Homeಕರ್ನಾಟಕಕರಾವಳಿ ಕೋಮುಹತ್ಯೆಗಳ ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ್ ರೈ ಆಗ್ರಹ

ಕರಾವಳಿ ಕೋಮುಹತ್ಯೆಗಳ ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ್ ರೈ ಆಗ್ರಹ

- Advertisement -
- Advertisement -

ದಕ್ಷಿಣ ಕನ್ನಡದಲ್ಲಿ ರಾಜಕೀಯ ಪ್ರೇರಿತ ಕೋಮು ಹತ್ಯೆಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಮಾಜಿ ಸಚಿವ ರಮಾನಾಥ್ ರೈ ಆಗ್ರಹಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಿದ ಅವರು, “ದಕ್ಷಿಣ ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಕೊಲೆಗಳಲ್ಲಿ ಶರತ್ ಮಡಿವಾಳ, ಪ್ರವೀಣ್ ನೆಟ್ಟಾರು, ಅಶ್ರಫ್, ಜಲೀಲ್, ಮಸೂದ್ ಅವರಂತಹ ಅಮಾಯಕ ಹಿಂದೂ ಮತ್ತು ಮುಸ್ಲಿಂ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ” ಎಂದಿದ್ದಾರೆ.

“ಈ ಹತ್ಯೆಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು. ಹೊಸದಾಗಿ ರಚನೆಯಾಗಿರುವ ರಾಜ್ಯ ಸರ್ಕಾರಕ್ಕೆ ಶೀಘ್ರವೇ ಮನವಿ ಸಲ್ಲಿಸಲಿದ್ದೇವೆ. ಈ ಹತ್ಯೆಯ ಹಿಂದೆ ಯಾರ ಕೈವಾಡವಿದೆ ಎಂಬುದು ತನಿಖೆಯಿಂದ ಬೆಳಕಿಗೆ ಬರಬೇಕಿದೆ. ಬಿಜೆಪಿ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಭಾಗಿಯಾಗಿರಬಹುದು, ಆದರೆ ಒಬ್ಬ ಕಾಂಗ್ರೆಸ್ ಕಾರ್ಯಕರ್ತರೂ ಆರೋಪಿಯಾಗಿಲ್ಲ. ಜನರು ಸತ್ಯವನ್ನು ತಿಳಿದುಕೊಳ್ಳಲು ಅರ್ಹರು” ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು 24 ಹಿಂದುತ್ವವಾದಿಗಳನ್ನು ಕೊಂದಿದ್ದಾರೆ ಎಂಬ ಬಿಜೆಪಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ಪೂಂಜಾ ವಿರುದ್ಧ ಕಾಂಗ್ರೆಸ್ ಮಾನನಷ್ಟ ಮೊಕದ್ದಮೆ ಹೂಡಲಿದೆ, ಅವರ ವಿರುದ್ಧ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು”  ಎಂದು ಒತ್ತಾಯಿಸಿದ್ದಾರೆ.

ಮೇ 22ರಂದು ನಡೆದ ವಿಜಯೋತ್ಸವ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ, “ಸಿದ್ದರಾಮಯ್ಯನವರು 24 ಹಿಂದೂಗಳನ್ನು ಹತ್ಯೆ ಮಾಡಿದ್ದಾರೆ” ಎಂದಿದ್ದರು. ಅವರ ಹೇಳಿಕೆಯ ವಿಡಿಯೋ ವೈರಲ್ ಆದ ನಂತರ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, “ಪೂಂಜಾ ಮತ್ತು ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ವಿರುದ್ಧದ ಎಫ್‌ಐಆರ್‌ಗಳು ಕಾಂಗ್ರೆಸ್ ದ್ವೇಷದ ರಾಜಕಾರಣಕ್ಕೆ ಉದಾಹರಣೆ. ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ” ಎಂದು ಭವಿಷ್ಯ ನುಡಿದಿದ್ದಾರೆ.

ಎಂಟು ತಿಂಗಳಲ್ಲಿ 71 ಕೋಮುದ್ವೇಷ ಪ್ರಕರಣ

ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ ಕರ್ನಾಟಕ (ಪಿಯುಸಿಎಲ್-ಕ) ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (ಎಐಎಲ್‌ಎಜೆ), ಆಲ್ ಇಂಡಿಯಾ ಪೀಪಲ್ಸ್ ಫೋರಮ್ (ಎಐಪಿಎಫ್) ಮತ್ತು ಗೌರಿ ಲಂಕೇಶ್ ನ್ಯೂಸ್.ಕಾಂ (gaurilankeshnews.com) ಬಿಡುಗಡೆ ಮಾಡಿರುವ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ’ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿ ಘಟನೆಗಳನ್ನು ವಿಶ್ಲೇಷಿಸಿದೆ. ಎಂಟು ತಿಂಗಳಲ್ಲಿ 71 ಕೋಮುದ್ವೇಷ ಪ್ರಕರಣಗಳು ಜಿಲ್ಲೆಯಲ್ಲಿ ಘಟಿಸಿವೆ ಎಂದು ತಿಳಿಸಿದೆ.

