Homeಕರ್ನಾಟಕ2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. 2018ರ ಪ್ರಣಾಳಿಕೆಯನ್ನೇ ಪೂರೈಸಿಲ್ಲ ಇದೀಗ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಶುರುವಾಗಿದೆ.

ಈ ಬಗ್ಗೆ ಲೇಖಕ ಕೆಪಿ ಸುರೇಶ್ ಅವರು ಪೋಸ್ಟ್ ಮಾಡಿದ್ದು, ”ಈ ಬಿಜೆಪಿಗೆ ಒಂದೋ ಬುದ್ಧಿಗೆಟ್ಟಿದೆ, ಇಲ್ಲಾ ಸಂಪೂರ್ಣ ಮಾನಗೆಟ್ಟಿದೆ! 2018ರಲ್ಲಿ ತಾನೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದೆ ಎಂಬು ಮರೆತೇ ಹೋದಂತೆ ಈ ಪಕ್ಷ ನಟಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಸರಕಾರಕ್ಕೂ ಸರಕಾರ ರಚಿಸುವ ಪಕ್ಷಕ್ಕೂ ಒಂದು ಉತ್ತರದಾಯಿತ್ವ ಇದೆ. ಉದಾ: ಒಂದು ಯೋಜನೆ ಅನುಷ್ಠಾನವಾಗಲು ಮೂರು ವರ್ಷ ಬೇಕಿದ್ದರೆ ಮುಂದಿನ ವರ್ಷದ ಬಜೆಟ್‌ನಲ್ಲಿ ಅದಕ್ಕೆ ನಿಗದಿ ಪಡಿಸಿದ ಅನುದಾನ ನೀಡುವುದು ಕಡ್ಡಾಯ. ಕೈಗೆತ್ತಿಕೊಂಡ/ ಘೋಷಿಸಿದ ಕಾರ್ಯಕ್ರಮ ಪೂರೈಸದೇ ಇನ್ನೊಂದನ್ನು ತೆಗೆದುಕೊಳ್ಳುವುದು ಆರ್ಥಿಕ, ಆಡಳಿತ ನಿರ್ವಹಣೆಯ ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ.

ಪಕ್ಷವೊಂದರ ಪ್ರಣಾಳಿಕೆಯೂ ಅಂಥಾದ್ದೇ?

”ಈ ಭಾಜಪ 2018ರಲ್ಲಿ ಹೇಳಿದ ಶೇ.10ರಷ್ಟನ್ನೂ ಅನುಷ್ಠಾನಗೊಳಿಸಿಲ್ಲ. ಶೇ.40ರಷ್ಟು ಸಾಧನೆ ಮಾಡಿದ್ದು ಭ್ರಷ್ಟಾಚಾರದಲ್ಲಿ ಮಾತ್ರ. ಉದಾ: ಕೆ.ಎಂ.ಎಫ್ ಮೂಲಕ ಇತರೇ ಉತ್ಪನ್ನ ಮಾರಲು ಸಾವಿರ ಕೋಟಿ ನೀಡುವ ಭರವಸೆ ಪ್ರಣಾಳಿಕೆಯಲ್ಲಿತ್ತು. ಇಂಥಾ ನೂರು ಉದಾಹರಣೆ ಆ 1ಪ್ರಣಾಳಿಕೆ ಇಟ್ಟುಕೊಂಡರೆ ಕಾಣಿಸುತ್ತೆ.
ಈಗ ಹೊಸದಾಗಿ ಸ್ಪರ್ಧಿಸುವ ಹೊಸ ಪಕ್ಷದ ಹಾಗೆ ಬಿಜೆಪಿ ಪ್ರಣಾಲಿಕೆ ಪ್ರಕಟಿಸಿದೆ. ಬಾಯಿಗೆ ಬಂದ ಸುಳ್ಳುಗಳನ್ನು ಅಸಂಬದ್ಧವಾಗಿ ಪೋಣಿಸಿದ ಪ್ರಣಾಳಿಕೆ ಇದು” ಎಂದು ಟೀಕಿಸಿದ್ದಾರೆ.

”ವಾಕ್ಯ ರಚನೆಗಳೂ ಹೀಗೇ ಇವೆ. ಮಾಡಿದ್ದೇವೆ, ಮಾಡಲಿದ್ದೇವೆ, ಘೋಷಿಸಿದ್ದೇವೆ, ಹೀಗೆ ಗಲಿಬಿಲಿ ಉಂಟು ಮಾಡುವ ವಾಕ್ಯಗಳಿವೆ. ಸಾಧನೆಗಳ ಪಟ್ಟಿ ನೋಡಬೇಕು. ಸತ್ಯದ ತಲೆ ಮೇಲೆ ಹೊಡೆದ ಹಾಗೆ ಕ್ಲೈಮ್ ಮಾಡಿರುವುದು ನೋಡಿದರೆ ಈ ರಾಜ್ಯದ ಮತದಾರರು ಗಾಂಪರು ಅಂತ ಬಿಜೆಪಿ ತಿಳಿದುಕೊಂಡಂತಿದೆ” ಎಂದು ಬರೆದಿದ್ದಾರೆ.

