Homeಕರ್ನಾಟಕ2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. 2018ರ ಪ್ರಣಾಳಿಕೆಯನ್ನೇ ಪೂರೈಸಿಲ್ಲ ಇದೀಗ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಶುರುವಾಗಿದೆ.

ಈ ಬಗ್ಗೆ ಲೇಖಕ ಕೆಪಿ ಸುರೇಶ್ ಅವರು ಪೋಸ್ಟ್ ಮಾಡಿದ್ದು, ”ಈ ಬಿಜೆಪಿಗೆ ಒಂದೋ ಬುದ್ಧಿಗೆಟ್ಟಿದೆ, ಇಲ್ಲಾ ಸಂಪೂರ್ಣ ಮಾನಗೆಟ್ಟಿದೆ! 2018ರಲ್ಲಿ ತಾನೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದೆ ಎಂಬು ಮರೆತೇ ಹೋದಂತೆ ಈ ಪಕ್ಷ ನಟಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಸರಕಾರಕ್ಕೂ ಸರಕಾರ ರಚಿಸುವ ಪಕ್ಷಕ್ಕೂ ಒಂದು ಉತ್ತರದಾಯಿತ್ವ ಇದೆ. ಉದಾ: ಒಂದು ಯೋಜನೆ ಅನುಷ್ಠಾನವಾಗಲು ಮೂರು ವರ್ಷ ಬೇಕಿದ್ದರೆ ಮುಂದಿನ ವರ್ಷದ ಬಜೆಟ್‌ನಲ್ಲಿ ಅದಕ್ಕೆ ನಿಗದಿ ಪಡಿಸಿದ ಅನುದಾನ ನೀಡುವುದು ಕಡ್ಡಾಯ. ಕೈಗೆತ್ತಿಕೊಂಡ/ ಘೋಷಿಸಿದ ಕಾರ್ಯಕ್ರಮ ಪೂರೈಸದೇ ಇನ್ನೊಂದನ್ನು ತೆಗೆದುಕೊಳ್ಳುವುದು ಆರ್ಥಿಕ, ಆಡಳಿತ ನಿರ್ವಹಣೆಯ ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ.

ಪಕ್ಷವೊಂದರ ಪ್ರಣಾಳಿಕೆಯೂ ಅಂಥಾದ್ದೇ?

”ಈ ಭಾಜಪ 2018ರಲ್ಲಿ ಹೇಳಿದ ಶೇ.10ರಷ್ಟನ್ನೂ ಅನುಷ್ಠಾನಗೊಳಿಸಿಲ್ಲ. ಶೇ.40ರಷ್ಟು ಸಾಧನೆ ಮಾಡಿದ್ದು ಭ್ರಷ್ಟಾಚಾರದಲ್ಲಿ ಮಾತ್ರ. ಉದಾ: ಕೆ.ಎಂ.ಎಫ್ ಮೂಲಕ ಇತರೇ ಉತ್ಪನ್ನ ಮಾರಲು ಸಾವಿರ ಕೋಟಿ ನೀಡುವ ಭರವಸೆ ಪ್ರಣಾಳಿಕೆಯಲ್ಲಿತ್ತು. ಇಂಥಾ ನೂರು ಉದಾಹರಣೆ ಆ 1ಪ್ರಣಾಳಿಕೆ ಇಟ್ಟುಕೊಂಡರೆ ಕಾಣಿಸುತ್ತೆ.
ಈಗ ಹೊಸದಾಗಿ ಸ್ಪರ್ಧಿಸುವ ಹೊಸ ಪಕ್ಷದ ಹಾಗೆ ಬಿಜೆಪಿ ಪ್ರಣಾಲಿಕೆ ಪ್ರಕಟಿಸಿದೆ. ಬಾಯಿಗೆ ಬಂದ ಸುಳ್ಳುಗಳನ್ನು ಅಸಂಬದ್ಧವಾಗಿ ಪೋಣಿಸಿದ ಪ್ರಣಾಳಿಕೆ ಇದು” ಎಂದು ಟೀಕಿಸಿದ್ದಾರೆ.

”ವಾಕ್ಯ ರಚನೆಗಳೂ ಹೀಗೇ ಇವೆ. ಮಾಡಿದ್ದೇವೆ, ಮಾಡಲಿದ್ದೇವೆ, ಘೋಷಿಸಿದ್ದೇವೆ, ಹೀಗೆ ಗಲಿಬಿಲಿ ಉಂಟು ಮಾಡುವ ವಾಕ್ಯಗಳಿವೆ. ಸಾಧನೆಗಳ ಪಟ್ಟಿ ನೋಡಬೇಕು. ಸತ್ಯದ ತಲೆ ಮೇಲೆ ಹೊಡೆದ ಹಾಗೆ ಕ್ಲೈಮ್ ಮಾಡಿರುವುದು ನೋಡಿದರೆ ಈ ರಾಜ್ಯದ ಮತದಾರರು ಗಾಂಪರು ಅಂತ ಬಿಜೆಪಿ ತಿಳಿದುಕೊಂಡಂತಿದೆ” ಎಂದು ಬರೆದಿದ್ದಾರೆ.

