Homeಕರ್ನಾಟಕಮುರುಘಾ ಶರಣರ ತನಿಖೆಗೆ ಎಸ್‌ಐಟಿ ರಚಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ಮುರುಘಾ ಶರಣರ ತನಿಖೆಗೆ ಎಸ್‌ಐಟಿ ರಚಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ದಲಿತ ನಾಯಕರಾದ ಗುರುಪ್ರಸಾದ್ ಕೆರೆಗೋಡು, ಮಾವಳ್ಳಿ ಶಂಕರ್‌, ಬೆಟ್ಟಯ್ಯ ಕೋಟೆ, ಶಂಭುಲಿಂಗ ಸ್ವಾಮಿ ಮೊದಲಾದವರು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿಗಳು, ಪ್ರಾಮಾಣಿಕ ತನಿಖಾಧಿಕಾರಿಗಳು, ಸಾಮಾಜಿಕ-ಸಂಸ್ಥೆಗಳನ್ನೊಳಗೊಂಡ ‘ಎಸ್‌ಐಟಿ’ ಕೂಡಲೇ ರಚಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟ ಆಗ್ರಹಿಸಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಈಗಾಗಲೇ ಆರೋಪಿ ಸ್ವಾಮೀಜಿಯ ವಿರುದ್ಧ ಎಫ್‌ಐಆರ್ ದಾಖಲಾಗಿ ನಾಲ್ಕು ದಿನ ಕಳೆದಿವೆ. ಆದರೆ, ಚಿತ್ರದುರ್ಗದಲ್ಲಿಯೇ ಇರುವ ಆರೋಪಿ ಸ್ವಾಮೀಜಿಯನ್ನು ಬಂಧಿಸಲು ವಿಳಂಬ ಮಾಡುತ್ತಾ ಸಾಕ್ಷ್ಯಧಾರಗಳ ನಾಶಕ್ಕೆ ಅವಕಾಶ ಮಾಡಿಕೊಡುತ್ತಿವೆ. ಮೊದಲು ಆರೋಪಿ ಮುರುಘ ಶರಣ ಶಿವಮೂರ್ತಿ ಸ್ವಾಮೀಜಿಯನ್ನು ಬಂಧಿಸಿ ಎಂದು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗಿ ನಾಲ್ಕು ದಿನ ಕಳೆದರೂ, ಆರೋಪಿಯನ್ನು ಬಂಧಿಸಿಲ್ಲ. ಗೃಹ ಸಚಿವರು ಮಾತನಾಡುತ್ತಾ, ಸ್ವಾಮೀಜಿ ಸತ್‌ಚಾರಿತ್ರ್ಯ ಹೊಂದಿದ್ದಾರೆ ಅನ್ನುವ ಮೂಲಕ ಪ್ರಕರಣ ದಿಕ್ಕು ತಪ್ಪಿಸಲು ಹೊರಟಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಈಗಾಗಲೇ ಆರೋಪಿ ಸ್ವಾಮೀಜಿಗೆ ಕ್ಲಿನ್ ಚೀಟ್ ಕೊಟ್ಟಿದ್ದಾರೆ. ಕಾನೂನಿನ ಮುಂದೆ ಎಲ್ಲ ಸಮಾನರು. ಮುಖ್ಯಮಂತ್ರಿಯಾದಿಯಾಗಿ ಅನೇಕರು ಆರೋಪಿಯ ರಕ್ಷಣೆಗೆ ನಿಂತಿರುವುದರಿಂದ ಆತಂಕ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರಕರಣ ದಾಖಲಾಗುತ್ತಿದ್ದಂತೆ ಮುರುಘಾ ಸ್ವಾಮೀಜಿ ಸಂಧಾನಕ್ಕೂ ಸಿದ್ಧ ಸಮರಕ್ಕೂ ಎಂದಿದ್ದಾರೆ. ದೂರು ನೀಡಿರುವ ಅಪ್ರಾಪ್ತರು ದಲಿತ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಬಾಲಕಿಯರಾಗಿದ್ದು, ಇವರು ಯಾರ ಬಳಿ ಸಂಧಾನ ಮಾಡುತ್ತಾರೆ. ಯಾರ ವಿರುದ್ಧ ಯುದ್ಧ ಮಾಡ್ತಾರೆ ಎಂದು ಪ್ರಶ್ನಿಸಿದರು.

