Homeಕರ್ನಾಟಕಮೂಗಿಗೆ ತುಪ್ಪ ಸವರಲು ಉಪಸಮಿತಿ ರಚನೆ: 4ನೇ ದಿನಕ್ಕೆ ಕಾಲಿಟ್ಟ ಒಳಮೀಸಲಾತಿ ಹೋರಾಟ

ಮೂಗಿಗೆ ತುಪ್ಪ ಸವರಲು ಉಪಸಮಿತಿ ರಚನೆ: 4ನೇ ದಿನಕ್ಕೆ ಕಾಲಿಟ್ಟ ಒಳಮೀಸಲಾತಿ ಹೋರಾಟ

- Advertisement -
- Advertisement -

ಡಿಸೆಂಬರ್‌ 11ರಂದು ಆರಂಭವಾದ ಒಳಮೀಸಲಾತಿ ಹೋರಾಟ ಬುಧವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರ ರಚಿಸಿರುವ ಉಪಸಮಿತಿಯ ವಿರುದ್ಧ ಒಳಮೀಸಲಾತಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರ ನೂಕಾಟದಲ್ಲಿ ಗಾಯಗೊಂಡ ಬಳಿಕ ಚಿಕಿತ್ಸೆ ಪಡೆದು ಮತ್ತೆ ಹೋರಾಟಕ್ಕೆ ಮರಳಿರುವ ಹಿರಿಯ ಮುಖಂಡರಾದ ಕರಿಯಪ್ಪ ಗುಡಿಮನಿಯವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಮಳೆಯಲ್ಲಿ ನೆನೆಯದಂತೆ ಶಾಶ್ವತವಾದ ಟೆಂಟ್‌ ನಿರ್ಮಾಣ ಮಾಡಿದ್ದೇವೆ. ಈ ಭಾರಿಯ ಸದನದಲ್ಲಿ ಒಳಮೀಸಲಾತಿಯ ಸಂಬಂಧ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಳಮೀಸಲಾತಿ ಸಂಬಂಧ ಸರ್ಕಾರ ರಚಿಸಿರುವ ಉಪಸಮಿತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, “ಸಮುದಾಯವನ್ನು ವಂಚಿಸಲು ಉಪಸಮಿತಿ ರಚಿಸಿದ್ದಾರೆ. ಮೂಗಿಗೆ ತುಪ್ಪ ಸವರಲು ಈ ನಿರ್ಧಾರ ಕೈಗೊಂಡಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಕೂಡಲೇ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಜಾರಿಗೊಳಿಸಬೇಕು. ಅಲ್ಲಿಯವರೆಗೂ ನಾವು ಕದಲುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಒಳಮೀಸಲಾತಿ ಹೋರಾಟಕ್ಕೆ ಶಾಶ್ವತವಾದ ವೇದಿಕೆ ನಿರ್ಮಿಸುತ್ತಿರುವುದು

“ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿಯವರು ಒಳಮೀಸಲಾತಿ ಜಾರಿ ಕುರಿತು ಮುಂಬರುವ ಅಧಿವೇಶನದಲ್ಲಿ ಗಟ್ಟಿಯಾಗಿ ಮಾತನಾಡಬೇಕು. ತಾವು ಅಧಿಕಾರ ಬರುವ ಮೂಲಕವೇ ಸದಾಶಿವ ಆಯೋಗದ ವರದಿಯನ್ನು ಸಿದ್ದರಾಮಯ್ಯನವರು ಜಾರಿಗೊಳಿಸಬೇಕೆಂದೇನೂ ಇಲ್ಲ. ವಿರೋಧ ಪಕ್ಷದ ನಾಯಕರಾಗಿ ಅವರು ಸದನದಲ್ಲಿ ಈ ಕುರಿತು ಮೊದಲ ಆದ್ಯತೆಯ ಮೇರೆಗೆ ಮಾತನಾಡಬೇಕು. ವರದಿಯನ್ನು ಬಿಡುಗಡೆ ಮಾಡಲು ಒತ್ತಾಯ ತರಬೇಕು” ಎಂದು ಆಗ್ರಹಿಸಿದರು.

