Homeಕರ್ನಾಟಕಮುಖ್ಯವಾಹಿನಿ ಚಳವಳಿಗಳ ಭಾಗವಾಗಿ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ರಚನೆ

ಮುಖ್ಯವಾಹಿನಿ ಚಳವಳಿಗಳ ಭಾಗವಾಗಿ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ರಚನೆ

- Advertisement -
- Advertisement -

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ- ಕೋಯಲೀಷನ್ ಫಾರ್ ಕನ್ವರ್ಜನ್ಸ್ ರಚಿಸಲಾಗಿದೆ.

ಬೆಂಗಳೂರಿನ ಆಶೀರ್ವಾದ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ ಡಿಸೆಂಬರ್‌ 5 ಮತ್ತು 6ರಂದು ಸಭೆ ನಡೆಸಲಾಗಿದೆ. ಕರ್ನಾಟಕದ ಹತ್ತು ಜಿಲ್ಲೆಗಳ ಲೈಂಗಿಕ ಅಲ್ಪಸಂಖ್ಯಾತರ ಜಿಲ್ಲಾ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಸಮುದಾಯ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ, ಒಕ್ಕೂಟ ರಚನೆಗೆ ತೀರ್ಮಾನ ಕೈಗೊಂಡರು.

ಮುಖ್ಯ ವಾಹಿನಿ ಚಳವಳಿಗಳಾದ ಜನಪರ ಹಾಗೂ ಪ್ರಗತಿಪರ ಚಳವಳಿಗಳು, ಸಾಮಾಜಿಕ ನ್ಯಾಯ ಚಳವಳಿಗಳು, ಮಹಿಳಾ ಚಳವಳಿ, ಮಕ್ಕಳ ಹಕ್ಕುಗಳ ಚಳವಳಿ, ಯುವ ಸಮುದಾಯದ ಚಳವಳಿ, ಜಾತಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ಚಳವಳಿ, ಸಹಸ್ರ ನಾಗರಿಕರ ಚಳವಳಿ, ಮಾನದ ಹಕ್ಕುಗಳ ಚಳವಳಿ, ಕಾರ್ಮಿಕ ಚಳವಳಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳೊಂದಿಗೆ ಈ ಒಕ್ಕೂಟವು ಕಾರ್ಯನಿರ್ವಹಿಸಲಿದೆ.

ಈ ಒಕ್ಕೂಟದ ಜವಾಬ್ದಾರಿಯನ್ನು ರಾಜ್ಯ ಸಂಚಾಲಕರು, ವಿಭಾಗೀಯ ಸಂಚಾಲಕರು ಹಾಗೂ ಜಿಲ್ಲಾ ಸಂಚಾಲಕರು ನಿರ್ವಹಿಸುತ್ತಾರೆ.

ಡಿಸೆಂಬರ್ 5, ಸೋಮವಾರದಂದು ಸಭೆ ಆರಂಭಿಸಲಾಯಿತು. ಒಕ್ಕೂಟ ಬೇಕು – ಬೇಡಗಳ ಕುರಿತಾಗಿ ಚರ್ಚೆ ಮಾಡಿ ಎಲ್ಲಾ ಜಿಲ್ಲೆಗಳ ಜಿಲ್ಲಾ ಆಡಳಿತ ಮಂಡಳಿಗಳ ಪ್ರತಿನಿಧಿಗಳು ಮತ್ತು ಸಮುದಾಯ ಪ್ರತಿನಿಧಿಗಳು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸರ್ವಾನುಮತದಿಂದ ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ- ಕೊಯಿಲೀಷನ್ ಫಾರ್ ಕನ್ವರ್ಜನ್ಸ್‌‌ ಬೇಕು ಎಂಬ ನಿರ್ಧಾರಕ್ಕೆ ಬರಲಾಯಿತು.

