Homeಕರ್ನಾಟಕಕರಾವಳಿ ಕೋಮುಹತ್ಯೆಗಳ ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ್ ರೈ ಆಗ್ರಹ

ಕರಾವಳಿ ಕೋಮುಹತ್ಯೆಗಳ ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ್ ರೈ ಆಗ್ರಹ

- Advertisement -
- Advertisement -

ದಕ್ಷಿಣ ಕನ್ನಡದಲ್ಲಿ ರಾಜಕೀಯ ಪ್ರೇರಿತ ಕೋಮು ಹತ್ಯೆಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಮಾಜಿ ಸಚಿವ ರಮಾನಾಥ್ ರೈ ಆಗ್ರಹಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಿದ ಅವರು, “ದಕ್ಷಿಣ ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಕೊಲೆಗಳಲ್ಲಿ ಶರತ್ ಮಡಿವಾಳ, ಪ್ರವೀಣ್ ನೆಟ್ಟಾರು, ಅಶ್ರಫ್, ಜಲೀಲ್, ಮಸೂದ್ ಅವರಂತಹ ಅಮಾಯಕ ಹಿಂದೂ ಮತ್ತು ಮುಸ್ಲಿಂ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ” ಎಂದಿದ್ದಾರೆ.

“ಈ ಹತ್ಯೆಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು. ಹೊಸದಾಗಿ ರಚನೆಯಾಗಿರುವ ರಾಜ್ಯ ಸರ್ಕಾರಕ್ಕೆ ಶೀಘ್ರವೇ ಮನವಿ ಸಲ್ಲಿಸಲಿದ್ದೇವೆ. ಈ ಹತ್ಯೆಯ ಹಿಂದೆ ಯಾರ ಕೈವಾಡವಿದೆ ಎಂಬುದು ತನಿಖೆಯಿಂದ ಬೆಳಕಿಗೆ ಬರಬೇಕಿದೆ. ಬಿಜೆಪಿ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಭಾಗಿಯಾಗಿರಬಹುದು, ಆದರೆ ಒಬ್ಬ ಕಾಂಗ್ರೆಸ್ ಕಾರ್ಯಕರ್ತರೂ ಆರೋಪಿಯಾಗಿಲ್ಲ. ಜನರು ಸತ್ಯವನ್ನು ತಿಳಿದುಕೊಳ್ಳಲು ಅರ್ಹರು” ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು 24 ಹಿಂದುತ್ವವಾದಿಗಳನ್ನು ಕೊಂದಿದ್ದಾರೆ ಎಂಬ ಬಿಜೆಪಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ಪೂಂಜಾ ವಿರುದ್ಧ ಕಾಂಗ್ರೆಸ್ ಮಾನನಷ್ಟ ಮೊಕದ್ದಮೆ ಹೂಡಲಿದೆ, ಅವರ ವಿರುದ್ಧ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು”  ಎಂದು ಒತ್ತಾಯಿಸಿದ್ದಾರೆ.

ಮೇ 22ರಂದು ನಡೆದ ವಿಜಯೋತ್ಸವ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ, “ಸಿದ್ದರಾಮಯ್ಯನವರು 24 ಹಿಂದೂಗಳನ್ನು ಹತ್ಯೆ ಮಾಡಿದ್ದಾರೆ” ಎಂದಿದ್ದರು. ಅವರ ಹೇಳಿಕೆಯ ವಿಡಿಯೋ ವೈರಲ್ ಆದ ನಂತರ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, “ಪೂಂಜಾ ಮತ್ತು ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ವಿರುದ್ಧದ ಎಫ್‌ಐಆರ್‌ಗಳು ಕಾಂಗ್ರೆಸ್ ದ್ವೇಷದ ರಾಜಕಾರಣಕ್ಕೆ ಉದಾಹರಣೆ. ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ” ಎಂದು ಭವಿಷ್ಯ ನುಡಿದಿದ್ದಾರೆ.

ಎಂಟು ತಿಂಗಳಲ್ಲಿ 71 ಕೋಮುದ್ವೇಷ ಪ್ರಕರಣ

ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ ಕರ್ನಾಟಕ (ಪಿಯುಸಿಎಲ್-ಕ) ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (ಎಐಎಲ್‌ಎಜೆ), ಆಲ್ ಇಂಡಿಯಾ ಪೀಪಲ್ಸ್ ಫೋರಮ್ (ಎಐಪಿಎಫ್) ಮತ್ತು ಗೌರಿ ಲಂಕೇಶ್ ನ್ಯೂಸ್.ಕಾಂ (gaurilankeshnews.com) ಬಿಡುಗಡೆ ಮಾಡಿರುವ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ’ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿ ಘಟನೆಗಳನ್ನು ವಿಶ್ಲೇಷಿಸಿದೆ. ಎಂಟು ತಿಂಗಳಲ್ಲಿ 71 ಕೋಮುದ್ವೇಷ ಪ್ರಕರಣಗಳು ಜಿಲ್ಲೆಯಲ್ಲಿ ಘಟಿಸಿವೆ ಎಂದು ತಿಳಿಸಿದೆ.

