Homeಅಂಕಣಗಳುಮಧ್ಯಪ್ರದೇಶದಲ್ಲಿ 'ಲವ್ ಜಿಹಾದ್' ವಿರೋಧಿ ದಳದ ರಚನೆ ಮತ್ತು ಪೊಲೀಸ್, ಬಜರಂಗದಳ

ಮಧ್ಯಪ್ರದೇಶದಲ್ಲಿ ‘ಲವ್ ಜಿಹಾದ್’ ವಿರೋಧಿ ದಳದ ರಚನೆ ಮತ್ತು ಪೊಲೀಸ್, ಬಜರಂಗದಳ

- Advertisement -
- Advertisement -

ಮಧ್ಯಪ್ರದೇಶ ಪೊಲೀಸರು ಅಪರಾಧ ಆರೋಪಿಗಳನ್ನು ಸಾರ್ವಜನಿಕವಾಗಿ ಮೆರವಣಿಗೆ ಮಾಡುತ್ತಾ, ‘ಪೊಲೀಸರು ನಮ್ಮ ತಂದೆ’ ಮತ್ತು ‘ಹಸು ನಮ್ಮ ತಾಯಿ’ ಮುಂತಾದ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸುತ್ತಿರುವ ವೀಡಿಯೊಗಳ ಸರಣಿ ಈ ಹಿಂದೆ ಬಂದಿತ್ತು. ಈಗ ಭೋಪಾಲ್‌ ನಿಂದ ಬಂದಿರುವ ಹೊಸ ವೀಡಿಯೊಯೊಂದರಲ್ಲಿ ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಯೊಬ್ಬರು ಮುಸ್ಲಿಮರನ್ನು ಜಿಮ್‌ನಿಂದ ಹೊರಗಿಡುವಂತೆ ಎಚ್ಚರಿಸುತ್ತಿರುವುದು ಕಂಡುಬಂದಿದೆ. ಇದು ಕೋಮುಭಾವನೆಗಳನ್ನು ಕೆರಳಿಸುವಲ್ಲಿ ಪೊಲೀಸರು ಕೂಡ ಪಾಲ್ಗೊಂಡಿರುವ ಕುರಿತು ಹೊಸ ಕಳವಳವನ್ನು ಹುಟ್ಟುಹಾಕಿದೆ.

ಈ ಬಾರಿ ವಿವಾದವಾಗಿರುವ ವೀಡಿಯೊವು ಸಬ್-ಇನ್‌ಸ್ಪೆಕ್ಟರ್ ದಿನೇಶ್ ಶುಕ್ಲಾ ಅವರ ಮೇಲೆ ಕೇಂದ್ರೀಕೃತವಾಗಿದೆ. ಅವರು ಜಿಮ್‌ನೊಳಗೆ ಬಜರಂಗದಳ ಸದಸ್ಯರೊಂದಿಗೆ ಕುಳಿತುಕೊಂಡು ಜನರನ್ನು ಉದ್ದೇಶಿಸಿ ಮಾತನಾಡುತ್ತಾ, ಯಾವುದೇ ಮೊಹಮ್ಮದೀಯರು ಜಿಮ್ಮಿಗೆ ತರಬೇತಿ ಪಡೆಯುವುದಕ್ಕಾಗಲಿ ಅಥವಾ ನೀಡಲಿಕ್ಕಾಗಲಿ ಬರುವುದಿಲ್ಲ. ನಾನು ಅದನ್ನು ಹೇಳಿದ್ದೇನೆ ಎಂದು ವೀಡಿಯೊದಲ್ಲಿ ಹೇಳಿದ್ದಾರೆ.

