Homeಮುಖಪುಟಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಪ್ರತಿ ತಿಂಗಳು ಜಗನ್ ಮೋಹನ್ ರೆಡ್ಡಿಗೆ 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

- Advertisement -
- Advertisement -

ದೇಶದಾದ್ಯಂತ ಸುದ್ದಿಯಾಗಿದ್ದ ಆಂಧ್ರ ಪ್ರದೇಶದ 3,500 ಕೋಟಿ ರೂಪಾಯಿ ಮೊತ್ತದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು 305 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ದೋಷಾರೋಪ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವೈ.ಎಸ್‌ ಜಗನ್ ಮೋಹನ್ ರೆಡ್ಡಿಯವರ ಹೆಸರಿದೆ. ಹಗರಣದ ಲಾಭ ಪಡೆದವರಲ್ಲಿ ಜಗನ್ ಕೂಡ ಒಬ್ಬರು ಎಂದು ಉಲ್ಲೇಖಿಸಲಾಗಿದೆ. 2019-24ರ ವೈಎಸ್‌ಆರ್ ಕಾಂಗ್ರೆಸ್ ಆಡಳಿತದಲ್ಲಿ ಸಿಎಂ ಆಗಿದ್ದ ಜಗನ್ ಅವರಿಗೆ ಪ್ರತಿ ತಿಂಗಳು 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

ಆರೋಪಪಟ್ಟಿಯಲ್ಲಿ ಜಗನ್ ಮೋಹನ್ ರೆಡ್ಡಿ ಅವರ ಹೆಸರಿದ್ದರೂ, ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಹಣವನ್ನು ಅಂತಿಮವಾಗಿ ಪ್ರಕರಣದ ಒಂದನೇ ಆರೋಪಿ ಕೇಸಿರೆಡ್ಡಿ ರಾಜಶೇಖರ್ ರೆಡ್ಡಿ ಅವರು, ಐದನೇ ಆರೋಪಿ ವಿಜಯ್ ಸಾಯಿ ರೆಡ್ಡಿ, ನಾಲ್ಕನೇ ಆರೋಪಿ ಮಿಥುನ್ ರೆಡ್ಡಿ ಮತ್ತು 33ನೇ ಆರೋಪಿ ಬಾಲಾಜಿಗೆ ಹಸ್ತಾಂತರಿಸುತ್ತಿದ್ದರು. ಅವರು ಅದನ್ನು ಜಗನ್‌ ಮೋಹನ್ ರೆಡ್ಡಿ ಅವರಿಗೆ ವರ್ಗಾಯಿಸುತ್ತಿದ್ದರು. ಇದನ್ನು ಸಾಕ್ಷಿಗಳು ದೃಢೀಕರಿಸಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ರಾಜಶೇಖರ್ ರೆಡ್ಡಿ ಮಾಸ್ಟರ್ ಮೈಂಡ್

