Homeಕರ್ನಾಟಕಮುರುಘಾ ಶರಣರ ತನಿಖೆಗೆ ಎಸ್‌ಐಟಿ ರಚಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ಮುರುಘಾ ಶರಣರ ತನಿಖೆಗೆ ಎಸ್‌ಐಟಿ ರಚಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ದಲಿತ ನಾಯಕರಾದ ಗುರುಪ್ರಸಾದ್ ಕೆರೆಗೋಡು, ಮಾವಳ್ಳಿ ಶಂಕರ್‌, ಬೆಟ್ಟಯ್ಯ ಕೋಟೆ, ಶಂಭುಲಿಂಗ ಸ್ವಾಮಿ ಮೊದಲಾದವರು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿಗಳು, ಪ್ರಾಮಾಣಿಕ ತನಿಖಾಧಿಕಾರಿಗಳು, ಸಾಮಾಜಿಕ-ಸಂಸ್ಥೆಗಳನ್ನೊಳಗೊಂಡ ‘ಎಸ್‌ಐಟಿ’ ಕೂಡಲೇ ರಚಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟ ಆಗ್ರಹಿಸಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಈಗಾಗಲೇ ಆರೋಪಿ ಸ್ವಾಮೀಜಿಯ ವಿರುದ್ಧ ಎಫ್‌ಐಆರ್ ದಾಖಲಾಗಿ ನಾಲ್ಕು ದಿನ ಕಳೆದಿವೆ. ಆದರೆ, ಚಿತ್ರದುರ್ಗದಲ್ಲಿಯೇ ಇರುವ ಆರೋಪಿ ಸ್ವಾಮೀಜಿಯನ್ನು ಬಂಧಿಸಲು ವಿಳಂಬ ಮಾಡುತ್ತಾ ಸಾಕ್ಷ್ಯಧಾರಗಳ ನಾಶಕ್ಕೆ ಅವಕಾಶ ಮಾಡಿಕೊಡುತ್ತಿವೆ. ಮೊದಲು ಆರೋಪಿ ಮುರುಘ ಶರಣ ಶಿವಮೂರ್ತಿ ಸ್ವಾಮೀಜಿಯನ್ನು ಬಂಧಿಸಿ ಎಂದು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗಿ ನಾಲ್ಕು ದಿನ ಕಳೆದರೂ, ಆರೋಪಿಯನ್ನು ಬಂಧಿಸಿಲ್ಲ. ಗೃಹ ಸಚಿವರು ಮಾತನಾಡುತ್ತಾ, ಸ್ವಾಮೀಜಿ ಸತ್‌ಚಾರಿತ್ರ್ಯ ಹೊಂದಿದ್ದಾರೆ ಅನ್ನುವ ಮೂಲಕ ಪ್ರಕರಣ ದಿಕ್ಕು ತಪ್ಪಿಸಲು ಹೊರಟಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಈಗಾಗಲೇ ಆರೋಪಿ ಸ್ವಾಮೀಜಿಗೆ ಕ್ಲಿನ್ ಚೀಟ್ ಕೊಟ್ಟಿದ್ದಾರೆ. ಕಾನೂನಿನ ಮುಂದೆ ಎಲ್ಲ ಸಮಾನರು. ಮುಖ್ಯಮಂತ್ರಿಯಾದಿಯಾಗಿ ಅನೇಕರು ಆರೋಪಿಯ ರಕ್ಷಣೆಗೆ ನಿಂತಿರುವುದರಿಂದ ಆತಂಕ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರಕರಣ ದಾಖಲಾಗುತ್ತಿದ್ದಂತೆ ಮುರುಘಾ ಸ್ವಾಮೀಜಿ ಸಂಧಾನಕ್ಕೂ ಸಿದ್ಧ ಸಮರಕ್ಕೂ ಎಂದಿದ್ದಾರೆ. ದೂರು ನೀಡಿರುವ ಅಪ್ರಾಪ್ತರು ದಲಿತ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಬಾಲಕಿಯರಾಗಿದ್ದು, ಇವರು ಯಾರ ಬಳಿ ಸಂಧಾನ ಮಾಡುತ್ತಾರೆ. ಯಾರ ವಿರುದ್ಧ ಯುದ್ಧ ಮಾಡ್ತಾರೆ ಎಂದು ಪ್ರಶ್ನಿಸಿದರು.