ವ್ಯಾಪಕವಾಗಿ ಪ್ರಸಾರವಾದ ವೀಡಿಯೊವೊಂದರಲ್ಲಿ, ಜಿಮ್‌ನಂತಹ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಂ ವ್ಯಕ್ತಿಗಳ ಉಪಸ್ಥಿತಿಯ ಮೇಲೆ ಅನೌಪಚಾರಿಕ ನಿಷೇಧವನ್ನು ಜಾರಿಗೊಳಿಸುತ್ತಿರುವಂತೆ ಕಾಣುತ್ತಿದೆ. ಇದು ‘ಲವ್ ಜಿಹಾದ್’ ಎಂಬ ಪಿತೂರಿ ಸಿದ್ಧಾಂತವನ್ನು ಮುಂದಿಡುವ ಬಲಪಂಥೀಯ ಗುಂಪುಗಳು ಬಳಸುವ ಭಾಷೆಯನ್ನು ಪ್ರತಿಬಿಂಬಿಸುತ್ತದೆ. ಇದಕ್ಕೆ ಸಂಬಂಧಿಸಿ ಸಬ್ ಇನ್ಸ್‌ಪೆಕ್ಟರ್ ಅವರನ್ನು ಬಂಧಿಸಲಾಗಿದ್ದರೂ, ಸ್ವಯಂ ಘೋಷಿತ ಧರ್ಮ ರಕ್ಷಕರ ಜೊತೆಗೆ ಅವರ ಉಪಸ್ಥಿತಿಯ ಕುರಿತು ಸಾರ್ವಜನಿಕರಲ್ಲಿ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮರ್ಯಾದೆ ಹೆಸರಿನಲ್ಲಿ ಘೋಷಣೆಗಳು, ದಾಳಿಗಳು ಮತ್ತು ಬೆದರಿಕೆಗಳು

ಹಿಂದುತ್ವವಾದಿಗಳು “ಲವ್ ಜಿಹಾದ್” ನೆಪದಲ್ಲಿ ಮಧ್ಯಪ್ರದೇಶದಲ್ಲಿ ಮುಸ್ಲಿಂ ವ್ಯಕ್ತಿಗಳನ್ನು ಹೆಚ್ಚಾಗಿ ಗುರಿಯಾಗಿಸಿಕೊಳ್ಳುತ್ತಿದ್ದಾರೆ. ಈ “ಲವ್ ಜಿಹಾದ್” ಪದಕ್ಕೆ ಯಾವುದೇ ಕಾನೂನು ಆಧಾರವಿಲ್ಲ. ಆದರೆ ಮುಸ್ಲಿಂ ವ್ಯಕ್ತಿಗಳು ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಮತಾಂತರಿಸಲು ಪ್ರಣಯ ಸಂಬಂಧಗಳಿಗೆ ಆಮಿಷವೊಡ್ಡುತ್ತಾರೆ ಎಂದು ಆರೋಪಿಸಲು ಈ ಪದವನ್ನು ಬಳಸಲಾಗುತ್ತದೆ.

ಮಧ್ಯಪ್ರದೇಶ ಪೊಲೀಸರು ಇತ್ತೀಚೆಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಬಲವಂತದ ಧಾರ್ಮಿಕ ಮತಾಂತರದ ಆರೋಪಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡ (SIT)ವನ್ನು ರಚಿಸಿದೆ.

ಹಿಂದುತ್ವ ಸಂಘಟನೆಗಳ ಸದಸ್ಯರು ಜಿಮ್‌ಗೆ ಭೇಟಿ ನೀಡಿದ ನಂತರ ಈ ಘಟನೆ ನಡೆದಿದೆ ಎಂದು ಅಯೋಧ್ಯಾ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ (SHO) ಮಹೇಶ್ ಲಿಲ್ಹಾರೆ ದಿ ವೈರ್‌ಗೆ ದೃಢಪಡಿಸಿದ್ದಾರೆ ಮತ್ತು ಈ ವಿಷಯ ತನಿಖೆಯಲ್ಲಿದೆ ಎಂದು ಅವರು ಹೇಳಿದ್ದಾರೆ. ಆದರೆ ಹರಿದಾಡುತ್ತಿರುವ ಈ ವೀಡಿಯೊವನ್ನು ತಿರುಚಿರುವಂತೆ ತೋರುತ್ತದೆ ಎಂದು ಅವರು ಹೇಳಿದ್ದಾರೆ.