”55 ಲಕ್ಷ ಉದ್ಯೋಗ ಸೃಷ್ಟಿ ಮಾಡಿದ್ದೇವೆ ಎನ್ನುವ ಬಿಜೆಪಿ ಯಾವ ವಲಯದಲ್ಲಿ ಎಷ್ಟು ಅಂತ ಹೇಳಿದರೂ ಸಾಕು! ಕೌಶಲ್ಯ ತರಬೇತಿಯಲ್ಲಿ ಸರ್ಟಿಫಿಕೇಟ್ ನೀಡಿರುವ ಅಂಕಿ-ಅಂಶ ನೀಡಲಾಗಿದೆ. ಆದರೆ ದಾಖಲೆ ನೋಡಿ:
ಮೊದಲ ಹಂತದಲ್ಲಿ 1,12,445 ಯುವಕರಿಗೆ ತರಬೇತಿ ಕೊಟ್ಟರೂ ಉದ್ಯೋಗ ಲಭಿಸಿದ್ದು ಕೇವಲ 20956. 2ನೇ ಹಂತದಲ್ಲಿ 4,32,411 ಮಂದಿಗೆ ತರಬೇತಿ ಕೊಟ್ಟ ದಾಖಲೆ ಇದೆ. ಆದರೆ ಉದ್ಯೋಗ ಲಭಿಸಿದ್ದು ಕೇವಲ 58,960 ಯುವಕರಿಗೆ. 3ನೇ ಹಂತದಲ್ಲಿ 31,120 ಮಂದಿಗೆ ತರಬೇತಿ ನೀಡಿದರೆ, ಉದ್ಯೋಗ ಲಭಿಸಿದ್ದು ಕೇವಲ 1388 ಯುವಕರಿಗೆ. ಇದು ಅಧಿಕೃತ ದಾಖಲೆ” ಎಂದು ಮಾಹಿತಿ ನೀಡಿದ್ದಾರೆ.

”ಆರೋಗ್ಯ ಕ್ಷೇತ್ರದಲ್ಲಿ ಕೇಂದ್ರದ ಅನುದಾನ 500+ ಕೋಟಿಯಲ್ಲಿ ಒಂದು ರೂಪಾಯಿಯೂ ಬಂದಿಲ್ಲ ಎಂದು ಮೊನ್ನೆ ಮೊನ್ನೆ ಬಯಲಾಗಿದೆ” ಎಂದಿದ್ದಾರೆ.

ಕೇಂದ್ರದ ವಿಶೇಷ ಅನುದಾನ ರಾಜ್ಯಕ್ಕೆ ಸೊನ್ನೆ

”ಭದ್ರಾ, ಮೇಕೆದಾಟು, ಕಳಸಾ ಬಂಡೂರಿ ಯೋಜನೆಗಳು ಅಂತರ್‌ರಾಜ್ಯ ಪ್ರಕರಣಗಳಾಗಿರುವ ಕಾರಣ ಅವು ಪ್ರಸ್ತಾವದಿಂದಾಚೆ ಜರುಗಿಯೇ ಇಲ್ಲ. ಇದರ ಬಗ್ಗೆ ಪ್ರಭಾವ ಬೀರಬಹುದಾದ ಮೋದಿ ಬಾಯಿಮುಚ್ಚಿ ಕೂತಿದ್ದಾರೆ” ಎಂದು ಆರೋಪಿಸಿದ್ದಾರೆ.

”ಈಗ ಹೊಸ ಪ್ರಣಾಳಿಕೆ ಬಿಡುಗಡೆ ಮಾಡುವ ಭಂಡ ಧೈರ್ಯ ಬೇರೆ ಈ ಪಕ್ಷಕ್ಕೆ!! 2018ರ ಪ್ರಣಾಳಿಕೆ ಮುಖಕ್ಕೆ ಹಿಡಿದು ಮತದಾರರು ಇದರಲ್ಲಿರುವ ಭರವಸೆ ಕಳೆದ ನಾಲ್ಕು ವರ್ಷ ಯಾಕೆ ಅನುಷ್ಠಾನ ಮಾಡಿಲ್ಲ ಎಂದು ಕೇಳಬೇಕಿದೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...