ಆರೋಪಪಟ್ಟಿಯ ಪ್ರಕಾರ, ರಾಜಶೇಖರ್ ರೆಡ್ಡಿ ಅವರನ್ನು ಹಗರಣದ ‘ಮಾಸ್ಟರ್ ಮೈಂಡ್ ಮತ್ತು ಸಹ-ಸಂಚುಕೋರ’ ಎಂದು ಗುರುತಿಸಲಾಗಿದೆ. ಇವರು ಮದ್ಯ ನೀತಿಯನ್ನು ದುರುಪಯೋಗಪಡಿಸಿಕೊಂಡಿದ್ದರು. ಆಟೋಮ್ಯಾಟೆಡ್ ಆರ್ಡರ್ ಫಾರ್ ಸಪ್ಲೈ (ಒಎಫ್‌ಸಿ) ವ್ಯವಸ್ಥೆಯನ್ನು ಮ್ಯಾನುಅಲ್ ವ್ಯವಸ್ಥೆಗೆ ಬದಲಾಯಿಸಿದ್ದರು. ಆಂಧ್ರ ಪ್ರದೇಶ ರಾಜ್ಯ ಪಾನೀಯ ನಿಗಮ ಲಿಮಿಟೆಡ್ (ಎಪಿಎಸ್‌ಬಿಸಿಎಲ್) ನಲ್ಲಿ ತಮಗೆ ನಿಷ್ಠರಾಗಿದ್ದ ಅಧಿಕಾರಿಗಳನ್ನು ನಿಯೋಜಿಸಿದ್ದರು. ಅಲ್ಲದೆ, ಪ್ರಕರಣದ ಮತ್ತೊಬ್ಬ ಆರೋಪಿ ಬಾಲಾಜಿ ಗೋವಿಂದಪ್ಪ ಮೂಲಕ ಜಗನ್‌ ಮೋಹನ್ ರೆಡ್ಡಿಗೆ ಹಣ ತಲುಪಿಸಲು ಶೆಲ್ ಡಿಸ್ಟಿಲರಿಗಳನ್ನು ಬಳಸಿದ್ದರು ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅವರ ಸಹಯೋಗದೊಂದಿಗೆ ವೈಎಸ್‌ಆರ್‌ಸಿಪಿಯ ಚುನಾವಣಾ ಪ್ರಚಾರಕ್ಕೆ ರಾಜಶೇಖರ್ ರೆಡ್ಡಿ 250 ರಿಂಧ 300 ಕೋಟಿ ರೂ. ಹಣವನ್ನು ನೀಡಿದ್ದರು. ಈ ಹಣವನ್ನು 30ಕ್ಕೂ ಹೆಚ್ಚು ಶೆಲ್ ಕಂಪನಿಗಳ ಮೂಲಕ ಅಕ್ರಮವಾಗಿ ವರ್ಗಾಯಿಸಿ, ದುಬೈ ಮತ್ತು ಆಫ್ರಿಕಾದಲ್ಲಿ ಭೂಮಿ, ಚಿನ್ನ ಮತ್ತು ಐಷಾರಾಮಿ ಆಸ್ತಿಗಳನ್ನು ಖರೀದಿಸಲು ಬಳಸಲಾಗಿದೆ ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ವೈಎಸ್‌ಆರ್‌ಸಿಪಿ ಸರ್ಕಾರ ಪರಿಚಯಿಸಿದ ಅಬಕಾರಿ ನೀತಿಯು ಮದ್ಯ ವಿತರಣೆಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಲು ರೂಪಿಸಲಾಗಿದೆ. ಇದು ಆರೋಪಿ ಅಧಿಕಾರಿಗಳಿಗೆ ಭಾರೀ ಕಮಿಷನ್ ಪಡೆಯಲು ಅವಕಾಶ ನೀಡುತ್ತದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

“ಆರೋಪಿಗಳು ಅಬಕಾರಿ ನೀತಿ ಮತ್ತು ಅದರ ವಿಧಾನಗಳಲ್ಲಿ ಬದಲಾವಣೆ ಮಾಡಲು ಯೋಜಿಸಿದ್ದರು. ಇದರಿಂದಾಗಿ ಅವರಿಗೆ ದೊಡ್ಡ ಪ್ರಮಾಣದ ಕಿಕ್‌ಬ್ಯಾಕ್‌ಗಳು ಸಿಕ್ಕಿವೆ. ಅಂತಹ ಕಿಕ್‌ಬ್ಯಾಕ್‌ಗಳಲ್ಲಿ ಹೆಚ್ಚಿನ ಭಾಗವನ್ನು ನಗದು, ಚಿನ್ನದ ಗಟ್ಟಿಗಳು ಇತ್ಯಾದಿಗಳ ರೂಪದಲ್ಲಿ ಪಡೆಯಲಾಗಿದೆ” ಎಂದು ಆರೋಪಪಟ್ಟಿ ಹೇಳಿದೆ.

ಲಂಚದ ಬೇಡಿಕೆಯನ್ನು ವಿರೋಧಿಸಿದ ಡಿಸ್ಟಿಲರಿಗಳಿಗೆ ಒಎಫ್‌ಸಿ ಅನುಮೋದನೆಯನ್ನು ಆರೋಪಿಗಳು ತಡೆಹಿಡಿದಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ, ವಿಶೇಷ ತನಿಖಾ ತಂಡ (ಎಸ್‌ಐಟಿ) ಹಲವು ಗಂಟೆಗಳ ವಿಚಾರಣೆಯ ನಂತರ ವೈಎಸ್ಆರ್‌ಸಿಪಿ ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಬಂಧಿಸಿದೆ. ಮೇ ತಿಂಗಳಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಕೂಡ ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