”55 ಲಕ್ಷ ಉದ್ಯೋಗ ಸೃಷ್ಟಿ ಮಾಡಿದ್ದೇವೆ ಎನ್ನುವ ಬಿಜೆಪಿ ಯಾವ ವಲಯದಲ್ಲಿ ಎಷ್ಟು ಅಂತ ಹೇಳಿದರೂ ಸಾಕು! ಕೌಶಲ್ಯ ತರಬೇತಿಯಲ್ಲಿ ಸರ್ಟಿಫಿಕೇಟ್ ನೀಡಿರುವ ಅಂಕಿ-ಅಂಶ ನೀಡಲಾಗಿದೆ. ಆದರೆ ದಾಖಲೆ ನೋಡಿ:
ಮೊದಲ ಹಂತದಲ್ಲಿ 1,12,445 ಯುವಕರಿಗೆ ತರಬೇತಿ ಕೊಟ್ಟರೂ ಉದ್ಯೋಗ ಲಭಿಸಿದ್ದು ಕೇವಲ 20956. 2ನೇ ಹಂತದಲ್ಲಿ 4,32,411 ಮಂದಿಗೆ ತರಬೇತಿ ಕೊಟ್ಟ ದಾಖಲೆ ಇದೆ. ಆದರೆ ಉದ್ಯೋಗ ಲಭಿಸಿದ್ದು ಕೇವಲ 58,960 ಯುವಕರಿಗೆ. 3ನೇ ಹಂತದಲ್ಲಿ 31,120 ಮಂದಿಗೆ ತರಬೇತಿ ನೀಡಿದರೆ, ಉದ್ಯೋಗ ಲಭಿಸಿದ್ದು ಕೇವಲ 1388 ಯುವಕರಿಗೆ. ಇದು ಅಧಿಕೃತ ದಾಖಲೆ” ಎಂದು ಮಾಹಿತಿ ನೀಡಿದ್ದಾರೆ.

”ಆರೋಗ್ಯ ಕ್ಷೇತ್ರದಲ್ಲಿ ಕೇಂದ್ರದ ಅನುದಾನ 500+ ಕೋಟಿಯಲ್ಲಿ ಒಂದು ರೂಪಾಯಿಯೂ ಬಂದಿಲ್ಲ ಎಂದು ಮೊನ್ನೆ ಮೊನ್ನೆ ಬಯಲಾಗಿದೆ” ಎಂದಿದ್ದಾರೆ.

ಕೇಂದ್ರದ ವಿಶೇಷ ಅನುದಾನ ರಾಜ್ಯಕ್ಕೆ ಸೊನ್ನೆ

”ಭದ್ರಾ, ಮೇಕೆದಾಟು, ಕಳಸಾ ಬಂಡೂರಿ ಯೋಜನೆಗಳು ಅಂತರ್‌ರಾಜ್ಯ ಪ್ರಕರಣಗಳಾಗಿರುವ ಕಾರಣ ಅವು ಪ್ರಸ್ತಾವದಿಂದಾಚೆ ಜರುಗಿಯೇ ಇಲ್ಲ. ಇದರ ಬಗ್ಗೆ ಪ್ರಭಾವ ಬೀರಬಹುದಾದ ಮೋದಿ ಬಾಯಿಮುಚ್ಚಿ ಕೂತಿದ್ದಾರೆ” ಎಂದು ಆರೋಪಿಸಿದ್ದಾರೆ.

”ಈಗ ಹೊಸ ಪ್ರಣಾಳಿಕೆ ಬಿಡುಗಡೆ ಮಾಡುವ ಭಂಡ ಧೈರ್ಯ ಬೇರೆ ಈ ಪಕ್ಷಕ್ಕೆ!! 2018ರ ಪ್ರಣಾಳಿಕೆ ಮುಖಕ್ಕೆ ಹಿಡಿದು ಮತದಾರರು ಇದರಲ್ಲಿರುವ ಭರವಸೆ ಕಳೆದ ನಾಲ್ಕು ವರ್ಷ ಯಾಕೆ ಅನುಷ್ಠಾನ ಮಾಡಿಲ್ಲ ಎಂದು ಕೇಳಬೇಕಿದೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...