ಅಪ್ರಾಪ್ತರಿಂದ ತನಿಖೆ ನಡೆಸುವಾಗ ಅನುಸರಿಬೇಕಾದ ವಿಧಿ ವಿಧಾನಗಳನ್ನು ಚಿತ್ರದುರ್ಗದ ಪೊಲೀಸರು ಅನುಸರಿಸುತ್ತಿಲ್ಲ. ಸ್ಥಳ ಮಹಜರು ಮಾಡಲು ಬಾಲಕಿಯರನ್ನು ಮಠದ ಆಡಳಿತ ಮಂಡಳಿಯ ಎದುರಿನಲ್ಲಿ ಮಠಕ್ಕೆ ಕರೆದುಕೊಂಡು ಹೋಗಿದ್ದಾರೆ. ಇಂಥ ಸಂದರ್ಭದಲ್ಲಿ ಬಾಲಕಿಯರು ಭಯ-ಭೀತಿಗೊಂಡಿದ್ದಾರೆ. ಬಾಲಕಿಯರಿಗೆ ಭಯ ಮುಕ್ತವಾಗಿ ತನಿಖೆ ನಡೆಸಿಕೊಂಡಿಲ್ಲ. ಹೀಗಾಗಿ ಪೊಲೀಸರು ನಡೆದುಕೊಂಡ ರೀತಿಯಲ್ಲಿ ಅನುಮಾನವಿದೆ ಎಂದರು.

ಪೋಕ್ಸೋ ಕಾಯ್ದೆ ಪ್ರಬಲವಾಗಿದೆ. ಆದರೆ, ಸ್ವಾಮೀಜಿ ಪ್ರಕರಣದಲ್ಲಿ ಕಾಯ್ದೆಯನ್ನು ಸರಿಯಾಗಿ ಅನುಸರಿಸುತ್ತಿಲ್ಲ. ಹೀಗಾಗಿ ನ್ಯಾಯ ದೊರೆಯುವ ವಿಶ್ವಾಸವೇ ಕಳೆದು ಹೋಗಿದೆ. ಚಿತ್ರದುರ್ಗ ಜಿಲ್ಲಾಡಳಿತ ಮತ್ತು ತನಿಖಾಧಿಕಾರಿಗಳು ಅನುಸರಿಸುತ್ತಿರುವ ಧೋರಣೆ ಪ್ರಕರಣದಲ್ಲಿ ಎದ್ದು ಕಾಣುತ್ತಿದ್ದು, ಅಲ್ಲಿನ ಜಿಲ್ಲಾಡಳಿತ ಬಗ್ಗೆ ನ್ಯಾಯ ಸಿಗುವ ವಿಶ್ವಾಸ ಕಾಣುತ್ತಿಲ್ಲ. ಈಗಲಾದರೂ ಸರ್ಕಾರ ಕೂಡಲೇ ಆರೋಪಿಯನ್ನು ಬಂಧಿಸಿ ಎಸ್ ಐಟಿ ತನಿಖಾ ತಂಡ ರಚನೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

‘ಒಡನಾಡಿಗೆ ಮಕ್ಕಳನ್ನು ಕರೆತನ್ನಿ’

ಚಿತ್ರದುರ್ಗಾದಲ್ಲಿರುವ ಮಕ್ಕಳನ್ನು ಸುರಕ್ಷಿತ ದೃಷ್ಟಿಯಿಂದ ಬೇರೆ ಜಿಲ್ಲೆಗೆ ಸ್ಥಳಾಂತರಿಸಬೇಕು. ಹೀಗಾಗಿ ಮೈಸೂರಿಗೆ ಕರೆ ತಂದು ಒಡನಾಡಿ ಸಂಸ್ಥೆಯಲ್ಲಿ ಮಕ್ಕಳನ್ನು ಇರಿಸಬೇಕು. ಮಕ್ಕಳಿಗೆ ದಲಿತ ಸಂಘರ್ಷ ಸಮಿತಿ ಕೂಡ ಬೆಂಬಲವಾಗಿ ನಿಲ್ಲುವುದು. ಈ ಪ್ರಕರಣದ ಸಂಬಂಧ ಎಲ್ಲ ಪಕ್ಷಗಳು ಜನಪ್ರತಿನಿಧಿಗಳು ಓಟು ರಾಜಕಾರಣ ಬಿಟ್ಟು ಮಾತನಾಡಬೇಕು. ಆ ಮೂಲಕ ನ್ಯಾಯದ ಪರವಾಗಿ ನಿಂತು ತಮ್ಮ ಬದ್ಧತೆ ಮೆರೆಯಬೇಕು ಎಂದು ಗುರುಪ್ರಸಾದ್ ಕೆರೆಗೋಡು ತಿಳಿಸಿದರು.

