Homeಕರ್ನಾಟಕ2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. 2018ರ ಪ್ರಣಾಳಿಕೆಯನ್ನೇ ಪೂರೈಸಿಲ್ಲ ಇದೀಗ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಶುರುವಾಗಿದೆ.

ಈ ಬಗ್ಗೆ ಲೇಖಕ ಕೆಪಿ ಸುರೇಶ್ ಅವರು ಪೋಸ್ಟ್ ಮಾಡಿದ್ದು, ”ಈ ಬಿಜೆಪಿಗೆ ಒಂದೋ ಬುದ್ಧಿಗೆಟ್ಟಿದೆ, ಇಲ್ಲಾ ಸಂಪೂರ್ಣ ಮಾನಗೆಟ್ಟಿದೆ! 2018ರಲ್ಲಿ ತಾನೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದೆ ಎಂಬು ಮರೆತೇ ಹೋದಂತೆ ಈ ಪಕ್ಷ ನಟಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಸರಕಾರಕ್ಕೂ ಸರಕಾರ ರಚಿಸುವ ಪಕ್ಷಕ್ಕೂ ಒಂದು ಉತ್ತರದಾಯಿತ್ವ ಇದೆ. ಉದಾ: ಒಂದು ಯೋಜನೆ ಅನುಷ್ಠಾನವಾಗಲು ಮೂರು ವರ್ಷ ಬೇಕಿದ್ದರೆ ಮುಂದಿನ ವರ್ಷದ ಬಜೆಟ್‌ನಲ್ಲಿ ಅದಕ್ಕೆ ನಿಗದಿ ಪಡಿಸಿದ ಅನುದಾನ ನೀಡುವುದು ಕಡ್ಡಾಯ. ಕೈಗೆತ್ತಿಕೊಂಡ/ ಘೋಷಿಸಿದ ಕಾರ್ಯಕ್ರಮ ಪೂರೈಸದೇ ಇನ್ನೊಂದನ್ನು ತೆಗೆದುಕೊಳ್ಳುವುದು ಆರ್ಥಿಕ, ಆಡಳಿತ ನಿರ್ವಹಣೆಯ ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ.

ಪಕ್ಷವೊಂದರ ಪ್ರಣಾಳಿಕೆಯೂ ಅಂಥಾದ್ದೇ?

”ಈ ಭಾಜಪ 2018ರಲ್ಲಿ ಹೇಳಿದ ಶೇ.10ರಷ್ಟನ್ನೂ ಅನುಷ್ಠಾನಗೊಳಿಸಿಲ್ಲ. ಶೇ.40ರಷ್ಟು ಸಾಧನೆ ಮಾಡಿದ್ದು ಭ್ರಷ್ಟಾಚಾರದಲ್ಲಿ ಮಾತ್ರ. ಉದಾ: ಕೆ.ಎಂ.ಎಫ್ ಮೂಲಕ ಇತರೇ ಉತ್ಪನ್ನ ಮಾರಲು ಸಾವಿರ ಕೋಟಿ ನೀಡುವ ಭರವಸೆ ಪ್ರಣಾಳಿಕೆಯಲ್ಲಿತ್ತು. ಇಂಥಾ ನೂರು ಉದಾಹರಣೆ ಆ 1ಪ್ರಣಾಳಿಕೆ ಇಟ್ಟುಕೊಂಡರೆ ಕಾಣಿಸುತ್ತೆ.
ಈಗ ಹೊಸದಾಗಿ ಸ್ಪರ್ಧಿಸುವ ಹೊಸ ಪಕ್ಷದ ಹಾಗೆ ಬಿಜೆಪಿ ಪ್ರಣಾಲಿಕೆ ಪ್ರಕಟಿಸಿದೆ. ಬಾಯಿಗೆ ಬಂದ ಸುಳ್ಳುಗಳನ್ನು ಅಸಂಬದ್ಧವಾಗಿ ಪೋಣಿಸಿದ ಪ್ರಣಾಳಿಕೆ ಇದು” ಎಂದು ಟೀಕಿಸಿದ್ದಾರೆ.

”ವಾಕ್ಯ ರಚನೆಗಳೂ ಹೀಗೇ ಇವೆ. ಮಾಡಿದ್ದೇವೆ, ಮಾಡಲಿದ್ದೇವೆ, ಘೋಷಿಸಿದ್ದೇವೆ, ಹೀಗೆ ಗಲಿಬಿಲಿ ಉಂಟು ಮಾಡುವ ವಾಕ್ಯಗಳಿವೆ. ಸಾಧನೆಗಳ ಪಟ್ಟಿ ನೋಡಬೇಕು. ಸತ್ಯದ ತಲೆ ಮೇಲೆ ಹೊಡೆದ ಹಾಗೆ ಕ್ಲೈಮ್ ಮಾಡಿರುವುದು ನೋಡಿದರೆ ಈ ರಾಜ್ಯದ ಮತದಾರರು ಗಾಂಪರು ಅಂತ ಬಿಜೆಪಿ ತಿಳಿದುಕೊಂಡಂತಿದೆ” ಎಂದು ಬರೆದಿದ್ದಾರೆ.

