Homeಅಂಕಣಗಳುಮಧ್ಯಪ್ರದೇಶದಲ್ಲಿ 'ಲವ್ ಜಿಹಾದ್' ವಿರೋಧಿ ದಳದ ರಚನೆ ಮತ್ತು ಪೊಲೀಸ್, ಬಜರಂಗದಳ

ಮಧ್ಯಪ್ರದೇಶದಲ್ಲಿ ‘ಲವ್ ಜಿಹಾದ್’ ವಿರೋಧಿ ದಳದ ರಚನೆ ಮತ್ತು ಪೊಲೀಸ್, ಬಜರಂಗದಳ

- Advertisement -
- Advertisement -

ಮಧ್ಯಪ್ರದೇಶ ಪೊಲೀಸರು ಅಪರಾಧ ಆರೋಪಿಗಳನ್ನು ಸಾರ್ವಜನಿಕವಾಗಿ ಮೆರವಣಿಗೆ ಮಾಡುತ್ತಾ, ‘ಪೊಲೀಸರು ನಮ್ಮ ತಂದೆ’ ಮತ್ತು ‘ಹಸು ನಮ್ಮ ತಾಯಿ’ ಮುಂತಾದ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸುತ್ತಿರುವ ವೀಡಿಯೊಗಳ ಸರಣಿ ಈ ಹಿಂದೆ ಬಂದಿತ್ತು. ಈಗ ಭೋಪಾಲ್‌ ನಿಂದ ಬಂದಿರುವ ಹೊಸ ವೀಡಿಯೊಯೊಂದರಲ್ಲಿ ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಯೊಬ್ಬರು ಮುಸ್ಲಿಮರನ್ನು ಜಿಮ್‌ನಿಂದ ಹೊರಗಿಡುವಂತೆ ಎಚ್ಚರಿಸುತ್ತಿರುವುದು ಕಂಡುಬಂದಿದೆ. ಇದು ಕೋಮುಭಾವನೆಗಳನ್ನು ಕೆರಳಿಸುವಲ್ಲಿ ಪೊಲೀಸರು ಕೂಡ ಪಾಲ್ಗೊಂಡಿರುವ ಕುರಿತು ಹೊಸ ಕಳವಳವನ್ನು ಹುಟ್ಟುಹಾಕಿದೆ.

ಈ ಬಾರಿ ವಿವಾದವಾಗಿರುವ ವೀಡಿಯೊವು ಸಬ್-ಇನ್‌ಸ್ಪೆಕ್ಟರ್ ದಿನೇಶ್ ಶುಕ್ಲಾ ಅವರ ಮೇಲೆ ಕೇಂದ್ರೀಕೃತವಾಗಿದೆ. ಅವರು ಜಿಮ್‌ನೊಳಗೆ ಬಜರಂಗದಳ ಸದಸ್ಯರೊಂದಿಗೆ ಕುಳಿತುಕೊಂಡು ಜನರನ್ನು ಉದ್ದೇಶಿಸಿ ಮಾತನಾಡುತ್ತಾ, ಯಾವುದೇ ಮೊಹಮ್ಮದೀಯರು ಜಿಮ್ಮಿಗೆ ತರಬೇತಿ ಪಡೆಯುವುದಕ್ಕಾಗಲಿ ಅಥವಾ ನೀಡಲಿಕ್ಕಾಗಲಿ ಬರುವುದಿಲ್ಲ. ನಾನು ಅದನ್ನು ಹೇಳಿದ್ದೇನೆ ಎಂದು ವೀಡಿಯೊದಲ್ಲಿ ಹೇಳಿದ್ದಾರೆ.

