Homeಕರ್ನಾಟಕ2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. 2018ರ ಪ್ರಣಾಳಿಕೆಯನ್ನೇ ಪೂರೈಸಿಲ್ಲ ಇದೀಗ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಶುರುವಾಗಿದೆ.

ಈ ಬಗ್ಗೆ ಲೇಖಕ ಕೆಪಿ ಸುರೇಶ್ ಅವರು ಪೋಸ್ಟ್ ಮಾಡಿದ್ದು, ”ಈ ಬಿಜೆಪಿಗೆ ಒಂದೋ ಬುದ್ಧಿಗೆಟ್ಟಿದೆ, ಇಲ್ಲಾ ಸಂಪೂರ್ಣ ಮಾನಗೆಟ್ಟಿದೆ! 2018ರಲ್ಲಿ ತಾನೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದೆ ಎಂಬು ಮರೆತೇ ಹೋದಂತೆ ಈ ಪಕ್ಷ ನಟಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಸರಕಾರಕ್ಕೂ ಸರಕಾರ ರಚಿಸುವ ಪಕ್ಷಕ್ಕೂ ಒಂದು ಉತ್ತರದಾಯಿತ್ವ ಇದೆ. ಉದಾ: ಒಂದು ಯೋಜನೆ ಅನುಷ್ಠಾನವಾಗಲು ಮೂರು ವರ್ಷ ಬೇಕಿದ್ದರೆ ಮುಂದಿನ ವರ್ಷದ ಬಜೆಟ್‌ನಲ್ಲಿ ಅದಕ್ಕೆ ನಿಗದಿ ಪಡಿಸಿದ ಅನುದಾನ ನೀಡುವುದು ಕಡ್ಡಾಯ. ಕೈಗೆತ್ತಿಕೊಂಡ/ ಘೋಷಿಸಿದ ಕಾರ್ಯಕ್ರಮ ಪೂರೈಸದೇ ಇನ್ನೊಂದನ್ನು ತೆಗೆದುಕೊಳ್ಳುವುದು ಆರ್ಥಿಕ, ಆಡಳಿತ ನಿರ್ವಹಣೆಯ ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ.

ಪಕ್ಷವೊಂದರ ಪ್ರಣಾಳಿಕೆಯೂ ಅಂಥಾದ್ದೇ?

”ಈ ಭಾಜಪ 2018ರಲ್ಲಿ ಹೇಳಿದ ಶೇ.10ರಷ್ಟನ್ನೂ ಅನುಷ್ಠಾನಗೊಳಿಸಿಲ್ಲ. ಶೇ.40ರಷ್ಟು ಸಾಧನೆ ಮಾಡಿದ್ದು ಭ್ರಷ್ಟಾಚಾರದಲ್ಲಿ ಮಾತ್ರ. ಉದಾ: ಕೆ.ಎಂ.ಎಫ್ ಮೂಲಕ ಇತರೇ ಉತ್ಪನ್ನ ಮಾರಲು ಸಾವಿರ ಕೋಟಿ ನೀಡುವ ಭರವಸೆ ಪ್ರಣಾಳಿಕೆಯಲ್ಲಿತ್ತು. ಇಂಥಾ ನೂರು ಉದಾಹರಣೆ ಆ 1ಪ್ರಣಾಳಿಕೆ ಇಟ್ಟುಕೊಂಡರೆ ಕಾಣಿಸುತ್ತೆ.
ಈಗ ಹೊಸದಾಗಿ ಸ್ಪರ್ಧಿಸುವ ಹೊಸ ಪಕ್ಷದ ಹಾಗೆ ಬಿಜೆಪಿ ಪ್ರಣಾಲಿಕೆ ಪ್ರಕಟಿಸಿದೆ. ಬಾಯಿಗೆ ಬಂದ ಸುಳ್ಳುಗಳನ್ನು ಅಸಂಬದ್ಧವಾಗಿ ಪೋಣಿಸಿದ ಪ್ರಣಾಳಿಕೆ ಇದು” ಎಂದು ಟೀಕಿಸಿದ್ದಾರೆ.

”ವಾಕ್ಯ ರಚನೆಗಳೂ ಹೀಗೇ ಇವೆ. ಮಾಡಿದ್ದೇವೆ, ಮಾಡಲಿದ್ದೇವೆ, ಘೋಷಿಸಿದ್ದೇವೆ, ಹೀಗೆ ಗಲಿಬಿಲಿ ಉಂಟು ಮಾಡುವ ವಾಕ್ಯಗಳಿವೆ. ಸಾಧನೆಗಳ ಪಟ್ಟಿ ನೋಡಬೇಕು. ಸತ್ಯದ ತಲೆ ಮೇಲೆ ಹೊಡೆದ ಹಾಗೆ ಕ್ಲೈಮ್ ಮಾಡಿರುವುದು ನೋಡಿದರೆ ಈ ರಾಜ್ಯದ ಮತದಾರರು ಗಾಂಪರು ಅಂತ ಬಿಜೆಪಿ ತಿಳಿದುಕೊಂಡಂತಿದೆ” ಎಂದು ಬರೆದಿದ್ದಾರೆ.

