Homeಕರ್ನಾಟಕಮುಖ್ಯವಾಹಿನಿ ಚಳವಳಿಗಳ ಭಾಗವಾಗಿ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ರಚನೆ

ಮುಖ್ಯವಾಹಿನಿ ಚಳವಳಿಗಳ ಭಾಗವಾಗಿ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ರಚನೆ

- Advertisement -
- Advertisement -

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ- ಕೋಯಲೀಷನ್ ಫಾರ್ ಕನ್ವರ್ಜನ್ಸ್ ರಚಿಸಲಾಗಿದೆ.

ಬೆಂಗಳೂರಿನ ಆಶೀರ್ವಾದ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ ಡಿಸೆಂಬರ್‌ 5 ಮತ್ತು 6ರಂದು ಸಭೆ ನಡೆಸಲಾಗಿದೆ. ಕರ್ನಾಟಕದ ಹತ್ತು ಜಿಲ್ಲೆಗಳ ಲೈಂಗಿಕ ಅಲ್ಪಸಂಖ್ಯಾತರ ಜಿಲ್ಲಾ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಸಮುದಾಯ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ, ಒಕ್ಕೂಟ ರಚನೆಗೆ ತೀರ್ಮಾನ ಕೈಗೊಂಡರು.

ಮುಖ್ಯ ವಾಹಿನಿ ಚಳವಳಿಗಳಾದ ಜನಪರ ಹಾಗೂ ಪ್ರಗತಿಪರ ಚಳವಳಿಗಳು, ಸಾಮಾಜಿಕ ನ್ಯಾಯ ಚಳವಳಿಗಳು, ಮಹಿಳಾ ಚಳವಳಿ, ಮಕ್ಕಳ ಹಕ್ಕುಗಳ ಚಳವಳಿ, ಯುವ ಸಮುದಾಯದ ಚಳವಳಿ, ಜಾತಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ಚಳವಳಿ, ಸಹಸ್ರ ನಾಗರಿಕರ ಚಳವಳಿ, ಮಾನದ ಹಕ್ಕುಗಳ ಚಳವಳಿ, ಕಾರ್ಮಿಕ ಚಳವಳಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳೊಂದಿಗೆ ಈ ಒಕ್ಕೂಟವು ಕಾರ್ಯನಿರ್ವಹಿಸಲಿದೆ.

ಈ ಒಕ್ಕೂಟದ ಜವಾಬ್ದಾರಿಯನ್ನು ರಾಜ್ಯ ಸಂಚಾಲಕರು, ವಿಭಾಗೀಯ ಸಂಚಾಲಕರು ಹಾಗೂ ಜಿಲ್ಲಾ ಸಂಚಾಲಕರು ನಿರ್ವಹಿಸುತ್ತಾರೆ.

ಡಿಸೆಂಬರ್ 5, ಸೋಮವಾರದಂದು ಸಭೆ ಆರಂಭಿಸಲಾಯಿತು. ಒಕ್ಕೂಟ ಬೇಕು – ಬೇಡಗಳ ಕುರಿತಾಗಿ ಚರ್ಚೆ ಮಾಡಿ ಎಲ್ಲಾ ಜಿಲ್ಲೆಗಳ ಜಿಲ್ಲಾ ಆಡಳಿತ ಮಂಡಳಿಗಳ ಪ್ರತಿನಿಧಿಗಳು ಮತ್ತು ಸಮುದಾಯ ಪ್ರತಿನಿಧಿಗಳು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸರ್ವಾನುಮತದಿಂದ ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ- ಕೊಯಿಲೀಷನ್ ಫಾರ್ ಕನ್ವರ್ಜನ್ಸ್‌‌ ಬೇಕು ಎಂಬ ನಿರ್ಧಾರಕ್ಕೆ ಬರಲಾಯಿತು.

