Homeಕರ್ನಾಟಕ2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. 2018ರ ಪ್ರಣಾಳಿಕೆಯನ್ನೇ ಪೂರೈಸಿಲ್ಲ ಇದೀಗ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಶುರುವಾಗಿದೆ.

ಈ ಬಗ್ಗೆ ಲೇಖಕ ಕೆಪಿ ಸುರೇಶ್ ಅವರು ಪೋಸ್ಟ್ ಮಾಡಿದ್ದು, ”ಈ ಬಿಜೆಪಿಗೆ ಒಂದೋ ಬುದ್ಧಿಗೆಟ್ಟಿದೆ, ಇಲ್ಲಾ ಸಂಪೂರ್ಣ ಮಾನಗೆಟ್ಟಿದೆ! 2018ರಲ್ಲಿ ತಾನೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದೆ ಎಂಬು ಮರೆತೇ ಹೋದಂತೆ ಈ ಪಕ್ಷ ನಟಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಸರಕಾರಕ್ಕೂ ಸರಕಾರ ರಚಿಸುವ ಪಕ್ಷಕ್ಕೂ ಒಂದು ಉತ್ತರದಾಯಿತ್ವ ಇದೆ. ಉದಾ: ಒಂದು ಯೋಜನೆ ಅನುಷ್ಠಾನವಾಗಲು ಮೂರು ವರ್ಷ ಬೇಕಿದ್ದರೆ ಮುಂದಿನ ವರ್ಷದ ಬಜೆಟ್‌ನಲ್ಲಿ ಅದಕ್ಕೆ ನಿಗದಿ ಪಡಿಸಿದ ಅನುದಾನ ನೀಡುವುದು ಕಡ್ಡಾಯ. ಕೈಗೆತ್ತಿಕೊಂಡ/ ಘೋಷಿಸಿದ ಕಾರ್ಯಕ್ರಮ ಪೂರೈಸದೇ ಇನ್ನೊಂದನ್ನು ತೆಗೆದುಕೊಳ್ಳುವುದು ಆರ್ಥಿಕ, ಆಡಳಿತ ನಿರ್ವಹಣೆಯ ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ.

ಪಕ್ಷವೊಂದರ ಪ್ರಣಾಳಿಕೆಯೂ ಅಂಥಾದ್ದೇ?

”ಈ ಭಾಜಪ 2018ರಲ್ಲಿ ಹೇಳಿದ ಶೇ.10ರಷ್ಟನ್ನೂ ಅನುಷ್ಠಾನಗೊಳಿಸಿಲ್ಲ. ಶೇ.40ರಷ್ಟು ಸಾಧನೆ ಮಾಡಿದ್ದು ಭ್ರಷ್ಟಾಚಾರದಲ್ಲಿ ಮಾತ್ರ. ಉದಾ: ಕೆ.ಎಂ.ಎಫ್ ಮೂಲಕ ಇತರೇ ಉತ್ಪನ್ನ ಮಾರಲು ಸಾವಿರ ಕೋಟಿ ನೀಡುವ ಭರವಸೆ ಪ್ರಣಾಳಿಕೆಯಲ್ಲಿತ್ತು. ಇಂಥಾ ನೂರು ಉದಾಹರಣೆ ಆ 1ಪ್ರಣಾಳಿಕೆ ಇಟ್ಟುಕೊಂಡರೆ ಕಾಣಿಸುತ್ತೆ.
ಈಗ ಹೊಸದಾಗಿ ಸ್ಪರ್ಧಿಸುವ ಹೊಸ ಪಕ್ಷದ ಹಾಗೆ ಬಿಜೆಪಿ ಪ್ರಣಾಲಿಕೆ ಪ್ರಕಟಿಸಿದೆ. ಬಾಯಿಗೆ ಬಂದ ಸುಳ್ಳುಗಳನ್ನು ಅಸಂಬದ್ಧವಾಗಿ ಪೋಣಿಸಿದ ಪ್ರಣಾಳಿಕೆ ಇದು” ಎಂದು ಟೀಕಿಸಿದ್ದಾರೆ.

”ವಾಕ್ಯ ರಚನೆಗಳೂ ಹೀಗೇ ಇವೆ. ಮಾಡಿದ್ದೇವೆ, ಮಾಡಲಿದ್ದೇವೆ, ಘೋಷಿಸಿದ್ದೇವೆ, ಹೀಗೆ ಗಲಿಬಿಲಿ ಉಂಟು ಮಾಡುವ ವಾಕ್ಯಗಳಿವೆ. ಸಾಧನೆಗಳ ಪಟ್ಟಿ ನೋಡಬೇಕು. ಸತ್ಯದ ತಲೆ ಮೇಲೆ ಹೊಡೆದ ಹಾಗೆ ಕ್ಲೈಮ್ ಮಾಡಿರುವುದು ನೋಡಿದರೆ ಈ ರಾಜ್ಯದ ಮತದಾರರು ಗಾಂಪರು ಅಂತ ಬಿಜೆಪಿ ತಿಳಿದುಕೊಂಡಂತಿದೆ” ಎಂದು ಬರೆದಿದ್ದಾರೆ.