ವ್ಯಾಪಕವಾಗಿ ಪ್ರಸಾರವಾದ ವೀಡಿಯೊವೊಂದರಲ್ಲಿ, ಜಿಮ್‌ನಂತಹ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಂ ವ್ಯಕ್ತಿಗಳ ಉಪಸ್ಥಿತಿಯ ಮೇಲೆ ಅನೌಪಚಾರಿಕ ನಿಷೇಧವನ್ನು ಜಾರಿಗೊಳಿಸುತ್ತಿರುವಂತೆ ಕಾಣುತ್ತಿದೆ. ಇದು ‘ಲವ್ ಜಿಹಾದ್’ ಎಂಬ ಪಿತೂರಿ ಸಿದ್ಧಾಂತವನ್ನು ಮುಂದಿಡುವ ಬಲಪಂಥೀಯ ಗುಂಪುಗಳು ಬಳಸುವ ಭಾಷೆಯನ್ನು ಪ್ರತಿಬಿಂಬಿಸುತ್ತದೆ. ಇದಕ್ಕೆ ಸಂಬಂಧಿಸಿ ಸಬ್ ಇನ್ಸ್‌ಪೆಕ್ಟರ್ ಅವರನ್ನು ಬಂಧಿಸಲಾಗಿದ್ದರೂ, ಸ್ವಯಂ ಘೋಷಿತ ಧರ್ಮ ರಕ್ಷಕರ ಜೊತೆಗೆ ಅವರ ಉಪಸ್ಥಿತಿಯ ಕುರಿತು ಸಾರ್ವಜನಿಕರಲ್ಲಿ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮರ್ಯಾದೆ ಹೆಸರಿನಲ್ಲಿ ಘೋಷಣೆಗಳು, ದಾಳಿಗಳು ಮತ್ತು ಬೆದರಿಕೆಗಳು

ಹಿಂದುತ್ವವಾದಿಗಳು “ಲವ್ ಜಿಹಾದ್” ನೆಪದಲ್ಲಿ ಮಧ್ಯಪ್ರದೇಶದಲ್ಲಿ ಮುಸ್ಲಿಂ ವ್ಯಕ್ತಿಗಳನ್ನು ಹೆಚ್ಚಾಗಿ ಗುರಿಯಾಗಿಸಿಕೊಳ್ಳುತ್ತಿದ್ದಾರೆ. ಈ “ಲವ್ ಜಿಹಾದ್” ಪದಕ್ಕೆ ಯಾವುದೇ ಕಾನೂನು ಆಧಾರವಿಲ್ಲ. ಆದರೆ ಮುಸ್ಲಿಂ ವ್ಯಕ್ತಿಗಳು ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಮತಾಂತರಿಸಲು ಪ್ರಣಯ ಸಂಬಂಧಗಳಿಗೆ ಆಮಿಷವೊಡ್ಡುತ್ತಾರೆ ಎಂದು ಆರೋಪಿಸಲು ಈ ಪದವನ್ನು ಬಳಸಲಾಗುತ್ತದೆ.

ಮಧ್ಯಪ್ರದೇಶ ಪೊಲೀಸರು ಇತ್ತೀಚೆಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಬಲವಂತದ ಧಾರ್ಮಿಕ ಮತಾಂತರದ ಆರೋಪಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡ (SIT)ವನ್ನು ರಚಿಸಿದೆ.

ಹಿಂದುತ್ವ ಸಂಘಟನೆಗಳ ಸದಸ್ಯರು ಜಿಮ್‌ಗೆ ಭೇಟಿ ನೀಡಿದ ನಂತರ ಈ ಘಟನೆ ನಡೆದಿದೆ ಎಂದು ಅಯೋಧ್ಯಾ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ (SHO) ಮಹೇಶ್ ಲಿಲ್ಹಾರೆ ದಿ ವೈರ್‌ಗೆ ದೃಢಪಡಿಸಿದ್ದಾರೆ ಮತ್ತು ಈ ವಿಷಯ ತನಿಖೆಯಲ್ಲಿದೆ ಎಂದು ಅವರು ಹೇಳಿದ್ದಾರೆ. ಆದರೆ ಹರಿದಾಡುತ್ತಿರುವ ಈ ವೀಡಿಯೊವನ್ನು ತಿರುಚಿರುವಂತೆ ತೋರುತ್ತದೆ ಎಂದು ಅವರು ಹೇಳಿದ್ದಾರೆ.

