Homeಕರ್ನಾಟಕ2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. 2018ರ ಪ್ರಣಾಳಿಕೆಯನ್ನೇ ಪೂರೈಸಿಲ್ಲ ಇದೀಗ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಶುರುವಾಗಿದೆ.

ಈ ಬಗ್ಗೆ ಲೇಖಕ ಕೆಪಿ ಸುರೇಶ್ ಅವರು ಪೋಸ್ಟ್ ಮಾಡಿದ್ದು, ”ಈ ಬಿಜೆಪಿಗೆ ಒಂದೋ ಬುದ್ಧಿಗೆಟ್ಟಿದೆ, ಇಲ್ಲಾ ಸಂಪೂರ್ಣ ಮಾನಗೆಟ್ಟಿದೆ! 2018ರಲ್ಲಿ ತಾನೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದೆ ಎಂಬು ಮರೆತೇ ಹೋದಂತೆ ಈ ಪಕ್ಷ ನಟಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಸರಕಾರಕ್ಕೂ ಸರಕಾರ ರಚಿಸುವ ಪಕ್ಷಕ್ಕೂ ಒಂದು ಉತ್ತರದಾಯಿತ್ವ ಇದೆ. ಉದಾ: ಒಂದು ಯೋಜನೆ ಅನುಷ್ಠಾನವಾಗಲು ಮೂರು ವರ್ಷ ಬೇಕಿದ್ದರೆ ಮುಂದಿನ ವರ್ಷದ ಬಜೆಟ್‌ನಲ್ಲಿ ಅದಕ್ಕೆ ನಿಗದಿ ಪಡಿಸಿದ ಅನುದಾನ ನೀಡುವುದು ಕಡ್ಡಾಯ. ಕೈಗೆತ್ತಿಕೊಂಡ/ ಘೋಷಿಸಿದ ಕಾರ್ಯಕ್ರಮ ಪೂರೈಸದೇ ಇನ್ನೊಂದನ್ನು ತೆಗೆದುಕೊಳ್ಳುವುದು ಆರ್ಥಿಕ, ಆಡಳಿತ ನಿರ್ವಹಣೆಯ ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ.

ಪಕ್ಷವೊಂದರ ಪ್ರಣಾಳಿಕೆಯೂ ಅಂಥಾದ್ದೇ?

”ಈ ಭಾಜಪ 2018ರಲ್ಲಿ ಹೇಳಿದ ಶೇ.10ರಷ್ಟನ್ನೂ ಅನುಷ್ಠಾನಗೊಳಿಸಿಲ್ಲ. ಶೇ.40ರಷ್ಟು ಸಾಧನೆ ಮಾಡಿದ್ದು ಭ್ರಷ್ಟಾಚಾರದಲ್ಲಿ ಮಾತ್ರ. ಉದಾ: ಕೆ.ಎಂ.ಎಫ್ ಮೂಲಕ ಇತರೇ ಉತ್ಪನ್ನ ಮಾರಲು ಸಾವಿರ ಕೋಟಿ ನೀಡುವ ಭರವಸೆ ಪ್ರಣಾಳಿಕೆಯಲ್ಲಿತ್ತು. ಇಂಥಾ ನೂರು ಉದಾಹರಣೆ ಆ 1ಪ್ರಣಾಳಿಕೆ ಇಟ್ಟುಕೊಂಡರೆ ಕಾಣಿಸುತ್ತೆ.
ಈಗ ಹೊಸದಾಗಿ ಸ್ಪರ್ಧಿಸುವ ಹೊಸ ಪಕ್ಷದ ಹಾಗೆ ಬಿಜೆಪಿ ಪ್ರಣಾಲಿಕೆ ಪ್ರಕಟಿಸಿದೆ. ಬಾಯಿಗೆ ಬಂದ ಸುಳ್ಳುಗಳನ್ನು ಅಸಂಬದ್ಧವಾಗಿ ಪೋಣಿಸಿದ ಪ್ರಣಾಳಿಕೆ ಇದು” ಎಂದು ಟೀಕಿಸಿದ್ದಾರೆ.

”ವಾಕ್ಯ ರಚನೆಗಳೂ ಹೀಗೇ ಇವೆ. ಮಾಡಿದ್ದೇವೆ, ಮಾಡಲಿದ್ದೇವೆ, ಘೋಷಿಸಿದ್ದೇವೆ, ಹೀಗೆ ಗಲಿಬಿಲಿ ಉಂಟು ಮಾಡುವ ವಾಕ್ಯಗಳಿವೆ. ಸಾಧನೆಗಳ ಪಟ್ಟಿ ನೋಡಬೇಕು. ಸತ್ಯದ ತಲೆ ಮೇಲೆ ಹೊಡೆದ ಹಾಗೆ ಕ್ಲೈಮ್ ಮಾಡಿರುವುದು ನೋಡಿದರೆ ಈ ರಾಜ್ಯದ ಮತದಾರರು ಗಾಂಪರು ಅಂತ ಬಿಜೆಪಿ ತಿಳಿದುಕೊಂಡಂತಿದೆ” ಎಂದು ಬರೆದಿದ್ದಾರೆ.