ಡಿಸೆಂಬರ್‌ 6ರಂದು ಅಂದರೆ ಡಾ.ಬಿ.ಆರ್‌.ಅಂಬೇಡ್ಕರ್‌‌ರವರ ‘ಮಹಾ ಪರಿನಿರ್ವಾಣ ದಿನ’ದಂದು ಒಕ್ಕೂಟದ ಗುರಿ ಉದ್ದೇಶಗಳು, ವ್ಯಾಪ್ತಿ, ಇನ್ನಿತರ ವಿಷಯಗಳ ಕುರಿತಾಗಿ ಗುಂಪು ಚರ್ಚೆಯನ್ನು ಮಾಡಲಾಯಿತು. ನಂತರ ಸರ್ವಾನುಮತದಿಂದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಜಿಲ್ಲಾವಾರು ಸಂಚಾಲಕರ ಆಯ್ಕೆಯನ್ನು ಮಾಡಲಾಯಿತು. ಬಸವರಾಜ್ (ಯಾದಗಿರಿ), ನಾರಾಯಣ (ಹುಬ್ಬಳ್ಳಿ – ಧಾರವಾಡ), ನಿಂಗಪ್ಪ (ಕೊಪ್ಪಳ), ಶಮೀರ್ (ಬಾಗಲಕೋಟೆ), ಮಾಯಾ.ಎಸ್ (ಚಿಕ್ಕಬಳ್ಳಾಪುರ), ಪ್ರಕಾಶ್ ರಾಜ್ (ಬೆಂಗಳೂರು ನಗರ), ಸಂಜನಾ (ಉಡುಪಿ), ಕೃಷ್ಣಮೂರ್ತಿ (ಕೋಲಾರ), ಪ್ಯಾರೂ (ಶಿವಮೊಗ್ಗ), ಪ್ರಣತಿ (ಮೈಸೂರು), ನಂದನ್ (ದಾವಣಗೆರೆ), ಮೋನಿಕಾ (ರಾಮನಗರ), ಪ್ರಗತಿ (ರಾಯಚೂರು), ಬೀರಲಿಂಗ (ಕಲಬುರ್ಗಿ) ಅವರು ಜಿಲ್ಲಾವಾರು ಸಂಚಾಲಕರಾಗಿ ಆಯ್ಕೆಯಾದರು.

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ, ಕಾಂಗ್ರೆಸ್ ನಾಯಕಿ ಅಕ್ಕಯ್ ಪದ್ಮಶಾಲಿಯವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ, ಕಾಂಗ್ರೆಸ್ ನಾಯಕಿ ಅಕ್ಕಯ್ ಪದ್ಮಶಾಲಿಯವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆ ಕೈಗೊಂಡ ನಿರ್ಣಯಗಳು

1) ಒಂದು ವರ್ಷದವರೆಗೆ ಯಾವುದೇ ಶುಲ್ಕವನ್ನು ಸದಸ್ಯರಿಂದ ಸ್ವೀಕರಿಸದೆ ಉಚಿತವಾಗಿ ಈ ಒಕ್ಕೂಟವನ್ನು ನಡೆಸಿಕೊಂಡು ಹೋಗಬೇಕು.

2) ಸಂಸ್ಥೆಯು ಕೆಲಸ ಮಾಡಲು ಮುಕ್ತ ಸ್ವತಂತ್ರ್ಯವಾದ ವಾತಾವರಣವಿರಬೇಕೆಂಬ ಕಾರಣಕ್ಕೆ ಮತ್ತು ಕೆಲಸದ ವ್ಯಾಪ್ತಿಯನ್ನು ಹೆಚ್ಚಿಸಲು ಸಂಸ್ಥೆಯನ್ನು ನೋಂದಾಯಿಸುವುದು ಬೇಡ.

3)ಬ್ಯಾಂಕ್ ಅಕೌಂಟ್ ಬೇಕು. ಜಂಟಿ ಖಾತೆ ಇರಬೇಕು. ಆ ಖಾತೆಯು ರಾಯಚೂರು ಜಿಲ್ಲೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾನಲ್ಲಿ ಬಸವರಾಜ್ (ಯಾದಗಿರಿ ಜಿಲ್ಲೆ), ಪ್ರಗತಿ (ರಾಯಚೂರು ಜಿಲ್ಲೆ), ಬೀರಲಿಂಗ (ಕಲಬುರ್ಗಿ ಜಿಲ್ಲೆ) ಅವರ ಹೆಸರಿನಲ್ಲಿ ಇರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...