ಕೋಮುದ್ವೇಷವನ್ನು ತಡೆಯುವಲ್ಲಿ ಪೊಲೀಸರ ಪಾತ್ರವನ್ನು ಈ ವರದಿ ಉಲ್ಲೇಖಿಸಿದೆ. ಜೊತೆಗೆ ಪೊಲೀಸರ ತಪ್ಪುಗಳನ್ನು ವರದಿ ಉಲ್ಲೇಖಿಸಿದೆ. ಅಂತರ ಧರ್ಮೀಯ ಸಂಬಂಧಗಳಿಗೆ ತೊಂದರೆಯುಂಟುಮಾಡಿದ ಹೆಚ್ಚಿನ ಸಂಖ್ಯೆಯ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಲ್ಲ. ಬದಲಾಗಿ ಅಂತರ ಧರ್ಮೀಯ ಸ್ನೇಹಿತರು ಅಥವಾ ದಂಪತಿಗಳನ್ನೇ ಪೊಲೀಸ್ ಠಾಣೆಗೆ ಕರೆಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಒಂದೆಡೆ ಹಿಂಸಾಚಾರ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೂ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ಸಂತ್ರಸ್ತರನ್ನು ಠಾಣೆಗೆ ಕರೆದೊಯ್ದು ಪ್ರಶ್ನಿಸುವ ಮೂಲಕ ತಪ್ಪಿತಸ್ಥರೆಂದು ಪರಿಗಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅಂತರ ಧರ್ಮೀಯ ಸಂಬಂಧಗಳನ್ನು ಬಲವಂತವಾಗಿ ಪ್ರತ್ಯೇಕಿಸುವ ಪ್ರಕ್ರಿಯೆಯಲ್ಲಿ ಪೊಲೀಸರು ಆರೋಪಿಗಳ ಮಿತ್ರರಾಗಿದ್ದಾರೆ ಎಂದು ವರದಿಯು ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿರಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ಪೊಲೀಸರ ವರ್ತನೆ ಕಾನೂನಿಗೆ ವಿರುದ್ಧವಾಗಿದ್ದು, ತೆಹ್ಸೀನ್ ಪೂನಾವಾಲಾ ವರ್ಸಸ್‌‌ ಯೂನಿಯನ್‌ ಆಫ್‌ ಇಂಡಿಯಾ ಪ್ರಕರಣದಲ್ಲಿ ಸವೋಚ್ಚ ನ್ಯಾಯಾಲಯ ನೀಡಿದ ಆದೇಶಕ್ಕೆ ವಿರುದ್ಧವಾಗಿದೆ. ಈ ಪ್ರಕರಣದಲ್ಲಿ, ‘ಅವ್ಯವಸ್ಥೆ ಮತ್ತು ಅರಾಜಕತೆಯ ಸಮಯದಲ್ಲಿ ರಾಜ್ಯವು ತನ್ನ ನಾಗರಿಕರಿಗೆ ಸಾಂವಿಧಾನಿಕ ಭರವಸೆಗಳನ್ನು ರಕ್ಷಿಸಲು ಮತ್ತು ಭದ್ರಪಡಿಸಲು ಧನಾತ್ಮಕವಾಗಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು’ ಎಂದು ಕೋರ್ಟ್ ಆದೇಶಿಸಿದೆ ಎಂದು ವರದಿ ಉಲ್ಲೇಖಿಸಿದೆ.

ರಾಜ್ಯ ಸರ್ಕಾರಕ್ಕೆ ಈ ವರದಿಯು ಹಲವು ಶಿಫಾರಸ್ಸುಗಳನ್ನು ಮಾಡಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು. ಸರ್ವೋಚ್ಚ ನ್ಯಾಯಾಲಯ ವಿವರಿಸಿರುವ ಪ್ರೀತಿಯ ಹಕ್ಕು ಸೇರಿದಂತೆ ಆಯ್ಕೆ ಮಾಡುವ ಹಕ್ಕನ್ನು ಎತ್ತಿಹಿಡಿಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಲತಾ ಸಿಂಗ್ ವಿರುದ್ಧ ಸ್ಟೇಟ್ ಆಫ್‌ ಯು.ಪಿ. ಮತ್ತು ಇತರರು ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆಯ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ವರದಿ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...