Homeಕರ್ನಾಟಕಮುಖ್ಯವಾಹಿನಿ ಚಳವಳಿಗಳ ಭಾಗವಾಗಿ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ರಚನೆ

ಮುಖ್ಯವಾಹಿನಿ ಚಳವಳಿಗಳ ಭಾಗವಾಗಿ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ರಚನೆ

- Advertisement -
- Advertisement -

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ- ಕೋಯಲೀಷನ್ ಫಾರ್ ಕನ್ವರ್ಜನ್ಸ್ ರಚಿಸಲಾಗಿದೆ.

ಬೆಂಗಳೂರಿನ ಆಶೀರ್ವಾದ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ ಡಿಸೆಂಬರ್‌ 5 ಮತ್ತು 6ರಂದು ಸಭೆ ನಡೆಸಲಾಗಿದೆ. ಕರ್ನಾಟಕದ ಹತ್ತು ಜಿಲ್ಲೆಗಳ ಲೈಂಗಿಕ ಅಲ್ಪಸಂಖ್ಯಾತರ ಜಿಲ್ಲಾ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಸಮುದಾಯ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ, ಒಕ್ಕೂಟ ರಚನೆಗೆ ತೀರ್ಮಾನ ಕೈಗೊಂಡರು.

ಮುಖ್ಯ ವಾಹಿನಿ ಚಳವಳಿಗಳಾದ ಜನಪರ ಹಾಗೂ ಪ್ರಗತಿಪರ ಚಳವಳಿಗಳು, ಸಾಮಾಜಿಕ ನ್ಯಾಯ ಚಳವಳಿಗಳು, ಮಹಿಳಾ ಚಳವಳಿ, ಮಕ್ಕಳ ಹಕ್ಕುಗಳ ಚಳವಳಿ, ಯುವ ಸಮುದಾಯದ ಚಳವಳಿ, ಜಾತಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ಚಳವಳಿ, ಸಹಸ್ರ ನಾಗರಿಕರ ಚಳವಳಿ, ಮಾನದ ಹಕ್ಕುಗಳ ಚಳವಳಿ, ಕಾರ್ಮಿಕ ಚಳವಳಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳೊಂದಿಗೆ ಈ ಒಕ್ಕೂಟವು ಕಾರ್ಯನಿರ್ವಹಿಸಲಿದೆ.

ಈ ಒಕ್ಕೂಟದ ಜವಾಬ್ದಾರಿಯನ್ನು ರಾಜ್ಯ ಸಂಚಾಲಕರು, ವಿಭಾಗೀಯ ಸಂಚಾಲಕರು ಹಾಗೂ ಜಿಲ್ಲಾ ಸಂಚಾಲಕರು ನಿರ್ವಹಿಸುತ್ತಾರೆ.

ಡಿಸೆಂಬರ್ 5, ಸೋಮವಾರದಂದು ಸಭೆ ಆರಂಭಿಸಲಾಯಿತು. ಒಕ್ಕೂಟ ಬೇಕು – ಬೇಡಗಳ ಕುರಿತಾಗಿ ಚರ್ಚೆ ಮಾಡಿ ಎಲ್ಲಾ ಜಿಲ್ಲೆಗಳ ಜಿಲ್ಲಾ ಆಡಳಿತ ಮಂಡಳಿಗಳ ಪ್ರತಿನಿಧಿಗಳು ಮತ್ತು ಸಮುದಾಯ ಪ್ರತಿನಿಧಿಗಳು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸರ್ವಾನುಮತದಿಂದ ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ- ಕೊಯಿಲೀಷನ್ ಫಾರ್ ಕನ್ವರ್ಜನ್ಸ್‌‌ ಬೇಕು ಎಂಬ ನಿರ್ಧಾರಕ್ಕೆ ಬರಲಾಯಿತು.

