Homeಕರ್ನಾಟಕಮುರುಘಾ ಶರಣರ ತನಿಖೆಗೆ ಎಸ್‌ಐಟಿ ರಚಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ಮುರುಘಾ ಶರಣರ ತನಿಖೆಗೆ ಎಸ್‌ಐಟಿ ರಚಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ದಲಿತ ನಾಯಕರಾದ ಗುರುಪ್ರಸಾದ್ ಕೆರೆಗೋಡು, ಮಾವಳ್ಳಿ ಶಂಕರ್‌, ಬೆಟ್ಟಯ್ಯ ಕೋಟೆ, ಶಂಭುಲಿಂಗ ಸ್ವಾಮಿ ಮೊದಲಾದವರು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿಗಳು, ಪ್ರಾಮಾಣಿಕ ತನಿಖಾಧಿಕಾರಿಗಳು, ಸಾಮಾಜಿಕ-ಸಂಸ್ಥೆಗಳನ್ನೊಳಗೊಂಡ ‘ಎಸ್‌ಐಟಿ’ ಕೂಡಲೇ ರಚಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟ ಆಗ್ರಹಿಸಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಈಗಾಗಲೇ ಆರೋಪಿ ಸ್ವಾಮೀಜಿಯ ವಿರುದ್ಧ ಎಫ್‌ಐಆರ್ ದಾಖಲಾಗಿ ನಾಲ್ಕು ದಿನ ಕಳೆದಿವೆ. ಆದರೆ, ಚಿತ್ರದುರ್ಗದಲ್ಲಿಯೇ ಇರುವ ಆರೋಪಿ ಸ್ವಾಮೀಜಿಯನ್ನು ಬಂಧಿಸಲು ವಿಳಂಬ ಮಾಡುತ್ತಾ ಸಾಕ್ಷ್ಯಧಾರಗಳ ನಾಶಕ್ಕೆ ಅವಕಾಶ ಮಾಡಿಕೊಡುತ್ತಿವೆ. ಮೊದಲು ಆರೋಪಿ ಮುರುಘ ಶರಣ ಶಿವಮೂರ್ತಿ ಸ್ವಾಮೀಜಿಯನ್ನು ಬಂಧಿಸಿ ಎಂದು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗಿ ನಾಲ್ಕು ದಿನ ಕಳೆದರೂ, ಆರೋಪಿಯನ್ನು ಬಂಧಿಸಿಲ್ಲ. ಗೃಹ ಸಚಿವರು ಮಾತನಾಡುತ್ತಾ, ಸ್ವಾಮೀಜಿ ಸತ್‌ಚಾರಿತ್ರ್ಯ ಹೊಂದಿದ್ದಾರೆ ಅನ್ನುವ ಮೂಲಕ ಪ್ರಕರಣ ದಿಕ್ಕು ತಪ್ಪಿಸಲು ಹೊರಟಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಈಗಾಗಲೇ ಆರೋಪಿ ಸ್ವಾಮೀಜಿಗೆ ಕ್ಲಿನ್ ಚೀಟ್ ಕೊಟ್ಟಿದ್ದಾರೆ. ಕಾನೂನಿನ ಮುಂದೆ ಎಲ್ಲ ಸಮಾನರು. ಮುಖ್ಯಮಂತ್ರಿಯಾದಿಯಾಗಿ ಅನೇಕರು ಆರೋಪಿಯ ರಕ್ಷಣೆಗೆ ನಿಂತಿರುವುದರಿಂದ ಆತಂಕ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರಕರಣ ದಾಖಲಾಗುತ್ತಿದ್ದಂತೆ ಮುರುಘಾ ಸ್ವಾಮೀಜಿ ಸಂಧಾನಕ್ಕೂ ಸಿದ್ಧ ಸಮರಕ್ಕೂ ಎಂದಿದ್ದಾರೆ. ದೂರು ನೀಡಿರುವ ಅಪ್ರಾಪ್ತರು ದಲಿತ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಬಾಲಕಿಯರಾಗಿದ್ದು, ಇವರು ಯಾರ ಬಳಿ ಸಂಧಾನ ಮಾಡುತ್ತಾರೆ. ಯಾರ ವಿರುದ್ಧ ಯುದ್ಧ ಮಾಡ್ತಾರೆ ಎಂದು ಪ್ರಶ್ನಿಸಿದರು.

