Homeಕರ್ನಾಟಕಮುಖ್ಯವಾಹಿನಿ ಚಳವಳಿಗಳ ಭಾಗವಾಗಿ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ರಚನೆ

ಮುಖ್ಯವಾಹಿನಿ ಚಳವಳಿಗಳ ಭಾಗವಾಗಿ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ರಚನೆ

- Advertisement -
- Advertisement -

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ- ಕೋಯಲೀಷನ್ ಫಾರ್ ಕನ್ವರ್ಜನ್ಸ್ ರಚಿಸಲಾಗಿದೆ.

ಬೆಂಗಳೂರಿನ ಆಶೀರ್ವಾದ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ ಡಿಸೆಂಬರ್‌ 5 ಮತ್ತು 6ರಂದು ಸಭೆ ನಡೆಸಲಾಗಿದೆ. ಕರ್ನಾಟಕದ ಹತ್ತು ಜಿಲ್ಲೆಗಳ ಲೈಂಗಿಕ ಅಲ್ಪಸಂಖ್ಯಾತರ ಜಿಲ್ಲಾ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಸಮುದಾಯ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ, ಒಕ್ಕೂಟ ರಚನೆಗೆ ತೀರ್ಮಾನ ಕೈಗೊಂಡರು.

ಮುಖ್ಯ ವಾಹಿನಿ ಚಳವಳಿಗಳಾದ ಜನಪರ ಹಾಗೂ ಪ್ರಗತಿಪರ ಚಳವಳಿಗಳು, ಸಾಮಾಜಿಕ ನ್ಯಾಯ ಚಳವಳಿಗಳು, ಮಹಿಳಾ ಚಳವಳಿ, ಮಕ್ಕಳ ಹಕ್ಕುಗಳ ಚಳವಳಿ, ಯುವ ಸಮುದಾಯದ ಚಳವಳಿ, ಜಾತಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ಚಳವಳಿ, ಸಹಸ್ರ ನಾಗರಿಕರ ಚಳವಳಿ, ಮಾನದ ಹಕ್ಕುಗಳ ಚಳವಳಿ, ಕಾರ್ಮಿಕ ಚಳವಳಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳೊಂದಿಗೆ ಈ ಒಕ್ಕೂಟವು ಕಾರ್ಯನಿರ್ವಹಿಸಲಿದೆ.

ಈ ಒಕ್ಕೂಟದ ಜವಾಬ್ದಾರಿಯನ್ನು ರಾಜ್ಯ ಸಂಚಾಲಕರು, ವಿಭಾಗೀಯ ಸಂಚಾಲಕರು ಹಾಗೂ ಜಿಲ್ಲಾ ಸಂಚಾಲಕರು ನಿರ್ವಹಿಸುತ್ತಾರೆ.

ಡಿಸೆಂಬರ್ 5, ಸೋಮವಾರದಂದು ಸಭೆ ಆರಂಭಿಸಲಾಯಿತು. ಒಕ್ಕೂಟ ಬೇಕು – ಬೇಡಗಳ ಕುರಿತಾಗಿ ಚರ್ಚೆ ಮಾಡಿ ಎಲ್ಲಾ ಜಿಲ್ಲೆಗಳ ಜಿಲ್ಲಾ ಆಡಳಿತ ಮಂಡಳಿಗಳ ಪ್ರತಿನಿಧಿಗಳು ಮತ್ತು ಸಮುದಾಯ ಪ್ರತಿನಿಧಿಗಳು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸರ್ವಾನುಮತದಿಂದ ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ- ಕೊಯಿಲೀಷನ್ ಫಾರ್ ಕನ್ವರ್ಜನ್ಸ್‌‌ ಬೇಕು ಎಂಬ ನಿರ್ಧಾರಕ್ಕೆ ಬರಲಾಯಿತು.