ಆದಾಗ್ಯೂ ಭೋಪಾಲ್‌ನ ಜಿಮ್‌ಗೆ ಸಂಬಂಧಿಸಿದ ಮತ್ತೊಂದು ವೀಡಿಯೊದಲ್ಲಿ ಹಿಂದುತ್ವ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳು “ಜೈ ಶ್ರೀ ರಾಮ್”, “ಲವ್ ಜಿಹಾದ್ ಮಾಡುವವರನ್ನು ಬಡಿಯಿರಿ” ಎಂಬ ಘೋಷಣೆಗಳನ್ನು ಕೂಗುತ್ತಾ ಜಿಮ್‌ಗೆ ನುಗ್ಗುತ್ತಿರುವುದು ಕಾಣಬಹುದು.

ಇನ್ನೊಂದು ವೀಡಿಯೊದಲ್ಲಿ ಎಸ್‌ಐ ದಿನೇಶ್ ಶುಕ್ಲಾ ಅವರೊಂದಿಗೆ ಕಾಣಿಸಿಕೊಂಡಿರುವ ವ್ಯಕ್ತಿಗಳಲ್ಲಿ ಒಬ್ಬನು ಜಿಮ್ ನಿರ್ವಹಣೆಗೆ ಸಲಹೆ ನೀಡುತ್ತಾ, ”ಹುಡುಗಿಯರಿಗೆ ಯಾರು ತರಬೇತಿ ನೀಡುತ್ತಾರೆ?” ಎಂದು ಪ್ರಶ್ನಿಸುತ್ತಿದ್ದಾನೆ. ಮತ್ತೆ ಮುಂದುವರೆದು “ಒಂದು ವಿಷಯವನ್ನು ನೆನಪಿನಲ್ಲಿಡಿ, ನಿಮ್ಮ ಜಿಮ್‌ನಿಂದ ಒಂದೇ ಒಂದು ಲವ್ ಜಿಹಾದ್ ಪ್ರಕರಣ ಕಂಡುಬಂದರೆ, ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ” ಎಂಬ ಎಚ್ಚರಿಕೆಯನ್ನು ನೀಡುತ್ತಿದ್ದಾನೆ. ”ದಿ ವೈರ್” ಈ ವೀಡಿಯೊಗಳ ಸತ್ಯಾಸತ್ಯತೆಯನ್ನು ದೃಢೀಕರಿಸಲು ಸಾಧ್ಯವಿಲ್ಲ.

ಇದೇ ವ್ಯಕ್ತಿ ಮುಂದುವರಿದು ಇದೇ ವೀಡಿಯೋದಲ್ಲಿ, “ಜಿಮ್ಮಿನಲ್ಲಿ ಹಿಂದೂ ಯುವತಿಯರಿಗೆ ಹಿಂದೂ ತರಬೇತುದಾರರನ್ನು ಮಾತ್ರ ನೇಮಿಸಬೇಕೆಂದು ನಾವು ವಿನಂತಿಸುತ್ತೇವೆ. ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಲವ್ ಜಿಹಾದ್‌ನಿಂದ ರಕ್ಷಿಸುವುದು ನಮ್ಮ ಮುಖ್ಯ ಗುರಿ” ಎಂದು ಹೇಳುತ್ತಿದ್ದಾನೆ.