ಡಿಸೆಂಬರ್‌ 6ರಂದು ಅಂದರೆ ಡಾ.ಬಿ.ಆರ್‌.ಅಂಬೇಡ್ಕರ್‌‌ರವರ ‘ಮಹಾ ಪರಿನಿರ್ವಾಣ ದಿನ’ದಂದು ಒಕ್ಕೂಟದ ಗುರಿ ಉದ್ದೇಶಗಳು, ವ್ಯಾಪ್ತಿ, ಇನ್ನಿತರ ವಿಷಯಗಳ ಕುರಿತಾಗಿ ಗುಂಪು ಚರ್ಚೆಯನ್ನು ಮಾಡಲಾಯಿತು. ನಂತರ ಸರ್ವಾನುಮತದಿಂದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಜಿಲ್ಲಾವಾರು ಸಂಚಾಲಕರ ಆಯ್ಕೆಯನ್ನು ಮಾಡಲಾಯಿತು. ಬಸವರಾಜ್ (ಯಾದಗಿರಿ), ನಾರಾಯಣ (ಹುಬ್ಬಳ್ಳಿ – ಧಾರವಾಡ), ನಿಂಗಪ್ಪ (ಕೊಪ್ಪಳ), ಶಮೀರ್ (ಬಾಗಲಕೋಟೆ), ಮಾಯಾ.ಎಸ್ (ಚಿಕ್ಕಬಳ್ಳಾಪುರ), ಪ್ರಕಾಶ್ ರಾಜ್ (ಬೆಂಗಳೂರು ನಗರ), ಸಂಜನಾ (ಉಡುಪಿ), ಕೃಷ್ಣಮೂರ್ತಿ (ಕೋಲಾರ), ಪ್ಯಾರೂ (ಶಿವಮೊಗ್ಗ), ಪ್ರಣತಿ (ಮೈಸೂರು), ನಂದನ್ (ದಾವಣಗೆರೆ), ಮೋನಿಕಾ (ರಾಮನಗರ), ಪ್ರಗತಿ (ರಾಯಚೂರು), ಬೀರಲಿಂಗ (ಕಲಬುರ್ಗಿ) ಅವರು ಜಿಲ್ಲಾವಾರು ಸಂಚಾಲಕರಾಗಿ ಆಯ್ಕೆಯಾದರು.

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ, ಕಾಂಗ್ರೆಸ್ ನಾಯಕಿ ಅಕ್ಕಯ್ ಪದ್ಮಶಾಲಿಯವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ, ಕಾಂಗ್ರೆಸ್ ನಾಯಕಿ ಅಕ್ಕಯ್ ಪದ್ಮಶಾಲಿಯವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆ ಕೈಗೊಂಡ ನಿರ್ಣಯಗಳು

1) ಒಂದು ವರ್ಷದವರೆಗೆ ಯಾವುದೇ ಶುಲ್ಕವನ್ನು ಸದಸ್ಯರಿಂದ ಸ್ವೀಕರಿಸದೆ ಉಚಿತವಾಗಿ ಈ ಒಕ್ಕೂಟವನ್ನು ನಡೆಸಿಕೊಂಡು ಹೋಗಬೇಕು.

2) ಸಂಸ್ಥೆಯು ಕೆಲಸ ಮಾಡಲು ಮುಕ್ತ ಸ್ವತಂತ್ರ್ಯವಾದ ವಾತಾವರಣವಿರಬೇಕೆಂಬ ಕಾರಣಕ್ಕೆ ಮತ್ತು ಕೆಲಸದ ವ್ಯಾಪ್ತಿಯನ್ನು ಹೆಚ್ಚಿಸಲು ಸಂಸ್ಥೆಯನ್ನು ನೋಂದಾಯಿಸುವುದು ಬೇಡ.

3)ಬ್ಯಾಂಕ್ ಅಕೌಂಟ್ ಬೇಕು. ಜಂಟಿ ಖಾತೆ ಇರಬೇಕು. ಆ ಖಾತೆಯು ರಾಯಚೂರು ಜಿಲ್ಲೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾನಲ್ಲಿ ಬಸವರಾಜ್ (ಯಾದಗಿರಿ ಜಿಲ್ಲೆ), ಪ್ರಗತಿ (ರಾಯಚೂರು ಜಿಲ್ಲೆ), ಬೀರಲಿಂಗ (ಕಲಬುರ್ಗಿ ಜಿಲ್ಲೆ) ಅವರ ಹೆಸರಿನಲ್ಲಿ ಇರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...