ಅಪ್ರಾಪ್ತರಿಂದ ತನಿಖೆ ನಡೆಸುವಾಗ ಅನುಸರಿಬೇಕಾದ ವಿಧಿ ವಿಧಾನಗಳನ್ನು ಚಿತ್ರದುರ್ಗದ ಪೊಲೀಸರು ಅನುಸರಿಸುತ್ತಿಲ್ಲ. ಸ್ಥಳ ಮಹಜರು ಮಾಡಲು ಬಾಲಕಿಯರನ್ನು ಮಠದ ಆಡಳಿತ ಮಂಡಳಿಯ ಎದುರಿನಲ್ಲಿ ಮಠಕ್ಕೆ ಕರೆದುಕೊಂಡು ಹೋಗಿದ್ದಾರೆ. ಇಂಥ ಸಂದರ್ಭದಲ್ಲಿ ಬಾಲಕಿಯರು ಭಯ-ಭೀತಿಗೊಂಡಿದ್ದಾರೆ. ಬಾಲಕಿಯರಿಗೆ ಭಯ ಮುಕ್ತವಾಗಿ ತನಿಖೆ ನಡೆಸಿಕೊಂಡಿಲ್ಲ. ಹೀಗಾಗಿ ಪೊಲೀಸರು ನಡೆದುಕೊಂಡ ರೀತಿಯಲ್ಲಿ ಅನುಮಾನವಿದೆ ಎಂದರು.

ಪೋಕ್ಸೋ ಕಾಯ್ದೆ ಪ್ರಬಲವಾಗಿದೆ. ಆದರೆ, ಸ್ವಾಮೀಜಿ ಪ್ರಕರಣದಲ್ಲಿ ಕಾಯ್ದೆಯನ್ನು ಸರಿಯಾಗಿ ಅನುಸರಿಸುತ್ತಿಲ್ಲ. ಹೀಗಾಗಿ ನ್ಯಾಯ ದೊರೆಯುವ ವಿಶ್ವಾಸವೇ ಕಳೆದು ಹೋಗಿದೆ. ಚಿತ್ರದುರ್ಗ ಜಿಲ್ಲಾಡಳಿತ ಮತ್ತು ತನಿಖಾಧಿಕಾರಿಗಳು ಅನುಸರಿಸುತ್ತಿರುವ ಧೋರಣೆ ಪ್ರಕರಣದಲ್ಲಿ ಎದ್ದು ಕಾಣುತ್ತಿದ್ದು, ಅಲ್ಲಿನ ಜಿಲ್ಲಾಡಳಿತ ಬಗ್ಗೆ ನ್ಯಾಯ ಸಿಗುವ ವಿಶ್ವಾಸ ಕಾಣುತ್ತಿಲ್ಲ. ಈಗಲಾದರೂ ಸರ್ಕಾರ ಕೂಡಲೇ ಆರೋಪಿಯನ್ನು ಬಂಧಿಸಿ ಎಸ್ ಐಟಿ ತನಿಖಾ ತಂಡ ರಚನೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

‘ಒಡನಾಡಿಗೆ ಮಕ್ಕಳನ್ನು ಕರೆತನ್ನಿ’

ಚಿತ್ರದುರ್ಗಾದಲ್ಲಿರುವ ಮಕ್ಕಳನ್ನು ಸುರಕ್ಷಿತ ದೃಷ್ಟಿಯಿಂದ ಬೇರೆ ಜಿಲ್ಲೆಗೆ ಸ್ಥಳಾಂತರಿಸಬೇಕು. ಹೀಗಾಗಿ ಮೈಸೂರಿಗೆ ಕರೆ ತಂದು ಒಡನಾಡಿ ಸಂಸ್ಥೆಯಲ್ಲಿ ಮಕ್ಕಳನ್ನು ಇರಿಸಬೇಕು. ಮಕ್ಕಳಿಗೆ ದಲಿತ ಸಂಘರ್ಷ ಸಮಿತಿ ಕೂಡ ಬೆಂಬಲವಾಗಿ ನಿಲ್ಲುವುದು. ಈ ಪ್ರಕರಣದ ಸಂಬಂಧ ಎಲ್ಲ ಪಕ್ಷಗಳು ಜನಪ್ರತಿನಿಧಿಗಳು ಓಟು ರಾಜಕಾರಣ ಬಿಟ್ಟು ಮಾತನಾಡಬೇಕು. ಆ ಮೂಲಕ ನ್ಯಾಯದ ಪರವಾಗಿ ನಿಂತು ತಮ್ಮ ಬದ್ಧತೆ ಮೆರೆಯಬೇಕು ಎಂದು ಗುರುಪ್ರಸಾದ್ ಕೆರೆಗೋಡು ತಿಳಿಸಿದರು.

