HomeUncategorized'ಕೇಜ್ರಿವಾಲ್‌ಗೆ ಇನ್ಸುಲಿನ್ ಅಗತ್ಯವಿದೆಯೇ ಎಂಬುದನ್ನು ನಿರ್ಧರಿಸಲು ವೈದ್ಯಕೀಯ ತಂಡ ರಚಿಸಿ..'; ಸುಪ್ರೀಂ ಕೋರ್ಟ್‌ ಸೂಚನೆ

‘ಕೇಜ್ರಿವಾಲ್‌ಗೆ ಇನ್ಸುಲಿನ್ ಅಗತ್ಯವಿದೆಯೇ ಎಂಬುದನ್ನು ನಿರ್ಧರಿಸಲು ವೈದ್ಯಕೀಯ ತಂಡ ರಚಿಸಿ..’; ಸುಪ್ರೀಂ ಕೋರ್ಟ್‌ ಸೂಚನೆ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ವೈದ್ಯರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರತಿದಿನ ಸಮಾಲೋಚನೆ ನಡೆಸುವಂತೆ ಮಾಡಿದ ಮನವಿಯನ್ನು ತಿರಸ್ಕರಿಸಿದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು, ಇನ್ಸುಲಿನ್ ಅಗತ್ಯವಿದೆಯೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲು ಏಮ್ಸ್‌ನ ವೈದ್ಯರನ್ನೊಳಗೊಂಡ ವೈದ್ಯಕೀಯ ಮಂಡಳಿಯನ್ನು ರಚಿಸುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ಸೋಮವಾರ ಸೂಚಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿದ ನಂತರ ಮುಖ್ಯಮಂತ್ರಿಯನ್ನು ಏಪ್ರಿಲ್ 1 ರಿಂದ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ತಮ್ಮ ಮಧುಮೇಹದ ಕಾರಣದಿಂದ ಜೈಲಿನೊಳಗೆ ಇನ್ಸುಲಿನ್ ಹೊಂದಲು ಅವಕಾಶ ನೀಡುವಂತೆ ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಕೇಜ್ರಿವಾಲ್ ಅವರು ತಮ್ಮ ಪತ್ನಿ ಸುನಿತಾ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಪ್ರತಿದಿನ 15 ನಿಮಿಷಗಳ ಕಾಲ ಖಾಸಗಿ ವೈದ್ಯರೊಂದಿಗೆ ಆನ್‌ಲೈನ್ ಸಮಾಲೋಚನೆಗೆ ವಿನಂತಿಸಿದ್ದರು.

ಕೇಜ್ರಿವಾಲ್‌ಗೆ ಮನೆಯಲ್ಲಿ ಬೇಯಿಸಿದ ಆಹಾರವನ್ನು ನೀಡಬಹುದು. ಆದರೆ, ಅದು ಏಪ್ರಿಲ್ 1 ರಂದು ಅವರ ವೈದ್ಯರು ನೀಡಿದ ಡಯಟ್ ಚಾರ್ಟ್‌ಗೆ ಕಟ್ಟುನಿಟ್ಟಾಗಿ ಬದ್ಧವಾಗಿರಬೇಕು ಎಂದು ಕೋರ್ಟ್ ಸೋಮವಾರ ಹೇಳಿದೆ. ವೈದ್ಯಕೀಯವಾಗಿ ಸೂಚಿಸಲಾದ ಆಹಾರದಿಂದ ಯಾವುದೇ ಬದಲಾವಣೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಜೈಲಿನ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಈ ಹಿಂದೆ, ಕೇಜ್ರಿವಾಲ್ ಅವರು ಸೇವಿಸುವ ನಿಗದಿತ ಆಹಾರ ಮತ್ತು ಮನೆಯಲ್ಲಿ ಬೇಯಿಸಿದ ಆಹಾರದಲ್ಲಿ ಕೆಲವು ವ್ಯತ್ಯಾಸಗಳನ್ನು ನ್ಯಾಯಾಲಯ ಗಮನಿಸಿತ್ತು.

ಇಡಿ ಮತ್ತು ಜೈಲು ಅಧಿಕಾರಿಗಳ ಪ್ರತಿಕ್ರಿಯೆ ನಂತರ, ಸಿಎಂ ಕೇಜ್ರಿವಾಲ್ ತಿಹಾರ್‌ ಜೈಲಿನಲ್ಲಿ ಇನ್ಸುಲಿನ್ ಅನ್ನು ಎಂದಿಗೂ ವಿನಂತಿಸಲಿಲ್ಲ ಎಂದು ನ್ಯಾಯಾಲಯವು ಗಮನಿಸಿದೆ.

ಅದೇ ಸಮಯದಲ್ಲಿ, ಕೇಜ್ರಿವಾಲ್ ಅವರ ಆಹಾರದ ಭಾಗವಲ್ಲದ ಆಹಾರ ಪದಾರ್ಥಗಳನ್ನು ಅವರಿಗೆ ಕಳುಹಿಸಲು ಅನುಮತಿಸಿದ್ದಕ್ಕಾಗಿ ನ್ಯಾಯಾಲಯವು ತಿಹಾರ್ ಜೈಲು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು. “ಅರ್ಜಿದಾರರ (ಕೇಜ್ರಿವಾಲ್) ಕುಟುಂಬವು ವೈದ್ಯಕೀಯವಾಗಿ ಸೂಚಿಸಲಾದ ಆಹಾರದ ವಿರುದ್ಧ ಅಂದರೆ, ಮಾವು, ಸಿಹಿತಿಂಡಿಗಳು, ಆಲೂ ಪುರಿ ಇತ್ಯಾದಿಗಳನ್ನು ಏಕೆ ಕಳುಹಿಸುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಈ ನ್ಯಾಯಾಲಯಕ್ಕೆ ಸಾಧ್ಯವಾಗುತ್ತಿಲ್ಲ” ಎಂದು ನ್ಯಾಯಾಧೀಶರು ಹೇಳಿದರು.

ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಮತ್ತು ಜಾಮೀನಿಗೆ ಕಾರಣವನ್ನು ಸೃಷ್ಟಿಸಲು ಸಿಎಂ ಉದ್ದೇಶಪೂರ್ವಕವಾಗಿ ಮಾವಿನಹಣ್ಣು ಮತ್ತು ಇತರ ಆಹಾರ ಪದಾರ್ಥಗಳನ್ನು ತಿನ್ನುತ್ತಿದ್ದಾರೆ ಎಂದು ಇಡಿ ಗುರುವಾರ ಆರೋಪಿಸಿದೆ.

ತಿಹಾರ್‌ನಲ್ಲಿ ಕೇಜ್ರಿವಾಲ್ ಅವರ ಆಹಾರದಲ್ಲಿ ಮೊಟ್ಟೆ, ಪೋಹಾ, ನಮ್ಕೀನ್, ಬಾಳೆಹಣ್ಣು, ಉಪ್ಪಿಟ್ಟು, ದೋಸೆ, ರೋಟಿ, ಪೂರಿ ಸಬ್ಜಿ, ಸಲಾಡ್, ರಾಜ್ಮಾ, ಅಕ್ಕಿ, ಚಹಾ, ಮಾವು, ಪಪ್ಪಾಯಿ ಮತ್ತು ಸಿಹಿತಿಂಡಿಗಳು ಸೇರಿವೆ ಎಂದು ಇಡಿ ಹೇಳಿದೆ.

ಕಳೆದ ತಿಂಗಳು ಇಡಿ ಅವರನ್ನು ಬಂಧಿಸಿದ ನಂತರ ಕೇವಲ ಮೂರು ಬಾರಿ ಮಾತ್ರ ಅವರ ಮನೆಯಿಂದ ಮಾವಿನ ಹಣ್ಣುಗಳನ್ನು ಕಳುಹಿಸಲಾಗಿದೆ ಎಂದು ಸಿಎಂ ಶುಕ್ರವಾರ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ತಿಳಿಸಿದ್ದರು. ಇದಲ್ಲದೆ, ಕೇಜ್ರಿವಾಲ್ ಅವರು ಆರು ಬಾರಿ ಸಕ್ಕರೆ ಮುಕ್ತ ಸಿಹಿತಿಂಡಿಗಳನ್ನು ಸೇವಿಸಿದ್ದಾರೆ ಎಂದು ಹೇಳಿದರು.

ನ್ಯಾಯಾಲಯದಲ್ಲಿ ಅವರ ಅರ್ಜಿಯ ವಿಚಾರಣೆ ನಡೆಯುತ್ತಿದ್ದಾಗ, ಜೈಲು ಅಧಿಕಾರಿಗಳ ಪರ ವಕೀಲರು, ಇನ್ಸುಲಿನ್ ತೆಗೆದುಕೊಂಡರೆ ಸಿಎಂ ಅವರ ಸಕ್ಕರೆ ಪ್ರಮಾಣ ತೀವ್ರವಾಗಿ ಇಳಿಯುತ್ತದೆ ಎಂದು ಹೇಳಿದರು. ಹೆಚ್ಚಿನ ದಿನಗಳಲ್ಲಿ ಕೇಜ್ರಿವಾಲ್ ಅವರ ಸಕ್ಕರೆ ಮಟ್ಟವು ಸಾಮಾನ್ಯವಾಗಿದೆ ಎಂದು ಅವರು ಹೇಳಿದರು.

ಇತ್ತೀಚೆಗೆ, ಜೈಲಿನ ಅಧಿಕಾರಿಯೊಬ್ಬರು ಏಮ್ಸ್‌ ಹಿರಿಯ ತಜ್ಞರು ನಡೆಸಿದ 40 ನಿಮಿಷಗಳ ವೀಡಿಯೊ ಸಮಾಲೋಚನೆಯ ಸಮಯದಲ್ಲಿ, “ಇನ್ಸುಲಿನ್ ಸಮಸ್ಯೆಯನ್ನು ಕೇಜ್ರಿವಾಲ್ ಪ್ರಸ್ತಾಪಿಸಲಿಲ್ಲ ಅಥವಾ ವೈದ್ಯರು ಸೂಚಿಸಲಿಲ್ಲ” ಎಂದು ಹೇಳಿದರು.

ಇದನ್ನೂ ಓದಿ; ‘ಪ್ರತಿದಿನ ಇನ್ಸುಲಿನ್ ಕೇಳುತ್ತಿದ್ದೇನೆ..’; ಜೈಲು ಅಧಿಕಾರಿಗಳಿಗೆ ಅರವಿಂದ್ ಕೇಜ್ರಿವಾಲ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...