Homeಕರ್ನಾಟಕಮೂಗಿಗೆ ತುಪ್ಪ ಸವರಲು ಉಪಸಮಿತಿ ರಚನೆ: 4ನೇ ದಿನಕ್ಕೆ ಕಾಲಿಟ್ಟ ಒಳಮೀಸಲಾತಿ ಹೋರಾಟ

ಮೂಗಿಗೆ ತುಪ್ಪ ಸವರಲು ಉಪಸಮಿತಿ ರಚನೆ: 4ನೇ ದಿನಕ್ಕೆ ಕಾಲಿಟ್ಟ ಒಳಮೀಸಲಾತಿ ಹೋರಾಟ

- Advertisement -
- Advertisement -

ಡಿಸೆಂಬರ್‌ 11ರಂದು ಆರಂಭವಾದ ಒಳಮೀಸಲಾತಿ ಹೋರಾಟ ಬುಧವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರ ರಚಿಸಿರುವ ಉಪಸಮಿತಿಯ ವಿರುದ್ಧ ಒಳಮೀಸಲಾತಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರ ನೂಕಾಟದಲ್ಲಿ ಗಾಯಗೊಂಡ ಬಳಿಕ ಚಿಕಿತ್ಸೆ ಪಡೆದು ಮತ್ತೆ ಹೋರಾಟಕ್ಕೆ ಮರಳಿರುವ ಹಿರಿಯ ಮುಖಂಡರಾದ ಕರಿಯಪ್ಪ ಗುಡಿಮನಿಯವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಮಳೆಯಲ್ಲಿ ನೆನೆಯದಂತೆ ಶಾಶ್ವತವಾದ ಟೆಂಟ್‌ ನಿರ್ಮಾಣ ಮಾಡಿದ್ದೇವೆ. ಈ ಭಾರಿಯ ಸದನದಲ್ಲಿ ಒಳಮೀಸಲಾತಿಯ ಸಂಬಂಧ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಳಮೀಸಲಾತಿ ಸಂಬಂಧ ಸರ್ಕಾರ ರಚಿಸಿರುವ ಉಪಸಮಿತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, “ಸಮುದಾಯವನ್ನು ವಂಚಿಸಲು ಉಪಸಮಿತಿ ರಚಿಸಿದ್ದಾರೆ. ಮೂಗಿಗೆ ತುಪ್ಪ ಸವರಲು ಈ ನಿರ್ಧಾರ ಕೈಗೊಂಡಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಕೂಡಲೇ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಜಾರಿಗೊಳಿಸಬೇಕು. ಅಲ್ಲಿಯವರೆಗೂ ನಾವು ಕದಲುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಒಳಮೀಸಲಾತಿ ಹೋರಾಟಕ್ಕೆ ಶಾಶ್ವತವಾದ ವೇದಿಕೆ ನಿರ್ಮಿಸುತ್ತಿರುವುದು

“ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿಯವರು ಒಳಮೀಸಲಾತಿ ಜಾರಿ ಕುರಿತು ಮುಂಬರುವ ಅಧಿವೇಶನದಲ್ಲಿ ಗಟ್ಟಿಯಾಗಿ ಮಾತನಾಡಬೇಕು. ತಾವು ಅಧಿಕಾರ ಬರುವ ಮೂಲಕವೇ ಸದಾಶಿವ ಆಯೋಗದ ವರದಿಯನ್ನು ಸಿದ್ದರಾಮಯ್ಯನವರು ಜಾರಿಗೊಳಿಸಬೇಕೆಂದೇನೂ ಇಲ್ಲ. ವಿರೋಧ ಪಕ್ಷದ ನಾಯಕರಾಗಿ ಅವರು ಸದನದಲ್ಲಿ ಈ ಕುರಿತು ಮೊದಲ ಆದ್ಯತೆಯ ಮೇರೆಗೆ ಮಾತನಾಡಬೇಕು. ವರದಿಯನ್ನು ಬಿಡುಗಡೆ ಮಾಡಲು ಒತ್ತಾಯ ತರಬೇಕು” ಎಂದು ಆಗ್ರಹಿಸಿದರು.