ಹಿಂದಿನ ಘಟನೆಗಳನ್ನು ಉಲ್ಲೇಖಿಸುತ್ತಾ ಅವರು, “ಈ ಹಿಂದೆ ಇಂದೋರ್‌ನಲ್ಲಿ ಟಿಐಟಿ ಕಾಲೇಜಿನಲ್ಲಿ ಏನಾಗಿತ್ತು? ”ಲವ್ ಜಿಹಾದ್” ಅನ್ನು ಸಹಿಸಲಾಗುವುದಿಲ್ಲ” ಎಂದು ಹೇಳುತ್ತಾನೆ. ಈ ವೀಡಿಯೊವು ಬಲಪಂಥೀಯ ಸಂಘಟನೆಯ ಸದಸ್ಯರು “ಲವ್ ಜಿಹಾದ್ ಮುರ್ದಾಬಾದ್” ಎಂಬ ಘೋಷಣೆ ಕೂಗುವುದರೊಂದಿಗೆ ಕೊನೆಗೊಳ್ಳುತ್ತದೆ.

2024ರಲ್ಲಿ ದ್ವೇಷ ಭಾಷಣದ ಘಟನೆಗಳು ಸುಮಾರು 581 ದಾಖಲಾಗಿವೆ. ಈ ಎಲ್ಲಾ ದ್ವೇಷ ಭಾಷಣಗಳು ಸುಮಾರು ಅರ್ಧದಷ್ಟು ಪಿತೂರಿ ಸಿದ್ಧಾಂತಗಳನ್ನು ಉಲ್ಲೇಖಿಸುತ್ತವೆ. ಅಂದರೆ “ಲವ್ ಜಿಹಾದ್”, “ಭೂ ಜಿಹಾದ್”, “ಜನಸಂಖ್ಯಾ ಜಿಹಾದ್”, “ಉಗುಳುವ ಜಿಹಾದ್” ಮತ್ತು “ಮತ ಜಿಹಾದ್” ಎಂಬಿತ್ಯಾದಿ ಪದಗಳು ಈ ದ್ವೇಷ ಭಾಷಣದಲ್ಲಿ ಸಾಮಾನ್ಯವಾಗಿದ್ದವು ಎಂದು ‘2024ರ ಇಂಡಿಯಾ ಹೇಟ್ ಲ್ಯಾಬ್’ ವರದಿ ಹೇಳಿದೆ.