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಸರ್ಕಾರ ಸ್ವಾಮೀಜಿಯ ರಕ್ಷಣೆಗೆ ನಿಂತಿರುವ ಅನುಮಾನ ಕಾಡುತ್ತಿದೆ. ಗೃಹ ಸಚಿವ ಅರಗಜ್ಞಾನೇಂದ್ರ ರಾಜೀನಾಮೆ ಕೊಡಬೇಕು. ಅವರು ಇಂತಹ ಮೂರ್ನಾಲ್ಕು ಪ್ರಕರಣಗಳಲ್ಲಿ ತಮ್ಮ ಹೇಳಿಕೆಗಳ ಮೂಲಕ ತನಿಖೆ ದಿಕ್ಕು ತಪ್ಪಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಈ ಪ್ರಕರಣದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಈ ಇಬ್ಬರು ಅಪ್ರಾಪ್ತ ಬಾಲಕಿಯರು ಷಡ್ಯಂತ್ರ ರೂಪಿಸಲು ಸಾಧ್ಯವೇ? ಮಕ್ಕಳಿಗೆ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿದ್ದಾರೆ. ಆದರೆ, ಸ್ವಾಮೀಜಿಗೆ ವೈದ್ಯಕೀಯ ಪರೀಕ್ಷೆ ನಡೆಯದೆ ಇರುವುದು ಪ್ರಕರಣವನ್ನು ದಿಕ್ಕು ತಪ್ಪಿಸುವ ಸೂಚನೆಯಾಗಿದೆ. ಈ ಪ್ರಕರಣವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದರೆ ತೀವ್ರ ಚಳವಳಿ ಎದುರಿಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯರಿಗೆ ನ್ಯಾಯ ದೊರೆಕಿಸುವ ನಿಟ್ಟಿನಲ್ಲಿ ಪ್ರಗತಿಪರ, ರೈತ ಹಾಗೂ ದಲಿತ ಮತ್ತು ವಿವಿಧ ಸಮುದಾಯಗಳ ಸಂಘಟನೆಗಳು ಹೋರಾಟ ರೂಪಿಸುವ ನಿಟ್ಟಿನಲ್ಲಿ ಆ.31ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ದಸಂದ ಮೈಸೂರು ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಮಾತನಾಡಿ, “ಚಿತ್ರದುರ್ಗದ ಮುರುಘಾ ಮಠದ ಮೇಲೆ ನಮಗಿದ್ದ ಆಶಾ ಭಾವನೆಗೆ ಅಘಾತ ತಂದಿದೆ. ಕೂಡಲೇ ಆರೋಪಿಯಾಗಿರುವ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯನ್ನು ಮೊದಲು ಜೈಲಿಗೆ ಕಳುಹಿಸಬೇಕು. ಇಲ್ಲವಾದರೆ ಗ್ರಾಮೀಣ ಪ್ರದೇಶಗಳಿಂದಲೇ ಹೋರಾಟ ನಡೆಸಲಾಗುವುದು. ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಮೊದಲು ಆರೋಪಿ ಸ್ವಾಮೀಜಿಯನ್ನು ಬಂಧಿಸಬೇಕು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸ್‌. ಐ.ಟಿ. ರಚನೆಗಾಗಿ ಸರ್ಕಾರವನ್ನು ನಂಬಿ ಕೂರಬಾರದು. ನ್ಯಾಯಾಂಗದ ಮೊರೆ ಹೋಗಬೇಕು.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...