ಭಯೋತ್ಪಾದನೆ, ಪಾಕಿಸ್ತಾನ, ರಾಷ್ಟ್ರೀಯ ಸುರಕ್ಷತೆಯ ಕುರಿತಾದ ಭಾಷಣಗಳೇ ಇರುತ್ತವೆ. ಉದ್ಯೋಗ, ಅಭಿವೃದ್ಧಿ, ರೈತರ ಸಂಕಷ್ಟಗಳ ಬಗ್ಗೆ ಅವರು ಮಾತನಾಡಲ್ಲ. ತಮ್ಮನ್ನು ಡಿಫೆಂಡ್ ಮಾಡಿಕೊಳ್ಳುವ ಬದಲು, ವಿರೋಧಿಗಳ ಮೇಲೆ ಹರಿ ಹಾಯುವುದನ್ನೇ ಅವರು ಮುಂದುವರೆಸಲಿದ್ದಾರೆ.

‘ಭಯೋತ್ಪಾದನೆ’ ಶಬ್ದದ ಜೊತೆಗೊಂದು ಇಲ್ಲಿ ಉಪಶಬ್ದವೂ ಇದೆ-‘ಮುಸ್ಲಿಮರು’.  2014ರಲ್ಲಿ ಗೆದ್ದ ನಂತರ ಕ್ಯಾಬಿನೆಟ್ ಸೇರಿದಂತೆ ಯಾವ ಸಾಂವಿಧಾನಿಕ ಸಂಸ್ಥೆಗಳಲ್ಲೂ ಮುಸ್ಲಿಮರಿಗೆ ಪ್ರಾತಿನಿಧ್ಯ ಇಲ್ಲದಂತೆ ನೋಡಿಕೊಂಡರು. ದೇಶದಲ್ಲಿ ಶೇ 14ರಷ್ಟು ಇರುವ ಮುಸ್ಲಿಮರಿಗೆ ಕೇವಲ 7 ಸೀಟು ನೀಡಿ, ಶೇ. 20ರಷ್ಟಿರುವ ಉತ್ತರ ಪ್ರದೇಶದಲ್ಲಿ ಒಂದೂ ಸೀಟು ನೀಡದೇ ಭಾರಿ ದಿಗ್ವಿಜಯ ಸಾಧಿಸಿದ್ದರು. ಈ ತಂತ್ರ ಎಷ್ಟು ಯಶಸ್ವಿಯಾಗಿತ್ತು ಎಂದರೆ, ಈಗಲೂ ಕಾಂಗ್ರೆಸ್ ತನ್ನನ್ನು ಮುಸ್ಲಿಮರ  ಹಿತೈಷಿ ಎಂದು ಬಿಡುತ್ತಾರೇನೋ ಎಂಬ ಭಯದಲ್ಲಿ ಮುಸ್ಲಿಮರಿಗೆ ಟಿಕೆಟು ಕೊಡಲು ಹಿಂಜರಿಯುತ್ತಿದೆ.

ಈಗಲೂ ಅದನ್ನೇ ಮೋದಿ ಮುದುವರೆಸಿದ್ದಾರೆ. ಭಯೋತ್ಪಾದಕರು, ಪಾಕಿಸ್ತಾನಿಯರು ಮತ್ತು ಮುಸ್ಲಿಮರನ್ನು ಗುಮ್ಮನಂತೆ ತೋರಿಸುವುದು, ಭಯೋತ್ಪಾದಕರು, ಪಾಕಿಗಳು ಮತ್ತು ವಿರೋಧ ಪಕ್ಷಗಳು ತಮ್ಮನ್ನು ಸೋಲಿಸಲು ಬಯಸಿವೆ ಎಂದು ಭಾಷಣ ಮಾಡುವುದು. ಮುಸ್ಲಿಮರು ಓಟು ಹಾಕದಿದ್ದರೂ ಪರವಾಗಿಲ್ಲ, ಈ ಕಾರಣಕ್ಕಾಗಿ ಹಿಂದೂಗಳು ಧ್ರುವೀಕರಣ ಆಗುತ್ತಾರೆ ಎಂಬ ಲೆಕ್ಕಾಚಾರ ಇದರ ಹಿಂದಿದೆ.

ಇಲ್ಲಿನ ಮುಸ್ಲಿಮರ ವಿರುದ್ಧ ನೇರ ದಾಳಿ ಮಾಡಿದರೆ ವರ್ಕೌಟ್ ಆಗುವುದಿಲ್ಲ ಎಂದು ಅರಿತಿರುವ ಮೋದಿ, ಪಾಕಿಸ್ತಾನ, ಬಾಂಗ್ಲಾ ಮುಸ್ಲಿಮರನ್ನು ವೈರಿಗಳು ಎಂನಂತೆ ಚಿತ್ರಿಸುವ ತಂತ್ರಕ್ಕೆ ಶರಣಾಗಿದ್ದಾರೆ.

 (ಕೃಪೆ: ದಿ ಪ್ರಿಂಟ್)

ಅನುವಾದ: ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...