HomeUncategorized'ಕೇಜ್ರಿವಾಲ್‌ಗೆ ಇನ್ಸುಲಿನ್ ಅಗತ್ಯವಿದೆಯೇ ಎಂಬುದನ್ನು ನಿರ್ಧರಿಸಲು ವೈದ್ಯಕೀಯ ತಂಡ ರಚಿಸಿ..'; ಸುಪ್ರೀಂ ಕೋರ್ಟ್‌ ಸೂಚನೆ

‘ಕೇಜ್ರಿವಾಲ್‌ಗೆ ಇನ್ಸುಲಿನ್ ಅಗತ್ಯವಿದೆಯೇ ಎಂಬುದನ್ನು ನಿರ್ಧರಿಸಲು ವೈದ್ಯಕೀಯ ತಂಡ ರಚಿಸಿ..’; ಸುಪ್ರೀಂ ಕೋರ್ಟ್‌ ಸೂಚನೆ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ವೈದ್ಯರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರತಿದಿನ ಸಮಾಲೋಚನೆ ನಡೆಸುವಂತೆ ಮಾಡಿದ ಮನವಿಯನ್ನು ತಿರಸ್ಕರಿಸಿದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು, ಇನ್ಸುಲಿನ್ ಅಗತ್ಯವಿದೆಯೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲು ಏಮ್ಸ್‌ನ ವೈದ್ಯರನ್ನೊಳಗೊಂಡ ವೈದ್ಯಕೀಯ ಮಂಡಳಿಯನ್ನು ರಚಿಸುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ಸೋಮವಾರ ಸೂಚಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿದ ನಂತರ ಮುಖ್ಯಮಂತ್ರಿಯನ್ನು ಏಪ್ರಿಲ್ 1 ರಿಂದ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ತಮ್ಮ ಮಧುಮೇಹದ ಕಾರಣದಿಂದ ಜೈಲಿನೊಳಗೆ ಇನ್ಸುಲಿನ್ ಹೊಂದಲು ಅವಕಾಶ ನೀಡುವಂತೆ ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಕೇಜ್ರಿವಾಲ್ ಅವರು ತಮ್ಮ ಪತ್ನಿ ಸುನಿತಾ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಪ್ರತಿದಿನ 15 ನಿಮಿಷಗಳ ಕಾಲ ಖಾಸಗಿ ವೈದ್ಯರೊಂದಿಗೆ ಆನ್‌ಲೈನ್ ಸಮಾಲೋಚನೆಗೆ ವಿನಂತಿಸಿದ್ದರು.

ಕೇಜ್ರಿವಾಲ್‌ಗೆ ಮನೆಯಲ್ಲಿ ಬೇಯಿಸಿದ ಆಹಾರವನ್ನು ನೀಡಬಹುದು. ಆದರೆ, ಅದು ಏಪ್ರಿಲ್ 1 ರಂದು ಅವರ ವೈದ್ಯರು ನೀಡಿದ ಡಯಟ್ ಚಾರ್ಟ್‌ಗೆ ಕಟ್ಟುನಿಟ್ಟಾಗಿ ಬದ್ಧವಾಗಿರಬೇಕು ಎಂದು ಕೋರ್ಟ್ ಸೋಮವಾರ ಹೇಳಿದೆ. ವೈದ್ಯಕೀಯವಾಗಿ ಸೂಚಿಸಲಾದ ಆಹಾರದಿಂದ ಯಾವುದೇ ಬದಲಾವಣೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಜೈಲಿನ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಈ ಹಿಂದೆ, ಕೇಜ್ರಿವಾಲ್ ಅವರು ಸೇವಿಸುವ ನಿಗದಿತ ಆಹಾರ ಮತ್ತು ಮನೆಯಲ್ಲಿ ಬೇಯಿಸಿದ ಆಹಾರದಲ್ಲಿ ಕೆಲವು ವ್ಯತ್ಯಾಸಗಳನ್ನು ನ್ಯಾಯಾಲಯ ಗಮನಿಸಿತ್ತು.

ಇಡಿ ಮತ್ತು ಜೈಲು ಅಧಿಕಾರಿಗಳ ಪ್ರತಿಕ್ರಿಯೆ ನಂತರ, ಸಿಎಂ ಕೇಜ್ರಿವಾಲ್ ತಿಹಾರ್‌ ಜೈಲಿನಲ್ಲಿ ಇನ್ಸುಲಿನ್ ಅನ್ನು ಎಂದಿಗೂ ವಿನಂತಿಸಲಿಲ್ಲ ಎಂದು ನ್ಯಾಯಾಲಯವು ಗಮನಿಸಿದೆ.

ಅದೇ ಸಮಯದಲ್ಲಿ, ಕೇಜ್ರಿವಾಲ್ ಅವರ ಆಹಾರದ ಭಾಗವಲ್ಲದ ಆಹಾರ ಪದಾರ್ಥಗಳನ್ನು ಅವರಿಗೆ ಕಳುಹಿಸಲು ಅನುಮತಿಸಿದ್ದಕ್ಕಾಗಿ ನ್ಯಾಯಾಲಯವು ತಿಹಾರ್ ಜೈಲು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು. “ಅರ್ಜಿದಾರರ (ಕೇಜ್ರಿವಾಲ್) ಕುಟುಂಬವು ವೈದ್ಯಕೀಯವಾಗಿ ಸೂಚಿಸಲಾದ ಆಹಾರದ ವಿರುದ್ಧ ಅಂದರೆ, ಮಾವು, ಸಿಹಿತಿಂಡಿಗಳು, ಆಲೂ ಪುರಿ ಇತ್ಯಾದಿಗಳನ್ನು ಏಕೆ ಕಳುಹಿಸುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಈ ನ್ಯಾಯಾಲಯಕ್ಕೆ ಸಾಧ್ಯವಾಗುತ್ತಿಲ್ಲ” ಎಂದು ನ್ಯಾಯಾಧೀಶರು ಹೇಳಿದರು.

ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಮತ್ತು ಜಾಮೀನಿಗೆ ಕಾರಣವನ್ನು ಸೃಷ್ಟಿಸಲು ಸಿಎಂ ಉದ್ದೇಶಪೂರ್ವಕವಾಗಿ ಮಾವಿನಹಣ್ಣು ಮತ್ತು ಇತರ ಆಹಾರ ಪದಾರ್ಥಗಳನ್ನು ತಿನ್ನುತ್ತಿದ್ದಾರೆ ಎಂದು ಇಡಿ ಗುರುವಾರ ಆರೋಪಿಸಿದೆ.

ತಿಹಾರ್‌ನಲ್ಲಿ ಕೇಜ್ರಿವಾಲ್ ಅವರ ಆಹಾರದಲ್ಲಿ ಮೊಟ್ಟೆ, ಪೋಹಾ, ನಮ್ಕೀನ್, ಬಾಳೆಹಣ್ಣು, ಉಪ್ಪಿಟ್ಟು, ದೋಸೆ, ರೋಟಿ, ಪೂರಿ ಸಬ್ಜಿ, ಸಲಾಡ್, ರಾಜ್ಮಾ, ಅಕ್ಕಿ, ಚಹಾ, ಮಾವು, ಪಪ್ಪಾಯಿ ಮತ್ತು ಸಿಹಿತಿಂಡಿಗಳು ಸೇರಿವೆ ಎಂದು ಇಡಿ ಹೇಳಿದೆ.

ಕಳೆದ ತಿಂಗಳು ಇಡಿ ಅವರನ್ನು ಬಂಧಿಸಿದ ನಂತರ ಕೇವಲ ಮೂರು ಬಾರಿ ಮಾತ್ರ ಅವರ ಮನೆಯಿಂದ ಮಾವಿನ ಹಣ್ಣುಗಳನ್ನು ಕಳುಹಿಸಲಾಗಿದೆ ಎಂದು ಸಿಎಂ ಶುಕ್ರವಾರ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ತಿಳಿಸಿದ್ದರು. ಇದಲ್ಲದೆ, ಕೇಜ್ರಿವಾಲ್ ಅವರು ಆರು ಬಾರಿ ಸಕ್ಕರೆ ಮುಕ್ತ ಸಿಹಿತಿಂಡಿಗಳನ್ನು ಸೇವಿಸಿದ್ದಾರೆ ಎಂದು ಹೇಳಿದರು.

ನ್ಯಾಯಾಲಯದಲ್ಲಿ ಅವರ ಅರ್ಜಿಯ ವಿಚಾರಣೆ ನಡೆಯುತ್ತಿದ್ದಾಗ, ಜೈಲು ಅಧಿಕಾರಿಗಳ ಪರ ವಕೀಲರು, ಇನ್ಸುಲಿನ್ ತೆಗೆದುಕೊಂಡರೆ ಸಿಎಂ ಅವರ ಸಕ್ಕರೆ ಪ್ರಮಾಣ ತೀವ್ರವಾಗಿ ಇಳಿಯುತ್ತದೆ ಎಂದು ಹೇಳಿದರು. ಹೆಚ್ಚಿನ ದಿನಗಳಲ್ಲಿ ಕೇಜ್ರಿವಾಲ್ ಅವರ ಸಕ್ಕರೆ ಮಟ್ಟವು ಸಾಮಾನ್ಯವಾಗಿದೆ ಎಂದು ಅವರು ಹೇಳಿದರು.

ಇತ್ತೀಚೆಗೆ, ಜೈಲಿನ ಅಧಿಕಾರಿಯೊಬ್ಬರು ಏಮ್ಸ್‌ ಹಿರಿಯ ತಜ್ಞರು ನಡೆಸಿದ 40 ನಿಮಿಷಗಳ ವೀಡಿಯೊ ಸಮಾಲೋಚನೆಯ ಸಮಯದಲ್ಲಿ, “ಇನ್ಸುಲಿನ್ ಸಮಸ್ಯೆಯನ್ನು ಕೇಜ್ರಿವಾಲ್ ಪ್ರಸ್ತಾಪಿಸಲಿಲ್ಲ ಅಥವಾ ವೈದ್ಯರು ಸೂಚಿಸಲಿಲ್ಲ” ಎಂದು ಹೇಳಿದರು.

ಇದನ್ನೂ ಓದಿ; ‘ಪ್ರತಿದಿನ ಇನ್ಸುಲಿನ್ ಕೇಳುತ್ತಿದ್ದೇನೆ..’; ಜೈಲು ಅಧಿಕಾರಿಗಳಿಗೆ ಅರವಿಂದ್ ಕೇಜ್ರಿವಾಲ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...