ಆದಾಗ್ಯೂ ಭೋಪಾಲ್‌ನ ಜಿಮ್‌ಗೆ ಸಂಬಂಧಿಸಿದ ಮತ್ತೊಂದು ವೀಡಿಯೊದಲ್ಲಿ ಹಿಂದುತ್ವ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳು “ಜೈ ಶ್ರೀ ರಾಮ್”, “ಲವ್ ಜಿಹಾದ್ ಮಾಡುವವರನ್ನು ಬಡಿಯಿರಿ” ಎಂಬ ಘೋಷಣೆಗಳನ್ನು ಕೂಗುತ್ತಾ ಜಿಮ್‌ಗೆ ನುಗ್ಗುತ್ತಿರುವುದು ಕಾಣಬಹುದು.

ಇನ್ನೊಂದು ವೀಡಿಯೊದಲ್ಲಿ ಎಸ್‌ಐ ದಿನೇಶ್ ಶುಕ್ಲಾ ಅವರೊಂದಿಗೆ ಕಾಣಿಸಿಕೊಂಡಿರುವ ವ್ಯಕ್ತಿಗಳಲ್ಲಿ ಒಬ್ಬನು ಜಿಮ್ ನಿರ್ವಹಣೆಗೆ ಸಲಹೆ ನೀಡುತ್ತಾ, ”ಹುಡುಗಿಯರಿಗೆ ಯಾರು ತರಬೇತಿ ನೀಡುತ್ತಾರೆ?” ಎಂದು ಪ್ರಶ್ನಿಸುತ್ತಿದ್ದಾನೆ. ಮತ್ತೆ ಮುಂದುವರೆದು “ಒಂದು ವಿಷಯವನ್ನು ನೆನಪಿನಲ್ಲಿಡಿ, ನಿಮ್ಮ ಜಿಮ್‌ನಿಂದ ಒಂದೇ ಒಂದು ಲವ್ ಜಿಹಾದ್ ಪ್ರಕರಣ ಕಂಡುಬಂದರೆ, ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ” ಎಂಬ ಎಚ್ಚರಿಕೆಯನ್ನು ನೀಡುತ್ತಿದ್ದಾನೆ. ”ದಿ ವೈರ್” ಈ ವೀಡಿಯೊಗಳ ಸತ್ಯಾಸತ್ಯತೆಯನ್ನು ದೃಢೀಕರಿಸಲು ಸಾಧ್ಯವಿಲ್ಲ.

ಇದೇ ವ್ಯಕ್ತಿ ಮುಂದುವರಿದು ಇದೇ ವೀಡಿಯೋದಲ್ಲಿ, “ಜಿಮ್ಮಿನಲ್ಲಿ ಹಿಂದೂ ಯುವತಿಯರಿಗೆ ಹಿಂದೂ ತರಬೇತುದಾರರನ್ನು ಮಾತ್ರ ನೇಮಿಸಬೇಕೆಂದು ನಾವು ವಿನಂತಿಸುತ್ತೇವೆ. ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಲವ್ ಜಿಹಾದ್‌ನಿಂದ ರಕ್ಷಿಸುವುದು ನಮ್ಮ ಮುಖ್ಯ ಗುರಿ” ಎಂದು ಹೇಳುತ್ತಿದ್ದಾನೆ.