ಅಪ್ರಾಪ್ತರಿಂದ ತನಿಖೆ ನಡೆಸುವಾಗ ಅನುಸರಿಬೇಕಾದ ವಿಧಿ ವಿಧಾನಗಳನ್ನು ಚಿತ್ರದುರ್ಗದ ಪೊಲೀಸರು ಅನುಸರಿಸುತ್ತಿಲ್ಲ. ಸ್ಥಳ ಮಹಜರು ಮಾಡಲು ಬಾಲಕಿಯರನ್ನು ಮಠದ ಆಡಳಿತ ಮಂಡಳಿಯ ಎದುರಿನಲ್ಲಿ ಮಠಕ್ಕೆ ಕರೆದುಕೊಂಡು ಹೋಗಿದ್ದಾರೆ. ಇಂಥ ಸಂದರ್ಭದಲ್ಲಿ ಬಾಲಕಿಯರು ಭಯ-ಭೀತಿಗೊಂಡಿದ್ದಾರೆ. ಬಾಲಕಿಯರಿಗೆ ಭಯ ಮುಕ್ತವಾಗಿ ತನಿಖೆ ನಡೆಸಿಕೊಂಡಿಲ್ಲ. ಹೀಗಾಗಿ ಪೊಲೀಸರು ನಡೆದುಕೊಂಡ ರೀತಿಯಲ್ಲಿ ಅನುಮಾನವಿದೆ ಎಂದರು.

ಪೋಕ್ಸೋ ಕಾಯ್ದೆ ಪ್ರಬಲವಾಗಿದೆ. ಆದರೆ, ಸ್ವಾಮೀಜಿ ಪ್ರಕರಣದಲ್ಲಿ ಕಾಯ್ದೆಯನ್ನು ಸರಿಯಾಗಿ ಅನುಸರಿಸುತ್ತಿಲ್ಲ. ಹೀಗಾಗಿ ನ್ಯಾಯ ದೊರೆಯುವ ವಿಶ್ವಾಸವೇ ಕಳೆದು ಹೋಗಿದೆ. ಚಿತ್ರದುರ್ಗ ಜಿಲ್ಲಾಡಳಿತ ಮತ್ತು ತನಿಖಾಧಿಕಾರಿಗಳು ಅನುಸರಿಸುತ್ತಿರುವ ಧೋರಣೆ ಪ್ರಕರಣದಲ್ಲಿ ಎದ್ದು ಕಾಣುತ್ತಿದ್ದು, ಅಲ್ಲಿನ ಜಿಲ್ಲಾಡಳಿತ ಬಗ್ಗೆ ನ್ಯಾಯ ಸಿಗುವ ವಿಶ್ವಾಸ ಕಾಣುತ್ತಿಲ್ಲ. ಈಗಲಾದರೂ ಸರ್ಕಾರ ಕೂಡಲೇ ಆರೋಪಿಯನ್ನು ಬಂಧಿಸಿ ಎಸ್ ಐಟಿ ತನಿಖಾ ತಂಡ ರಚನೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

‘ಒಡನಾಡಿಗೆ ಮಕ್ಕಳನ್ನು ಕರೆತನ್ನಿ’

ಚಿತ್ರದುರ್ಗಾದಲ್ಲಿರುವ ಮಕ್ಕಳನ್ನು ಸುರಕ್ಷಿತ ದೃಷ್ಟಿಯಿಂದ ಬೇರೆ ಜಿಲ್ಲೆಗೆ ಸ್ಥಳಾಂತರಿಸಬೇಕು. ಹೀಗಾಗಿ ಮೈಸೂರಿಗೆ ಕರೆ ತಂದು ಒಡನಾಡಿ ಸಂಸ್ಥೆಯಲ್ಲಿ ಮಕ್ಕಳನ್ನು ಇರಿಸಬೇಕು. ಮಕ್ಕಳಿಗೆ ದಲಿತ ಸಂಘರ್ಷ ಸಮಿತಿ ಕೂಡ ಬೆಂಬಲವಾಗಿ ನಿಲ್ಲುವುದು. ಈ ಪ್ರಕರಣದ ಸಂಬಂಧ ಎಲ್ಲ ಪಕ್ಷಗಳು ಜನಪ್ರತಿನಿಧಿಗಳು ಓಟು ರಾಜಕಾರಣ ಬಿಟ್ಟು ಮಾತನಾಡಬೇಕು. ಆ ಮೂಲಕ ನ್ಯಾಯದ ಪರವಾಗಿ ನಿಂತು ತಮ್ಮ ಬದ್ಧತೆ ಮೆರೆಯಬೇಕು ಎಂದು ಗುರುಪ್ರಸಾದ್ ಕೆರೆಗೋಡು ತಿಳಿಸಿದರು.