ಡಿಸೆಂಬರ್‌ 6ರಂದು ಅಂದರೆ ಡಾ.ಬಿ.ಆರ್‌.ಅಂಬೇಡ್ಕರ್‌‌ರವರ ‘ಮಹಾ ಪರಿನಿರ್ವಾಣ ದಿನ’ದಂದು ಒಕ್ಕೂಟದ ಗುರಿ ಉದ್ದೇಶಗಳು, ವ್ಯಾಪ್ತಿ, ಇನ್ನಿತರ ವಿಷಯಗಳ ಕುರಿತಾಗಿ ಗುಂಪು ಚರ್ಚೆಯನ್ನು ಮಾಡಲಾಯಿತು. ನಂತರ ಸರ್ವಾನುಮತದಿಂದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಜಿಲ್ಲಾವಾರು ಸಂಚಾಲಕರ ಆಯ್ಕೆಯನ್ನು ಮಾಡಲಾಯಿತು. ಬಸವರಾಜ್ (ಯಾದಗಿರಿ), ನಾರಾಯಣ (ಹುಬ್ಬಳ್ಳಿ – ಧಾರವಾಡ), ನಿಂಗಪ್ಪ (ಕೊಪ್ಪಳ), ಶಮೀರ್ (ಬಾಗಲಕೋಟೆ), ಮಾಯಾ.ಎಸ್ (ಚಿಕ್ಕಬಳ್ಳಾಪುರ), ಪ್ರಕಾಶ್ ರಾಜ್ (ಬೆಂಗಳೂರು ನಗರ), ಸಂಜನಾ (ಉಡುಪಿ), ಕೃಷ್ಣಮೂರ್ತಿ (ಕೋಲಾರ), ಪ್ಯಾರೂ (ಶಿವಮೊಗ್ಗ), ಪ್ರಣತಿ (ಮೈಸೂರು), ನಂದನ್ (ದಾವಣಗೆರೆ), ಮೋನಿಕಾ (ರಾಮನಗರ), ಪ್ರಗತಿ (ರಾಯಚೂರು), ಬೀರಲಿಂಗ (ಕಲಬುರ್ಗಿ) ಅವರು ಜಿಲ್ಲಾವಾರು ಸಂಚಾಲಕರಾಗಿ ಆಯ್ಕೆಯಾದರು.

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ, ಕಾಂಗ್ರೆಸ್ ನಾಯಕಿ ಅಕ್ಕಯ್ ಪದ್ಮಶಾಲಿಯವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ, ಕಾಂಗ್ರೆಸ್ ನಾಯಕಿ ಅಕ್ಕಯ್ ಪದ್ಮಶಾಲಿಯವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆ ಕೈಗೊಂಡ ನಿರ್ಣಯಗಳು

1) ಒಂದು ವರ್ಷದವರೆಗೆ ಯಾವುದೇ ಶುಲ್ಕವನ್ನು ಸದಸ್ಯರಿಂದ ಸ್ವೀಕರಿಸದೆ ಉಚಿತವಾಗಿ ಈ ಒಕ್ಕೂಟವನ್ನು ನಡೆಸಿಕೊಂಡು ಹೋಗಬೇಕು.

2) ಸಂಸ್ಥೆಯು ಕೆಲಸ ಮಾಡಲು ಮುಕ್ತ ಸ್ವತಂತ್ರ್ಯವಾದ ವಾತಾವರಣವಿರಬೇಕೆಂಬ ಕಾರಣಕ್ಕೆ ಮತ್ತು ಕೆಲಸದ ವ್ಯಾಪ್ತಿಯನ್ನು ಹೆಚ್ಚಿಸಲು ಸಂಸ್ಥೆಯನ್ನು ನೋಂದಾಯಿಸುವುದು ಬೇಡ.

3)ಬ್ಯಾಂಕ್ ಅಕೌಂಟ್ ಬೇಕು. ಜಂಟಿ ಖಾತೆ ಇರಬೇಕು. ಆ ಖಾತೆಯು ರಾಯಚೂರು ಜಿಲ್ಲೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾನಲ್ಲಿ ಬಸವರಾಜ್ (ಯಾದಗಿರಿ ಜಿಲ್ಲೆ), ಪ್ರಗತಿ (ರಾಯಚೂರು ಜಿಲ್ಲೆ), ಬೀರಲಿಂಗ (ಕಲಬುರ್ಗಿ ಜಿಲ್ಲೆ) ಅವರ ಹೆಸರಿನಲ್ಲಿ ಇರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...