Homeಕರ್ನಾಟಕ2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. 2018ರ ಪ್ರಣಾಳಿಕೆಯನ್ನೇ ಪೂರೈಸಿಲ್ಲ ಇದೀಗ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಶುರುವಾಗಿದೆ.

ಈ ಬಗ್ಗೆ ಲೇಖಕ ಕೆಪಿ ಸುರೇಶ್ ಅವರು ಪೋಸ್ಟ್ ಮಾಡಿದ್ದು, ”ಈ ಬಿಜೆಪಿಗೆ ಒಂದೋ ಬುದ್ಧಿಗೆಟ್ಟಿದೆ, ಇಲ್ಲಾ ಸಂಪೂರ್ಣ ಮಾನಗೆಟ್ಟಿದೆ! 2018ರಲ್ಲಿ ತಾನೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದೆ ಎಂಬು ಮರೆತೇ ಹೋದಂತೆ ಈ ಪಕ್ಷ ನಟಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಸರಕಾರಕ್ಕೂ ಸರಕಾರ ರಚಿಸುವ ಪಕ್ಷಕ್ಕೂ ಒಂದು ಉತ್ತರದಾಯಿತ್ವ ಇದೆ. ಉದಾ: ಒಂದು ಯೋಜನೆ ಅನುಷ್ಠಾನವಾಗಲು ಮೂರು ವರ್ಷ ಬೇಕಿದ್ದರೆ ಮುಂದಿನ ವರ್ಷದ ಬಜೆಟ್‌ನಲ್ಲಿ ಅದಕ್ಕೆ ನಿಗದಿ ಪಡಿಸಿದ ಅನುದಾನ ನೀಡುವುದು ಕಡ್ಡಾಯ. ಕೈಗೆತ್ತಿಕೊಂಡ/ ಘೋಷಿಸಿದ ಕಾರ್ಯಕ್ರಮ ಪೂರೈಸದೇ ಇನ್ನೊಂದನ್ನು ತೆಗೆದುಕೊಳ್ಳುವುದು ಆರ್ಥಿಕ, ಆಡಳಿತ ನಿರ್ವಹಣೆಯ ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ.

ಪಕ್ಷವೊಂದರ ಪ್ರಣಾಳಿಕೆಯೂ ಅಂಥಾದ್ದೇ?

”ಈ ಭಾಜಪ 2018ರಲ್ಲಿ ಹೇಳಿದ ಶೇ.10ರಷ್ಟನ್ನೂ ಅನುಷ್ಠಾನಗೊಳಿಸಿಲ್ಲ. ಶೇ.40ರಷ್ಟು ಸಾಧನೆ ಮಾಡಿದ್ದು ಭ್ರಷ್ಟಾಚಾರದಲ್ಲಿ ಮಾತ್ರ. ಉದಾ: ಕೆ.ಎಂ.ಎಫ್ ಮೂಲಕ ಇತರೇ ಉತ್ಪನ್ನ ಮಾರಲು ಸಾವಿರ ಕೋಟಿ ನೀಡುವ ಭರವಸೆ ಪ್ರಣಾಳಿಕೆಯಲ್ಲಿತ್ತು. ಇಂಥಾ ನೂರು ಉದಾಹರಣೆ ಆ 1ಪ್ರಣಾಳಿಕೆ ಇಟ್ಟುಕೊಂಡರೆ ಕಾಣಿಸುತ್ತೆ.
ಈಗ ಹೊಸದಾಗಿ ಸ್ಪರ್ಧಿಸುವ ಹೊಸ ಪಕ್ಷದ ಹಾಗೆ ಬಿಜೆಪಿ ಪ್ರಣಾಲಿಕೆ ಪ್ರಕಟಿಸಿದೆ. ಬಾಯಿಗೆ ಬಂದ ಸುಳ್ಳುಗಳನ್ನು ಅಸಂಬದ್ಧವಾಗಿ ಪೋಣಿಸಿದ ಪ್ರಣಾಳಿಕೆ ಇದು” ಎಂದು ಟೀಕಿಸಿದ್ದಾರೆ.

”ವಾಕ್ಯ ರಚನೆಗಳೂ ಹೀಗೇ ಇವೆ. ಮಾಡಿದ್ದೇವೆ, ಮಾಡಲಿದ್ದೇವೆ, ಘೋಷಿಸಿದ್ದೇವೆ, ಹೀಗೆ ಗಲಿಬಿಲಿ ಉಂಟು ಮಾಡುವ ವಾಕ್ಯಗಳಿವೆ. ಸಾಧನೆಗಳ ಪಟ್ಟಿ ನೋಡಬೇಕು. ಸತ್ಯದ ತಲೆ ಮೇಲೆ ಹೊಡೆದ ಹಾಗೆ ಕ್ಲೈಮ್ ಮಾಡಿರುವುದು ನೋಡಿದರೆ ಈ ರಾಜ್ಯದ ಮತದಾರರು ಗಾಂಪರು ಅಂತ ಬಿಜೆಪಿ ತಿಳಿದುಕೊಂಡಂತಿದೆ” ಎಂದು ಬರೆದಿದ್ದಾರೆ.