ಕೋಮುದ್ವೇಷವನ್ನು ತಡೆಯುವಲ್ಲಿ ಪೊಲೀಸರ ಪಾತ್ರವನ್ನು ಈ ವರದಿ ಉಲ್ಲೇಖಿಸಿದೆ. ಜೊತೆಗೆ ಪೊಲೀಸರ ತಪ್ಪುಗಳನ್ನು ವರದಿ ಉಲ್ಲೇಖಿಸಿದೆ. ಅಂತರ ಧರ್ಮೀಯ ಸಂಬಂಧಗಳಿಗೆ ತೊಂದರೆಯುಂಟುಮಾಡಿದ ಹೆಚ್ಚಿನ ಸಂಖ್ಯೆಯ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಲ್ಲ. ಬದಲಾಗಿ ಅಂತರ ಧರ್ಮೀಯ ಸ್ನೇಹಿತರು ಅಥವಾ ದಂಪತಿಗಳನ್ನೇ ಪೊಲೀಸ್ ಠಾಣೆಗೆ ಕರೆಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಒಂದೆಡೆ ಹಿಂಸಾಚಾರ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೂ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ಸಂತ್ರಸ್ತರನ್ನು ಠಾಣೆಗೆ ಕರೆದೊಯ್ದು ಪ್ರಶ್ನಿಸುವ ಮೂಲಕ ತಪ್ಪಿತಸ್ಥರೆಂದು ಪರಿಗಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅಂತರ ಧರ್ಮೀಯ ಸಂಬಂಧಗಳನ್ನು ಬಲವಂತವಾಗಿ ಪ್ರತ್ಯೇಕಿಸುವ ಪ್ರಕ್ರಿಯೆಯಲ್ಲಿ ಪೊಲೀಸರು ಆರೋಪಿಗಳ ಮಿತ್ರರಾಗಿದ್ದಾರೆ ಎಂದು ವರದಿಯು ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿರಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ಪೊಲೀಸರ ವರ್ತನೆ ಕಾನೂನಿಗೆ ವಿರುದ್ಧವಾಗಿದ್ದು, ತೆಹ್ಸೀನ್ ಪೂನಾವಾಲಾ ವರ್ಸಸ್‌‌ ಯೂನಿಯನ್‌ ಆಫ್‌ ಇಂಡಿಯಾ ಪ್ರಕರಣದಲ್ಲಿ ಸವೋಚ್ಚ ನ್ಯಾಯಾಲಯ ನೀಡಿದ ಆದೇಶಕ್ಕೆ ವಿರುದ್ಧವಾಗಿದೆ. ಈ ಪ್ರಕರಣದಲ್ಲಿ, ‘ಅವ್ಯವಸ್ಥೆ ಮತ್ತು ಅರಾಜಕತೆಯ ಸಮಯದಲ್ಲಿ ರಾಜ್ಯವು ತನ್ನ ನಾಗರಿಕರಿಗೆ ಸಾಂವಿಧಾನಿಕ ಭರವಸೆಗಳನ್ನು ರಕ್ಷಿಸಲು ಮತ್ತು ಭದ್ರಪಡಿಸಲು ಧನಾತ್ಮಕವಾಗಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು’ ಎಂದು ಕೋರ್ಟ್ ಆದೇಶಿಸಿದೆ ಎಂದು ವರದಿ ಉಲ್ಲೇಖಿಸಿದೆ.

ರಾಜ್ಯ ಸರ್ಕಾರಕ್ಕೆ ಈ ವರದಿಯು ಹಲವು ಶಿಫಾರಸ್ಸುಗಳನ್ನು ಮಾಡಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು. ಸರ್ವೋಚ್ಚ ನ್ಯಾಯಾಲಯ ವಿವರಿಸಿರುವ ಪ್ರೀತಿಯ ಹಕ್ಕು ಸೇರಿದಂತೆ ಆಯ್ಕೆ ಮಾಡುವ ಹಕ್ಕನ್ನು ಎತ್ತಿಹಿಡಿಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಲತಾ ಸಿಂಗ್ ವಿರುದ್ಧ ಸ್ಟೇಟ್ ಆಫ್‌ ಯು.ಪಿ. ಮತ್ತು ಇತರರು ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆಯ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ವರದಿ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...