“ಹೋರಾಟದ ವೇಳೆ ಪೊಲೀಸರ ನೂಕಾಟದಲ್ಲಿ ನನಗೆ ಪೆಟ್ಟಾಗಿದೆ. ಸುಮಾರು 380 ಕಿಮೀ ನಡೆದು ಬಂದಾಗಲೂ ಯಾವುದೇ ತೊಂದರೆಯಾಗಲಿಲ್ಲ. ಆದರೆ ಮೊನ್ನೆಯ ಘಟನೆಯಲ್ಲಿ ಗಾಯಗೊಂಡೆ. ಈಗ ಕೊಂಚ ಚೇತರಿಸಿಕೊಂಡು ಹೋರಾಟಕ್ಕೆ ಮರಳಿದ್ದೇನೆ. ಹೋರಾಟದ ಮುಂಚೂಣಿಯಲ್ಲಿರುವ ಅಂಬಣ್ಣ ಅರೋಲಿಕರ್‌ ಅವರ ತಂದೆ ನಿಧನರಾಗಿದ್ದಾರೆ. ಹೀಗಾಗಿ ಅಂಬಣ್ಣ ಎಲ್ಲ ಕಾರ್ಯಗಳನ್ನು ಮುಗಿಸಿಕೊಂಡು ಇನ್ನೆರಡು ದಿನಗಳಲ್ಲಿ ವಾಪಸ್‌ ಬಂದು ಹೋರಾಟದೊಂದಿಗೆ ಕೂಡಿಕೊಳ್ಳಲಿದ್ದಾರೆ” ಎಂದು ಅವರು ಮಾಹಿತಿ ನೀಡಿದರು.

ಒಳಮೀಸಲಾತಿ ಹೋರಾಟಗಾರರಾದ ಬಿ.ಆರ್‌.ಭಾಸ್ಕರ್‌ ಪ್ರಸಾದ್‌ ಪ್ರತಿಕ್ರಿಯಿಸಿದ್ದು, “ಉಪ ಸಮಿತಿ ಎನ್ನುವ ನಾಟಕ ಬಂದ್ ಮಾಡಬೇಕು. ಹತ್ತು ಪರ್ಸೆಂಟ್‌ ಇಡಬ್ಲ್ಯೂಎಸ್‌ ಮೀಸಲಾತಿ‌ ಕೊಡುವಾಗ ಯಾವ ಉಪಸಮಿತಿ ಮಾಡಿದ್ದರು? ಪ್ರತೇಕ ಲಿಂಗಾಯತ ಧರ್ಮದ ಶಿಫಾರಸು ಮಾಡುವಾಗ ಯಾವ ಉಪಸಮಿತಿ ಕತೆ ಕೇಳಿದ್ದರು? ಸುಮ್ನೆ ಇದೆಲ್ಲಾ ಕತೆ, ಕವನಗಳನ್ನು ಬದಿಗಿಟ್ಟು ಒಳಮೀಸಲಾತಿ ಜಾರಿಗೆ ಸೂಕ್ತ ಕ್ರಮ ತೆಗೆದುಕೊಳ್ಳಲಿ ಅಷ್ಟೇ” ಎಂದಿದ್ದಾರೆ.

“2018ರಲ್ಲಿ ರಚನೆಯಾದ ಉಪ ಸಮಿತಿ ಒಂದೂ ಸಭೆ ನಡೆಸಲಿಲ್ಲ. ಒಳಮೀಸಲಾತಿ ಜಾರಿಯೂ ಆಗಲಿಲ್ಲ. ಅದರ ಪರಿಣಾಮವಾಗಿ ಇವತ್ತು ಸಿದ್ದರಾಮಯ್ಯನವರು ಒಂದು ಕ್ಷೇತ್ರಕ್ಕಾಗಿ ಊರೂರು ಅಲೆಯುವಂತೆ ಮಾಡಿದ್ದಾಗಿದೆ. ಇಷ್ಟಾದರೂ ಈ ಬಿಜೆಪಿ ಸರ್ಕಾರ ಉಪಸಮಿತಿ ಎನ್ನುವ ನಾಟಕ ಶುರು ಮಾಡಿದೆ. ಮರ್ಯಾದೆಯಿಂದ ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಲಿ. ಇಲ್ಲದಿದ್ದರೆ ಬಿಜೆಪಿಗೆ ಹೇಗೆ ಪಾಠ ಕಲಿಸಬೇಕೆಂದು ಈ ಸಮುದಾಯಕ್ಕೆ ಚೆನ್ನಾಗಿ ಗೊತ್ತಿದೆ” ಎಂದು ತಿಳಿಸಿದ್ದಾರೆ.

“ಹೊಲೆ ಮಾದಿಗರಿಬ್ಬರೂ ಮನಸ್ಸು ಮಾಡಿದರೆ ರಾಜ್ಯದ 224 ಕ್ಷೇತ್ರದಲ್ಲಿ ಎಲ್ಲಿಯೂ ಬಿಜೆಪಿ ಗೆಲ್ಲುವುದಿಲ್ಲ. ಈ ಎರಡು ಸಮುದಾಯದ ಜಾತಿ ಜನಸಂಖ್ಯೆಗೆ ಅಷ್ಟು ಮಹತ್ತರ ಪಾತ್ರವಿದೆ” ಎಂದು ಗುಡುಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...