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಸರ್ಕಾರ ಸ್ವಾಮೀಜಿಯ ರಕ್ಷಣೆಗೆ ನಿಂತಿರುವ ಅನುಮಾನ ಕಾಡುತ್ತಿದೆ. ಗೃಹ ಸಚಿವ ಅರಗಜ್ಞಾನೇಂದ್ರ ರಾಜೀನಾಮೆ ಕೊಡಬೇಕು. ಅವರು ಇಂತಹ ಮೂರ್ನಾಲ್ಕು ಪ್ರಕರಣಗಳಲ್ಲಿ ತಮ್ಮ ಹೇಳಿಕೆಗಳ ಮೂಲಕ ತನಿಖೆ ದಿಕ್ಕು ತಪ್ಪಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಈ ಪ್ರಕರಣದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಈ ಇಬ್ಬರು ಅಪ್ರಾಪ್ತ ಬಾಲಕಿಯರು ಷಡ್ಯಂತ್ರ ರೂಪಿಸಲು ಸಾಧ್ಯವೇ? ಮಕ್ಕಳಿಗೆ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿದ್ದಾರೆ. ಆದರೆ, ಸ್ವಾಮೀಜಿಗೆ ವೈದ್ಯಕೀಯ ಪರೀಕ್ಷೆ ನಡೆಯದೆ ಇರುವುದು ಪ್ರಕರಣವನ್ನು ದಿಕ್ಕು ತಪ್ಪಿಸುವ ಸೂಚನೆಯಾಗಿದೆ. ಈ ಪ್ರಕರಣವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದರೆ ತೀವ್ರ ಚಳವಳಿ ಎದುರಿಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯರಿಗೆ ನ್ಯಾಯ ದೊರೆಕಿಸುವ ನಿಟ್ಟಿನಲ್ಲಿ ಪ್ರಗತಿಪರ, ರೈತ ಹಾಗೂ ದಲಿತ ಮತ್ತು ವಿವಿಧ ಸಮುದಾಯಗಳ ಸಂಘಟನೆಗಳು ಹೋರಾಟ ರೂಪಿಸುವ ನಿಟ್ಟಿನಲ್ಲಿ ಆ.31ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ದಸಂದ ಮೈಸೂರು ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಮಾತನಾಡಿ, “ಚಿತ್ರದುರ್ಗದ ಮುರುಘಾ ಮಠದ ಮೇಲೆ ನಮಗಿದ್ದ ಆಶಾ ಭಾವನೆಗೆ ಅಘಾತ ತಂದಿದೆ. ಕೂಡಲೇ ಆರೋಪಿಯಾಗಿರುವ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯನ್ನು ಮೊದಲು ಜೈಲಿಗೆ ಕಳುಹಿಸಬೇಕು. ಇಲ್ಲವಾದರೆ ಗ್ರಾಮೀಣ ಪ್ರದೇಶಗಳಿಂದಲೇ ಹೋರಾಟ ನಡೆಸಲಾಗುವುದು. ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಮೊದಲು ಆರೋಪಿ ಸ್ವಾಮೀಜಿಯನ್ನು ಬಂಧಿಸಬೇಕು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸ್‌. ಐ.ಟಿ. ರಚನೆಗಾಗಿ ಸರ್ಕಾರವನ್ನು ನಂಬಿ ಕೂರಬಾರದು. ನ್ಯಾಯಾಂಗದ ಮೊರೆ ಹೋಗಬೇಕು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...