ಡಿಸೆಂಬರ್‌ 6ರಂದು ಅಂದರೆ ಡಾ.ಬಿ.ಆರ್‌.ಅಂಬೇಡ್ಕರ್‌‌ರವರ ‘ಮಹಾ ಪರಿನಿರ್ವಾಣ ದಿನ’ದಂದು ಒಕ್ಕೂಟದ ಗುರಿ ಉದ್ದೇಶಗಳು, ವ್ಯಾಪ್ತಿ, ಇನ್ನಿತರ ವಿಷಯಗಳ ಕುರಿತಾಗಿ ಗುಂಪು ಚರ್ಚೆಯನ್ನು ಮಾಡಲಾಯಿತು. ನಂತರ ಸರ್ವಾನುಮತದಿಂದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಜಿಲ್ಲಾವಾರು ಸಂಚಾಲಕರ ಆಯ್ಕೆಯನ್ನು ಮಾಡಲಾಯಿತು. ಬಸವರಾಜ್ (ಯಾದಗಿರಿ), ನಾರಾಯಣ (ಹುಬ್ಬಳ್ಳಿ – ಧಾರವಾಡ), ನಿಂಗಪ್ಪ (ಕೊಪ್ಪಳ), ಶಮೀರ್ (ಬಾಗಲಕೋಟೆ), ಮಾಯಾ.ಎಸ್ (ಚಿಕ್ಕಬಳ್ಳಾಪುರ), ಪ್ರಕಾಶ್ ರಾಜ್ (ಬೆಂಗಳೂರು ನಗರ), ಸಂಜನಾ (ಉಡುಪಿ), ಕೃಷ್ಣಮೂರ್ತಿ (ಕೋಲಾರ), ಪ್ಯಾರೂ (ಶಿವಮೊಗ್ಗ), ಪ್ರಣತಿ (ಮೈಸೂರು), ನಂದನ್ (ದಾವಣಗೆರೆ), ಮೋನಿಕಾ (ರಾಮನಗರ), ಪ್ರಗತಿ (ರಾಯಚೂರು), ಬೀರಲಿಂಗ (ಕಲಬುರ್ಗಿ) ಅವರು ಜಿಲ್ಲಾವಾರು ಸಂಚಾಲಕರಾಗಿ ಆಯ್ಕೆಯಾದರು.

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ, ಕಾಂಗ್ರೆಸ್ ನಾಯಕಿ ಅಕ್ಕಯ್ ಪದ್ಮಶಾಲಿಯವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ, ಕಾಂಗ್ರೆಸ್ ನಾಯಕಿ ಅಕ್ಕಯ್ ಪದ್ಮಶಾಲಿಯವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆ ಕೈಗೊಂಡ ನಿರ್ಣಯಗಳು

1) ಒಂದು ವರ್ಷದವರೆಗೆ ಯಾವುದೇ ಶುಲ್ಕವನ್ನು ಸದಸ್ಯರಿಂದ ಸ್ವೀಕರಿಸದೆ ಉಚಿತವಾಗಿ ಈ ಒಕ್ಕೂಟವನ್ನು ನಡೆಸಿಕೊಂಡು ಹೋಗಬೇಕು.

2) ಸಂಸ್ಥೆಯು ಕೆಲಸ ಮಾಡಲು ಮುಕ್ತ ಸ್ವತಂತ್ರ್ಯವಾದ ವಾತಾವರಣವಿರಬೇಕೆಂಬ ಕಾರಣಕ್ಕೆ ಮತ್ತು ಕೆಲಸದ ವ್ಯಾಪ್ತಿಯನ್ನು ಹೆಚ್ಚಿಸಲು ಸಂಸ್ಥೆಯನ್ನು ನೋಂದಾಯಿಸುವುದು ಬೇಡ.

3)ಬ್ಯಾಂಕ್ ಅಕೌಂಟ್ ಬೇಕು. ಜಂಟಿ ಖಾತೆ ಇರಬೇಕು. ಆ ಖಾತೆಯು ರಾಯಚೂರು ಜಿಲ್ಲೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾನಲ್ಲಿ ಬಸವರಾಜ್ (ಯಾದಗಿರಿ ಜಿಲ್ಲೆ), ಪ್ರಗತಿ (ರಾಯಚೂರು ಜಿಲ್ಲೆ), ಬೀರಲಿಂಗ (ಕಲಬುರ್ಗಿ ಜಿಲ್ಲೆ) ಅವರ ಹೆಸರಿನಲ್ಲಿ ಇರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...