Homeಕರ್ನಾಟಕಮೂಗಿಗೆ ತುಪ್ಪ ಸವರಲು ಉಪಸಮಿತಿ ರಚನೆ: 4ನೇ ದಿನಕ್ಕೆ ಕಾಲಿಟ್ಟ ಒಳಮೀಸಲಾತಿ ಹೋರಾಟ

ಮೂಗಿಗೆ ತುಪ್ಪ ಸವರಲು ಉಪಸಮಿತಿ ರಚನೆ: 4ನೇ ದಿನಕ್ಕೆ ಕಾಲಿಟ್ಟ ಒಳಮೀಸಲಾತಿ ಹೋರಾಟ

- Advertisement -
- Advertisement -

ಡಿಸೆಂಬರ್‌ 11ರಂದು ಆರಂಭವಾದ ಒಳಮೀಸಲಾತಿ ಹೋರಾಟ ಬುಧವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರ ರಚಿಸಿರುವ ಉಪಸಮಿತಿಯ ವಿರುದ್ಧ ಒಳಮೀಸಲಾತಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರ ನೂಕಾಟದಲ್ಲಿ ಗಾಯಗೊಂಡ ಬಳಿಕ ಚಿಕಿತ್ಸೆ ಪಡೆದು ಮತ್ತೆ ಹೋರಾಟಕ್ಕೆ ಮರಳಿರುವ ಹಿರಿಯ ಮುಖಂಡರಾದ ಕರಿಯಪ್ಪ ಗುಡಿಮನಿಯವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಮಳೆಯಲ್ಲಿ ನೆನೆಯದಂತೆ ಶಾಶ್ವತವಾದ ಟೆಂಟ್‌ ನಿರ್ಮಾಣ ಮಾಡಿದ್ದೇವೆ. ಈ ಭಾರಿಯ ಸದನದಲ್ಲಿ ಒಳಮೀಸಲಾತಿಯ ಸಂಬಂಧ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಳಮೀಸಲಾತಿ ಸಂಬಂಧ ಸರ್ಕಾರ ರಚಿಸಿರುವ ಉಪಸಮಿತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, “ಸಮುದಾಯವನ್ನು ವಂಚಿಸಲು ಉಪಸಮಿತಿ ರಚಿಸಿದ್ದಾರೆ. ಮೂಗಿಗೆ ತುಪ್ಪ ಸವರಲು ಈ ನಿರ್ಧಾರ ಕೈಗೊಂಡಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಕೂಡಲೇ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಜಾರಿಗೊಳಿಸಬೇಕು. ಅಲ್ಲಿಯವರೆಗೂ ನಾವು ಕದಲುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಒಳಮೀಸಲಾತಿ ಹೋರಾಟಕ್ಕೆ ಶಾಶ್ವತವಾದ ವೇದಿಕೆ ನಿರ್ಮಿಸುತ್ತಿರುವುದು

“ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿಯವರು ಒಳಮೀಸಲಾತಿ ಜಾರಿ ಕುರಿತು ಮುಂಬರುವ ಅಧಿವೇಶನದಲ್ಲಿ ಗಟ್ಟಿಯಾಗಿ ಮಾತನಾಡಬೇಕು. ತಾವು ಅಧಿಕಾರ ಬರುವ ಮೂಲಕವೇ ಸದಾಶಿವ ಆಯೋಗದ ವರದಿಯನ್ನು ಸಿದ್ದರಾಮಯ್ಯನವರು ಜಾರಿಗೊಳಿಸಬೇಕೆಂದೇನೂ ಇಲ್ಲ. ವಿರೋಧ ಪಕ್ಷದ ನಾಯಕರಾಗಿ ಅವರು ಸದನದಲ್ಲಿ ಈ ಕುರಿತು ಮೊದಲ ಆದ್ಯತೆಯ ಮೇರೆಗೆ ಮಾತನಾಡಬೇಕು. ವರದಿಯನ್ನು ಬಿಡುಗಡೆ ಮಾಡಲು ಒತ್ತಾಯ ತರಬೇಕು” ಎಂದು ಆಗ್ರಹಿಸಿದರು.