”55 ಲಕ್ಷ ಉದ್ಯೋಗ ಸೃಷ್ಟಿ ಮಾಡಿದ್ದೇವೆ ಎನ್ನುವ ಬಿಜೆಪಿ ಯಾವ ವಲಯದಲ್ಲಿ ಎಷ್ಟು ಅಂತ ಹೇಳಿದರೂ ಸಾಕು! ಕೌಶಲ್ಯ ತರಬೇತಿಯಲ್ಲಿ ಸರ್ಟಿಫಿಕೇಟ್ ನೀಡಿರುವ ಅಂಕಿ-ಅಂಶ ನೀಡಲಾಗಿದೆ. ಆದರೆ ದಾಖಲೆ ನೋಡಿ:
ಮೊದಲ ಹಂತದಲ್ಲಿ 1,12,445 ಯುವಕರಿಗೆ ತರಬೇತಿ ಕೊಟ್ಟರೂ ಉದ್ಯೋಗ ಲಭಿಸಿದ್ದು ಕೇವಲ 20956. 2ನೇ ಹಂತದಲ್ಲಿ 4,32,411 ಮಂದಿಗೆ ತರಬೇತಿ ಕೊಟ್ಟ ದಾಖಲೆ ಇದೆ. ಆದರೆ ಉದ್ಯೋಗ ಲಭಿಸಿದ್ದು ಕೇವಲ 58,960 ಯುವಕರಿಗೆ. 3ನೇ ಹಂತದಲ್ಲಿ 31,120 ಮಂದಿಗೆ ತರಬೇತಿ ನೀಡಿದರೆ, ಉದ್ಯೋಗ ಲಭಿಸಿದ್ದು ಕೇವಲ 1388 ಯುವಕರಿಗೆ. ಇದು ಅಧಿಕೃತ ದಾಖಲೆ” ಎಂದು ಮಾಹಿತಿ ನೀಡಿದ್ದಾರೆ.

”ಆರೋಗ್ಯ ಕ್ಷೇತ್ರದಲ್ಲಿ ಕೇಂದ್ರದ ಅನುದಾನ 500+ ಕೋಟಿಯಲ್ಲಿ ಒಂದು ರೂಪಾಯಿಯೂ ಬಂದಿಲ್ಲ ಎಂದು ಮೊನ್ನೆ ಮೊನ್ನೆ ಬಯಲಾಗಿದೆ” ಎಂದಿದ್ದಾರೆ.

ಕೇಂದ್ರದ ವಿಶೇಷ ಅನುದಾನ ರಾಜ್ಯಕ್ಕೆ ಸೊನ್ನೆ

”ಭದ್ರಾ, ಮೇಕೆದಾಟು, ಕಳಸಾ ಬಂಡೂರಿ ಯೋಜನೆಗಳು ಅಂತರ್‌ರಾಜ್ಯ ಪ್ರಕರಣಗಳಾಗಿರುವ ಕಾರಣ ಅವು ಪ್ರಸ್ತಾವದಿಂದಾಚೆ ಜರುಗಿಯೇ ಇಲ್ಲ. ಇದರ ಬಗ್ಗೆ ಪ್ರಭಾವ ಬೀರಬಹುದಾದ ಮೋದಿ ಬಾಯಿಮುಚ್ಚಿ ಕೂತಿದ್ದಾರೆ” ಎಂದು ಆರೋಪಿಸಿದ್ದಾರೆ.

”ಈಗ ಹೊಸ ಪ್ರಣಾಳಿಕೆ ಬಿಡುಗಡೆ ಮಾಡುವ ಭಂಡ ಧೈರ್ಯ ಬೇರೆ ಈ ಪಕ್ಷಕ್ಕೆ!! 2018ರ ಪ್ರಣಾಳಿಕೆ ಮುಖಕ್ಕೆ ಹಿಡಿದು ಮತದಾರರು ಇದರಲ್ಲಿರುವ ಭರವಸೆ ಕಳೆದ ನಾಲ್ಕು ವರ್ಷ ಯಾಕೆ ಅನುಷ್ಠಾನ ಮಾಡಿಲ್ಲ ಎಂದು ಕೇಳಬೇಕಿದೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...