ಪೊಲೀಸ್ ಠಾಣಾಧಿಕಾರಿ ಮಹೇಶ್ ಲಿಲ್ಹರೆ ಅವರು ಮಾತನಾಡಿ, “ಹಿಂದೂ ಅಲ್ಲದ ಜಿಮ್ ತರಬೇತುದಾರರು ”ಲವ್ ಜಿಹಾದ್” ಅಥವಾ ”ಧಾರ್ಮಿಕ ಮತಾಂತರ”ವನ್ನು ನಡೆಸುವ ಉದ್ದೇಶದಿಂದ ಹಿಂದೂಗಳ ಹೆಸರುಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿ ಹಿಂದುತ್ವ ಸಂಘಟನೆಗಳಿಂದ ದೂರು ಬಂದಿತ್ತು. ಹೀಗಾಗಿ ನಮ್ಮ ಪೊಲೀಸ್ ಸಿಬ್ಬಂದಿಗಳು ಹಲವಾರು ಬಲಪಂಥೀಯ ಸಂಘಟನೆಯ ಸದಸ್ಯರೊಂದಿಗೆ ಜಿಮ್‌ಗೆ ಹೋದರು. ಆ ಜಿಮ್‌ನ ಹೆಸರು ಇನ್ನೂ ತಿಳಿದು ಬಂದಿಲ್ಲ, ಆದರೆ ವಿವರಗಳನ್ನು ಪರಿಶೀಲಿಸಲು ನಾವು ಯುವತಿಯರನ್ನು ಸಂಪರ್ಕಿಸುತ್ತಿದ್ದೇವೆ. ನಾವು ಸಂಬಂಧಿಸಿದ ಸಬ್ ಇನ್‌ಸ್ಪೆಕ್ಟರ್‌ರೊಂದಿಗೆ ಮಾತನಾಡಿದ್ದೇವೆ. ಅವರು ವೀಡಿಯೋವನ್ನು ತಿರುಚಲಾಗಿದೆ ಎಂದು ಹೇಳುತ್ತಿದ್ದಾರೆ. ನಾನು ಅಂತಹ ಹೇಳಿಕೆ ನೀಡಿಲ್ಲ ಎಂದು ಸಬ್ ಇನ್‌ಸ್ಪೆಕ್ಟರ್‌ ನಿರಾಕರಿಸುತ್ತಿದ್ದಾರೆ. ನಾವು ಈ ವೀಡಿಯೊವನ್ನು ಗಮನಿಸಿದ್ದೇವೆ ಮತ್ತು ಅದು ಅಧಿಕೃತವೇ ಅಥವಾ ತಿರುಚಲಾಗಿದೆಯೇ ಎಂದು ತನಿಖೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಯಾವುದೇ ಜಾತಿ ಅಥವಾ ಸಮುದಾಯದ ವಿರುದ್ಧ ಕ್ರಮಕೈಗೊಳ್ಳುವ ಉದ್ದೇಶವನ್ನು ಪೊಲೀಸರು ಹೊಂದಿರಲಿಲ್ಲ ಎಂದು ಠಾಣಾಧಿಕಾರಿ ಲಿಲ್ಹರೆ ಹೇಳುತ್ತಾರೆ. “ತನಿಖೆಯ ಫಲಿತಾಂಶದ ಆಧಾರದ ಮೇಲೆ ನೀತಿ ನಿಯಮಗಳಿಗನುಸಾರವಾಗಿ ಕ್ರಮ ಕೈಗೊಳ್ಳಲಾಗುತ್ತೇವೆ. ಪೊಲೀಸರು ಯಾವುದೇ ಧರ್ಮ ಅಥವಾ ಗುಂಪನ್ನು ಪ್ರತಿನಿಧಿಸುವುದಿಲ್ಲ. ಐಪಿಸಿ, ಸಿಆರ್‌ಪಿಸಿ, ಬಿಎನ್‌ಎಸ್ ಮತ್ತು ಬಿಎನ್‌ಎಸ್‌ಎಸ್ ಅಡಿಯಲ್ಲಿ ಆದೇಶಿಸಿದಂತೆ ನಾವು ನಮ್ಮ ಕರ್ತವ್ಯವನ್ನು ಮಾಡುತ್ತಿದ್ದೇವೆ. ನಾವು ಬಳಸುವ ಯಾವುದೇ ಭಾಷೆ ಅಥವಾ ಪರಿಭಾಷೆಯು ಕಾನೂನು ನಿಬಂಧನೆಗಳಿಗೆ ಕಟ್ಟುನಿಟ್ಟಾಗಿರುತ್ತದೆ” ಎಂದಿದ್ದಾರೆ.

ಪೊಲೀಸರು ಕಾನೂನು ಪ್ರಕ್ರಿಯೆಯ ಅನುಸರಣೆಯನ್ನು ಒತ್ತಿಹೇಳುತ್ತಿದ್ದರೂ, “ಲವ್ ಜಿಹಾದ್” ಎಂಬ ಪದವು  ಸಾರ್ವಜನಿಕ ಭಾಷಣದಲ್ಲಿ ಸ್ಥಿರವಾಗಿ ನುಸುಳಿದೆ. ಇದನ್ನು ರಾಜಕೀಯ ನಾಯಕರು ಮತ್ತು ಮಾಧ್ಯಮಗಳು ಮುಕ್ತವಾಗಿ ಬಳಸುತ್ತಾ ವಿವಾದವನ್ನು ಹುಟ್ಟು ಹಾಕಲಾಗುತ್ತಿದೆ.