”55 ಲಕ್ಷ ಉದ್ಯೋಗ ಸೃಷ್ಟಿ ಮಾಡಿದ್ದೇವೆ ಎನ್ನುವ ಬಿಜೆಪಿ ಯಾವ ವಲಯದಲ್ಲಿ ಎಷ್ಟು ಅಂತ ಹೇಳಿದರೂ ಸಾಕು! ಕೌಶಲ್ಯ ತರಬೇತಿಯಲ್ಲಿ ಸರ್ಟಿಫಿಕೇಟ್ ನೀಡಿರುವ ಅಂಕಿ-ಅಂಶ ನೀಡಲಾಗಿದೆ. ಆದರೆ ದಾಖಲೆ ನೋಡಿ:
ಮೊದಲ ಹಂತದಲ್ಲಿ 1,12,445 ಯುವಕರಿಗೆ ತರಬೇತಿ ಕೊಟ್ಟರೂ ಉದ್ಯೋಗ ಲಭಿಸಿದ್ದು ಕೇವಲ 20956. 2ನೇ ಹಂತದಲ್ಲಿ 4,32,411 ಮಂದಿಗೆ ತರಬೇತಿ ಕೊಟ್ಟ ದಾಖಲೆ ಇದೆ. ಆದರೆ ಉದ್ಯೋಗ ಲಭಿಸಿದ್ದು ಕೇವಲ 58,960 ಯುವಕರಿಗೆ. 3ನೇ ಹಂತದಲ್ಲಿ 31,120 ಮಂದಿಗೆ ತರಬೇತಿ ನೀಡಿದರೆ, ಉದ್ಯೋಗ ಲಭಿಸಿದ್ದು ಕೇವಲ 1388 ಯುವಕರಿಗೆ. ಇದು ಅಧಿಕೃತ ದಾಖಲೆ” ಎಂದು ಮಾಹಿತಿ ನೀಡಿದ್ದಾರೆ.

”ಆರೋಗ್ಯ ಕ್ಷೇತ್ರದಲ್ಲಿ ಕೇಂದ್ರದ ಅನುದಾನ 500+ ಕೋಟಿಯಲ್ಲಿ ಒಂದು ರೂಪಾಯಿಯೂ ಬಂದಿಲ್ಲ ಎಂದು ಮೊನ್ನೆ ಮೊನ್ನೆ ಬಯಲಾಗಿದೆ” ಎಂದಿದ್ದಾರೆ.

ಕೇಂದ್ರದ ವಿಶೇಷ ಅನುದಾನ ರಾಜ್ಯಕ್ಕೆ ಸೊನ್ನೆ

”ಭದ್ರಾ, ಮೇಕೆದಾಟು, ಕಳಸಾ ಬಂಡೂರಿ ಯೋಜನೆಗಳು ಅಂತರ್‌ರಾಜ್ಯ ಪ್ರಕರಣಗಳಾಗಿರುವ ಕಾರಣ ಅವು ಪ್ರಸ್ತಾವದಿಂದಾಚೆ ಜರುಗಿಯೇ ಇಲ್ಲ. ಇದರ ಬಗ್ಗೆ ಪ್ರಭಾವ ಬೀರಬಹುದಾದ ಮೋದಿ ಬಾಯಿಮುಚ್ಚಿ ಕೂತಿದ್ದಾರೆ” ಎಂದು ಆರೋಪಿಸಿದ್ದಾರೆ.

”ಈಗ ಹೊಸ ಪ್ರಣಾಳಿಕೆ ಬಿಡುಗಡೆ ಮಾಡುವ ಭಂಡ ಧೈರ್ಯ ಬೇರೆ ಈ ಪಕ್ಷಕ್ಕೆ!! 2018ರ ಪ್ರಣಾಳಿಕೆ ಮುಖಕ್ಕೆ ಹಿಡಿದು ಮತದಾರರು ಇದರಲ್ಲಿರುವ ಭರವಸೆ ಕಳೆದ ನಾಲ್ಕು ವರ್ಷ ಯಾಕೆ ಅನುಷ್ಠಾನ ಮಾಡಿಲ್ಲ ಎಂದು ಕೇಳಬೇಕಿದೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...