”55 ಲಕ್ಷ ಉದ್ಯೋಗ ಸೃಷ್ಟಿ ಮಾಡಿದ್ದೇವೆ ಎನ್ನುವ ಬಿಜೆಪಿ ಯಾವ ವಲಯದಲ್ಲಿ ಎಷ್ಟು ಅಂತ ಹೇಳಿದರೂ ಸಾಕು! ಕೌಶಲ್ಯ ತರಬೇತಿಯಲ್ಲಿ ಸರ್ಟಿಫಿಕೇಟ್ ನೀಡಿರುವ ಅಂಕಿ-ಅಂಶ ನೀಡಲಾಗಿದೆ. ಆದರೆ ದಾಖಲೆ ನೋಡಿ:
ಮೊದಲ ಹಂತದಲ್ಲಿ 1,12,445 ಯುವಕರಿಗೆ ತರಬೇತಿ ಕೊಟ್ಟರೂ ಉದ್ಯೋಗ ಲಭಿಸಿದ್ದು ಕೇವಲ 20956. 2ನೇ ಹಂತದಲ್ಲಿ 4,32,411 ಮಂದಿಗೆ ತರಬೇತಿ ಕೊಟ್ಟ ದಾಖಲೆ ಇದೆ. ಆದರೆ ಉದ್ಯೋಗ ಲಭಿಸಿದ್ದು ಕೇವಲ 58,960 ಯುವಕರಿಗೆ. 3ನೇ ಹಂತದಲ್ಲಿ 31,120 ಮಂದಿಗೆ ತರಬೇತಿ ನೀಡಿದರೆ, ಉದ್ಯೋಗ ಲಭಿಸಿದ್ದು ಕೇವಲ 1388 ಯುವಕರಿಗೆ. ಇದು ಅಧಿಕೃತ ದಾಖಲೆ” ಎಂದು ಮಾಹಿತಿ ನೀಡಿದ್ದಾರೆ.

”ಆರೋಗ್ಯ ಕ್ಷೇತ್ರದಲ್ಲಿ ಕೇಂದ್ರದ ಅನುದಾನ 500+ ಕೋಟಿಯಲ್ಲಿ ಒಂದು ರೂಪಾಯಿಯೂ ಬಂದಿಲ್ಲ ಎಂದು ಮೊನ್ನೆ ಮೊನ್ನೆ ಬಯಲಾಗಿದೆ” ಎಂದಿದ್ದಾರೆ.

ಕೇಂದ್ರದ ವಿಶೇಷ ಅನುದಾನ ರಾಜ್ಯಕ್ಕೆ ಸೊನ್ನೆ

”ಭದ್ರಾ, ಮೇಕೆದಾಟು, ಕಳಸಾ ಬಂಡೂರಿ ಯೋಜನೆಗಳು ಅಂತರ್‌ರಾಜ್ಯ ಪ್ರಕರಣಗಳಾಗಿರುವ ಕಾರಣ ಅವು ಪ್ರಸ್ತಾವದಿಂದಾಚೆ ಜರುಗಿಯೇ ಇಲ್ಲ. ಇದರ ಬಗ್ಗೆ ಪ್ರಭಾವ ಬೀರಬಹುದಾದ ಮೋದಿ ಬಾಯಿಮುಚ್ಚಿ ಕೂತಿದ್ದಾರೆ” ಎಂದು ಆರೋಪಿಸಿದ್ದಾರೆ.

”ಈಗ ಹೊಸ ಪ್ರಣಾಳಿಕೆ ಬಿಡುಗಡೆ ಮಾಡುವ ಭಂಡ ಧೈರ್ಯ ಬೇರೆ ಈ ಪಕ್ಷಕ್ಕೆ!! 2018ರ ಪ್ರಣಾಳಿಕೆ ಮುಖಕ್ಕೆ ಹಿಡಿದು ಮತದಾರರು ಇದರಲ್ಲಿರುವ ಭರವಸೆ ಕಳೆದ ನಾಲ್ಕು ವರ್ಷ ಯಾಕೆ ಅನುಷ್ಠಾನ ಮಾಡಿಲ್ಲ ಎಂದು ಕೇಳಬೇಕಿದೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...