2019ರಲ್ಲಿ ಹೈದರಾಬಾದ್‌ನ ಹೋಟೆಲ್ ಪಾರ್ಕ್ ಹಯಾತ್‌ನಲ್ಲಿ ಸಜ್ಜಲ ಶ್ರೀಧರ್ ರೆಡ್ಡಿ (ಆರನೇ ಆರೋಪಿ) ಅವರು ನಡೆಸಿದ ಸಭೆಯನ್ನು ಆರೋಪಪಟ್ಟಿ ಉಲ್ಲೇಖಿಸಿದೆ. ಈ ಸಭೆಯಲ್ಲಿ ಡಿಸ್ಟಿಲರಿ ಮಾಲೀಕರಿಗೆ ಮ್ಯಾನುಅಲ್ ಒಎಫ್‌ಎಸ್ ವ್ಯವಸ್ಥೆಯೊಂದಿಗೆ ಸಹಕರಿಸಲು ಸೂಚಿಸಲಾಗಿತ್ತು ಎಂದಿದೆ.

ಮೂಲ ಬೆಲೆಯ ಮೇಲೆ ಶೇ. 12 ರಷ್ಟು ಕಿಕ್‌ಬ್ಯಾಕ್‌ ಪಡೆಯಲು ಪ್ರಾರಂಭಿಸಲಾಗಿತ್ತು. ನಂತರ ಅದನ್ನು ಶೇ. 20 ಕ್ಕೆ ಹೆಚ್ಚಿಸಲಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ನಡುವೆ ಹಲವಾರು ವೈಎಸ್‌ಆರ್‌ಸಿಪಿ ನಾಯಕರು ಮಿಧುನ್ ರೆಡ್ಡಿ ಬಂಧನವನ್ನು ಖಂಡಿಸಿದ್ದು, ಇದು ರಾಜಕೀಯ ಪ್ರೇರಿತ ಎಂದಿದ್ದಾರೆ.

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಲು ಆಡಳಿತ ಯಂತ್ರವನ್ನು ಬಳಸುತ್ತಿದ್ದಾರೆ ಎಂದು ಮಾಜಿ ಸಚಿವರಾದ ಬೊಚ್ಚಾ ಸತ್ಯನಾರಾಯಣ, ಪೆರ್ಣಿ ವೆಂಕಟರಾಮಯ್ಯ (ನಾನಿ), ಅಂಬಟಿ ರಾಂಬಾಬು, ಮೇರುಗು ನಾಗಾರ್ಜುನ ಮತ್ತು ವೈಎಸ್‌ಆರ್‌ಸಿಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಿ ಶ್ರೀಕಾಂತ್ ರೆಡ್ಡಿ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಕಲ್ಪಿತ ನರೇಟಿವ್ -ಜಗನ್ ಮೋಹನ್ ರೆಡ್ಡಿ

ಮದ್ಯ ಹಗರಣದ ಆರೋಪಟ್ಟಿಯಲ್ಲಿ ತಮ್ಮ ಹೆಸರು ಉಲ್ಲೇಖಿಸಿರುವ ಬಗ್ಗೆ ಮತ್ತು ಸಂಸದ ಮಿಧುನ್ ಬಂಧನ ಕುರಿತು ಭಾನುವಾರ ಪ್ರತಿಕ್ರಿಯೆ ನೀಡಿರುವ ಜಗನ್ ಮೋಹನ್ ರೆಡ್ಡಿ, “ಇದನ್ನು ಮಾಧ್ಯಮಗಳ ಮುಂದೆ ನಾಟಕವಾಡಲು ಮಾತ್ರ ಸೃಷ್ಟಿಸಲಾಗಿದೆ. ಇದೊಂದು ಕಲ್ಪಿತ ನರೇಟಿವ್ ಎಂದಿದ್ದಾರೆ.

ವಿಜಯವಾಡದ ಸ್ಥಳೀಯ ನ್ಯಾಯಾಲಯವು ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಆಗಸ್ಟ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಈ ಬೆನ್ನಲ್ಲೇ ಜಗನ್ ಮೋಹನ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಸೌಜನ್ಯ : hindustantimes.com

ಕೇರಳದಲ್ಲಿ ಮುಸ್ಲಿಂ ಪ್ರಾಬಲ್ಯ, ಸಿಎಂ ಹುದ್ದೆಗೆ IUML ಬೇಡಿಕೆ: ವೆಳ್ಳಾಪಳ್ಳಿ ನಟೇಶನ್‌ರಿಂದ ದ್ವೇಷ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....