ಹಿಂದಿನ ಘಟನೆಗಳನ್ನು ಉಲ್ಲೇಖಿಸುತ್ತಾ ಅವರು, “ಈ ಹಿಂದೆ ಇಂದೋರ್‌ನಲ್ಲಿ ಟಿಐಟಿ ಕಾಲೇಜಿನಲ್ಲಿ ಏನಾಗಿತ್ತು? ”ಲವ್ ಜಿಹಾದ್” ಅನ್ನು ಸಹಿಸಲಾಗುವುದಿಲ್ಲ” ಎಂದು ಹೇಳುತ್ತಾನೆ. ಈ ವೀಡಿಯೊವು ಬಲಪಂಥೀಯ ಸಂಘಟನೆಯ ಸದಸ್ಯರು “ಲವ್ ಜಿಹಾದ್ ಮುರ್ದಾಬಾದ್” ಎಂಬ ಘೋಷಣೆ ಕೂಗುವುದರೊಂದಿಗೆ ಕೊನೆಗೊಳ್ಳುತ್ತದೆ.

2024ರಲ್ಲಿ ದ್ವೇಷ ಭಾಷಣದ ಘಟನೆಗಳು ಸುಮಾರು 581 ದಾಖಲಾಗಿವೆ. ಈ ಎಲ್ಲಾ ದ್ವೇಷ ಭಾಷಣಗಳು ಸುಮಾರು ಅರ್ಧದಷ್ಟು ಪಿತೂರಿ ಸಿದ್ಧಾಂತಗಳನ್ನು ಉಲ್ಲೇಖಿಸುತ್ತವೆ. ಅಂದರೆ “ಲವ್ ಜಿಹಾದ್”, “ಭೂ ಜಿಹಾದ್”, “ಜನಸಂಖ್ಯಾ ಜಿಹಾದ್”, “ಉಗುಳುವ ಜಿಹಾದ್” ಮತ್ತು “ಮತ ಜಿಹಾದ್” ಎಂಬಿತ್ಯಾದಿ ಪದಗಳು ಈ ದ್ವೇಷ ಭಾಷಣದಲ್ಲಿ ಸಾಮಾನ್ಯವಾಗಿದ್ದವು ಎಂದು ‘2024ರ ಇಂಡಿಯಾ ಹೇಟ್ ಲ್ಯಾಬ್’ ವರದಿ ಹೇಳಿದೆ.