ಭೋಪಾಲ್ ಸಂಸದ ಅಲೋಕ್ ಶರ್ಮಾ ಅವರು ಮಾತನಾಡಿ, “ನಾವು ಪಟ್ಟಿಯನ್ನು ತಯಾರಿಸುತ್ತಿದ್ದೇವೆ ಮತ್ತು ಅದನ್ನು ಪೊಲೀಸರಿಗೆ ಸಲ್ಲಿಸುತ್ತೇವೆ. ಪೊಲೀಸರು ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಾರೆ, ಕಾನೂನು ತನ್ನ ಕೆಲಸವನ್ನು ಮಾಡುತ್ತದೆ ಮತ್ತು ಮಧ್ಯಪ್ರದೇಶದಲ್ಲಿ ಡಾ. ಮೋಹನ್ ಯಾದವ್ ನೇತೃತ್ವದ ಸರ್ಕಾರವು ‘ಲವ್ ಜಿಹಾದ್’ ಅಥವಾ ‘ಭೂ ಜಿಹಾದ್‌’ನಲ್ಲಿ ತೊಡಗಿಸಿಕೊಳ್ಳಲು ಯಾರಿಗೂ ಅನುಮತಿ ನೀಡುವುದಿಲ್ಲ. ಅಂತಹ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತದೆ” ಎಂದಿದ್ದಾರೆ.

ಶರ್ಮಾ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ”ಲವ್ ಜಿಹಾದ್‌”ನಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದವರಿಗೆ ಶಿಕ್ಷೆಯ ರೂಪವಾಗಿ ಅವರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಬೇಕೆಂದು ಅವರು ಸಾರ್ವಜನಿಕವಾಗಿ ಒತ್ತಾಯಿಸಿ ವಿವಾದಕ್ಕೊಳಗಾಗಿದ್ದರು. ಮಧ್ಯಪ್ರದೇಶದ ಸಚಿವ ವಿಶ್ವಾಸ್ ಸಾರಂಗ್ ಅವರು ಇದೇ ರೀತಿಯ ಭಾಷಣ ಮಾಡಿದ್ದರು. “ಲವ್ ಜಿಹಾದ್” ಮಾಡುವ ವ್ಯಕ್ತಿಗಳ ಎದೆಗೆ ಗುಂಡಿಕ್ಕಬೇಕು ಎಂದು ಈ ಹಿಂದೆ ಸಾರಂಗ್ ಹೇಳಿದ್ದರು.

ಕಳೆದ ತಿಂಗಳಿನಲ್ಲಿ ಭೋಪಾಲ್ ನಿವಾಸಿಯೊಬ್ಬರು ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ “ಲವ್ ಜಿಹಾದ್” ಎಂಬ ಪದವನ್ನು ಪ್ರಮುಖ ಹಿಂದಿ ದಿನಪತ್ರಿಕೆಗಳು ಬಳಸುವುದರ ವಿರುದ್ಧ ಅರ್ಜಿ ಸಲ್ಲಿಸಿದರು. ಅತ್ಯಾಚಾರ ಪ್ರಕರಣವೊಂದಕ್ಕೆ ಕೋಮುವಾದದ ದೃಷ್ಟಿಕೋನವನ್ನು ನೀಡಿದ್ದಾರೆ ಮತ್ತು ಹಾಗೆ ಮಾಡುವುದರ ಮೂಲಕ ಅಪರಾಧವನ್ನು ಇಡೀ ಮುಸ್ಲಿಂ ಸಮುದಾಯಕ್ಕೆ ಜೋಡಿಸಿದ್ದಾರೆ ಎಂದು ಆರೋಪಿಸಿದ್ದರು. ಜೂನ್ 19ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ವಕೀಲ ದೀಪಕ್ ಬುಂಡೆಲೆ ದಿ ವೈರ್‌ಗೆ ತಿಳಿಸಿದ್ದಾರೆ.

ಇಂಗ್ಲೀಷ್ ಮೂಲ: ದಿ ವೈರ್

ಕನ್ನಡಕ್ಕೆ: ಪೃಥ್ವಿ ಕಣಸೋಗಿ

ಮಹಿಳೆಯರು ಮೈಗಂಟಿದ ಉಡುಪು ಧರಿಸುವುದು ನನಗೆ ಇಷ್ಟವಿಲ್ಲ: ಬಿಜೆಪಿ ಸಚಿವ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ; ವೀಡಿಯೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...