”55 ಲಕ್ಷ ಉದ್ಯೋಗ ಸೃಷ್ಟಿ ಮಾಡಿದ್ದೇವೆ ಎನ್ನುವ ಬಿಜೆಪಿ ಯಾವ ವಲಯದಲ್ಲಿ ಎಷ್ಟು ಅಂತ ಹೇಳಿದರೂ ಸಾಕು! ಕೌಶಲ್ಯ ತರಬೇತಿಯಲ್ಲಿ ಸರ್ಟಿಫಿಕೇಟ್ ನೀಡಿರುವ ಅಂಕಿ-ಅಂಶ ನೀಡಲಾಗಿದೆ. ಆದರೆ ದಾಖಲೆ ನೋಡಿ:
ಮೊದಲ ಹಂತದಲ್ಲಿ 1,12,445 ಯುವಕರಿಗೆ ತರಬೇತಿ ಕೊಟ್ಟರೂ ಉದ್ಯೋಗ ಲಭಿಸಿದ್ದು ಕೇವಲ 20956. 2ನೇ ಹಂತದಲ್ಲಿ 4,32,411 ಮಂದಿಗೆ ತರಬೇತಿ ಕೊಟ್ಟ ದಾಖಲೆ ಇದೆ. ಆದರೆ ಉದ್ಯೋಗ ಲಭಿಸಿದ್ದು ಕೇವಲ 58,960 ಯುವಕರಿಗೆ. 3ನೇ ಹಂತದಲ್ಲಿ 31,120 ಮಂದಿಗೆ ತರಬೇತಿ ನೀಡಿದರೆ, ಉದ್ಯೋಗ ಲಭಿಸಿದ್ದು ಕೇವಲ 1388 ಯುವಕರಿಗೆ. ಇದು ಅಧಿಕೃತ ದಾಖಲೆ” ಎಂದು ಮಾಹಿತಿ ನೀಡಿದ್ದಾರೆ.

”ಆರೋಗ್ಯ ಕ್ಷೇತ್ರದಲ್ಲಿ ಕೇಂದ್ರದ ಅನುದಾನ 500+ ಕೋಟಿಯಲ್ಲಿ ಒಂದು ರೂಪಾಯಿಯೂ ಬಂದಿಲ್ಲ ಎಂದು ಮೊನ್ನೆ ಮೊನ್ನೆ ಬಯಲಾಗಿದೆ” ಎಂದಿದ್ದಾರೆ.

ಕೇಂದ್ರದ ವಿಶೇಷ ಅನುದಾನ ರಾಜ್ಯಕ್ಕೆ ಸೊನ್ನೆ

”ಭದ್ರಾ, ಮೇಕೆದಾಟು, ಕಳಸಾ ಬಂಡೂರಿ ಯೋಜನೆಗಳು ಅಂತರ್‌ರಾಜ್ಯ ಪ್ರಕರಣಗಳಾಗಿರುವ ಕಾರಣ ಅವು ಪ್ರಸ್ತಾವದಿಂದಾಚೆ ಜರುಗಿಯೇ ಇಲ್ಲ. ಇದರ ಬಗ್ಗೆ ಪ್ರಭಾವ ಬೀರಬಹುದಾದ ಮೋದಿ ಬಾಯಿಮುಚ್ಚಿ ಕೂತಿದ್ದಾರೆ” ಎಂದು ಆರೋಪಿಸಿದ್ದಾರೆ.

”ಈಗ ಹೊಸ ಪ್ರಣಾಳಿಕೆ ಬಿಡುಗಡೆ ಮಾಡುವ ಭಂಡ ಧೈರ್ಯ ಬೇರೆ ಈ ಪಕ್ಷಕ್ಕೆ!! 2018ರ ಪ್ರಣಾಳಿಕೆ ಮುಖಕ್ಕೆ ಹಿಡಿದು ಮತದಾರರು ಇದರಲ್ಲಿರುವ ಭರವಸೆ ಕಳೆದ ನಾಲ್ಕು ವರ್ಷ ಯಾಕೆ ಅನುಷ್ಠಾನ ಮಾಡಿಲ್ಲ ಎಂದು ಕೇಳಬೇಕಿದೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...