ಪೊಲೀಸ್ ಠಾಣಾಧಿಕಾರಿ ಮಹೇಶ್ ಲಿಲ್ಹರೆ ಅವರು ಮಾತನಾಡಿ, “ಹಿಂದೂ ಅಲ್ಲದ ಜಿಮ್ ತರಬೇತುದಾರರು ”ಲವ್ ಜಿಹಾದ್” ಅಥವಾ ”ಧಾರ್ಮಿಕ ಮತಾಂತರ”ವನ್ನು ನಡೆಸುವ ಉದ್ದೇಶದಿಂದ ಹಿಂದೂಗಳ ಹೆಸರುಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿ ಹಿಂದುತ್ವ ಸಂಘಟನೆಗಳಿಂದ ದೂರು ಬಂದಿತ್ತು. ಹೀಗಾಗಿ ನಮ್ಮ ಪೊಲೀಸ್ ಸಿಬ್ಬಂದಿಗಳು ಹಲವಾರು ಬಲಪಂಥೀಯ ಸಂಘಟನೆಯ ಸದಸ್ಯರೊಂದಿಗೆ ಜಿಮ್‌ಗೆ ಹೋದರು. ಆ ಜಿಮ್‌ನ ಹೆಸರು ಇನ್ನೂ ತಿಳಿದು ಬಂದಿಲ್ಲ, ಆದರೆ ವಿವರಗಳನ್ನು ಪರಿಶೀಲಿಸಲು ನಾವು ಯುವತಿಯರನ್ನು ಸಂಪರ್ಕಿಸುತ್ತಿದ್ದೇವೆ. ನಾವು ಸಂಬಂಧಿಸಿದ ಸಬ್ ಇನ್‌ಸ್ಪೆಕ್ಟರ್‌ರೊಂದಿಗೆ ಮಾತನಾಡಿದ್ದೇವೆ. ಅವರು ವೀಡಿಯೋವನ್ನು ತಿರುಚಲಾಗಿದೆ ಎಂದು ಹೇಳುತ್ತಿದ್ದಾರೆ. ನಾನು ಅಂತಹ ಹೇಳಿಕೆ ನೀಡಿಲ್ಲ ಎಂದು ಸಬ್ ಇನ್‌ಸ್ಪೆಕ್ಟರ್‌ ನಿರಾಕರಿಸುತ್ತಿದ್ದಾರೆ. ನಾವು ಈ ವೀಡಿಯೊವನ್ನು ಗಮನಿಸಿದ್ದೇವೆ ಮತ್ತು ಅದು ಅಧಿಕೃತವೇ ಅಥವಾ ತಿರುಚಲಾಗಿದೆಯೇ ಎಂದು ತನಿಖೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಯಾವುದೇ ಜಾತಿ ಅಥವಾ ಸಮುದಾಯದ ವಿರುದ್ಧ ಕ್ರಮಕೈಗೊಳ್ಳುವ ಉದ್ದೇಶವನ್ನು ಪೊಲೀಸರು ಹೊಂದಿರಲಿಲ್ಲ ಎಂದು ಠಾಣಾಧಿಕಾರಿ ಲಿಲ್ಹರೆ ಹೇಳುತ್ತಾರೆ. “ತನಿಖೆಯ ಫಲಿತಾಂಶದ ಆಧಾರದ ಮೇಲೆ ನೀತಿ ನಿಯಮಗಳಿಗನುಸಾರವಾಗಿ ಕ್ರಮ ಕೈಗೊಳ್ಳಲಾಗುತ್ತೇವೆ. ಪೊಲೀಸರು ಯಾವುದೇ ಧರ್ಮ ಅಥವಾ ಗುಂಪನ್ನು ಪ್ರತಿನಿಧಿಸುವುದಿಲ್ಲ. ಐಪಿಸಿ, ಸಿಆರ್‌ಪಿಸಿ, ಬಿಎನ್‌ಎಸ್ ಮತ್ತು ಬಿಎನ್‌ಎಸ್‌ಎಸ್ ಅಡಿಯಲ್ಲಿ ಆದೇಶಿಸಿದಂತೆ ನಾವು ನಮ್ಮ ಕರ್ತವ್ಯವನ್ನು ಮಾಡುತ್ತಿದ್ದೇವೆ. ನಾವು ಬಳಸುವ ಯಾವುದೇ ಭಾಷೆ ಅಥವಾ ಪರಿಭಾಷೆಯು ಕಾನೂನು ನಿಬಂಧನೆಗಳಿಗೆ ಕಟ್ಟುನಿಟ್ಟಾಗಿರುತ್ತದೆ” ಎಂದಿದ್ದಾರೆ.

ಪೊಲೀಸರು ಕಾನೂನು ಪ್ರಕ್ರಿಯೆಯ ಅನುಸರಣೆಯನ್ನು ಒತ್ತಿಹೇಳುತ್ತಿದ್ದರೂ, “ಲವ್ ಜಿಹಾದ್” ಎಂಬ ಪದವು  ಸಾರ್ವಜನಿಕ ಭಾಷಣದಲ್ಲಿ ಸ್ಥಿರವಾಗಿ ನುಸುಳಿದೆ. ಇದನ್ನು ರಾಜಕೀಯ ನಾಯಕರು ಮತ್ತು ಮಾಧ್ಯಮಗಳು ಮುಕ್ತವಾಗಿ ಬಳಸುತ್ತಾ ವಿವಾದವನ್ನು ಹುಟ್ಟು ಹಾಕಲಾಗುತ್ತಿದೆ.