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಸರ್ಕಾರ ಸ್ವಾಮೀಜಿಯ ರಕ್ಷಣೆಗೆ ನಿಂತಿರುವ ಅನುಮಾನ ಕಾಡುತ್ತಿದೆ. ಗೃಹ ಸಚಿವ ಅರಗಜ್ಞಾನೇಂದ್ರ ರಾಜೀನಾಮೆ ಕೊಡಬೇಕು. ಅವರು ಇಂತಹ ಮೂರ್ನಾಲ್ಕು ಪ್ರಕರಣಗಳಲ್ಲಿ ತಮ್ಮ ಹೇಳಿಕೆಗಳ ಮೂಲಕ ತನಿಖೆ ದಿಕ್ಕು ತಪ್ಪಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಈ ಪ್ರಕರಣದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಈ ಇಬ್ಬರು ಅಪ್ರಾಪ್ತ ಬಾಲಕಿಯರು ಷಡ್ಯಂತ್ರ ರೂಪಿಸಲು ಸಾಧ್ಯವೇ? ಮಕ್ಕಳಿಗೆ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿದ್ದಾರೆ. ಆದರೆ, ಸ್ವಾಮೀಜಿಗೆ ವೈದ್ಯಕೀಯ ಪರೀಕ್ಷೆ ನಡೆಯದೆ ಇರುವುದು ಪ್ರಕರಣವನ್ನು ದಿಕ್ಕು ತಪ್ಪಿಸುವ ಸೂಚನೆಯಾಗಿದೆ. ಈ ಪ್ರಕರಣವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದರೆ ತೀವ್ರ ಚಳವಳಿ ಎದುರಿಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯರಿಗೆ ನ್ಯಾಯ ದೊರೆಕಿಸುವ ನಿಟ್ಟಿನಲ್ಲಿ ಪ್ರಗತಿಪರ, ರೈತ ಹಾಗೂ ದಲಿತ ಮತ್ತು ವಿವಿಧ ಸಮುದಾಯಗಳ ಸಂಘಟನೆಗಳು ಹೋರಾಟ ರೂಪಿಸುವ ನಿಟ್ಟಿನಲ್ಲಿ ಆ.31ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ದಸಂದ ಮೈಸೂರು ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಮಾತನಾಡಿ, “ಚಿತ್ರದುರ್ಗದ ಮುರುಘಾ ಮಠದ ಮೇಲೆ ನಮಗಿದ್ದ ಆಶಾ ಭಾವನೆಗೆ ಅಘಾತ ತಂದಿದೆ. ಕೂಡಲೇ ಆರೋಪಿಯಾಗಿರುವ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯನ್ನು ಮೊದಲು ಜೈಲಿಗೆ ಕಳುಹಿಸಬೇಕು. ಇಲ್ಲವಾದರೆ ಗ್ರಾಮೀಣ ಪ್ರದೇಶಗಳಿಂದಲೇ ಹೋರಾಟ ನಡೆಸಲಾಗುವುದು. ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಮೊದಲು ಆರೋಪಿ ಸ್ವಾಮೀಜಿಯನ್ನು ಬಂಧಿಸಬೇಕು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸ್‌. ಐ.ಟಿ. ರಚನೆಗಾಗಿ ಸರ್ಕಾರವನ್ನು ನಂಬಿ ಕೂರಬಾರದು. ನ್ಯಾಯಾಂಗದ ಮೊರೆ ಹೋಗಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...