”55 ಲಕ್ಷ ಉದ್ಯೋಗ ಸೃಷ್ಟಿ ಮಾಡಿದ್ದೇವೆ ಎನ್ನುವ ಬಿಜೆಪಿ ಯಾವ ವಲಯದಲ್ಲಿ ಎಷ್ಟು ಅಂತ ಹೇಳಿದರೂ ಸಾಕು! ಕೌಶಲ್ಯ ತರಬೇತಿಯಲ್ಲಿ ಸರ್ಟಿಫಿಕೇಟ್ ನೀಡಿರುವ ಅಂಕಿ-ಅಂಶ ನೀಡಲಾಗಿದೆ. ಆದರೆ ದಾಖಲೆ ನೋಡಿ:
ಮೊದಲ ಹಂತದಲ್ಲಿ 1,12,445 ಯುವಕರಿಗೆ ತರಬೇತಿ ಕೊಟ್ಟರೂ ಉದ್ಯೋಗ ಲಭಿಸಿದ್ದು ಕೇವಲ 20956. 2ನೇ ಹಂತದಲ್ಲಿ 4,32,411 ಮಂದಿಗೆ ತರಬೇತಿ ಕೊಟ್ಟ ದಾಖಲೆ ಇದೆ. ಆದರೆ ಉದ್ಯೋಗ ಲಭಿಸಿದ್ದು ಕೇವಲ 58,960 ಯುವಕರಿಗೆ. 3ನೇ ಹಂತದಲ್ಲಿ 31,120 ಮಂದಿಗೆ ತರಬೇತಿ ನೀಡಿದರೆ, ಉದ್ಯೋಗ ಲಭಿಸಿದ್ದು ಕೇವಲ 1388 ಯುವಕರಿಗೆ. ಇದು ಅಧಿಕೃತ ದಾಖಲೆ” ಎಂದು ಮಾಹಿತಿ ನೀಡಿದ್ದಾರೆ.

”ಆರೋಗ್ಯ ಕ್ಷೇತ್ರದಲ್ಲಿ ಕೇಂದ್ರದ ಅನುದಾನ 500+ ಕೋಟಿಯಲ್ಲಿ ಒಂದು ರೂಪಾಯಿಯೂ ಬಂದಿಲ್ಲ ಎಂದು ಮೊನ್ನೆ ಮೊನ್ನೆ ಬಯಲಾಗಿದೆ” ಎಂದಿದ್ದಾರೆ.

ಕೇಂದ್ರದ ವಿಶೇಷ ಅನುದಾನ ರಾಜ್ಯಕ್ಕೆ ಸೊನ್ನೆ

”ಭದ್ರಾ, ಮೇಕೆದಾಟು, ಕಳಸಾ ಬಂಡೂರಿ ಯೋಜನೆಗಳು ಅಂತರ್‌ರಾಜ್ಯ ಪ್ರಕರಣಗಳಾಗಿರುವ ಕಾರಣ ಅವು ಪ್ರಸ್ತಾವದಿಂದಾಚೆ ಜರುಗಿಯೇ ಇಲ್ಲ. ಇದರ ಬಗ್ಗೆ ಪ್ರಭಾವ ಬೀರಬಹುದಾದ ಮೋದಿ ಬಾಯಿಮುಚ್ಚಿ ಕೂತಿದ್ದಾರೆ” ಎಂದು ಆರೋಪಿಸಿದ್ದಾರೆ.

”ಈಗ ಹೊಸ ಪ್ರಣಾಳಿಕೆ ಬಿಡುಗಡೆ ಮಾಡುವ ಭಂಡ ಧೈರ್ಯ ಬೇರೆ ಈ ಪಕ್ಷಕ್ಕೆ!! 2018ರ ಪ್ರಣಾಳಿಕೆ ಮುಖಕ್ಕೆ ಹಿಡಿದು ಮತದಾರರು ಇದರಲ್ಲಿರುವ ಭರವಸೆ ಕಳೆದ ನಾಲ್ಕು ವರ್ಷ ಯಾಕೆ ಅನುಷ್ಠಾನ ಮಾಡಿಲ್ಲ ಎಂದು ಕೇಳಬೇಕಿದೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...