ಭೋಪಾಲ್ ಸಂಸದ ಅಲೋಕ್ ಶರ್ಮಾ ಅವರು ಮಾತನಾಡಿ, “ನಾವು ಪಟ್ಟಿಯನ್ನು ತಯಾರಿಸುತ್ತಿದ್ದೇವೆ ಮತ್ತು ಅದನ್ನು ಪೊಲೀಸರಿಗೆ ಸಲ್ಲಿಸುತ್ತೇವೆ. ಪೊಲೀಸರು ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಾರೆ, ಕಾನೂನು ತನ್ನ ಕೆಲಸವನ್ನು ಮಾಡುತ್ತದೆ ಮತ್ತು ಮಧ್ಯಪ್ರದೇಶದಲ್ಲಿ ಡಾ. ಮೋಹನ್ ಯಾದವ್ ನೇತೃತ್ವದ ಸರ್ಕಾರವು ‘ಲವ್ ಜಿಹಾದ್’ ಅಥವಾ ‘ಭೂ ಜಿಹಾದ್‌’ನಲ್ಲಿ ತೊಡಗಿಸಿಕೊಳ್ಳಲು ಯಾರಿಗೂ ಅನುಮತಿ ನೀಡುವುದಿಲ್ಲ. ಅಂತಹ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತದೆ” ಎಂದಿದ್ದಾರೆ.

ಶರ್ಮಾ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ”ಲವ್ ಜಿಹಾದ್‌”ನಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದವರಿಗೆ ಶಿಕ್ಷೆಯ ರೂಪವಾಗಿ ಅವರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಬೇಕೆಂದು ಅವರು ಸಾರ್ವಜನಿಕವಾಗಿ ಒತ್ತಾಯಿಸಿ ವಿವಾದಕ್ಕೊಳಗಾಗಿದ್ದರು. ಮಧ್ಯಪ್ರದೇಶದ ಸಚಿವ ವಿಶ್ವಾಸ್ ಸಾರಂಗ್ ಅವರು ಇದೇ ರೀತಿಯ ಭಾಷಣ ಮಾಡಿದ್ದರು. “ಲವ್ ಜಿಹಾದ್” ಮಾಡುವ ವ್ಯಕ್ತಿಗಳ ಎದೆಗೆ ಗುಂಡಿಕ್ಕಬೇಕು ಎಂದು ಈ ಹಿಂದೆ ಸಾರಂಗ್ ಹೇಳಿದ್ದರು.

ಕಳೆದ ತಿಂಗಳಿನಲ್ಲಿ ಭೋಪಾಲ್ ನಿವಾಸಿಯೊಬ್ಬರು ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ “ಲವ್ ಜಿಹಾದ್” ಎಂಬ ಪದವನ್ನು ಪ್ರಮುಖ ಹಿಂದಿ ದಿನಪತ್ರಿಕೆಗಳು ಬಳಸುವುದರ ವಿರುದ್ಧ ಅರ್ಜಿ ಸಲ್ಲಿಸಿದರು. ಅತ್ಯಾಚಾರ ಪ್ರಕರಣವೊಂದಕ್ಕೆ ಕೋಮುವಾದದ ದೃಷ್ಟಿಕೋನವನ್ನು ನೀಡಿದ್ದಾರೆ ಮತ್ತು ಹಾಗೆ ಮಾಡುವುದರ ಮೂಲಕ ಅಪರಾಧವನ್ನು ಇಡೀ ಮುಸ್ಲಿಂ ಸಮುದಾಯಕ್ಕೆ ಜೋಡಿಸಿದ್ದಾರೆ ಎಂದು ಆರೋಪಿಸಿದ್ದರು. ಜೂನ್ 19ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ವಕೀಲ ದೀಪಕ್ ಬುಂಡೆಲೆ ದಿ ವೈರ್‌ಗೆ ತಿಳಿಸಿದ್ದಾರೆ.

ಇಂಗ್ಲೀಷ್ ಮೂಲ: ದಿ ವೈರ್

ಕನ್ನಡಕ್ಕೆ: ಪೃಥ್ವಿ ಕಣಸೋಗಿ

ಮಹಿಳೆಯರು ಮೈಗಂಟಿದ ಉಡುಪು ಧರಿಸುವುದು ನನಗೆ ಇಷ್ಟವಿಲ್ಲ: ಬಿಜೆಪಿ ಸಚಿವ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ; ವೀಡಿಯೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...