“ಹೋರಾಟದ ವೇಳೆ ಪೊಲೀಸರ ನೂಕಾಟದಲ್ಲಿ ನನಗೆ ಪೆಟ್ಟಾಗಿದೆ. ಸುಮಾರು 380 ಕಿಮೀ ನಡೆದು ಬಂದಾಗಲೂ ಯಾವುದೇ ತೊಂದರೆಯಾಗಲಿಲ್ಲ. ಆದರೆ ಮೊನ್ನೆಯ ಘಟನೆಯಲ್ಲಿ ಗಾಯಗೊಂಡೆ. ಈಗ ಕೊಂಚ ಚೇತರಿಸಿಕೊಂಡು ಹೋರಾಟಕ್ಕೆ ಮರಳಿದ್ದೇನೆ. ಹೋರಾಟದ ಮುಂಚೂಣಿಯಲ್ಲಿರುವ ಅಂಬಣ್ಣ ಅರೋಲಿಕರ್‌ ಅವರ ತಂದೆ ನಿಧನರಾಗಿದ್ದಾರೆ. ಹೀಗಾಗಿ ಅಂಬಣ್ಣ ಎಲ್ಲ ಕಾರ್ಯಗಳನ್ನು ಮುಗಿಸಿಕೊಂಡು ಇನ್ನೆರಡು ದಿನಗಳಲ್ಲಿ ವಾಪಸ್‌ ಬಂದು ಹೋರಾಟದೊಂದಿಗೆ ಕೂಡಿಕೊಳ್ಳಲಿದ್ದಾರೆ” ಎಂದು ಅವರು ಮಾಹಿತಿ ನೀಡಿದರು.

ಒಳಮೀಸಲಾತಿ ಹೋರಾಟಗಾರರಾದ ಬಿ.ಆರ್‌.ಭಾಸ್ಕರ್‌ ಪ್ರಸಾದ್‌ ಪ್ರತಿಕ್ರಿಯಿಸಿದ್ದು, “ಉಪ ಸಮಿತಿ ಎನ್ನುವ ನಾಟಕ ಬಂದ್ ಮಾಡಬೇಕು. ಹತ್ತು ಪರ್ಸೆಂಟ್‌ ಇಡಬ್ಲ್ಯೂಎಸ್‌ ಮೀಸಲಾತಿ‌ ಕೊಡುವಾಗ ಯಾವ ಉಪಸಮಿತಿ ಮಾಡಿದ್ದರು? ಪ್ರತೇಕ ಲಿಂಗಾಯತ ಧರ್ಮದ ಶಿಫಾರಸು ಮಾಡುವಾಗ ಯಾವ ಉಪಸಮಿತಿ ಕತೆ ಕೇಳಿದ್ದರು? ಸುಮ್ನೆ ಇದೆಲ್ಲಾ ಕತೆ, ಕವನಗಳನ್ನು ಬದಿಗಿಟ್ಟು ಒಳಮೀಸಲಾತಿ ಜಾರಿಗೆ ಸೂಕ್ತ ಕ್ರಮ ತೆಗೆದುಕೊಳ್ಳಲಿ ಅಷ್ಟೇ” ಎಂದಿದ್ದಾರೆ.

“2018ರಲ್ಲಿ ರಚನೆಯಾದ ಉಪ ಸಮಿತಿ ಒಂದೂ ಸಭೆ ನಡೆಸಲಿಲ್ಲ. ಒಳಮೀಸಲಾತಿ ಜಾರಿಯೂ ಆಗಲಿಲ್ಲ. ಅದರ ಪರಿಣಾಮವಾಗಿ ಇವತ್ತು ಸಿದ್ದರಾಮಯ್ಯನವರು ಒಂದು ಕ್ಷೇತ್ರಕ್ಕಾಗಿ ಊರೂರು ಅಲೆಯುವಂತೆ ಮಾಡಿದ್ದಾಗಿದೆ. ಇಷ್ಟಾದರೂ ಈ ಬಿಜೆಪಿ ಸರ್ಕಾರ ಉಪಸಮಿತಿ ಎನ್ನುವ ನಾಟಕ ಶುರು ಮಾಡಿದೆ. ಮರ್ಯಾದೆಯಿಂದ ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಲಿ. ಇಲ್ಲದಿದ್ದರೆ ಬಿಜೆಪಿಗೆ ಹೇಗೆ ಪಾಠ ಕಲಿಸಬೇಕೆಂದು ಈ ಸಮುದಾಯಕ್ಕೆ ಚೆನ್ನಾಗಿ ಗೊತ್ತಿದೆ” ಎಂದು ತಿಳಿಸಿದ್ದಾರೆ.

“ಹೊಲೆ ಮಾದಿಗರಿಬ್ಬರೂ ಮನಸ್ಸು ಮಾಡಿದರೆ ರಾಜ್ಯದ 224 ಕ್ಷೇತ್ರದಲ್ಲಿ ಎಲ್ಲಿಯೂ ಬಿಜೆಪಿ ಗೆಲ್ಲುವುದಿಲ್ಲ. ಈ ಎರಡು ಸಮುದಾಯದ ಜಾತಿ ಜನಸಂಖ್ಯೆಗೆ ಅಷ್ಟು ಮಹತ್ತರ ಪಾತ್ರವಿದೆ” ಎಂದು ಗುಡುಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...