HomeUncategorized'ಕೇಜ್ರಿವಾಲ್‌ಗೆ ಇನ್ಸುಲಿನ್ ಅಗತ್ಯವಿದೆಯೇ ಎಂಬುದನ್ನು ನಿರ್ಧರಿಸಲು ವೈದ್ಯಕೀಯ ತಂಡ ರಚಿಸಿ..'; ಸುಪ್ರೀಂ ಕೋರ್ಟ್‌ ಸೂಚನೆ

‘ಕೇಜ್ರಿವಾಲ್‌ಗೆ ಇನ್ಸುಲಿನ್ ಅಗತ್ಯವಿದೆಯೇ ಎಂಬುದನ್ನು ನಿರ್ಧರಿಸಲು ವೈದ್ಯಕೀಯ ತಂಡ ರಚಿಸಿ..’; ಸುಪ್ರೀಂ ಕೋರ್ಟ್‌ ಸೂಚನೆ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ವೈದ್ಯರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರತಿದಿನ ಸಮಾಲೋಚನೆ ನಡೆಸುವಂತೆ ಮಾಡಿದ ಮನವಿಯನ್ನು ತಿರಸ್ಕರಿಸಿದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು, ಇನ್ಸುಲಿನ್ ಅಗತ್ಯವಿದೆಯೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲು ಏಮ್ಸ್‌ನ ವೈದ್ಯರನ್ನೊಳಗೊಂಡ ವೈದ್ಯಕೀಯ ಮಂಡಳಿಯನ್ನು ರಚಿಸುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ಸೋಮವಾರ ಸೂಚಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿದ ನಂತರ ಮುಖ್ಯಮಂತ್ರಿಯನ್ನು ಏಪ್ರಿಲ್ 1 ರಿಂದ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ತಮ್ಮ ಮಧುಮೇಹದ ಕಾರಣದಿಂದ ಜೈಲಿನೊಳಗೆ ಇನ್ಸುಲಿನ್ ಹೊಂದಲು ಅವಕಾಶ ನೀಡುವಂತೆ ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಕೇಜ್ರಿವಾಲ್ ಅವರು ತಮ್ಮ ಪತ್ನಿ ಸುನಿತಾ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಪ್ರತಿದಿನ 15 ನಿಮಿಷಗಳ ಕಾಲ ಖಾಸಗಿ ವೈದ್ಯರೊಂದಿಗೆ ಆನ್‌ಲೈನ್ ಸಮಾಲೋಚನೆಗೆ ವಿನಂತಿಸಿದ್ದರು.

ಕೇಜ್ರಿವಾಲ್‌ಗೆ ಮನೆಯಲ್ಲಿ ಬೇಯಿಸಿದ ಆಹಾರವನ್ನು ನೀಡಬಹುದು. ಆದರೆ, ಅದು ಏಪ್ರಿಲ್ 1 ರಂದು ಅವರ ವೈದ್ಯರು ನೀಡಿದ ಡಯಟ್ ಚಾರ್ಟ್‌ಗೆ ಕಟ್ಟುನಿಟ್ಟಾಗಿ ಬದ್ಧವಾಗಿರಬೇಕು ಎಂದು ಕೋರ್ಟ್ ಸೋಮವಾರ ಹೇಳಿದೆ. ವೈದ್ಯಕೀಯವಾಗಿ ಸೂಚಿಸಲಾದ ಆಹಾರದಿಂದ ಯಾವುದೇ ಬದಲಾವಣೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಜೈಲಿನ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಈ ಹಿಂದೆ, ಕೇಜ್ರಿವಾಲ್ ಅವರು ಸೇವಿಸುವ ನಿಗದಿತ ಆಹಾರ ಮತ್ತು ಮನೆಯಲ್ಲಿ ಬೇಯಿಸಿದ ಆಹಾರದಲ್ಲಿ ಕೆಲವು ವ್ಯತ್ಯಾಸಗಳನ್ನು ನ್ಯಾಯಾಲಯ ಗಮನಿಸಿತ್ತು.

ಇಡಿ ಮತ್ತು ಜೈಲು ಅಧಿಕಾರಿಗಳ ಪ್ರತಿಕ್ರಿಯೆ ನಂತರ, ಸಿಎಂ ಕೇಜ್ರಿವಾಲ್ ತಿಹಾರ್‌ ಜೈಲಿನಲ್ಲಿ ಇನ್ಸುಲಿನ್ ಅನ್ನು ಎಂದಿಗೂ ವಿನಂತಿಸಲಿಲ್ಲ ಎಂದು ನ್ಯಾಯಾಲಯವು ಗಮನಿಸಿದೆ.

ಅದೇ ಸಮಯದಲ್ಲಿ, ಕೇಜ್ರಿವಾಲ್ ಅವರ ಆಹಾರದ ಭಾಗವಲ್ಲದ ಆಹಾರ ಪದಾರ್ಥಗಳನ್ನು ಅವರಿಗೆ ಕಳುಹಿಸಲು ಅನುಮತಿಸಿದ್ದಕ್ಕಾಗಿ ನ್ಯಾಯಾಲಯವು ತಿಹಾರ್ ಜೈಲು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು. “ಅರ್ಜಿದಾರರ (ಕೇಜ್ರಿವಾಲ್) ಕುಟುಂಬವು ವೈದ್ಯಕೀಯವಾಗಿ ಸೂಚಿಸಲಾದ ಆಹಾರದ ವಿರುದ್ಧ ಅಂದರೆ, ಮಾವು, ಸಿಹಿತಿಂಡಿಗಳು, ಆಲೂ ಪುರಿ ಇತ್ಯಾದಿಗಳನ್ನು ಏಕೆ ಕಳುಹಿಸುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಈ ನ್ಯಾಯಾಲಯಕ್ಕೆ ಸಾಧ್ಯವಾಗುತ್ತಿಲ್ಲ” ಎಂದು ನ್ಯಾಯಾಧೀಶರು ಹೇಳಿದರು.

ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಮತ್ತು ಜಾಮೀನಿಗೆ ಕಾರಣವನ್ನು ಸೃಷ್ಟಿಸಲು ಸಿಎಂ ಉದ್ದೇಶಪೂರ್ವಕವಾಗಿ ಮಾವಿನಹಣ್ಣು ಮತ್ತು ಇತರ ಆಹಾರ ಪದಾರ್ಥಗಳನ್ನು ತಿನ್ನುತ್ತಿದ್ದಾರೆ ಎಂದು ಇಡಿ ಗುರುವಾರ ಆರೋಪಿಸಿದೆ.

ತಿಹಾರ್‌ನಲ್ಲಿ ಕೇಜ್ರಿವಾಲ್ ಅವರ ಆಹಾರದಲ್ಲಿ ಮೊಟ್ಟೆ, ಪೋಹಾ, ನಮ್ಕೀನ್, ಬಾಳೆಹಣ್ಣು, ಉಪ್ಪಿಟ್ಟು, ದೋಸೆ, ರೋಟಿ, ಪೂರಿ ಸಬ್ಜಿ, ಸಲಾಡ್, ರಾಜ್ಮಾ, ಅಕ್ಕಿ, ಚಹಾ, ಮಾವು, ಪಪ್ಪಾಯಿ ಮತ್ತು ಸಿಹಿತಿಂಡಿಗಳು ಸೇರಿವೆ ಎಂದು ಇಡಿ ಹೇಳಿದೆ.

ಕಳೆದ ತಿಂಗಳು ಇಡಿ ಅವರನ್ನು ಬಂಧಿಸಿದ ನಂತರ ಕೇವಲ ಮೂರು ಬಾರಿ ಮಾತ್ರ ಅವರ ಮನೆಯಿಂದ ಮಾವಿನ ಹಣ್ಣುಗಳನ್ನು ಕಳುಹಿಸಲಾಗಿದೆ ಎಂದು ಸಿಎಂ ಶುಕ್ರವಾರ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ತಿಳಿಸಿದ್ದರು. ಇದಲ್ಲದೆ, ಕೇಜ್ರಿವಾಲ್ ಅವರು ಆರು ಬಾರಿ ಸಕ್ಕರೆ ಮುಕ್ತ ಸಿಹಿತಿಂಡಿಗಳನ್ನು ಸೇವಿಸಿದ್ದಾರೆ ಎಂದು ಹೇಳಿದರು.

ನ್ಯಾಯಾಲಯದಲ್ಲಿ ಅವರ ಅರ್ಜಿಯ ವಿಚಾರಣೆ ನಡೆಯುತ್ತಿದ್ದಾಗ, ಜೈಲು ಅಧಿಕಾರಿಗಳ ಪರ ವಕೀಲರು, ಇನ್ಸುಲಿನ್ ತೆಗೆದುಕೊಂಡರೆ ಸಿಎಂ ಅವರ ಸಕ್ಕರೆ ಪ್ರಮಾಣ ತೀವ್ರವಾಗಿ ಇಳಿಯುತ್ತದೆ ಎಂದು ಹೇಳಿದರು. ಹೆಚ್ಚಿನ ದಿನಗಳಲ್ಲಿ ಕೇಜ್ರಿವಾಲ್ ಅವರ ಸಕ್ಕರೆ ಮಟ್ಟವು ಸಾಮಾನ್ಯವಾಗಿದೆ ಎಂದು ಅವರು ಹೇಳಿದರು.

ಇತ್ತೀಚೆಗೆ, ಜೈಲಿನ ಅಧಿಕಾರಿಯೊಬ್ಬರು ಏಮ್ಸ್‌ ಹಿರಿಯ ತಜ್ಞರು ನಡೆಸಿದ 40 ನಿಮಿಷಗಳ ವೀಡಿಯೊ ಸಮಾಲೋಚನೆಯ ಸಮಯದಲ್ಲಿ, “ಇನ್ಸುಲಿನ್ ಸಮಸ್ಯೆಯನ್ನು ಕೇಜ್ರಿವಾಲ್ ಪ್ರಸ್ತಾಪಿಸಲಿಲ್ಲ ಅಥವಾ ವೈದ್ಯರು ಸೂಚಿಸಲಿಲ್ಲ” ಎಂದು ಹೇಳಿದರು.

ಇದನ್ನೂ ಓದಿ; ‘ಪ್ರತಿದಿನ ಇನ್ಸುಲಿನ್ ಕೇಳುತ್ತಿದ್ದೇನೆ..’; ಜೈಲು ಅಧಿಕಾರಿಗಳಿಗೆ ಅರವಿಂದ್ ಕೇಜ್ರಿವಾಲ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...