Homeಕರ್ನಾಟಕಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿ ರಚನೆ

ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿ ರಚನೆ

- Advertisement -
- Advertisement -

ರಾಜ್ಯ ಸರ್ಕಾರ ಈ ಹಿಂದೆ ಹೇಳಿದಂತೆ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿದೆ. ಇದೀಗ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿಗಳನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಒಟ್ಟು ಐದು ಸಮಿತಿಗಳನ್ನು ರಚನೆ ಮಾಡಲಾಗಿದೆ. ಕನ್ನಡ ಪ್ರಥಮ ಭಾಷೆ, ಕನ್ನಡ ದ್ವಿತೀಯ ಭಾಷೆ, ಕನ್ನಡ ತೃತೀಯ ಭಾಷೆ, 6, 7ನೇ ತರಗತಿಯ ಸಮಾಜ ವಿಜ್ಞಾನ ಹಾಗೂ 8, 9, 10ನೇ ತರಗತಿಯ ಸಮಾಜ ವಿಜ್ಞಾನಕ್ಕೆ ಪ್ರತ್ಯೇಕವಾಗಿ ಸಮಿತಿಗಳನ್ನು ರಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ನಿವೃತ್ತ ಪ್ರಾಧ್ಯಾಪಕ ಮಂಜುನಾಥ ಜೆ. ಹೆಗಡೆ ಅವರನ್ನು ಐದೂ ಸಮಿತಿಗಳ ಸಂಯೋಜಕರನ್ನಾಗಿ ನೇಮಿಸಲಾಗಿದೆ.

ಬಿಜೆಪಿ ಆಡಳಿತ ಅವಧಿಯಲ್ಲಿ ರೋಹಿತ್‌ ಚಕ್ರತೀರ್ಥ ಸಮಿತಿ ಮಾಡಿದ ಪಠ್ಯಪುಸ್ತಕಗಳ ಎಲ್ಲ ತಿದ್ದುಪಡಿಯನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದು ಮಾಡಲಾಗಿತ್ತು. ತಿದ್ದುಪಡಿಗೂ ಮೊದಲು ಇದ್ದ ಪಠ್ಯ ಕ್ರಮವನ್ನೇ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಸರಿಸಲು ಸೂಚಿಸಲಾಗಿತ್ತು. ಈಗ ಪಠ್ಯ ಪರಿಷ್ಕರಣೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಮೂರು ತಿಂಗಳ ಅವಕಾಶ ನೀಡಲಾಗಿದೆ. ಸಮಿತಿಗಳು ಕೊಡುವ ಪರಿಷ್ಕರಣಾ ವರದಿಯ ಶಿಫಾರಸುಗಳನ್ನು 2024-25ನೇ ಸಾಲಿನಿಂದ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಸಮಿತಿಗಳ ಅಧ್ಯಕ್ಷರುಗಳ ವಿವರ:

ಪ್ರಥಮ ಭಾಷೆ ಕನ್ನಡ: ಅಂಜನಪ್ಪ, ಪ್ರಾಧ್ಯಾಪಕರು, ತುಂಗಾಕಾಲೇಜು, ತೀರ್ಥಹಳ್ಳಿ.

ದ್ವಿತೀಯ ಭಾಷೆ ಕನ್ನಡ: ಎಚ್.ಎಸ್.ಸತ್ಯನಾರಾಯಣ್‌, ಉಪನ್ಯಾಸಕ, ಸರ್ಕಾರಿ ಬಾಲಕಿಯರ ಪಿಯು

ಕಾಲೇಜು ಬಸವನಹಳ್ಳಿ, ಚಿಕ್ಕಮಗಳೂರು.

ತೃತೀಯ ಭಾಷೆ ಕನ್ನಡ: ಮಂಜಣ್ಣ, ಪ್ರಾಧ್ಯಾಪಕ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ.

6,7ನೇ ತರಗತಿ ಸಮಾಜ ವಿಜ್ಞಾನ: ಎಂ.ಕಿರಣ್‌, ಸಹಾಯಕ ಪ್ರಾಧ್ಯಾಪಕರು, ಕೇಂದ್ರೀಯ ವಿವಿ ಕಲಬುರಗಿ.

8-10ನೇ ತರಗತಿ ಸಮಾಜ ವಿಜ್ಞಾನ: ಅಶ್ವತ್ಥನಾರಾಯಣ, ನಿವೃತ್ತ ಪ್ರಾಧ್ಯಾಪಕರು ಬೆಂಗಳೂರು.

ಇದನ್ನೂ ಓದಿ: ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...