“ಹೋರಾಟದ ವೇಳೆ ಪೊಲೀಸರ ನೂಕಾಟದಲ್ಲಿ ನನಗೆ ಪೆಟ್ಟಾಗಿದೆ. ಸುಮಾರು 380 ಕಿಮೀ ನಡೆದು ಬಂದಾಗಲೂ ಯಾವುದೇ ತೊಂದರೆಯಾಗಲಿಲ್ಲ. ಆದರೆ ಮೊನ್ನೆಯ ಘಟನೆಯಲ್ಲಿ ಗಾಯಗೊಂಡೆ. ಈಗ ಕೊಂಚ ಚೇತರಿಸಿಕೊಂಡು ಹೋರಾಟಕ್ಕೆ ಮರಳಿದ್ದೇನೆ. ಹೋರಾಟದ ಮುಂಚೂಣಿಯಲ್ಲಿರುವ ಅಂಬಣ್ಣ ಅರೋಲಿಕರ್‌ ಅವರ ತಂದೆ ನಿಧನರಾಗಿದ್ದಾರೆ. ಹೀಗಾಗಿ ಅಂಬಣ್ಣ ಎಲ್ಲ ಕಾರ್ಯಗಳನ್ನು ಮುಗಿಸಿಕೊಂಡು ಇನ್ನೆರಡು ದಿನಗಳಲ್ಲಿ ವಾಪಸ್‌ ಬಂದು ಹೋರಾಟದೊಂದಿಗೆ ಕೂಡಿಕೊಳ್ಳಲಿದ್ದಾರೆ” ಎಂದು ಅವರು ಮಾಹಿತಿ ನೀಡಿದರು.

ಒಳಮೀಸಲಾತಿ ಹೋರಾಟಗಾರರಾದ ಬಿ.ಆರ್‌.ಭಾಸ್ಕರ್‌ ಪ್ರಸಾದ್‌ ಪ್ರತಿಕ್ರಿಯಿಸಿದ್ದು, “ಉಪ ಸಮಿತಿ ಎನ್ನುವ ನಾಟಕ ಬಂದ್ ಮಾಡಬೇಕು. ಹತ್ತು ಪರ್ಸೆಂಟ್‌ ಇಡಬ್ಲ್ಯೂಎಸ್‌ ಮೀಸಲಾತಿ‌ ಕೊಡುವಾಗ ಯಾವ ಉಪಸಮಿತಿ ಮಾಡಿದ್ದರು? ಪ್ರತೇಕ ಲಿಂಗಾಯತ ಧರ್ಮದ ಶಿಫಾರಸು ಮಾಡುವಾಗ ಯಾವ ಉಪಸಮಿತಿ ಕತೆ ಕೇಳಿದ್ದರು? ಸುಮ್ನೆ ಇದೆಲ್ಲಾ ಕತೆ, ಕವನಗಳನ್ನು ಬದಿಗಿಟ್ಟು ಒಳಮೀಸಲಾತಿ ಜಾರಿಗೆ ಸೂಕ್ತ ಕ್ರಮ ತೆಗೆದುಕೊಳ್ಳಲಿ ಅಷ್ಟೇ” ಎಂದಿದ್ದಾರೆ.

“2018ರಲ್ಲಿ ರಚನೆಯಾದ ಉಪ ಸಮಿತಿ ಒಂದೂ ಸಭೆ ನಡೆಸಲಿಲ್ಲ. ಒಳಮೀಸಲಾತಿ ಜಾರಿಯೂ ಆಗಲಿಲ್ಲ. ಅದರ ಪರಿಣಾಮವಾಗಿ ಇವತ್ತು ಸಿದ್ದರಾಮಯ್ಯನವರು ಒಂದು ಕ್ಷೇತ್ರಕ್ಕಾಗಿ ಊರೂರು ಅಲೆಯುವಂತೆ ಮಾಡಿದ್ದಾಗಿದೆ. ಇಷ್ಟಾದರೂ ಈ ಬಿಜೆಪಿ ಸರ್ಕಾರ ಉಪಸಮಿತಿ ಎನ್ನುವ ನಾಟಕ ಶುರು ಮಾಡಿದೆ. ಮರ್ಯಾದೆಯಿಂದ ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಲಿ. ಇಲ್ಲದಿದ್ದರೆ ಬಿಜೆಪಿಗೆ ಹೇಗೆ ಪಾಠ ಕಲಿಸಬೇಕೆಂದು ಈ ಸಮುದಾಯಕ್ಕೆ ಚೆನ್ನಾಗಿ ಗೊತ್ತಿದೆ” ಎಂದು ತಿಳಿಸಿದ್ದಾರೆ.

“ಹೊಲೆ ಮಾದಿಗರಿಬ್ಬರೂ ಮನಸ್ಸು ಮಾಡಿದರೆ ರಾಜ್ಯದ 224 ಕ್ಷೇತ್ರದಲ್ಲಿ ಎಲ್ಲಿಯೂ ಬಿಜೆಪಿ ಗೆಲ್ಲುವುದಿಲ್ಲ. ಈ ಎರಡು ಸಮುದಾಯದ ಜಾತಿ ಜನಸಂಖ್ಯೆಗೆ ಅಷ್ಟು ಮಹತ್ತರ ಪಾತ್ರವಿದೆ” ಎಂದು ಗುಡುಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...